ಎರೆ ಮನೆ


Team Udayavani, Jan 27, 2020, 6:04 AM IST

yeremane

ಮಳೆಗಾಲದಲ್ಲಿ ಮಣ್ಣಿನಲ್ಲಿ ಹೊರಳಾಡುವ ಎರೆಹುಳಗಳನ್ನು ಹೊರಕ್ಕೆಳೆದು ಅಂಗೈಯಲ್ಲಿ ಹಾಕಿಕೊಂಡು ತಿರುಗಿಸುತ್ತಾ ಖುಷಿಪಡುತ್ತಿದ್ದ ನೆನಪು ಅನೇಕರಲ್ಲಿದೆ. ಅದೇ ಎರೆಹುಳು ಸಾಕಣೆ ಮತ್ತು ಎರೆಹುಳು ಗೊಬ್ಬರದ ಬ್ರ್ಯಾಂಡ್‌ ಸೃಷ್ಟಿಸಿ ಮಾರಾಟದ ಮೂಲಕ ಆದಾಯ ಗಳಿಕೆಯನ್ನು ಹೆಚ್ಚಿಸಿಕೊಂಡಿರುವ ರೈತ ಮಹಿಳೆಯೋರ್ವಳ ಯಶೋಗಾಥೆ ಇಲ್ಲಿದೆ.

ಹಾವೇರಿ ಜಿಲ್ಲೆ ಹಾನಗಲ್‌ ತಾಲೂಕಿನ ಗಡಿ ಗ್ರಾಮ ಲಕ್ಷ್ಮೀಪುರ ಗೊಲ್ಲರ ಬಿಡಾರದ ರೈತ ಮಹಿಳೆ ನಾಗವೇಣಿ ಗೊಲ್ಲರ. ಶಾಲೆಯ ಮುಖವನ್ನೇ ನೋಡದ ಇವರು ಎರೆಹುಳು ಸಾಕಣೆ ಮತ್ತು ಎರೆಹುಳು ಗೊಬ್ಬರ ತಯಾರಿಕೆಯ ಉದ್ಯಮಿಯಾಗಿ ಬೆಳೆದು ನಿಂತಿದ್ದಾರೆ. ಪತಿ ಬಾಬಣ್ಣರಿಗೆ ಎರೆಹುಳು ಸಾಕಣಿಕೆಯ ಬಗ್ಗೆ ಆಸಕ್ತಿ ಇದ್ದ ಕಾರಣ ಇವರೂ ಪತಿಯ ಜೊತೆ ಕೈಜೋಡಿಸಿದರು. ಬೇರೆಡೆಯಿಂದ 2 ಕೆ.ಜಿ. ಎರೆಹುಳುಗಳನ್ನು ತಂದು ಅವರೇ ಸಾಕಿದ್ದರು. ಈಗ ಅವರೇ ಎರೆಹುಳು ಗೊಬ್ಬರ ತಯಾರಿಸಿ ಮಾರಾಟ ಮಾಡುತ್ತಾರೆ.

ಹಲವೆಡೆ ಎಕ್ಸ್‌ಪೋರ್ಟ್‌: ಇಂದು, ಅವರು ತಯಾರಿಸುತ್ತಿರುವ ಎರೆಹುಳು ಗೊಬ್ಬರ, ಉದ್ಯಮದ ಸ್ವರೂಪ ಪಡೆದುಕೊಳ್ಳುತ್ತಿದೆ. ಇವರು ತಯಾರಿಸುತ್ತಿರುವ ಎರೆಹುಳು ಗೊಬ್ಬರಕ್ಕೆ ಹೆಚ್ಚು ಬೇಡಿಕೆಯೂ ಇದೆ. ಕುಂದಾಪುರ, ಉಡುಪಿ, ಮಹಾರಾಷ್ಟ್ರ, ಶಿವಮೊಗ್ಗ, ಗಂಗಾವತಿ, ರಾಯಚೂರು, ದಾವಣಗೆರೆ , ಕಾರವಾರ, ಬೆಳಗಾವಿ, ಧಾರವಾಡ ಹೀಗೆ ನಾನಾ ಕಡೆಗಳಿಗೆ ನಾಗವೇಣಿಯವರು ತಯಾರಿಸಿದ ಎರೆ ಹುಳು ಗೊಬ್ಬರ ಸರಬರಾಜಾಗುತ್ತದೆ. ಖಾದಿ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಸಹಾಯ ಧನ ಪಡೆದು ತಾವು ಕೈಯಿಂದ ಒಂದಷ್ಟು ಹಣ ಹೂಡಿ ಉದ್ಯಮ ಸ್ಥಾಪಿಸಿದ್ದಾರೆ ಈ ರೈತ ಮಹಿಳೆ. 39 ಅಡಿ ಉದ್ದ 27 ಅಡಿ ಅಗಲದ ಶೆಡ್‌ಅನ್ನು ನಿರ್ಮಿಸಿ ಅದರಲ್ಲಿ ಸುಮಾರು 10 ತೊಟ್ಟಿಗಳನ್ನು ನಿರ್ಮಿಸಿ ಗೊಬ್ಬರ ತಯಾರಿಸಲು ಪ್ರಾರಂಭಿಸಿದ್ದರು. ಬೇಡಿಕೆ ಹೆಚ್ಚಾದಾಗ ತಿಪ್ಪೆ ತೊಟ್ಟಿಯನ್ನು ನಿರ್ಮಿಸಿ ಅದರಲ್ಲಿಯೂ ಎರೆಹುಳುಗಳನ್ನು ಬಿಟ್ಟು ಗೊಬ್ಬರ ತಯಾರಿಕೆಯಲ್ಲಿ ತೊಡಗಿದರು.

ಸ್ವಂತ ಬ್ರ್ಯಾಂಡ್‌: ತಾವು ತಯಾರಿಸಿದ ಗೊಬ್ಬರವನ್ನು ತನ್ನ ಸ್ವಂತ ಹೊಲಕ್ಕೂ ಉಪಯೋಗಿಸುತ್ತಾರೆ. ಅಷ್ಟೇ ಅಲ್ಲ “ಸಂಜೀವಿನಿ ಎರೆ ಗೊಬ್ಬರ’ ಎಂಬ ಬ್ರ್ಯಾಂಡ್‌ ಪ್ರಾರಂಭಿಸಿದ್ದಾರೆ. ಅದರಡಿ 50 ಕೆ.ಜಿ ಚೀಲಕ್ಕೆ 450-500 ರೂ. ಮತ್ತು ಎರೆಹುಳುವನ್ನು ಒಂದು ಕೆ.ಜಿ.ಗೆ 300 ರೂ.ನಂತೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಖರ್ಚೆಲ್ಲಾ ಕಳೆದು ವರ್ಷಕ್ಕೆ ಏನಿಲ್ಲವೆಂದರೂ 1ರಿಂದ 2 ಲಕ್ಷ ರೂ. ತನಕ ಲಾಭ ಗಳಿಸುತ್ತಾರೆ. ತನಗಿರುವ 5 ಎಕರೆ ಜಮೀನಿನಲ್ಲಿ ಭತ್ತ, ಅಡಕೆ, ಬಾಳೆ ಅಷ್ಟೇ ಅಲ್ಲದೇ ಹೈನುಗಾರಿಕೆಯಲ್ಲಿಯೂ ತೊಡಗಿದ್ದಾರೆ.

ಜರ್ಮನ್‌ ತಳಿಯ ಎರೆಹುಳು: ನಾಗವೇಣಿ ಗೊಲ್ಲರ, ಗೊಬ್ಬರದ ತೊಟ್ಟಿಗಳಿಗೆ ಹಸಿರೆಲೆಸೊಪ್ಪು, ಚದುರಂಗಸೊಪ್ಪು, ಗೊಬ್ಬರದಸೊಪ್ಪು ಬಿಳಿಹುಲ್ಲಿನಪುಡಿ ಸೇರಿದಂತೆ ಹಲವು ಬಗೆಯ ತ್ಯಾಜ್ಯ ವಸ್ತುಗಳನ್ನು ಹಾಕಿ ಕೊಳೆಯಲು ಬಿಟ್ಟು ನಂತರ ಎರೆಹುಳುಗಳನ್ನು ಬಿಡುತ್ತಾರೆ. ಶೇ. 50 ತೇವಾಂಶ ಇರುವಂತೆ ನೋಡಿಕೊಳ್ಳುತ್ತಾರೆ. ತೊಟ್ಟಿಗಳ ಮೇಲೆ ಬಿಸಿಲಿನ ಝಳ ಬೀಳದಂತೆ ಎಚ್ಚರವಹಿಸಿದ್ದಾರೆ. ತ್ಯಾಜ್ಯ ವಸ್ತುಗಳನ್ನೆಲ್ಲ ಹುಳುಗಳು ತಿಂದುಹಾಕಿ ಚಹಾ ಪುಡಿಯಂಥ ಎರೆಹುಳು ಗೊಬ್ಬರ ಸಿದ್ದವಾಗುತ್ತದೆ. ಯುಡ್ರಿಲೇಸ್‌ ಜರ್ಮನ್‌ ತಳಿ ಮತ್ತು ಐಸೇನೀಯಾ ಪೆಟಿಡಾ ಎರೆಹುಳುಗಳನ್ನು ಸಾಕುವುದರಿಂದ ಗೊಬ್ಬರ ಬೇಗ ಸಿದ್ಧವಾಗುತ್ತದೆ ಎನ್ನುವುದು ನಾಗವೇಣಿಯವರ ಅನುಭವದ ಮಾತು.

ಸಂಪರ್ಕ: 9972712106

ಚಿತ್ರ ಲೇಖನ: ಟಿ. ಶಿವಕುಮಾರ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.