ಒಂದು ಫಿಶ್‌ ಫ್ರೈ ಪಾಠ


Team Udayavani, Mar 12, 2019, 12:30 AM IST

m-4.jpg

ಹಸಿದ ಹೊಟ್ಟೆ, ಖಾಲಿ ಜೇಬು ಬದುಕಿನಲ್ಲಿ ಅನೇಕ ಪಾಠಗಳನ್ನು ಕಲಿಸುತ್ತದೆ ಎಂಬ ಮಾತಿದೆ. ಆದರೆ, ಅಂದು ನನ್ನ ಹೊಟ್ಟೆಯೂ ಹಸಿದಿರಲಿಲ್ಲ. ಜೇಬೂ ಖಾಲಿಯೂ ಆಗಿರಲಿಲ್ಲ. ಆದರೂ ಒಂದು ತುಂಡು ಫಿಶ್‌ ಫ್ರೈ, ಶಿಸ್ತು ಎನ್ನುವ ಬಹುದೊಡ್ಡ ಪಾಠ ಕಲಿಸಿತ್ತು…

ಕೆಲವೊಮ್ಮೆ ಚಿಕ್ಕ ಚಿಕ್ಕ ವಿಷಯಗಳು ಕೂಡ ಬದುಕಿನಲ್ಲಿ ಅತಿ ದೊಡ್ಡ ಪಾಠ ಕಲಿಸುತ್ತವೆ. ಅದರಲ್ಲೂ ಈ ವಿದ್ಯಾರ್ಥಿ ಜೀವನವೆಂದರೆ ಕೇಳಬೇಕಾ? ಶಿಲ್ಪಿ ಕೆತ್ತುತ್ತಿರುವ ಕಲ್ಲಿನಂತೆ ವಿದ್ಯಾರ್ಥಿಗಳು. ಕಲ್ಲು ಒಂಚೂರು ಹೆಚ್ಚು ಕಮ್ಮಿಯಾದರೂ ಮೂರ್ತಿ ಭಗ್ನವಾಗುವುದು ಗ್ಯಾರೆಂಟಿ. ನಾವು ಯಾವಾಗ, ಯಾರೊಂದಿಗೆ, ಯಾವ ರೀತಿ ನಡೆದುಕೊಳ್ಳಬೇಕು ಎಂದು ನನಗೆ ನಡವಳಿಕೆಯ ಪಾಠ ಕಲಿಸಿದ ಉಳಿಪೆಟ್ಟಿನ ಕಥೆ ಇದು. ಒಂದೇ ಒಂದು ಫಿಶ್‌ ಫ್ರೈ ತುಂಡು ನನ್ನ ಯೋಚನೆಯ ದಿಕ್ಕನ್ನೇ ಬದಲಿಸುತ್ತೆ ಎಂದು ಯಾವತ್ತೂ ಎಣಿಸಿರಲಿಲ್ಲ. 

ಅಂದ ಹಾಗೆ, ಈ ಇಡೀ ಸಿನಿಮಾ ಚಿತ್ರೀಕರಣಗೊಂಡಿದ್ದು ನಮ್ಮ ಬಿ.ಎಡ್‌. ಕ್ಲಾಸ್‌ರೂಮ್‌ನ ಸಿಸಿ ಕ್ಯಾಮೆರಾದಲ್ಲಿ! ನಾನು ಕಾಲೇಜಿಗೆ ಕಾಲಿಟ್ಟು ಸರಿಯಾಗಿ ಒಂದು ವಾರವೂ ಕಳೆದಿರಲಿಲ್ಲ. ಆಗಲೇ ನನ್ನಿಂದ ಬಹುದೊಡ್ಡ ರಾದ್ಧಾಂತವೊಂದು ನನಗರಿವಿಲ್ಲದೇ ಘಟಿಸಿ ಹೋಗಿತ್ತು. ಒಂದು ಮಧ್ಯಾಹ್ನದ ಊಟದ ಬ್ರೇಕ್‌ನ ಸಮಯದಲ್ಲಿ ಹಾಸ್ಟೆಲ್‌ನಲ್ಲಿ ಬೇಗ ಊಟ ಮುಗಿಸಿಕೊಂಡು ಕಾಲೇಜಿಗೆ ಬಂದೆ. ನನ್ನ ಸೀನಿಯರ್‌ ಗುಂಪೊಂದು ಅವರ ಕ್ಲಾಸ್‌ರೂಮ್‌ನಲ್ಲಿ ಕುಳಿತು ಊಟ ಮಾಡುತ್ತಿದ್ದದನ್ನು ಕಂಡು ಒಳಗೆ ಹೋದೆ. ಪ್ರೀತಿಯಿಂದ ಮಾತನಾಡಿಸಿದ ಅವರು, ಊಟ ಮಾಡುವಂತೆ ಹೇಳಿದರು. ಸೀನಿಯರ್‌ ಒಬ್ಬರು ತಮ್ಮ ಮನೆಯಿಂದ ತಂದಿದ್ದ ಫಿಶ್‌ ಫ್ರೈ ಕೊಡಲು ಮುಂದಾದರು. ಆಗ ತಾನೇ ಊಟ ಮುಗಿಸಿ ಬಂದಿದ್ದ ನಾನು ಸಹಜವಾಗಿಯೇ “ಬೇಡ’ ಎಂದೆ. ಆದರೆ, ಅವರು ಜೂನಿಯರ್‌ ಎನ್ನುವ ಆತ್ಮೀಯತೆಯಿಂದ ಒಂದು ಸಣ್ಣ ಫ್ರೈ ಪೀಸನ್ನು ತಿನ್ನಿಸಿದರು. ಇಷ್ಟೇ ಸಾಕಾಗಿತ್ತು ನೋಡಿ ನನ್ನ ಗ್ರಹಚಾರ ಕೆಡಲು. 

ನಮ್ಮ ಪ್ರಿನ್ಸಿಪಾಲ್‌ ಈ ಘಟನೆಯಿಂದ ಕೆಂಡಾಮಂಡಲರಾಗಿದ್ದರು. ಬಿಗ್‌ಬಾಸ್‌ ಮನೆಯ ಹಾಗೆ ಕ್ಲಾಸ್‌ರೂಮಿನ ಸಿಸಿ ಕ್ಯಾಮೆರಾದಲ್ಲಿ ಕೈತುತ್ತು ತಿನ್ನಿಸಿದ ದೃಶ್ಯವನ್ನು ನೋಡಿ, ಮರುದಿನವೇ ನಮ್ಮನ್ನೆಲ್ಲ ಕನ್ಫೆಷನ್‌ ರೂಮ್‌ಗೆ ಕರೆಸಿಯೇಬಿಟ್ಟರು. ನಮ್ಮೆಲ್ಲ ಲೆಕ್ಚರರ್‌, ಆಫೀಸ್‌ ಬ್ಯಾರಿಯರ್‌ನ ಸಮ್ಮುಖದಲ್ಲಿಯೇ ನಡೆಯಿತು, ಮಹಾಮಂಗಳಾರತಿ ಕಾರ್ಯಕ್ರಮ. ಅರೆ! ಕೈತುತ್ತು ತಿನ್ನಿಸಿದ್ದರಲ್ಲೇನಿದೆ ತಪ್ಪು ಎಂದು ನಿಮಗೆ ಅನಿಸುತ್ತಿರಬಹುದು. ನನಗೂ ಕೂಡ, ಇದರಲ್ಲೇನಿದೆ ಅಂಥ ಅಪರಾಧ. ನಮ್ಮದು 21ನೇ ಶತಮಾನದ 5ಜಿ ಸ್ಪೀಡ್‌ನ‌ಲ್ಲಿ ಓಡುತ್ತಿರುವ ಬದುಕು. ಹೀಗಿರುವಾಗ ಜಸ್ಟ್ ಒಂದು ಕೈತುತ್ತು ತಿಂದಿದ್ದು ತಪ್ಪಾ ಎಂದು ಅನಿಸಿತ್ತು. ಆದರೆ, ನಮ್ಮ ಪ್ರಿನ್ಸಿಪಾಲರ ದೃಷ್ಟಿಕೋನ ಹಾಗೂ ಅವರ ನಿಲುವು ಬೇರೆಯೇ ಆಗಿತ್ತು. ಆಧುನಿಕತೆಯ ಭರಾಟೆಯಲ್ಲಿ ಇಂಥ ವರ್ತನೆ ಅವರಿಗೆ ಕಿಂಚಿತ್ತೂ ಹಿಡಿಸಿರಲಿಲ್ಲ. “ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ’ ಎಂದು ಪ್ರಾರಂಭದಲ್ಲಿಯೇ ತಪ್ಪನ್ನು ನಮ್ಮ ಅರಿವಿಗೆ ತಂದು, ಬುದ್ಧಿ ಹೇಳಿ ವಾರ್ನ್ ಮಾಡಿದ್ದರು. ರುಚಿ ರುಚಿಯಾದ ಮೀನು ಚಪ್ಪರಿಸಿದ್ದ ನನ್ನ ಪರಿಸ್ಥಿತಿ, ಅಂದು ಕಾದ ಬಾಣಲೆಗೆ ಹಾಕಿದ ಮೀನಿನಂತಾಗಿದ್ದಂತೂ ಸತ್ಯ!

ಅದಾದ ಕೆಲ ದಿನಗಳವರೆಗೆ ನಾನು ಮಾಡಿದ್ದು ತಪ್ಪೇ ಅಲ್ಲ ಎಂದು ಒಳಗೊಳಗೇ ಪ್ರತಿಭಟಿಸಿದೆ. ಆದರೆ, ದಿನಗಳೆದಂತೆ ನಮ್ಮ ಪ್ರಿನ್ಸಿಪಾಲರ ಮಾತು ಅರ್ಥವಾಗತೊಡಗಿತು. ನಾನಿಂದು ಬದಲಾದ ಆಧುನಿಕ ಸಮಾಜದಲ್ಲಿ “ಐ ಡೋಂಟ್‌ ಕೇರ್‌’ ಎನ್ನುವ ವ್ಯಕ್ತಿತ್ವದೊಂದಿಗೆ ಬದುಕುತ್ತಿದ್ದೇನೆ ಎಂದು ಬೀಗಬಹುದು. ಆದರೆ, ಸುಸಂಸ್ಕೃತ ಸಮಾಜದಲ್ಲಿ ಬದುಕುತ್ತಿದ್ದೇನೆ ಎಂಬ ಕನಿಷ್ಠ ಪ್ರಜ್ಞೆಯನ್ನು ಮರೆಯಬಾರದು. ಭವಿಷ್ಯದಲ್ಲಿ ಶಿಕ್ಷಕರಾಗುವ ಹಾದಿಯಲ್ಲಿರುವ ನಾವು ಇಂಥ ಸೂಕ್ಷ್ಮಗಳನ್ನು ಅಗತ್ಯವಾಗಿ ಅರಿತಿರಬೇಕು. ಕ್ಲಾಸ್‌ರೂಮಿನಲ್ಲಿ ಕೈತುತ್ತು ತಿಂದಿದ್ದು, ತಿನ್ನಿಸಿದ್ದು ನಮ್ಮ ಪಾಲಿಗೆ ತಪ್ಪಲ್ಲದಿರಬಹುದು. ಆದರೆ, ಸಮಾಜ ನೋಡುವ ರೀತಿಯೇ ಬೇರೆ. ಅವರಲ್ಲಿ ಶಿಸ್ತು ಮೂಡಿಸುವ, ತಪ್ಪನ್ನು ತಿದ್ದಿ ಸರಿದಾರಿಗೆ ತರಬೇಕಿರುವ ನಾವೇ ಹೀಗೆ ಅಶಿಸ್ತಿನಿಂದ ವರ್ತಿಸಿದರೆ ಹೇಗೆ ಎನ್ನುವುದು ಪ್ರಾಂಶುಪಾಲರ ಕಾಳಜಿಯಾಗಿತ್ತು. 

ಅದೇನೇ ಇರಲಿ ಹಸಿದ ಹೊಟ್ಟೆ, ಖಾಲಿ ಜೇಬು ಬದುಕಿನಲ್ಲಿ ಅನೇಕ ಪಾಠಗಳನ್ನು ಕಲಿಸುತ್ತದೆ ಎಂಬ ಮಾತಿದೆ. ಆದರೆ, ಅಂದು ನನ್ನ ಹೊಟ್ಟೆಯೂ ಹಸಿದಿರಲಿಲ್ಲ. ಜೇಬೂ ಖಾಲಿಯೂ ಆಗಿರಲಿಲ್ಲ. ಆದರೂ ಒಂದು ತುಂಡು ಫಿಶ್‌ ಫ್ರೈ, ಶಿಸ್ತು ಎನ್ನುವ ಬಹುದೊಡ್ಡ ಪಾಠ ಕಲಿಸಿತ್ತು.

ಮಹೇಶ್‌ ಎಂ.ಸಿ., ಉಜಿರೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.