ಹೃದಯದಲ್ಲೊಂದು ಒಲವಿನ ಹಣತೆಯ ಹಚ್ಚಿ


Team Udayavani, Feb 11, 2020, 4:25 AM IST

kemmu-11

ನಿನ್ನ ಪ್ರಣಯ ಬಂಧನದಲ್ಲಿ ಸಿಕ್ಕಿಹಾಕಿಕೊಂಡಿರುವ ನಾನು ಹೃದಯವನ್ನು ಕಳೆದುಕೊಂಡಿರುವೆ. ಆದರೂ, ಹುಡುಕುವ ಗೋಜಿಗೆ ಹೋಗಲಾರೆ. ನನ್ನ ಭಾವಗಳ ನೆಲೆ ನಿನ್ನಲ್ಲಿದೆ ಎಂಬ ಸಿಹಿಸತ್ಯವನ್ನು ನಿನ್ನ ಹೃದಯ ನಿನಗೇ ಹೇಳದಂತೆ ನನಗೆ ಮಾತ್ರ ಕಿರುದನಿಯಲ್ಲಿ ಹೇಳಿದೆ. ಮನಸ್ಸಿನ ಕಿಟಕಿಯಲ್ಲಿ ಇಣುಕಿ ಕಣ್ಣೋಟದಲ್ಲೇ ಸೆಳೆದು ನನ್ನ ತನವನ್ನು ಕದ್ದವನು ನೀನು.

ಹೇಳದೇ ಕೇಳದೆ ಯಾರೂ ಕಾಲಿಡದ ನನ್ನದೆಯ ಸ್ವಚ್ಛಂದದ ಗರ್ಭಗುಡಿಯಲ್ಲಿ ದೇವಮಾನವನಂತೆ ಬಂದು ಕುಳಿತು, ಒಂಟಿತನದ ಕದತಟ್ಟಿ, ಪ್ರಣಯದ ಸುಮಧುರ ಸಂಗೀತದ ಪಲ್ಲವಿ ಹಾಡುತ್ತಾ, ಪ್ರೀತಿ ಎಂಬ ಎರಡಕ್ಷರದ ಸುಂದರ ಭಾವನೆ ನನ್ನಲ್ಲಿ ಹುಟ್ಟಿ, ಮೊಗ್ಗಾಗಿ, ಹೂವಾಗಿ ಅರಳಿ ಬಾಡದಂತೆ ಮೋಡಿ ಮಾಡಿದ ಜಾದುಗಾರ ನೀನು.

ಯಾರ ಅಪ್ಪಣೆ ಪಡೆದು ಇಷ್ಟೆಲ್ಲಾ ಮಾಡಿದೆ?
ನಿನ್ನ ಹೃದಯ ಕದಿಯುವ ತಪ್ಪಿಗೆ ಕಾನೂನಿನಲ್ಲಿ ಶಿಕ್ಷೆ ಇಲ್ಲವೇ? ನಿನ್ನ ವಿರುದ್ಧ ಸಾಕ್ಷಿ ಹೇಳಲು ನನ್ನ ಭಾವನೆಗಳು ತಯಾರಾಗಿವೆ. ಹೋಗಲಿ ಬಿಡು, ನಿನ್ನ ಈ ಕಳ್ಳಾಟಕೆ ನಿನ್ನಷ್ಟೇ ಮುದ್ದಾದ ಈ ಸುಂದರ ತಪ್ಪಿಗೆ ನಾ ಕೊಡುವ ಶಿಕ್ಷೆ. ನನ್ನ ಅಳತೆ ಮೀರಿದ ಪ್ರೀತಿಯಿಂದ ನಿನ್ನನ್ನು ಬಂಧಿಸಿ ಪ್ರೇಮ ಖೈದಿಯನ್ನಾಗಿಸುವ ಜೀವಾವಧಿ ಶಿಕ್ಷೆ. ಸೋಲಲೇಬಾರದೆಂದುಕೊಂಡಿದ್ದೆ. ಆದರೆ, ಅಂಗೈಯ ಗಾತ್ರವಿರುವ ಈ ಹೃದಯಕೆ ಹೇಳಿ ಹೇಳಿ ಸಾಕಾಗಿದೆ. ನೀ ಎದುರಿಗೆ ಬಂದಾಗ ಅದರ ಬಡಿತದ ವೇಗವನ್ನು ಜಾಸ್ತಿ ಮಾಡಿ ಕೊಳ್ಳಬೇಡ ಎಂದು. ಹೃದಯಕೆ ಕಿವಿಯಿಲ್ಲ ಹೇಗೆ ಹೇಳಲಿ? ನನ್ನ ತುಟಿಗಳಿಗೆ ಬೈದು ಬುದ್ದಿ ಹೇಳಿದ್ದೇನೆ, ನೀನು ನನ್ನಡೆಗೆ ನೋಡಿ ನಕ್ಕಾಗ, ನನ್ನ ಕಂಗಳು ನಾಚಿದರೂ ತುಟಿಗಳು ಮಂದಹಾಸ ಬೀರಬಾರದೆಂದು. ಅದರಗಳೂ ಅದರಿಷ್ಟದಂತೆ ನಡೆದು ಕೊಳ್ಳುತ್ತಿವೆ. ಏನು ಮಾಡಲಿ? ನನ್ನ ಮನಸ್ಸಂತೂ ಎಲ್ಲೇ ಮೀರಿ ಹೋಗಿದೆ.

ಅದೆಷ್ಟು ದಿನಗಳ ಹುನ್ನಾರ ನಿನ್ನದು? ಪ್ರೀತಿಯೆಂಬ ವಿಷಯಕ್ಕೆ ಮಾತ್ರ ಕರಗಬಾರದೆಂದು ನಿರ್ಧರಿಸಿದ್ದ, ಕಲ್ಲಿನಂತೆ ಮಂಜುಗಡ್ಡೆಯಂತಿದ್ದ ನನ್ನ ಮನಸ್ಸನ್ನು ನಿನ್ನ ಸುಮಧುರ ಪ್ರೇಮದ ಶಾಖದಿಂದ ಕರಗಿಸಿಬಿಟ್ಟೆ. ಶಹಬ್ಟಾಶ್‌! ಮೆಚ್ಚಲೇ ಬೇಕು ನಿನ್ನ !

ನಿನ್ನ ಅಂತರಾತ್ಮದ ನಿಶ್ಕಲ್ಮಶ ಪ್ರೀತಿ ನನಗೊಂದು ಪತ್ರ ಬರೆದಿದೆ. ಆ ಪತ್ರದ ತುಂಬೆಲ್ಲಾ ವಿವರಿಸಿದೆ, ನೀ ನನ್ನ ಪ್ರೀತಿಸುವ ರೀತಿ ! ಅದೆಷ್ಟು ಒಲವು ನನ್ನ ಮೇಲೆ ನಿನಗೆ? ಕೊನೆಗೊ ಪ್ರೀತಿಯೆಂಬ ಬಿಲ್ಲಿನಿಂದ, ಭಾವನೆಗಳ ಬಾಣಗಳನ್ನು ಬಿಟ್ಟು, ನನ್ನೊಂಟಿತನವೆಂಬ ಶತ್ರುವನ್ನು ಸಾಯಿಸಿ ನೀ ಗೆದ್ದೆ , ನನ್ನ ಹೃದಯದಲ್ಲೊಂದು ಒಲವಿನ ಹಣತೆಯ ಹಚ್ಚುತ್ತಾ.

ಸೌಮ್ಯಶ್ರೀ ಸುದರ್ಶನ್‌ ಹಿರೇಮಠ್

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.