ಹಸುವಿನಿಂದ ಹಸನಾದ ಬದುಕು


Team Udayavani, Jun 19, 2017, 5:37 PM IST

hasu.jpg

ಶಿವಮೊಗ್ಗದ ಸಾಗರ ತಾಲೂಕಿನ ಆನಂದಪುರಂ ಸಮೀಪದ ಕೊರಲಿಕೊಪ್ಪದ ದೇವರಾಜ ಗೌಡ ಹೈನುಗಾರಿಕೆಯಲ್ಲಿ ಯಶಸ್ಸಿನ ಹೆಜೆುjಡುತ್ತಾ ಸಾಗಿದ್ದಾರೆ.

ಈ ಮೊದಲು ಜೀವನ ನಿರ್ವಹಣೆಗೆ ಬೇರೆಯವರ ಅಡಕೆ-ತೆಂಗಿನ ತೋಟದ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ಇವರು ಬಡತನದ ಬೇಗೆಯ ಸಂಕಷ್ಟದಲ್ಲೂ ಇಬ್ಬರು ಗಂಡು ಮಕ್ಕಳಿಗೆ ಶಿಕ್ಷಣ ಕೊಡಿಸಿದರು. ಅದಕ್ಕೂ ಕೈ ಹಿಡಿದದ್ದು ಹೈನುಗಾರಿಕೆ. ಮಕ್ಕಳು ದೊಡ್ಡವರಾಗಿ ಉದ್ಯೋಗಸ್ಥರಾಗಿ, ಕೊರಲಿಕೊಪ್ಪದಲ್ಲಿ ಜಾಗ ಖರೀದಿಸಿ ಮನೆ ಕಟ್ಟಿಸಿದರು. ಪರಿಶ್ರಮದ ಬದುಕು ಸಾಗಿಸಿ ಬಂದ ಇವರಿಗೆ ಮನೆಯಲ್ಲಿ ಸುಮ್ಮನೆ ಕುಳಿತು ಉಣ್ಣಲು ಇಷ್ಟವಾಗಲಿಲ್ಲ. ಅದಕ್ಕಾಗಿ ಮೂರುವರೆ  ವರ್ಷಗಳ ಹಿಂದೆ ಹಸು ಸಾಕಣೆ ಆರಂಭಿಸಿದರು. ಹೊಸದಾಗಿ ಕಟ್ಟಿದ  ಮನೆಯ ಬಲ ಪಕ್ಕದಲ್ಲಿ ಬಿದಿರು ಮತ್ತು ತೆಂಗಿನ ಗರಿಗಳನ್ನು  ಬಳಸಿ ಚಿಕ್ಕ ಕೊಟ್ಟಿಗೆ ರೂಪಿಸಿಕೊಂಡರು.

ಶ್ರಮದ ಹಾದಿ 
ಆರಂಭದಲ್ಲಿ ಒಂದು ಹಸುವಿತ್ತು. ನಂತರ ಇನ್ನೂ ಎರಡು ಹಸು ಖರೀದಿಸಿ ಹೈನುಗಾರಿಕೆ ವೃತ್ತಿ ಹೆಚ್ಚಿಸಿಕೊಂಡರು. ಜೊತೆಗೆ ಇವರು ಮೊದಲು ಸಾಕಿದ ಹಸು, ಕರು ಹಾಕಿ ಆ ಕರುಗಳು ದೊಡ್ಡದಾದವು. ಹೀಗೆ ಒಂದು ಹಸುವಿನಿಂದ ಆರಂಭಿಸಿದ ಇವರ ಹೈನುಗಾರಿಕೆ ಈಗ ಕರುಗಳು ಸೇರಿ 9 ಹಸುಗಳ ಮಟ್ಟಕ್ಕೆ ಬಂದು ನಿಂತಿದೆ. ಇವುಗಳ ಪೈಕಿ ಜರ್ಸಿ 2, ಹೆಚ್‌.ಎಫ್. 4 ಹಾಗೂ ಮಿಶ್ರತಳಿಯ 3 ಹಸುಗಳಿವೆ.  ಇದರಲ್ಲಿ ಹಾಲು ಕೊಡುವ ಹಸುಗಳು 4. ಉಳಿದವು ಬೆಳವಣಿಗೆಯ ಹಂತದಲ್ಲಿವೆ. ನೀರು ಪೂರೈಕೆಗೆ ಮನೆಯಂಗಳದಲ್ಲಿ ಕೊಳವೆ ಬಾವಿ ತೆಗೆಸಿದ್ದಾರೆ.  ಮನೆ ಹಿಂಭಾಗದ ಖಾಲಿ ಪ್ರದೇಶದಲ್ಲಿ ಹಸಿರು ಹುಲ್ಲು ಸಹ ಬೆಳೆಯಲಾರಂಭಿಸಿದರು. ಒಣ ಹುಲ್ಲು, ಹಸಿರು ಹುಲ್ಲು ಮತ್ತು ಪಶು ಆಹಾರವನ್ನು ಅಗತ್ಯ ಪ್ರಮಾಣದಲ್ಲಿ ನೀಡುತ್ತಾ ಹೈನುಗಾರಿಕೆಯಲ್ಲಿ ನಿರತರಾಗಿದ್ದಾರೆ.

ಪ್ರತಿ ನಿತ್ಯ ಹಾಲು ಕರೆದು ಆನಂದಪುರಂನ ಡೈರಿಗೆ ಮಾರಾಟ ಮಾಡುತ್ತಾರೆ. ಬಳಿಕ ಕೊಟ್ಟಿಗೆ ಸ್ವತ್ಛಗೊಳಿಸಿ, ನೆಲವನ್ನು ತೊಳೆದು ಜಾನುವಾರುಗಳಗೆ ಸ್ನಾನ ಮಾಡಿಸುತ್ತಾರೆ. ಪ್ರತಿ ನಿತ್ಯ ಒಂದು ಹಸುಗೆ ಸರಾಸರಿ 4 ಕಟ್ಟು ಒಣಹುಲ್ಲು, 3 ಕಟ್ಟು ಹಸಿ ಹುಲ್ಲು,3.5 ಕೆ.ಜಿ.ಯಷ್ಟು ಪಶು ಆಹಾರ ನೀಡುತ್ತಾರೆ.

ಲಾಭದ ಲೆಕ್ಕಾಚಾರ 
ಪ್ರತಿ ನಿತ್ಯ  ಸರಾಸರಿ 60 ಲೀಟರ್‌ ಹಾಲು ಮಾರುತ್ತಾರೆ. ಒಂದು ಲೀಟರ್‌ ಗೆ ರೂ26 ರಂತೆ ದರ ಸಿಗುತ್ತದೆ. ಜೊತೆಗೆ ಪ್ರತಿ ಲೀಟರ್‌ಗೆ ರೂ.5 ಪ್ರೋತ್ಸಾಹ ಧನ ಸಹ ದೊರೆಯುತ್ತದೆ. ಅಂದರೆ ಲೀಟರ್‌ ಒಂದಕ್ಕೆ 31ರೂ.  ದಿನವೊಂದಕ್ಕೆ ಇವರಿಗೆ 60 ಲೀ.ಹಾಲು ಮಾರಾಟದಿಂದ ರೂ.1, 860 ಆದಾಯ. ಆಹಾರ, ಮೇವು ಹೀಗೆ ಎಲ್ಲ ರೀತಿಯ ಲೆಕ್ಕ ಹಾಕಿದರೆ ದಿನವೊಂದಕ್ಕೆ ರೂ.1000 ಖರ್ಚು ತಗಲುತ್ತದೆ. ಆದರೂ ಸರಾಸರಿ  ರೂ.850 ಲಾಭ ಅಂದರೆ 25,800ರೂ.                                                                                                                     

ವರ್ಷಕ್ಕೊಮ್ಮ 12 ಲೋಡ್‌ (ಕ್ಯಾಂಟರ್‌)ಸಗಣಿ  ಗೊಬ್ಬರ ಮಾರುತ್ತಾರೆ.ಒಂದು ಲೋಡ್‌ ಗೆ ರೂ.7000 ದೊರೆಯುತ್ತದೆ. ಅದರಿಂದ 80 ಸಾವಿರ ಆದಾಯ.

– ಎನ್‌.ಡಿ.ಹೆಗಡೆ ಆನಂದಪುರಂ

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.