ಬಾಳೆ ಎಲೆ ಊಟಕ್ಕೆಬಂಗಾರಪೇಟೆಗೆ ಬನ್ನಿ

ನಮ್ಮೂರ ಹೋಟೆಲ್‌

Team Udayavani, May 13, 2019, 6:30 AM IST

Isiri-oota

ಜಾಗತೀಕರಣದ ಪ್ರಭಾವದ ನಡುವೆಯೂ ಕೆಲವು ಹೋಟೆಲ್‌ಗ‌ಳು ಇಂದಿಗೂ ತಮ್ಮ ಹಳೇ ರುಚಿ, ಸಂಪ್ರದಾಯವನ್ನು ಉಳಿಸಿಕೊಂಡು ಬರುತ್ತಿವೆ. ಅಂಥ ಹೋಟೆಲ್‌ಗ‌ಳಲ್ಲಿ ಬಂಗಾರಪೇಟೆಯ ಸುಜಾತ ಹೋಟೆಲ್‌ ಕೂಡ ಒಂದು. ಈ ಹೋಟೆಲ್‌, ಅದರ ಮಾಲೀಕರು, ಅವರ ಹಿನ್ನೆಲೆ ಹೀಗಿದೆ.

1979ರಲ್ಲಿ ನಾಗರಾಜರಾವ್‌ ಅವರು ಸುಜಾತ ಹೆಸರಿನ ಹೋಟೆಲ್‌ ಆರಂಭಿಸಿದ್ದರು. ಆಂಧ್ರದ ಬಡಿಕಾಯನಪಲ್ಲಿ ಇವರ ಮೂಲ ಸ್ಥಳ. ಇವರ ತಂದೆ ಸೀತರಾಮಯ್ಯ ಬಂಗಾರಪೇಟೆ ತಾಲೂಕಿನ ಹುದುಕುಲ ಸಮೀಪದ ವಟ್ರಾಕುಂಟೆಯ ಗೌರಮ್ಮ ಅವರನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದ್ದರು. ಸೀತಾರಾಮಯ್ಯ ಹುದುಕುಲ ರೈಲ್ವೆ ನಿಲ್ದಾಣದ ಬಳಿ ಪುಟ್ಟದಾದ ಹೋಟೆಲ್‌ ಮಾಡಿಕೊಂಡು ಇಡ್ಲಿ, ವಡೆ, ಚಿತ್ರಾನ್ನ ಹೀಗೆ ಎರಡು ಮೂರು ಬಗೆಯ ತಿಂಡಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇವರಿಗೆ ನಾಲ್ವರು ಪುತ್ರರು, ಪುತ್ರಿ ಇದ್ದು, ಇವರಲ್ಲಿ ಸುಜಾತ ಹೋಟೆಲ್‌ ಮಾಲೀಕ ನಾಗರಾಜರಾವ್‌ ಕೂಡ ಒಬ್ಬರು.

ಚಿಕ್ಕವಯಸ್ಸಿನಲ್ಲೇ ತಂದೆಯನ್ನು ಕಳೆದುಕೊಂಡ ಇವರನ್ನು ಸೋದರ ಮಾವ ಸುಬ್ಬಣ್ಣ ಸಾಕಿ ಸಲಹಿದರು. ಎಸ್ಸೆಸ್ಸೆಲ್ಸಿಗೆ ವಿದ್ಯಾಭ್ಯಾಸ ಮೊಟಕುಗೊಳಿಸಿದ ನಾಗರಾಜರಾವ್‌, ಅಡುಗೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಂತರ ಚೂಡನಾಥ್‌ ಎಂಬುವರು ನಡೆಸುತ್ತಿದ್ದ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡರು. ಮುಂದೆ ವಯಸ್ಸಾಯ್ತು ಎಂಬ ಕಾರಣಕ್ಕೆ ಚೂಡನಾಥ್‌ ಅವರು ಹೋಟೆಲ್‌ ಮುಚ್ಚಲು ಮುಂದಾಗಿದ್ದರು. ಆಗ ನಾಗರಾಜರಾವ್‌ ಅವರೇ ಹೋಟೆಲ್‌ ಅನ್ನು ಖರೀದಿಸಿ ಅದಕ್ಕೆ ತಮ್ಮ ಸಹೋದರಿಯ ಪುತ್ರಿ ಸುಜಾತ ಅವರ ಹೆಸರನ್ನೇ ನಾಮಕರಣ ಮಾಡಿದರು.

ನಂತರ ಮೀನಾಕ್ಷಮ್ಮ ಅವರನ್ನು ಮದುವೆಯಾದ ನಾಗರಾಜರಾವ್‌ಗೆ, ಎನ್‌.ಸೀತಾರಾಮ ಎಂಬ ಪುತ್ರ ಇದ್ದಾರೆ. ಪಿಯುಸಿ ನಂತರ ತಮ್ಮದೇ ಹೋಟೆಲ್‌ನಲ್ಲಿ ಸಪ್ಲೈ ಅಡುಗೆ ಕೆಲಸಕ್ಕೆ ಸೇರಿಕೊಂಡ ಸೀತಾರಾಮ, ಈಗ ಹೋಟೆಲ್‌ನ ಪೂರ್ಣ ಜವಾಬ್ದಾರಿ ಹೊತ್ತಿದ್ದಾರೆ. ನಾಗರಾಜರಾವ್‌ಗೆ ವಯಸ್ಸಾಗಿರುವ ಕಾರಣ ಹಳ್ಳಿಯಲ್ಲೇ ವಿಶ್ರಾಂತಿ ಪಡೆಯುತ್ತಾ, ಆಗಾಗ ಹೋಟೆಲ್‌ಗ‌ೂ ಬಂದು ನೋಡಿಕೊಂಡು ಹೋಗುತ್ತಾರೆ.

ಈಗ ಸುಜಾತ ನ್ಯೂ
ಹೋಟೆಲ್‌ನ ಜವಾಬ್ದಾರಿ ವಹಿಸಿಕೊಂಡ ನಂತರ ಎನ್‌.ಸೀತಾರಾಮ, 10 ವರ್ಷ ನಾಮಫ‌ಲಕವಿಲ್ಲದೇ ನಡೆಯುತ್ತಿದ್ದ ಸುಜಾತ ಹೋಟೆಲ್‌ಗೆ “ನ್ಯೂ’ ಅನ್ನು ಸೇರಿಸಿದ್ದಾರೆ. ಆದ್ರೆ, ಕಟ್ಟಡ, ಕುರ್ಚಿ, ಚೇರು, ಅಡುಗೆ ರುಚಿಯನ್ನು ಹಾಗೇ ಉಳಿಸಿಕೊಂಡು ಬರುತ್ತಿದ್ದಾರೆ. ಹೊಸದಾಗಿ ಬರುವ ಗ್ರಾಹಕರಿಗೆ ಗೊತ್ತಾಗಲಿ ಎಂಬ ಕಾರಣಕ್ಕೆ ಹೊಸದಾಗಿ ನೇಮ್‌ ಬೋರ್ಡ್‌ ಬರೆಸಿದ್ದೇನೆ ಎನ್ನುತ್ತಾರೆ ಸೀತಾರಾಮ.

ಈಗಲೂ ಬಾಳೆ ಎಲೆ ಬಳಕೆ
ಸಣ್ಣಪುಟ್ಟ ಹೋಟೆಲ್‌ಗ‌ಳಲ್ಲೂ ಈಗ ಪ್ಲಾಸ್ಟಿಕ್‌ ಬಳಕೆ ಮಾಡ್ತಾರೆ. ಆದರೆ, ಸುಜಾತ ನ್ಯೂ ಹೋಟೆಲ್‌ನಲ್ಲಿ ಬಾಳೆ ಎಲೆಯಲ್ಲೇ ಊಟ ಹಾಕ್ತಾರೆ. ಒಮ್ಮೆಗೆ 20 ಜನ ಕೂತು ಊಟ ಮಾಡುತ್ತಾರೆ. ಒಂದು ರೀತಿಯಲ್ಲಿ ಮದುವೆ ಮನೆಯಲ್ಲಿ ಊಟ ಮಾಡಿದ ಅನುಭವ ಆಗುತ್ತದೆ ಎನ್ನುತ್ತಾರೆ ಗ್ರಾಹಕರು. ಮಧ್ಯಾಹ್ನ 1.30ರಿಂದ 3ಗಂಟೆವರೆಗೂ ಗ್ರಾಹಕರು ಕಾದು ನಿಂತು ಊಟ ಮಾಡುತ್ತಾರೆ.

— ಭೋಗೇಶ ಆರ್‌.ಮೇಲುಕುಂಟೆ / ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.