ಅತ್ತಿದ್ದಕ್ಕೆ ಬಹುಮಾನ!


Team Udayavani, Nov 20, 2018, 6:00 AM IST

prize.jpg

ನಾನಾಗ ಪ್ರೌಢಶಾಲೆಯಲ್ಲಿ ಓದುತ್ತಿದ್ದೆ. ಬೇರೆ ಎಲ್ಲ ಪಠ್ಯಗಳಿಗಿಂತ ಕನ್ನಡ ಎಂದರೆ ನನಗೆ ಹೆಚ್ಚು ಪ್ರಿಯ ವಿಷಯವಾಗಿತ್ತು. ನಮಗೆ ಕನ್ನಡ ಬೋಧಿಸುತ್ತಿದ್ದ ಗುರುಗಳು ಪಾಠ ಮಾಡುವ ಶೈಲಿ, ಸ್ಪಷ್ಟ ಉಚ್ಚಾರಣೆ ನನಗೆ ಬಹಳ ಹಿಡಿಸಿತ್ತು. ಅವರ ತರಗತಿಯನ್ನು ತಪ್ಪಿಸಿಕೊಳ್ಳುತ್ತಲೇ ಇರಲಿಲ್ಲ. ಪರೀಕ್ಷೆಯಲ್ಲೂ ಸಹ ಕನ್ನಡದಲ್ಲಿ ಹೆಚ್ಚಿನ ಅಂಕ ಪಡೆಯುತ್ತಿದ್ದೆ. 

ನಮ್ಮ ಗುರುಗಳು ಆಯಾ ಪಾಠಗಳನ್ನು ಮುಗಿಸಿದ ಮೇಲೆ ಅದಕ್ಕೆ ಸಂಬಂಧಿಸಿದಂತೆ ವಿಶೇಷ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಅವುಗಳಲ್ಲಿ ನನ್ನ ಭಾಗವಹಿಸುವಿಕೆ ಇದ್ದೇ ಇರುತ್ತಿತ್ತು. ನಮಗೆ ಆಗ ಎಂ.ಎಸ್‌. ಸುಂಕಾಪುರ ಬರೆದ “ನಗು-ಅಳು’ ಎಂಬ ಹಾಸ್ಯಪಾಠವಿತ್ತು. ಆ ಪಾಠವನ್ನು ನಾವೆಲ್ಲ ತುಂಬಾ ಎಂಜಾಯ್‌ ಮಾಡಿಕೊಂಡು ಕೇಳಿದ್ದೆವು. ಗುರುಗಳು ಆ ಗದ್ಯದ ಮೇಲೆ ಒಂದು ಸಣ್ಣ ಚಟುವಟಿಕೆಯನ್ನು ಆಯೋಜಿಸಿದ್ದರು. ಅದೇನೆಂದರೆ, ನಾವೆಲ್ಲ ವೇದಿಕೆಯ ಮೇಲೆ ಹೋಗಿ, ನಗುವುದರ ಜೊತೆಗೆ ಅತ್ತು ಬರಬೇಕು. ಅದರಲ್ಲಿ ಗೆದ್ದವರಿಗೆ ಬಹುಮಾನವೂ ಇತ್ತು. ಒಬ್ಬೊಬ್ಬರಾಗಿ ವೇದಿಕೆಯ ಮೇಲೆ ಹೋಗಿ ಅತ್ತು, ನಕ್ಕು ಬರತೊಡಗಿದರು. ಒಬ್ಬೊಬ್ಬರದು ಒಂದೊಂದು ರೀತಿ. ಒಬ್ಬ ಹುಚ್ಚನಂತೆ ನಕ್ಕರೆ, ಮತ್ತೂಬ್ಬ ವ್ಯಂಗ್ಯವಾಗಿ ಅಳುತ್ತಿದ್ದ. ನನ್ನ ಸರತಿ ಬಂತು. ಅಳುಕಿನಿಂದಲೇ ಸ್ಟೇಜ್‌ ಹತ್ತಿದೆ. ಕಾಲು ನಡುಗುತ್ತಿದ್ದವು. ಒಮ್ಮೆಲೇ ಜೋರಾಗಿ ನಕ್ಕು, ಮರು ಕ್ಷಣವೇ ರೊಯ್ಯನೆ ಅತ್ತು ಬಿಟ್ಟೆ. ನನ್ನ ಮುಖ ನೋಡಿ ಶಿಕ್ಷಕರಾದಿಯಾಗಿ ಸ್ನೇಹಿತರೆಲ್ಲರೂ ನಗತೊಡಗಿದರು. ಕೆಲಸ ಕೆಟ್ಟಿತೆಂದು ವೇದಿಕೆ ಇಳಿದು ಓಡಿಬಂದೆ.

ಎಲ್ಲರ ಸರತಿ ಮುಗಿದ ಮೇಲೆ, ಯಾರು ಗೆದ್ದಿರಬಹುದೆಂದು ಊಹಿಸುತ್ತಾ ತೀರ್ಪಿಗಾಗಿ ಕಾಯತೊಡಗಿದೆವು. ಆದರೆ, ಗುರುಗಳು ಯಾರು ಗೆದ್ದರೆಂದು ನಾಳೆ ಹೇಳುತ್ತೇನೆ ಎಂದು ಹೊರಟುಹೋದರು. ಮರುದಿನ ತರಗತಿಯಲ್ಲಿ ಪ್ರಥಮ ಬಹುಮಾನ ಘೋಷಣೆ ಮಾಡಿದಾಗ, ವಿಜೇತ ನಾನಾಗಿದ್ದೆ. ನನಗಂತೂ ಎಲ್ಲಿಲ್ಲದ ಖುಷಿ. ಉಡುಗೊರೆಯಾಗಿ ಸಿಕ್ಕಿದ್ದು ಹತ್ತು ರೂಪಾಯಿ ಹಾಗೂ ಒಂದು ಸಣ್ಣ ನೋಟ್‌ಬುಕ್‌. ಆಗ ಏನೋ ಸಾಧಿಸಿದವನಂತೆ ಬೀಗಿದ್ದೆ. 

– ಅಂಬಿ ಎಸ್‌. ಹೈಯ್ಯಾಳ್‌, ಮುದನೂರ ಕೆ

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.