ಜನರಿಂದ, ಜನರಿಗಾಗಿ, ಜನರಿಗೋಸ್ಕರ; ಹೀಗೊಬ್ಬ ಜನವೈದ್ಯ


Team Udayavani, Jul 28, 2020, 2:00 PM IST

ಜನರಿಂದ, ಜನರಿಗಾಗಿ, ಜನರಿಗೋರ; ಹೀಗೊಬ್ಬ ಜನವೈದ್ಯ

ಕೋವಿಡ್ ಆತಂಕ ಇಡೀ ವಿಶ್ವವನ್ನೇ ನಡುಗಿಸುತ್ತಿದೆ. ನಮ್ಮ ಜೀವ ನಮ್ಮ ಕೈಯಲ್ಲಿದೆ ಎನ್ನುವ ಮಾತು ಎಲ್ಲೆಡೆ ಪ್ರಬಲವಾಗಿ ಕೇಳಲಾರಂಭಿಸಿದೆ. ಇಂಥ ಸಂದಿಗ್ದ ಸ್ಥಿತಿಯಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಖಾಸಗಿ ವೈದ್ಯರಾದ ಡಾ.ಅನಿಲ್‌ ಕುಮಾರ್‌ ಅವಲಪ್ಪ, ತನ್ನ ಖಾಸಗಿ ಕ್ಲಿನಿಕ್‌ ಬಿಟ್ಟು ಸ್ಟೆತಾಸ್ಕೋಪ್‌ ಹಿಡಿದು ಜನರ ಬಳಿಗೆ ಹೋಗಿದ್ದಾರೆ. ನಿತ್ಯ ಊರೂರು ತಿರುಗಿ, ಜನರಿಗೆ ಉಚಿತ ವೈದ್ಯಕೀಯ ಸೇವೆ ನೀಡುವ ಮೂಲಕ ಪ್ರಜಾ ವೈದ್ಯ ಅನ್ನಿಸಿಕೊಂಡಿದ್ದಾರೆ.

ಹೌದು, ಎಂಬಿಬಿಎಸ್‌ ಪದವೀಧರ ಡಾ.ಅನಿಲ್‌ ಕುಮಾರ್‌ ಅವಲಪ್ಪ, ತಮ್ಮ ಕ್ಲಿನಿಕ್‌ನಲ್ಲಿ ಕುಳಿತೇ ಕೈ ತುಂಬ ಹಣ ಸಂಪಾದಿಸಿಬಹುದು. ಆದರೆ, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ, ತಾಲೂಕಿನ ಜನರಿಗೆ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸುತ್ತಾ ಜನ ಜಾಗೃತಿ ಮೂಡಿಸುತ್ತಿದ್ದಾರೆ. ಕೆಮ್ಮು, ನೆಗಡಿ, ಜ್ವರ, ಮಧುಮೇಹ, ರಕ್ತದೊತ್ತಡದಂಥ ಕಾಯಿಲೆ ಇರುವ ಜನರಿಗೆ ಚಿಕಿತ್ಸೆ- ಔಷಧಗಳನ್ನು ಉಚಿತವಾಗಿ ನೀಡುತ್ತಿದ್ದಾರೆ.

ವೈದ್ಯೋನಾರಾಯಣೋ ಹರಿಃ
ಹೇಳಿ ಕೇಳಿ ಬಾಗೇಪಲ್ಲಿ ರೈತಾಪಿ, ಕೂಲಿ ಕಾರ್ಮಿಕರು, ಹಿಂದುಳಿದ ವರ್ಗ, ತಾಂಡಗಳೇ ಹೆಚ್ಚಾಗಿರುವ ತಾಲೂಕು. ಅತ್ಯಾಧುನಿಕ ಆರೋಗ್ಯ ಸೇವೆಗಳಿಂದ ಬಹುದೂರ ಇರುವ ಈ ಸಮುದಾಯಗಳಿಗೆ ಈಗ ಅನಿಲ್‌ ಕುಮಾರ್‌ ವೈದ್ಯೋ ನಾರಾಯಣೋ ಹರಿಃ. ಹಳ್ಳಿ ಹಳ್ಳಿಗೂ ಹೋಗಿ ವೈದ್ಯ ಕಾಯಕ ಮಾಡುತ್ತಿದ್ದಾರೆ. ದಿನಕ್ಕೆ ಕನಿಷ್ಠ 40 ರಿಂದ 60 ಮಂದಿಗೆ ಜ್ವರ, ಸಕ್ಕರೆ ಖಾಯಿಲೆ ಮುಂತಾದವುಗಳ ಬಗ್ಗೆ ವೈದ್ಯಕೀಯ ಪರೀಕ್ಷೆ ನಡೆಸುತ್ತಿದ್ದಾರೆ. ಡಾ. ಅನಿಲ್‌ ಕುಮಾರ್‌, ಬಾಗೇಪಲ್ಲಿ ಪಟ್ಟಣದಲ್ಲಿ ಪೀಪಲ್‌ ಶಸ್ತ್ರ ಚಿಕಿತ್ಸಾ ಹಾಗೂ ಪ್ರಸೂತಿ ಆಸ್ಪತ್ರೆ ನಡೆಸುತ್ತಿದ್ದಾರೆ. ಆದರೆ, ಕೋವಿಡ್ ಆರ್ಭಟ ನೋಡಿ, ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಮುಂದಾಗಿದ್ದಾರೆ. ಪ್ರತಿ ನಿತ್ಯ ಐದಾರು ಗಂಟೆ ಕಾಲವನ್ನು ಈ ಸೇವೆಗೆ ಎತ್ತಿಡುತ್ತಾರೆ. ಈವರೆಗೆ, ಐದು ಸಾವಿರಕ್ಕೂ ಹೆಚ್ಚು ಜನರಿಗೆ ಇವರ ಆರೋಗ್ಯ ಸೇವೆ ತಲುಪಿದೆ. ಈ ನಾಲ್ಕೈದು ತಿಂಗಳಲ್ಲಿ ಸುಮಾರು 100 ಕ್ಕೂ ಹೆಚ್ಚು ಹಳ್ಳಿಗಳಿಗೆ ತೆರಳಿ, ವೈದ್ಯಕೀಯ ಉಪಚಾರ ನೀಡಿ ಬಂದಿದ್ದಾರೆ. ವಿಶೇಷವಾಗಿ, ಅಸಂಖ್ಯಾತ ಕೂಲಿ ಕಾರ್ಮಿಕರಿಗೆ ಇವರ ಸೇವೆಯಿಂದ ಲಾಭವಾಗುತ್ತಿದೆ. ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ, ಕೋವಿಡ್  ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸುತ್ತಿದ್ದಾರೆ.

ಆರೋಗ್ಯ ಕಿಟ್‌ ವಿತರಣೆ
ಅಷ್ಟೇ ಅಲ್ಲ, ಊರಿಗೊಂದು ಗ್ರಾಮ ಆರೋಗ್ಯ ಪಡೆ ಎಂಬ ಯುವಕರ ಗುಂಪನ್ನು ರಚಿಸಿದ್ದಾರೆ. ಗ್ರಾಮದಲ್ಲಿನ ಪದವೀಧರ ವಿದ್ಯಾರ್ಥಿಗಳನ್ನು ಹಾಗೂ ಯುವಕರನ್ನು ಒಂದು ಕಡೆ ಸೇರಿಸಿ, ಕೋವಿಡ್ ತಡೆಗೆ ಯಾವೆಎಲ್ಲಾ ಮುನ್ನೆಚ್ಚರಿಕೆ ವಹಿಸಬೇಕು, ಸೋಂಕಿನ ಲಕ್ಷಣಗಳೇನು ಎಂಬುದರ ಬಗ್ಗೆ ತಿಳಿಸಿಕೊಡುತ್ತಿದ್ದಾರೆ. ಆ ಗುಂಪುಗಳಿಗೆ ರಕ್ತದಲ್ಲಿ ಆಮ್ಲಜನಕ ಪ್ರಮಾಣ ಪರೀಕ್ಷಿಸುವ ಪಾಲ್ಸಾಕ್ಸಿ ಮೀಟರ್‌ ಹಾಗೂ ಉಷ್ಣಾಂಶ ಪರೀಕ್ಷೆ ಮಾಡುವ ಇನ್ಟ್ರಾರೆಡ್‌ ಥರ್ಮೋಮೀಟರ್‌ ಸಹ ಉಚಿತವಾಗಿ ನೀಡಿದ್ದಾ ರೆ. ಅನುಮಾನ ಬಂದ ವ್ಯಕ್ತಿಗಳನ್ನು ಕಾಲಕಾಲಕ್ಕೆ ಪರೀಕ್ಷಿಸಿ, ತಮಗೆ ಮಾಹಿತಿ ನೀಡುವಂತೆ ಯುವಕರ ತಂಡಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಗ್ರಾಮೀಣ ಜನರ ಆರೋಗ್ಯದ ಹಿತದೃಷ್ಟಿಯಿಂದ ಮೊಬೈಲ್‌ ಕ್ಲಿನಿಕ್‌ಗಳನ್ನು ಸ್ಥಾಪಿಸಿ ಜನರ ಆರೋಗ್ಯ ರಕ್ಷಣೆಗೆ ಒತ್ತು ಕೊಡ ಬೇಕಿದೆ. ಶೇ.80ರಷ್ಟು ಮಂದಿಯಲ್ಲಿ ಕೋವಿಡ್ ರೋಗ ಲಕ್ಷಣ ಕಾಣುವುದಿಲ್ಲ. ಶೇ.2 ರಷ್ಟು ಸೋಂಕಿತರಲ್ಲಿ ಮಾತ್ರ ಉಸಿರಾಟದ ತೊಂದರೆ ಕಾಣಿಸುತ್ತದೆ. ಈ ಬಗ್ಗೆ ಏನೂ ತಿಳಿಯದ ನಮ್ಮ ಬಾಗೇಪಲ್ಲಿ ಜನರಿಗೆ ಕೋವಿಡ್ ಪರಿಣಾಮ ಹೇಗೆ ತಿಳಿಯಬೇಕು. ಹಾಗಾಗಿ, ನಾನೇ ಅವರ ಮನೆಬಾಗಿಲಿಗೆ ಹೋಗಿ ಚಿಕಿತ್ಸೆ ಕೊಡುತ್ತಿದ್ದೇನೆ ಎನ್ನುತ್ತಾರೆ ಡಾ.ಅನಿಲ್‌ ಕುಮಾರ್‌ ಅವಲಪ್ಪ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.