ಅನಿಯಂತ್ರಿತ ಠೇವಣಿ ಯೋಜನೆ ಬಗ್ಗೆ ನಿಮಗೆಷ್ಟು ಗೊತ್ತು?


Team Udayavani, Apr 15, 2019, 10:31 AM IST

leed-2-(1)

ಸುರಕ್ಷಿತ ಹೂಡಿಕೆಯ ಪ್ರಶ್ನೆ ಬಂದಾಗ ಎಲ್ಲಕ್ಕಿಂತ ಮೊದಲು ಕಾಣಿಸುವುದು ನಿರಖು ಠೇವಣಿಗಳು. ಅಂದರೆ ಫಿಕ್ಸೆಡ್‌ ಡಿಪಾಸಿಟ್‌ಗಳು. ವಿವಿಧ ಅವಧಿಗಳ ಈ ನಿರಖು ಠೇವಣಿ ಯೋಜನೆಗಳಲ್ಲಿ ಹಣ ತೊಡಗಿಸುವುದು ಸುಭದ್ರ, ಸುರಕ್ಷಿತ ಮತ್ತು ಆಕರ್ಷಕ ಎಂಬ ನಂಬಿಕೆ ಸಹಜವಾಗಿಯೇ ಜನ ಸಾಮಾನ್ಯರಲ್ಲಿದೆ. ಹಾಗಾಗಿ, ಜನರು ಬ್ಯಾಂಕ್‌, ಸಹಕಾರಿ ಬ್ಯಾಂಕ್‌, ಬ್ಯಾಂಕೇತರ ಹಣಕಾಸು ಕಂಪೆನಿಗಳು ಮತ್ತು ಪೋಸ್ಟ್‌ ಆಫೀಸ್‌ ಟರ್ಮ್ ಡಿಪಾಸಿಟ್‌ ಯೋಜನೆಗಳತ್ತ ಮುಖ ಮಾಡುತ್ತಾರೆ. ನಿರಖು ಠೇವಣಿಗಳು ಸುಭದ್ರ, ಸುರಕ್ಷಿತ, ಆಕರ್ಷಕ ಎಂಬ ಮಾತಿನಲ್ಲಿ ಅತಿಶಯವೇನೂ ಇಲ್ಲ. ಆದರೆ ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಜನರನ್ನು ತಮ್ಮತ್ತ ಸೆಳೆಯಲು ಹೆಚ್ಚಿನ ಬಡ್ಡಿಯ ಆಮಿಷ ಒಡ್ಡುತ್ತವೆ. ಹಾಗೆಯೇ, ಖಾಸಗಿ ಹಣಕಾಸು ಸಂಸ್ಥೆಗಳು, ಕಾಂಜಿಪೀಂಜಿ ಕಂಪೆನಿಗಳು, ಬ್ಲೇಡ್‌ ಸಂಸ್ಥೆಗಳು ಜನರಿಂದ ಠೇವಣಿಗಳನ್ನು ಸಂಗ್ರಹಿಸುತ್ತವೆ. ಹೆಚ್ಚಿನ ಬಡ್ಡಿಯ ಆಸೆಯಲ್ಲಿ ಜನರು ಈ ಬಗೆಯ ಸಂಸ್ಥೆಗಳ ಆಮಿಷಕ್ಕೆ ಒಳಗಾಗಿ ತಮ್ಮ ಕಷ್ಟದ ಸಂಪಾದನೆಯ ಉಳಿತಾಯವನ್ನು ಅವುಗಳಲ್ಲಿ ಠೇವಣಿ ಇಡುತ್ತಾರೆ.

ಸುಗ್ರೀವಾಜ್ಞೆ ಜಾರಿಯಾಗಿದೆ
ಹೀಗೆ ಠೇವಣಿ ಇಡುವ ಅನೇಕ ಖಾಸಗಿ ಹಣಕಾಸು ಸಂಸ್ಥೆಗಳು ಜನರಿಗೆ ಮೋಸ ಮಾಡಿದ ಹಲವಾರು ಉದಾಹರಣೆಗಳಿವೆ. ಇವುಗಳನ್ನು ನಿಯಂತ್ರಿಸಲೆಂದೇ ಕೇಂದ್ರ ಸರಕಾರ ಈಚೆಗೆ 2019ರ ಅನಿಯಂತ್ರಿತ ಠೇವಣಿ ಯೋಜನೆ ನಿಷೇಧ ಸುಗ್ರೀವಾಜ್ಞೆಯನ್ನು ಜಾರಿಗೆ ತಂದಿದೆ. ಈ ನಿಷೇಧಾಜ್ಞೆಯಿಂದಾಗಿ ಅನಿಯಂತ್ರಿತ ಠೇವಣಿ ಸಂಗ್ರಹಿಸುವ ಎಲ್ಲ ಹಣಕಾಸು, ಬ್ಯಾಂಕೇತರ ಹಣಕಾಸು, ಖಾಸಗಿ ಹಣಕಾಸು ಮತ್ತು ಸಹಕಾರಿ ಬ್ಯಾಂಕುಗಳಿಗೆ ಕೂಡ ಈಗ ಬಿಸಿ ಮುಟ್ಟಿದೆ. ಕೇಂದ್ರ ಸರಕಾರದ ಈ ಕ್ರಮದಿಂದಾಗಿ ಅನಿಯಂತ್ರಿತ ಠೇವಣಿ ಸಂಚಯನಕಾರರು ಈಗ ಬಿಗಿಯಾದ ಆರ್‌ಬಿ ಐ ನೀತಿ ನಿಯಮಗಳಿಗೆ ಒಳಪಡುವಂತಾಗಿದೆ.

ಶಿಕ್ಷಾರ್ಹ ಅಪರಾಧ
ಈ ಸುಗ್ರೀವಾಜ್ಞೆಯಡಿ ಸಂಸ್ಥೆಗಳು ಸಾರ್ವಜನಿಕರಿಂದ ಸಂಗ್ರಹಿಸುವ ಠೇವಣಿಗಳನ್ನು ಎರಡು ಭಾಗವಾಗಿ ವಿಂಗಡಿಸಲಾಗಿದೆ. 1. ನಿಯಂತ್ರಿತ ಠೇವಣಿ, 2. ಅನಿಯಂತ್ರಿತ ಠೇವಣಿ. ಇದರಲ್ಲಿ ಎರಡನೇ ಬಗೆಯ ಅನಿಯಂತ್ರಿತ ಠೇವಣಿಗಳ ಸಂಚಯನವನ್ನು ಸಂಪೂರ್ಣ ನಿಷೇಧಿಸಲಾಗಿದೆ ಮಾತ್ರವಲ್ಲದೆ ಅದು ಶಿಕ್ಷಾರ್ಹ ಅಪರಾಧವೆಂದೂ ಪರಿಗಣಿಸಲಾಗಿದೆ. ಸೆಬಿಯಿಂದ ಆರ್‌ಬಿಐನಿಂದ ಅನುಮತಿ ಪಡೆದ ಬ್ಯಾಂಕ್‌ ಠೇವಣಿಗಳು, ಐಈಅ ಅನುಮತಿ ಪಡೆದ ವಿಮಾ ಸಂಸ್ಥೆಗಳ ಯೋಜನೆಗಳು, ರಾಜ್ಯಗಳ ಕಾಯಿದೆಯಡಿ ನೋಂದಾಯಿತವಾಗಿರುವ ಸಹಕಾರಿ, ಚಿಟ್‌ಫ‌ಂಡ್‌ ಸಂಸ್ಥೆಗಳು ಮುಂತಾಗಿ ಒಟ್ಟು 9 ರೀತಿಯ ನಿಯಂತ್ರಣ ಪ್ರಾಧಿಕಾರದಡಿ ಬರುವ ಠೇವಣಿ ಯೋಜನೆಗಳು ಮಾತ್ರವೇ ನಿಯಂತ್ರಿತ ಠೇವಣಿ ಯೋಜನೆಗಳೆಂದು ಪರಿಗಣಿತವಾಗಿವೆ.

ಈ ಎಲ್ಲ ಅಂಶಗಳನ್ನು ದೃಷ್ಟಿಯಲ್ಲಿರಿಸಿಕೊಂಡರೆ ಜನ ಸಾಮಾನ್ಯರ ನಿರಖು ಠೇವಣಿ ಹಣ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮತ್ತು ಅಂಚೆ ಇಲಾಖೆಯ ಠೇವಣಿ ಯೋಜನೆಗಳಲ್ಲಿ ಹೆಚ್ಚು ಸುಭದ್ರ ಎನ್ನಬಹುದು. ಹೆಚ್ಚಿನ ಬಡ್ಡಿಯ ಆಮಿಷಕ್ಕೆ ಒಳಗಾಗಿ ಅಸಲನ್ನೂ ಕಳೆದುಕೊಳ್ಳುವ ರಿಸ್ಕ್ ಖಂಡಿತ ಬೇಡ ಎನ್ನುವವರು ಸದಾ ಕಾಲ ಮುಂಚೂಣಿಯ ಸರಕಾರಿ ಬ್ಯಾಂಕುಗಳು ಮತ್ತು ಅಂಚೆ ಇಲಾಖೆಯ ಟರ್ಮ್ ಡೆಪಾಸಿಟ್‌ ಯೋಜನೆಗಳನ್ನು ನೆನಪಿನಲ್ಲಿ ಇರಿಸಿ ಕೊಳ್ಳುವುದು ಕ್ಷೇಮ. ಹೂಡಿಕೆಯಲ್ಲಿ ಯಾವತ್ತೂ ನಾವು ರಿಸ್ಕ್ ಫ್ಯಾಕ್ಟರ್‌ ಮರೆಯಬಾರದು. ಹೂಡಿಕೆದಾರರು ಮತ್ತು ವಹಿವಾಟುದಾರರ ನಡುವೆ ಇರುವ ಅಂತರವೇ ರಿಸ್ಕ್ ತೆಗೆದುಕೊಳ್ಳುವಲ್ಲಿನ ಛಾತಿ. ಸಾಮಾನ್ಯವಾಗಿ ವಹಿವಾಟುದಾರರನ್ನು ಹೂಡಿಕೆದಾರರೆಂದು ಪರಿಣತರು ಪರಿಗಣಿಸುವುದಿಲ್ಲ. ವಹಿವಾಟುದಾರರಿಗೆ ಅತ್ಯಂತ ಕಡಿಮೆ ಅವಧಿಯಲ್ಲಿ ಅತ್ಯಂತ ಗರಿಷ್ಠ ಲಾಭ ಗಳಿಸುವುದೇ ಹೂಡಿಕೆಯ ಮೂಲ ಉದ್ದೇಶವಾಗಿರುತ್ತದೆ.

ಹೂಡಿಕೆದಾರರಿಗೆ ಆರರಿಂದ ಹನ್ನೆರಡು ತಿಂಗಳ ಅವಧಿಯೆಂದರೆ ಒಂದು ಯುಗ. ಈ ಅವಧಿಯೊಳಗೆ ತಮ್ಮ ಹೂಡಿಕೆ ಮೊತ್ತವು ನಷ್ಟದ ಹಾದಿ ಹಿಡಿದರೆ ಅದನ್ನು ನಿರ್ದಯೆಯಿಂದ ಅವರು ಕೊನೆಗೊಳಿಸಿ ಕೈಗೆ ಬಂದಷ್ಟು ದುಡ್ಡನ್ನು ಬೇರೆ ಆಕರ್ಷಕ ಮಾಧ್ಯಮಗಳಲ್ಲಿ ತೊಡಗಿಸುತ್ತಾರೆ. ಈ ಯತ್ನದಲ್ಲಿ ತಾವು ಅಸಲಿನ ಭಾಗವನ್ನೇ ಕಳೆದುಕೊಂಡರೂ ಅವರು ಚಿಂತಿಸುವುದಿಲ್ಲ. ಗಾಯಗೊಂಡ ಹುಲಿ ತನ್ನ ದೇಹದ ಒಂದು ಕಡೆಯ ಮಾಂಸವನ್ನು ಕಿತ್ತು ಗಾಯದ ಭಾಗಕ್ಕೆ ಅಂಟಿಸುವ ಯತ್ನ ಮಾಡುವಂತೆ ವಹಿವಾಟುದಾರರು ನಿಷ್ಕರುಣೆಯಿಂದ ವ್ಯವಹಾರ ನಿರತವಾಗಿರುತ್ತಾರೆ. ಆದರೆ ಹೂಡಿಕೆದಾರರು ಹಾಗಲ್ಲ. ಅವರು ತಮ್ಮ ಹೂಡಿಕೆಯನ್ನು ಸಟ್ಟಾ ವ್ಯವಹಾರ ಎಂದು ತಿಳಿಯುವುದಿಲ್ಲ. ಈಸ ಬೇಕು ಇದ್ದು ಜಯಿಸಬೇಕು ಎಂಬ ದಾಸವಾಣಿಯನ್ನು ಹೂಡಿಕೆದಾರರು ಯಥಾವತ್‌ ಪಾಲಿಸುತ್ತಾರೆ. ಹೂಡಿಕೆದಾರರು ಒಂದೆಡೆ ಹಣ ಹೂಡಿದರೆ ಅದು ಲಾಭ ದೊರಕಿಸಿಕೊಡುವ ತನಕ ನಿರ್ಗಮಿಸುವುದಿಲ್ಲ. ಅದು ಬೇಕಿದ್ದರೆ ಶೇರು, ಬಾಂಡ್‌, ಮ್ಯೂಚುವಲ… ಫ‌ಂಡ್‌, ಇಟಿಎಫ್ ಯಾವುದೇ ಇರಲಿ; ಹೂಡಿದ ಮೊತ್ತ ಮಾಗುವ ತನಕವೂ ಕಾಯುತ್ತಾರೆ.


ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಖಾಸಗಿ ಹಣಕಾಸು ಸಂಸ್ಥೆಗಳು ನಾನಾ ಅವಧಿಯ, ಆಕರ್ಷಕ ಬಡ್ಡಿಯ ನಿರಖು ಠೇವಣಿ ಯೋಜನೆಗಳನ್ನು ಪ್ರಚುರ ಪಡಿಸುತ್ತಲೇ ಇರುತ್ತವೆ. ಹಾಗಿದ್ದರೂ ಜನರು ಸುಭದ್ರ ಮತ್ತು ಸುರಕ್ಷಿತ ಎಂಬ ಕಾರಣಕ್ಕೆ ಅಂಚೆ ಕಚೇರಿಯ ಅವಧಿ ಠೇವಣಿಗಳ ಕಡೆಗೆ ಮುಖ ಮಾಡುವ ಜರೂರಿ ಇದೆ. ಅಂಚೆ ಇಲಾಖೆಯ ನಿರಖು ಠೇವಣಿಗಳ ಮೇಲಿನ ಬಡ್ಡಿ 1. ಒಂದು ವರ್ಷದಿಂದ ಮೂರು ವರ್ಷದ ತನಕ ಡಿಪಾಸಿಟ್‌ಗೆ ಶೇ. 7ರಷ್ಟು ಬಡ್ಡಿ. ನಾಲ್ಕು, ಐದು ವರ್ಷಕ್ಕೆ 7.8ರಷ್ಟು ಬಡ್ಡಿ.

ನಿರಖು ಠೇವಣಿ ಅಂದರೆ…
ಹೂಡಿಕೆಯಲ್ಲಿ ಸಹನೆ, ತಾಳ್ಮೆ, ಸಂಯಮ ತೋರುವ ಹೂಡಿಕೆದಾರರು ನಿಶ್ಚಿಂತೆ, ಸುಭದ್ರತೆಯನ್ನು ಬಯಸುವವರಾಗಿರುತ್ತಾರೆ. ಅವರು ನಿರ್ದಿಷ್ಟ ವರ್ಷಗಳ ಕಾಲಕ್ಕೆ ಹಣವನ್ನು ಹೂಡಿ, ಅದು ಮಾಗುವವರೆಗೆ ಕಾಯುತ್ತಾರೆ. ಈ ಬಗೆಯ ಪ್ರವೃತ್ತಿದಾರರಿಗೆ ಅತ್ಯಂತ ಪ್ರಶಸ್ತವಾಗಿರುವ ಹೂಡಿಕೆ ಮಾಧ್ಯಮ ಎಂದರೆ ನಿರಖು ಠೇವಣಿ. ಇದನ್ನೇ ನಾವು ಫಿಕ್ಸ್‌$xಡಿಪಾಸಿಟ್‌ ಎಂದು ಕರೆಯುವುದು. ಒಂದು, ಎರಡು, ಮೂರು, ಐದು ವರ್ಷಗಳ ಅವಧಿಯ ಟರ್ಮ್… ಡಿಪಾಸಿಟ್‌ ಗಳು ಅಥವಾ ಅವಧಿ ನಿರಖು ಠೇವಣಿಗಳು ಸುಭದ್ರತೆ, ಸುರಕ್ಷೆಯ ದೃಷ್ಟಿಯಿಂದ ಒಳ್ಳೆಯದು. ಹಾಗಿದ್ದರೂ ಲಾಭದಾಯಕತೆ ನಿಶ್ಚಿತವಾಗಿರುವುದರಿಂದ ಮಧ್ಯಮ ವರ್ಗದ ಮಂದಿಯ ಮೊದಲ ಹೂಡಿಕೆಯ ಆಯ್ಕೆಯೇ ನಿರಖು ಠೇವಣಿ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.