ಸಮಗ್ರ ಕೃಷಿ ಎನ್ನುವ ಲಾಭದ ಬೀಗದ ಕೈ


Team Udayavani, May 21, 2018, 12:52 PM IST

samagra.jpg

ಮೂರು ದಶಕಗಳಿಂದ  ತರ್ಕಾರಿ ಬೆಳೆಯುವುದು, ಹೈನುಗಾರಿಕೆ, ಕೋಳಿ ಸಾಕಾಣಿಯಂಥ ರೈತಾಪಿ ಕೆಲಸಗಳಲ್ಲಿ ತೊಡಗಿರುವ ಅಶೋಕ್‌ಕುಮಾರ್‌, ಪ್ರತಿಯೊಂದು ಕೆಲಸದಲ್ಲೂ ಹೆಚ್ಚಿನ ಲಾಭ ಕಂಡಿದ್ದಾರೆ….
 
ಸಾಲ, ಹವಾಮಾನ ವೈಪರೀತ್ಯಗಳಂತಹ ಸಮಸ್ಯೆಗಳನ್ನು ನೋಡಿ ಕೃಷಿಯ ಸಹವಾಸವೇ ಬೇಡ ಎನ್ನುವವರು ಸಾಕಷ್ಟು ಮಂದಿ ಸಿಗುತ್ತಾರೆ. ಅಂಥವರ ಮಧ್ಯೆ ಈ ಎನ್‌. ಅಶೋಕ್‌ಕುಮಾರ್‌ ಭಿನ್ನವಾಗಿದ್ದಾರೆ. 3 ದಶಕಗಳಿಂದ ತರಕಾರಿ, ಹೈನುಗಾರಿಕೆ, ಕೋಳಿ ಸಾಕಾಣಿಕೆ ಹೀಗೆ ಸಮಗ್ರ ಕೃಷಿ ಮಾಡುತ್ತಲೇ ಹೀಗೂ ಬದುಕಬಹುದು ಅನ್ನೋದನ್ನು ತೋರಿಸಿದ್ದಾರೆ. 

ಇವರ ಮೂಲ ದಕ್ಷಿಣ ಕನ್ನಡದ ಸುಳ್ಯ. ಓದಿದ್ದು ಎಂಎಸ್‌ಸಿ. ದೊಡ್ಡಬಳ್ಳಾಪುರದ ಸಮೀಪವಿರುವ ಹದರಿಪುರದಲ್ಲಿ ಜಮೀನಿದೆ. ಇಲ್ಲಿ ಮಾ.ಇಂಟಿಗ್ರೇಟರ್ಸ್‌ ಅನ್ನೋ ಕೃಷಿ ಕುಟುಂಬ ರೂಪಿಸಿದ್ದಾರೆ. ಇದರ ಮೂಲಕ ಸಮಗ್ರ ಕೃಷಿಗೆ ಕೈ ಹಾಕಿದರು. ಹೆಚ್ಚು ಕಮ್ಮಿ ಇವರ ಕುಟುಂಬದಲ್ಲಿ ಇಂದು 300ಕ್ಕೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.  

ಹೈನುಗಾರಿಕೆ, ಕೋಳಿ ಸಾಕಾಣಿಕೆಯೊಂದಿಗೆ ದ್ರಾಕ್ಷಿ ರಬ್ಬರ್‌, ತೆಂಗು, ಮಾವು ಮತ್ತಿತರ ಬೆಳೆ ಬೆಳೆಯುವ ಕ್ರಮದಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ವೈಜ್ಞಾನಿಕ ಸ್ಪರ್ಷ ನೀಡಿದ್ದುದರಿಂದ ಇವರ ಆದಾಯ ವೃದ್ದಿಯಾಗಿದೆಯಂತೆ.

ಕೋಳಿ ಸಾಕಾಣಿಕೆಯಲ್ಲಿ ಯಶಸ್ಸಿನ ಬುತ್ತಿ: ಕೇವಲ 25 ಹಸುಗಳೊಂದಿಗೆ ಹೈನುಗಾರಿಕೆ ಪ್ರಾರಂಭಿಸಿ 5 ವರ್ಷದಲ್ಲಿ ತಮ್ಮ ಸಂಪಾದನೆಯಲ್ಲಿ ಹೆಚ್ಚಳ ಹಾಗೂ ಹಸುಗಳ ಸಂಖ್ಯೆಯನ್ನು 100ಕ್ಕೆ ವಿಸ್ತರಿಸುವಲ್ಲಿ ಯಶಸ್ವಿಯಾದರು. ಹಸುಗಳ ಸಗಣಿ ಮತ್ತು ಮೂತ್ರದಿಂದ ಮಿಥೇನ್‌ಗಾಸ್‌ ಉತ್ಪಾದಿಸಿ ಅದನ್ನು ಡಿಸೇ‍ಜನರೇಟರ್‌ಗೆ ಇಂಧನವಾಗಿಸಿದ್ದಾರೆ.

ಇದರಿಂದ 20 ಕೆ.ವಿ ವಿದ್ಯುತ್‌ ಉತ್ಪಾದಿಸಿ ಫಾರಂನ ದೈನಂದಿನ ಚಟುವಟಿಕೆಗಳಿಗೆ 6 ಗಂಟೆ ವಿದ್ಯುತ್ ಹರಿಸಲಾಗುತ್ತಿದೆ. 2003ರಲ್ಲಿ 400 ಕುರಿಗಳಿಂದ ಕುರಿ ಸಾಕಾಣಿಕೆ ಆರಂಭಿಸಿದರು. ನಂತರ ಮೇಕೆ ಸಾಕಾಣಿಕೆಯನ್ನು ಪ್ರಾರಂಭಿಸಿ ಅದರಲ್ಲೂ ಯಶಕಂಡರು. ಕೋಳಿ ಸಾಕಾಣಿಕೆಯಲ್ಲಿ ಕಾಡುವ ಅನೈರ್ಮಲ್ಯ, ಹಕ್ಕಿಜ್ವರ ಮುಂತಾದ ಸಮಸ್ಯೆಗಳಿಗೆ ಆಧುನಿಕ ತಂತ್ರಜ್ಞಾನದಿಂದ ಪರಿಹಾರವಿದೆ ಅನ್ನೋದನ್ನು ತೋರಿಸಿದ್ದಾರೆ.  

2007ರಲ್ಲಿ ಪ್ರಾರಂಭವಾದ ಮಾಇಂಟಿಗ್ರೇಟರ್ಸ್‌ ತನ್ನ ದಶಕದ ಕಾರ್ಯನಿರ್ವಹಣೆಯಲ್ಲಿ ಮಂಗಳೂರು, ಬಂಟ್ವಾಳ, ಆನವಟ್ಟಿ, ಕುಣಿಗಲ…, ಸುಳ್ಯದಲ್ಲಿ ಶಾಖೆಗಳನ್ನು ಹೊಂದಿದೆ. ಪ್ರಸಿದ್ಧ ಚಿಕನ್‌ ಬ್ರಾಂಡ್‌ ವೆಂಕಾಬ…ಗೆ ಬಹುಪಾಲು ಮಾಂಸ ಸರಬರಾಜು ಮಾಡುತ್ತಿರುವುದು ಅಶೋಕ್‌ ಕುಮಾರ್‌ ಅವರ ತಂಡ.  

ಮಾ. ಇಂಟಿಗ್ರೇಟರ್‌ನಲ್ಲಿ 200 ಕ್ಕೂ ಹೆಚ್ಚು ಜನರು ಉದ್ಯೋಗಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು, 300ಕ್ಕೂ ಹೆಚ್ಚು ಸಣ್ಣ ಮತ್ತು 
ಮಧ್ಯಮ ರೈತರು ಮಾಇಂಟಿಗ್ರೇಟರ್ಸ…ನಲ್ಲಿ ಪಾಲುದಾರರಾಗಿದ್ದಾರೆ. ಮೊಟ್ಟೆ, ಕೋಳಿ ಮರಿ ಹಾಗೂ ಮಾಂಸ ಸೇರಿ ಕೋಳಿಗೆ ಬೇಕಾಗುವ ಸಮತೋಲಿತ ಆಹಾರವನ್ನು ಒಪ್ಪಂದದಡಿಯಲ್ಲಿ ಸರಬರಾಜು ಮಾಡುತ್ತಿದ್ದಾರೆ. 

ನೈರ್ಮಲ್ಯದಲ್ಲಿ ಗುಣಮಟ್ಟ: ಕೋಳಿ ಮಾಂಸ, ಮೊಟ್ಟೆಯ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಸ್ವತ್ಛ ಮಾಂಸವನ್ನು ತನ್ನಗ್ರಾಹಕರಿಗೆ ನೀಡಬೇಕು ಎನ್ನುವ ಗುರಿಯೊಂದಿಗೆ ಹಲವು ವೈಜ್ಞಾನಿಕ ಹಂತಗಳನ್ನು ಅನುಸರಿಸುತ್ತಿದೆ. ಕೋಳಿ ಸಾಕಾಣಿಕೆ ಕೇಂದ್ರದೊಳಗೆ ಪ್ರವೇಶಿಸಬೇಕೆಂದರೆ ಸ್ನಾನ ಮಾಡಲೇಬೇಕಿರುವುದು ನಿಯಮ.

ಇನ್ನು ಆವರಣದೊಳಗೆ ವಾಹನಗಳು ಪ್ರವೇಶಿಸಬೇಕೆಂದರೂ ರಾಸಾಯನಿಕ ಮಿಶ್ರಣ ನೀರಿನಿಂದ ವಾಹನಗಳನ್ನು ತೊಳೆಯುವುದು ಅವಶ್ಯ. ಇದಲ್ಲದೇ ಕೋಳಿ ಸಾಕಾಣಿಕೆ ಸ್ಥಳದಲ್ಲಿ ನೈರ್ಮಲ್ಯ ಕಾಪಾಡುವುದಕ್ಕಾಗಿ ಸುತ್ತಲೂ ಉದ್ಯಾನವನ ನಿರ್ಮಿಸಲಾಗಿದೆ. ಇದರಿಂದಾಗಿ ವೈರಸ್‌ಗಳಿಂದ ಕೋಳಿಗಳನ್ನು ರಕ್ಷಿಸಲು ಅನುಕೂಲ ಎನ್ನುತ್ತಾರೆ ಅಶೋಕ್‌. 

1200 ಅಡಿ ಭೂಮಿ ಕೊರೆದರೂ ಅಂತರ್ಜಲ ಕಾಣದ ಈ ಜಾಗದಲ್ಲಿ ನೀರಿನ ಮಿತ ಬಳಕೆಯೊಂದಿಗೆ ಮಲೆನಾಡನ್ನು ಸೃಷ್ಟಿಸಲು ಬಯಸಿದ್ದಾರೆ. ರಬ್ಬರ್‌, ಹಲಸು, ಬೇವು, ಹುಣಸೆ ಸೇರಿ ವಿವಿಧಸಸ್ಯಗಳನ್ನು ಬೆಳೆಸಿದ್ದಾರೆ. ಅದಲ್ಲದೇ ಹದರಿಪುರದಲ್ಲಿನ ಕೋಳಿ ಫಾರಂ ಸುತ್ತಲಿನ ಪ್ರದೇಶದಗುಡ್ಡದಲ್ಲಿ ವ್ಯೂ ಪಾಯಿಂಟ್ ನಿರ್ಮಿಸಿರುವುದು ವಿಶೇಷ. ಇದರಿಂದ ಸುತ್ತಲಿನ 30 ಕ್ಕೂ ಹೆಚ್ಚು ಕಿ.ಮೀ ಪ್ರದೇಶವನ್ನು ವೀಕ್ಷಿಸಬಹುದು. ಅಷ್ಟೇ ಅಲ್ಲ, ನಂದಿ ಬೆಟ್ಟ, ಶಿವಗಂಗೆ ಬೆಟ್ಟಗಳನ್ನು ಕಣ್ತುಂಬಿಕೊಳ್ಳಬಹುದು.

* ಸೌಮ್ಯ

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.