ಬಾಳೆ ಎಲೆ ಊಟಕ್ಕೆಬಂಗಾರಪೇಟೆಗೆ ಬನ್ನಿ

ನಮ್ಮೂರ ಹೋಟೆಲ್‌

Team Udayavani, May 13, 2019, 6:30 AM IST

Isiri-oota

ಜಾಗತೀಕರಣದ ಪ್ರಭಾವದ ನಡುವೆಯೂ ಕೆಲವು ಹೋಟೆಲ್‌ಗ‌ಳು ಇಂದಿಗೂ ತಮ್ಮ ಹಳೇ ರುಚಿ, ಸಂಪ್ರದಾಯವನ್ನು ಉಳಿಸಿಕೊಂಡು ಬರುತ್ತಿವೆ. ಅಂಥ ಹೋಟೆಲ್‌ಗ‌ಳಲ್ಲಿ ಬಂಗಾರಪೇಟೆಯ ಸುಜಾತ ಹೋಟೆಲ್‌ ಕೂಡ ಒಂದು. ಈ ಹೋಟೆಲ್‌, ಅದರ ಮಾಲೀಕರು, ಅವರ ಹಿನ್ನೆಲೆ ಹೀಗಿದೆ.

1979ರಲ್ಲಿ ನಾಗರಾಜರಾವ್‌ ಅವರು ಸುಜಾತ ಹೆಸರಿನ ಹೋಟೆಲ್‌ ಆರಂಭಿಸಿದ್ದರು. ಆಂಧ್ರದ ಬಡಿಕಾಯನಪಲ್ಲಿ ಇವರ ಮೂಲ ಸ್ಥಳ. ಇವರ ತಂದೆ ಸೀತರಾಮಯ್ಯ ಬಂಗಾರಪೇಟೆ ತಾಲೂಕಿನ ಹುದುಕುಲ ಸಮೀಪದ ವಟ್ರಾಕುಂಟೆಯ ಗೌರಮ್ಮ ಅವರನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದ್ದರು. ಸೀತಾರಾಮಯ್ಯ ಹುದುಕುಲ ರೈಲ್ವೆ ನಿಲ್ದಾಣದ ಬಳಿ ಪುಟ್ಟದಾದ ಹೋಟೆಲ್‌ ಮಾಡಿಕೊಂಡು ಇಡ್ಲಿ, ವಡೆ, ಚಿತ್ರಾನ್ನ ಹೀಗೆ ಎರಡು ಮೂರು ಬಗೆಯ ತಿಂಡಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇವರಿಗೆ ನಾಲ್ವರು ಪುತ್ರರು, ಪುತ್ರಿ ಇದ್ದು, ಇವರಲ್ಲಿ ಸುಜಾತ ಹೋಟೆಲ್‌ ಮಾಲೀಕ ನಾಗರಾಜರಾವ್‌ ಕೂಡ ಒಬ್ಬರು.

ಚಿಕ್ಕವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡ ಇವರನ್ನು ಸೋದರ ಮಾವ ಸುಬ್ಬಣ್ಣ ಸಾಕಿ ಸಲಹಿದರು. ಎಸ್ಸೆಸ್ಸೆಲ್ಸಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿದ ನಾಗರಾಜರಾವ್‌, ಅಡುಗೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಂತರ ಚೂಡನಾಥ್‌ ಎಂಬುವರು ನಡೆಸುತ್ತಿದ್ದ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡರು. ಮುಂದೆ ವಯಸ್ಸಾಯ್ತು ಎಂಬ ಕಾರಣಕ್ಕೆ ಚೂಡನಾಥ್‌ ಅವರು ಹೋಟೆಲ್‌ ಮುಚ್ಚಲು ಮುಂದಾಗಿದ್ದರು. ಆಗ ನಾಗರಾಜರಾವ್‌ ಅವರೇ ಹೋಟೆಲ್‌ ಅನ್ನು ಖರೀದಿಸಿ ಅದಕ್ಕೆ ತಮ್ಮ ಸಹೋದರಿಯ ಪುತ್ರಿ ಸುಜಾತ ಅವರ ಹೆಸರನ್ನೇ ನಾಮಕರಣ ಮಾಡಿದರು.

ನಂತರ ಮೀನಾಕ್ಷಮ್ಮ ಅವರನ್ನು ಮದುವೆಯಾದ ನಾಗರಾಜರಾವ್‌ಗೆ, ಎನ್‌.ಸೀತಾರಾಮ ಎಂಬ ಪುತ್ರ ಇದ್ದಾರೆ. ಪಿಯುಸಿ ನಂತರ ತಮ್ಮದೇ ಹೋಟೆಲ್‌ನಲ್ಲಿ ಸಪ್ಲೈ ಅಡುಗೆ ಕೆಲಸಕ್ಕೆ ಸೇರಿಕೊಂಡ ಸೀತಾರಾಮ, ಈಗ ಹೋಟೆಲ್‌ನ ಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ನಾಗರಾಜರಾವ್‌ಗೆ ವಯಸ್ಸಾಗಿರುವ ಕಾರಣ ಹಳ್ಳಿಯಲ್ಲೇ ವಿಶ್ರಾಂತಿ ಪಡೆಯುತ್ತಾ, ಆಗಾಗ ಹೋಟೆಲ್‌ಗ‌ೂ ಬಂದು ನೋಡಿಕೊಂಡು ಹೋಗುತ್ತಾರೆ.

ಈಗ ಸುಜಾತ ನ್ಯೂ
ಹೋಟೆಲ್‌ನ ಜವಾಬ್ದಾರಿ ವಹಿಸಿಕೊಂಡ ನಂತರ ಎನ್‌.ಸೀತಾರಾಮ, 10 ವರ್ಷ ನಾಮಫ‌ಲಕವಿಲ್ಲದೇ ನಡೆಯುತ್ತಿದ್ದ ಸುಜಾತ ಹೋಟೆಲ್‌ಗೆ “ನ್ಯೂ’ ಅನ್ನು ಸೇರಿಸಿದ್ದಾರೆ. ಆದ್ರೆ, ಕಟ್ಟಡ, ಕುರ್ಚಿ, ಚೇರು, ಅಡುಗೆ ರುಚಿಯನ್ನು ಹಾಗೇ ಉಳಿಸಿಕೊಂಡು ಬರುತ್ತಿದ್ದಾರೆ. ಹೊಸದಾಗಿ ಬರುವ ಗ್ರಾಹಕರಿಗೆ ಗೊತ್ತಾಗಲಿ ಎಂಬ ಕಾರಣಕ್ಕೆ ಹೊಸದಾಗಿ ನೇಮ್‌ ಬೋರ್ಡ್‌ ಬರೆಸಿದ್ದೇನೆ ಎನ್ನುತ್ತಾರೆ ಸೀತಾರಾಮ.

ಈಗಲೂ ಬಾಳೆ ಎಲೆ ಬಳಕೆ
ಸಣ್ಣಪುಟ್ಟ ಹೋಟೆಲ್‌ಗ‌ಳಲ್ಲೂ ಈಗ ಪ್ಲಾಸ್ಟಿಕ್‌ ಬಳಕೆ ಮಾಡ್ತಾರೆ. ಆದರೆ, ಸುಜಾತ ನ್ಯೂ ಹೋಟೆಲ್‌ನಲ್ಲಿ ಬಾಳೆ ಎಲೆಯಲ್ಲೇ ಊಟ ಹಾಕ್ತಾರೆ. ಒಮ್ಮೆಗೆ 20 ಜನ ಕೂತು ಊಟ ಮಾಡುತ್ತಾರೆ. ಒಂದು ರೀತಿಯಲ್ಲಿ ಮದುವೆ ಮನೆಯಲ್ಲಿ ಊಟ ಮಾಡಿದ ಅನುಭವ ಆಗುತ್ತದೆ ಎನ್ನುತ್ತಾರೆ ಗ್ರಾಹಕರು. ಮಧ್ಯಾಹ್ನ 1.30ರಿಂದ 3ಗಂಟೆವರೆಗೂ ಗ್ರಾಹಕರು ಕಾದು ನಿಂತು ಊಟ ಮಾಡುತ್ತಾರೆ.

— ಭೋಗೇಶ ಆರ್‌.ಮೇಲುಕುಂಟೆ / ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.