ಮುಂದಿನ ಜನ್ಮದಲ್ಲಾದರೂ ಸಿಗುವೆಯಾ?


Team Udayavani, Jan 28, 2020, 6:10 AM IST

mundina-janma

ನಾನು ಈ ಪತ್ರ ಬರೀತಿರೋದು ನಿನ್ನ ಮನಸ್ಸಿನಲ್ಲಿ ಇಲ್ಲದಿರೋ ಆಸೇನ ಹುಟ್ಟಿಸೋಕೆ ಅಲ್ಲ. ಹೃದಯದಲ್ಲಿ ಜಾಗ ಕೊಡು ಅಂತ ಕೇಳ್ಳೋಕೂ ಅಲ್ಲ…

ತು ಪ್ಯಾರ್‌ ಹೈ ಕಿಸಿ ಔರ್‌ ಕಾ..
ತುಝೆ ಚಾಹತಾ ಕೋಯಿ ಔರ್‌ ಹೈ..
ಈ ಬದುಕು ಎಷ್ಟು ವಿಚಿತ್ರ ಅಲ್ವಾ? ನಾವಂದುಕೊಳ್ಳೋದೇ ಒಂದು, ಆಗುವುದು ಇನ್ನೊಂದು. ಹಾಗಿದ್ದರೇ ಚಂದ, ಆಗಲೇ ಜೀವನ ರಸಮಯವಾಗಿ ಕುತೂಹಲಭರಿತವಾಗಿರುತ್ತೆ. ಇದೆಲ್ಲ ಗೊತ್ತಿದ್ದರೂ ನಾವು ಕೆಲವೊಂದು ವಿಷಯಗಳ ಬಗ್ಗೆ ತುಂಬಾ ನಿರೀಕ್ಷೆಗಳನ್ನ ಇಟಗೊಂಡಿರ್ತೀವಿ. ಅವು ನಮ್ಮ ನಿರೀಕ್ಷೆಗಳಿಗೆ ತಕ್ಕಂತೆ ನಡೀಲಿಲ್ಲ ಅಂದ್ರೆ ಬೇಜಾರಾಗೋದು ಸಹಜ. ಅದು ಮಾನವ ಸಹಜ ಗುಣ. ಆದರೆ, ನನ್ನ ಬೇಜಾರಿಗೆ ಅರ್ಥವಿದೆಯೋ ಇಲ್ಲವೋ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

ತು ನಝರ್‌ ಮೆ ಹೈ ಕಿಸಿ ಔರ್‌ ಕಿ
ತುಝೆ ದೆಖತಾ ಕೋಯಿ ಔರ್‌ ಹೈ..
ಹೌದು, ಏಕೆಂದರೆ ನೀನಿರುವುದು ಇನ್ನೊಬ್ಬರ ಮನಸ್ಸಿನಲ್ಲಿ. ಆದರೆ, ಅದು ತಿಳಿಯುವಷ್ಟರಲ್ಲಿ ತುಂಬಾ ಸಮಯ ಕಳೆದು ಹೋಗಿತ್ತು. ಇದು ತಪ್ಪೋ ಸರಿಯೋ ಎನ್ನುವ ಗೊಂದಲದಲ್ಲಿ ಮುಳುಗಿ ಹೋಗಿದ್ದೀನಿ. ಅದರಿಂದ ಹೊರಬರಲು ಎಷ್ಟೇ ಪ್ರಯತ್ನಿಸಿದರೂ ವಿಫ‌ಲವಾಗುತ್ತಿದ್ದೇನೆ. ನನಗೂ ಗೊತ್ತು, ಎಷ್ಟೇ ಪ್ರಯತ್ನ ಪಟ್ಟರೂ ಅದು ಫ‌ಲಿಸುವುದಿಲ್ಲ ಎಂದು. ಏಕೆಂದರೆ, ಅದು ನಾವು ಹಾಕಿಕೊಳ್ಳುವ ಬಟ್ಟೆಯ ಹಾಗಲ್ಲ ನೋಡು? ಬೇಕಾದಾಗ ಧರಿಸುವುದು, ಬೇಡವಾದಾಗ ಬದಲಿಸಲು. ಅದು ಮೈ ಮೇಲಿನ ಚರ್ಮದ ಥರ ಅದನ್ನು ತೊರೆಯಲೂ ಆಗುವುದಿಲ್ಲ, ಬದಲಾಯಿಸಲೂ ಬರುವುದಿಲ್ಲ.

ತು ಪಸಂದ ಹೈ ಕಿಸಿ ಔರ್‌ ಕಿ
ತುಝೆ ಮಾಂಗತಾ ಕೋಯಿ ಔರ್‌ ಹೈ..
ಮೊದಲು ನಿಂಗೊಂದು ವಿಷಯನ ಸ್ಪಷ್ಟಪಡಿಸೋಕೆ ಇಷ್ಟ ಪಡ್ತೀನಿ. ನಾನು ಈ ಪತ್ರ ಬರೀತಿರೋದು ನಿನ್ನ ಮನಸ್ಸಿನಲ್ಲಿ ಇಲ್ಲದಿರೋ ಆಸೇನ ಹುಟ್ಟಿಸೋಕೆ ಅಲ್ಲ. ಹೃದಯದಲ್ಲಿ ಜಾಗ ಕೊಡು ಅಂತ ಕೇಳ್ಳೋಕೂ ಅಲ್ಲ. ನನ್ನ ಭಾವನೆಗಳನ್ನ ಹೇಳ್ಳೋಕೂ ಅಲ್ಲ. ಹಾಗೆ ಮಾಡುವುದು ಸರಿಯಲ್ಲ ಎಂದು ನನಗೂ ಗೊತ್ತು. ಈ ಪತ್ರ ಬರೆದ ಉದ್ದೇಶ ಏನೆಂದರೆ, ಮುಂದಿನ ಜನ್ಮದಲ್ಲಾದರೂ ನಿನ್ನನ್ನು ಎಲ್ಲರಿಗಿಂತ ಮೊದಲು ನಾನೇ ಪ್ರೀತಿಸುತ್ತೇನೆ ಎಂದು ತಿಳಿಸಲು. ಈ ಜನ್ಮದಲ್ಲಿ ನೀನು ಎಲ್ಲೇ ಇರು, ಚೆನ್ನಾಗಿರು, ಇದೇ ನನ್ನ ಆಶಯ..

ಇಂತಿ ನಿನ್ನ ಹಿತೈಷಿ..
* ಈರಯ್ಯ ಉಡೇಜಲ್ಲಿ, ಹುಬ್ಬಳ್ಳಿ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.