ನಿನ್ನ ಕಣ್ಣ ಬಣ್ಣ ಬಲ್ಲೆನಾ…
Team Udayavani, Sep 5, 2017, 10:01 AM IST
ನೀನು ಅಲ್ಲಿ ಮತ್ಯಾರೋ ಆಗಿದ್ದೆ. ಆದರೆ, ನಾನು ನಾನಾಗಿಯೇ ಉಳಿದ ಕಾರಣಕ್ಕೆ ನೋವಿನ ಗಾಣಕ್ಕೆ ಸಿಕ್ಕಿ ನಲುಗುತ್ತಿದ್ದೆ. ಯಾವುದೇ ಸುಳಿವು ನೀಡದೆ ಛಕ್ಕನೆ ಬದಲಾಗಿಬಿಟ್ಟಿದ್ದೆಯಲ್ಲ? ಆಗ, ನಿನ್ನ ಕಣ್ಣ ಬಣ್ಣ ಬೇರೆಯೇ ಆಗಿತ್ತು…
ಅಪರಾತ್ರಿಯ ಉರಿ ಬಿಸಿಲೇ…
ಯಾವುದರಲ್ಲೂ ಮನಸು ನೆಲೆಗೊಳ್ಳುತ್ತಿಲ್ಲ. ಎಲ್ಲಿ ನೋಡಿದರೂ ನಿನ್ನ ನೆನಪುಗಳದೇ ಹಾವಳಿ. ಕಣ್ಮುಚ್ಚಿ ಕುಳಿತರೆ ಹಾಳಾದ ಹೃದಯದ ಉಮ್ಮಳಿಕೆ. ನಿನಗಾಗಿ ಅಂಗಳದಲ್ಲಿ ಬೆಳೆಸಿದ್ದ ಗುಲಾಬಿ ಗಿಡ, ಮುಳ್ಳುಗಳೇ ಕಾಣದಂತೆ ಮೈತುಂಬಾ ಹೂಗಳ ತುಂಬಿಕೊಂಡು ನಳನಳಿಸುತ್ತಿತ್ತು. ಆದರೆ, ಒಂದೂ ಹೂವು ನಿನ್ನ ಮುಡಿಗೇರಲೇ ಇಲ್ಲ. ಹೂವಿನ ಪಕಳೆಗಳು ಒಂದೊಂದಾಗಿ ಉದುರುತ್ತಾ ಹೋದವು, ನನ್ನದೇ ಕಣ್ಣ ಹನಿಗಳಂತೆ! ಈಗ ಅಂಗಳದ ತುಂಬಾ ಹರಡಿಕೊಂಡು ಒಣಗುತ್ತಿರುವ ಗುಲಾಬಿ ಪಕಳೆಗಳು ನನ್ನ ಅಂತರಾಳದ ಚಿತ್ರದಂತೆ ಕಾಣುತ್ತದೆ. ನಿನ್ನ ಮುನಿಸು, ಸಿಟ್ಟು, ಸೆಡವುಗಳೆಲ್ಲ ಒಲವಿನ ಒಂದು ಭಾಗವಾಗಿಯೇ ಉಳಿದಿತ್ತು. ಆದರೆ, ಆ ಸಂಜೆ ಕಂಡೆನಲ್ಲಾಆ ಉದಾಸೀನ ಭಾವ? ಅದು ನನ್ನನ್ನು ನಡುಗಿಸಿಬಿಟ್ಟಿತು. ಅದು ಮೋಡಗಟ್ಟದೇ ಸುರಿದ ಅಸ್ವಾಭಾವಿಕ ಅಕಾರಣ ಮಳೆ.
ಹಣೆಯಲಿ ಬರೆಯದ ನಿನ್ನ ಹೆಸರ ಹೃದಯದಿ ನಾನೆ ಕೊರೆದಿರುವೆ! ನೀನು ಅಲ್ಲಿ ಮತ್ಯಾರೋ ಆಗಿದ್ದೆ. ಆದರೆ, ನಾನು ನಾನಾಗಿಯೇ ಉಳಿದ ಕಾರಣಕ್ಕೆ ನೋವಿನ ಗಾಣಕ್ಕೆ ಸಿಕ್ಕಿ ನಲುಗುತ್ತಿದ್ದೆ. ಯಾವುದೇ ಸುಳಿವು ನೀಡದೆ ಛಕ್ಕನೆ ಬದಲಾಗಿಬಿಟ್ಟಿದ್ದೆಯಲ್ಲ? ಆಗ, ನಿನ್ನ ಕಣ್ಣ ಬಣ್ಣ ಬೇರೆಯೇ
ಆಗಿತ್ತು. ಮಾತಿನಲ್ಲಿ ಸಂಬಂಧಕ್ಕೊಂದು ಮರಣ ಶಾಸನ ಬರೆಯುತ್ತಿರುವ ಶಾಯಿಯ ಮೊನೆಯಿತ್ತು. ತಿರುವೊಂದರಲ್ಲಿ ಧುತ್ತನೆ ಕೊನೆಗೊಂಡ ರಸ್ತೆಯಂತೆ, ಅನಿರೀಕ್ಷಿತ ಅಪಘಾತವೊಂದು ನನ್ನನ್ನು ಅಪ್ಪಳಿಸಿತ್ತು. ಹಿಡಿ ಘಳಿಗೆಯಲ್ಲಿ ವಿಷದ ಅತ್ತರಿನ ಘಮ ತುಂಬಿಕೊಂಡಿತ್ತು. ಬದುಕು ಸಂತಸದ ಕೊನೆಯ ಕ್ಷಣಕ್ಕೆ ಬಂದು ನಿಂತಿತ್ತು. ನನ್ನೊಳಗಿನ ಖಾಲಿತನಕ್ಕೆ ನೋವಿನ ಹನಿಗಳು ತೊಟ್ಟಿಕ್ಕತೊಡಗಿದವು. ನಾ ನಿಂತಲ್ಲೇ ನಿಂತಿದ್ದೆ. ನಿನ್ನೊಳಗೆ ಹೊಸ ಕನಸಿತ್ತು. ನಾನು ನಿನಗೆ ಪರಿಚಯವೇ ಇಲ್ಲವೇನೋ, ನಮ್ಮಿಬ್ಬರ ಮಧ್ಯೆ ಏನೂ ನಡೆದೇ ಇಲ್ಲವೇನೋ ಅನ್ನುವಷ್ಟು ಸಹಜವಾಗಿ ನನ್ನಿಂದ ದೂರದೂರಕ್ಕೆ ನಡೆದುಹೋದೆ. ಬಹುಶಃ ಮತ್ತೂಮ್ಮೆ ಮುಖಾಮುಖೀ ಆಗಲಾರೆವೇನೋ. ಇರಲಿ, ಹೊಸ ದಾರಿಯಲ್ಲಿ ಹುಷಾರಾಗಿ ಹೆಜ್ಜೆಯಿಡು. ನಿನ್ನ ಹಾದಿ ಚೆಂದವಿರಲಿ, ನೆನಪೆಂಬ ಇರುಳಲಿ, ನೋವೆಂಬ ಹಗಲಲ್ಲಿ ನಾನು ನಿತ್ಯ ಸುಖೀ.
ನಿನ್ನವ ನಲ್ಲ
ಜೀವ ಮುಳ್ಳೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್