ಬುದ್ಧಿ ಕಲಿಸಿದ ಗುರುವೆ ನಿಮಗೆ ನಮಸ್ಕಾರ…


Team Udayavani, Sep 19, 2017, 2:25 PM IST

19-JOSH-2.jpg

ನಾನಾಗ ಬಹುಶಃ 2ನೇ ತರಗತಿಯಲ್ಲಿ ಓದುತ್ತಿದ್ದೆ. ನಮ್ಮದು ಸರ್ಕಾರಿ ಅನುದಾನಿತ ಶಾಲೆಯಾದ್ದರಿಂದ ಈಗಿನ ಮಕ್ಕಳಂತೆ ಸ್ಟೈಲಿಶ್‌ ಆಗಿ ರೆಡಿ ಆಗಿ ಹೋಗುವುದು ನಮಗೆ ತಿಳಿದಿರಲಿಲ್ಲ. ಕೈಯಲ್ಲಿ ಒಂದು ಸ್ಲೇಟ್‌, ಒಂದು ಬಳಪ. ಆಗ ಅದೇ ನಮಗೆ ಎಲ್ಲವೂ ಆಗಿತ್ತು. ನನ್ನ ಅಕ್ಕ ಮತ್ತು ನಾನು ಒಂದೇ ಶಾಲೆಯಲ್ಲಿ ಓದುತ್ತಿದ್ದುದರಿಂದ ಅಕ್ಕ ಯಾವಾಗಲೂ ನನ್ನ ಜೊತೆಯೇ ಇರುತ್ತಿದ್ದರು. 

ಒಂದು ದಿನ ನಾನು ಅಕ್ಕನಿಗೆ ತಿಳಿಯದಂತೆ ಮಧ್ಯಾಹ್ನದ ಊಟದ ನಂತರ ಹೇಳದೇ ಕೇಳದೆ ಶಾಲೆಗೆ ಬಂಕ್‌ ಹೊಡೆದು ಮನೆಗೆ ಹೋಗಿದ್ದೆ. ಅಮ್ಮ ಮಧ್ಯಾಹ್ನ ಮನೆಗೆ ಬಂದವರೇ, “ಶಾಲೆಯಿಂದ ಯಾಕೆ ಮನೆಗೆ ಬಂದಿದ್ದೀಯ?’ ಎಂದು ಪ್ರಶ್ನಿಸಿದರು. ಮೊದಲು ಹೊಟ್ಟೆನೋವು ಅಂದೆ. ನಂತರ ಮೇಷ್ಟ್ರೇ ಕಳಿಸಿಬಿಟ್ಟರು ಎಂದೆ. ನಾನು ಏನೇ ಹೇಳಿದರೂ ಅಮ್ಮ ನಂಬಲಿಲ್ಲ. ನನಗೆ ಎರಡೇಟು ಕೊಟ್ಟು ಮತ್ತೆ ಶಾಲೆಗೆ ಓಡಿಸಿದರು. 

  ಆಗ ನಮ್ಮ ಕ್ಲಾಸ್‌ ಟೀಚರ್‌ ಆಗಿದ್ದವರು ಶಿವಲಿಂಗಪ್ಪ ಸರ್‌. ಅವರನ್ನು ಕಂಡರೆ ಇಡೀ ಸ್ಕೂಲ್‌ಗೇ ಭಯ. ನಾನು, ಏನಪ್ಪಾ ಮಾಡೋದು? ಈಗ ಹೋದರೆ ಸರ್‌ ಹೊಡೆಯೋದಂತೂ ಗ್ಯಾರಂಟಿ. ಅಲ್ಲಿಗೆ ಹೋಗಿ ಏಟು ತಿನ್ನುವ ಬದಲು ಹೋಗದೇ ಸುಮ್ಮನಿರುವುದೇ ಲೇಸು ಅಂದುಕೊಂಡು ನಮ್ಮ ಸ್ಕೂಲ್‌ ಮುಂದೆಯೇ ಇದ್ದ ಬಸವಣ್ಣನ ದೇವಸ್ಥಾನದ ಹಿಂದೆ ಅವಿತು ಕುಳಿತೆ. ಸ್ಕೂಲ್‌ ಬಿಟ್ಟ ಮೇಲೆ ಅಕ್ಕನ ಜೊತೆ ಮನೆಗೆ ಹೋದರಾಯಿತು ಅಂತ ನನ್ನ ಐಡಿಯಾ. ಆದರೆ ಅಂದು ನನ್ನ ಗ್ರಹಚಾರ ಕೆಟ್ಟಿತ್ತು ಅಂತ ಕಾಣುತ್ತೆ, ಅದು ಹೇಗೋ ನನ್ನನ್ನು ನೋಡಿದ ನಮ್ಮ ಸರ್‌ ಬಂದು ನನ್ನನ್ನು ಹಿಡಿದು ಚೆನ್ನಾಗಿ ಬಾರಿಸಿಯೇ ಬಿಟ್ಟರು. 

ಅಂದು ತಿಂದ ಒದೆ ನನಗೆ ಇನ್ನೂ ಚೆನ್ನಾಗಿಯೇ ನೆನಪಿದೆ. ಅವರಿಂದ ಚೆನ್ನಾಗಿ ಪೆಟ್ಟು ತಿಂದ ನಂತರವೇ ನನಗೆ, ನನ್ನಂಥ ಹಲವರಿಗೆ ಬುದ್ಧಿ ಬಂತು ಎಂದರೆ ಅದು ಉತ್ಪ್ರೇಕ್ಷೆಯ ಮಾತಲ್ಲ. ಬೇಸರದ ಸಂಗತಿ ಎಂದರೆ ನಮ್ಮ ಮೆಚ್ಚಿನ ಶಿವಲಿಂಗಪ್ಪ ಸರ್‌ ಅವರು ತೀರಾ ಇತ್ತೀಚೆಗಷ್ಟೇ ನಿಧನರಾದರು. ಕೆಲಸದ ಒತ್ತಡದಿಂದಾಗಿ ಕೊನೆಯ ಬಾರಿಗೆ ಅವರ ಮುಖವನ್ನೂ ನನಗೆ ನೋಡಲಾಗಲಿಲ್ಲ. ಅವರನ್ನು ನೆನೆದಾಗಲೆಲ್ಲಾ ಕಣ್ಣಂಚಲ್ಲಿ ನೀರು ಜಿನುಗುತ್ತದೆ. ಅವರಿಲ್ಲದ ಶಾಲೆಯನ್ನು ನೋಡಿದಾಗಲೆಲ್ಲಾ ಹೃದಯ ಭಾರವೆನಿಸುತ್ತದೆ.

ಪುರುಷೋತ್ತಮ ವೆಂಕಿ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.