ಮುಂದೆ ಬನ್ನಿ… ಬೇಗ ಬನ್ನಿ…


Team Udayavani, Mar 27, 2018, 5:45 PM IST

6.jpg

ದೇಶದಲ್ಲೇ ಅತ್ಯುತ್ತಮ ಸಾರಿಗೆ ವ್ಯವಸ್ಥೆ ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದು. ಡ್ರೈವರ್‌, ಕಂಡಕ್ಟರ್‌, ಚೆಕಿಂಗ್‌ ಇನ್ಸ್‌ಪೆಕ್ಟರ್‌, ಮೆನೇಜರ್‌, ಮೆಕ್ಯಾನಿಕ್‌, ಅಕೌಂಟೆಂಟ್‌… ಹೀಗೆ ಹಲವಾರು ನೌಕರಿಗಳ ಮೂಲಕ ಲಕ್ಷಾಂತರ ಮಂದಿಯ ಬದುಕಿಗೆ ಭದ್ರತೆ ನೀಡಿರುವುದು ಕೆಎಸ್ಸಾರ್‌ಟಿಸಿಯ ಹೆಚ್ಚುಗಾರಿಕೆ. ಇಲ್ಲಿ ನೌಕರಿ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಒಂದು ಅವಕಾಶ. ಕರ್ನಾಟಕ ರಸ್ತೆ ಸಾರಿಗೆ ನಿಗಮವು ಗ್ರೂಪ್‌ “ಸಿ’ಯ 720 ತಾಂತ್ರಿಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಕರೆದಿದೆ…

“ಅಯ್ಯೋ ಟ್ರೆçನ್‌ ಮಿಸ್ಸಾಯ್ತು ಏನ್ಮಾಡೋದು? ಕೆಎಸ್ಸಾರ್ಟಿಸಿ ಬಸ್‌ ಇದೆಯಲ್ಲಾ, ಹೋಗೋಣ…’ ಇದು ಸಾಮಾನ್ಯವಾಗಿ ಎಲ್ಲ ಪ್ರಯಾಣಿಕರು ಹೇಳುವ ಮಾತು. ದೇಶಾದ್ಯಂತ ಸಂಚರಿಸುವವರಂತೂ ಕರ್ನಾಟಕದಲ್ಲಿರುವಂಥ ಚಂದದ ಸಾರಿಗೆ ವ್ಯವಸ್ಥೆಯನ್ನು ನೋಡಿಯೇ ಇಲ್ಲ ಎನ್ನುತ್ತಾರೆ. ಅಷ್ಟು ಸುವ್ಯವಸ್ಥಿತವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರಿಗೆ ಬಸ್‌ ಸೌಕರ್ಯಗಳನ್ನು ಕಲ್ಪಿಸಿದೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆಗೆ ಕೇಂದ್ರ ಸರ್ಕಾರದಿಂದ ಅನೇಕ ಪ್ರಶಸ್ತಿಗಳು ದೊರಕಿವೆ. 

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ಕೆಎಸ್ಸಾರ್‌ಟಿಸಿ ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ತಾಂತ್ರಿಕ ತೊಂದರೆ ನಿವಾರಿಸಲು ಜಿಲ್ಲಾ, ತಾಲ್ಲೂಕುಗಳಲ್ಲೂ ಡಿಪೋಗಳನ್ನು ನಿರ್ಮಿಸಲಾಗಿದೆ. ಇಂತಹ ರಸ್ತೆ ಸಾರಿಗೆ ನಿಗಮದಲ್ಲಿ 726 ತಾಂತ್ರಿಕ ಸಹಾಯಕ: ದರ್ಜೆ 3ರ ಮೇಲ್ವಿಚಾರಕೇತರ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆ ಹುದ್ದೆಗಳನ್ನು ಹೊಂದಬೇಕೆಂದರೆ…

ಹುದ್ದೆ ವರ್ಗೀಕರಣ
ತಾಂತ್ರಿಕ ಸಹಾಯಕ ಹುದ್ದೆಯನ್ನು ಸಾಮಾನ್ಯ ವರ್ಗ, ಮಳೆ, ಗ್ರಾಮೀಣ, ಅಂಗವಿಕಲ ಹೀಗೆ ವಿಭಾಗಿಸಿದ್ದು, ಪರಿಶಿಷ್ಟ ಜಾತಿ/ಪಂಗಡಗಳಿಗೆ ಅನುಗುಣವಾಗಿ ವರ್ಗೀಕರಣ ಮಾಡಲಾಗಿದೆ. ಜೊತೆಗೆ ಗ್ರಾಮೀಣ ಮೀಸಲಾತಿ, ಯೋಜನಾ ನಿರಾಶ್ರಿತ, ಸೈನಿಕ, ಕನ್ನಡ ಮಾಧ್ಯಮ ಮೀಸಲಾತಿಗೂ ಅವಕಾಶ ಕಲ್ಪಿಸಲಾಗಿದೆ.

ವಯೋಮಿತಿ, ವಿದ್ಯಾರ್ಹತೆ, ವೇತನ
ತಾಂತ್ರಿಕ ಸಹಾಯಕ ಹುದ್ದೆಗೆ ಸರ್ಕಾರದಿಂದ ಅಂಗೀಕೃತ ಸಂಸ್ಥೆಯಲ್ಲಿ ಐಟಿಐ, ಎನ್‌ಎಸಿ ಮೆಕ್ಯಾನಿಕಲ್‌, ಡೀಸೆಲ್‌ ಮೆಕ್ಯಾನಿಕಲ್‌, ಆಟೋ ಎಲೆಕ್ಟ್ರಿಷಿಯನ್‌, ವೆಲ್ಡರ್‌, ಫಿಟ್ಟರ್‌, ಪೈಂಟಿಂಗ್‌, ಆಟೋಮೊಬೈಲ್‌ ವಿಷಯಗಳ ವಿದ್ಯಾರ್ಹತೆ ಹೊಂದಿರಬೇಕು.

ಹುದ್ದೆಗೆ ಅಭ್ಯರ್ಥಿಗಳು ಕನಿಷ್ಠ ದೇಹದಾಡ್ಯìತೆಯನ್ನು ಹೊಂದಿರಬೇಕು. ಪುರುಷರು ಎತ್ತರ 163 ಸೆಂ.ಮೀ, ತೂಕ 55 ಕೆಜಿ. ಮಹಿಳೆಯರು 153 ಸೆ.ಮೀ ಎತ್ತರ, ತೂಕ 50 ಕೆ.ಜಿ ಇರಬೇಕು.

ವಯೋಮಿತಿಯನ್ನು ಕನಿಷ್ಠ 18 ವರ್ಷಗಳಿಂದ ಗರಿಷ್ಠ 30 ವರ್ಷದವರೆಗೆ ನಿಗದಿ ಮಾಡಲಾಗಿದೆ. ಪ್ರವರ್ಗ 2ಎ,ಬಿ, 3ಎ,ಬಿ ಗಳಿಗೆ 38 ವರ್ಷ ಮತ್ತು ಪರಿಶಿಷ್ಟರಿಗೆ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಆಯ್ಕೆಗೊಂಡ ಅಭ್ಯರ್ಥಿಗಳಿಗೆ ತರಬೇತಿ ಹಂತದಲ್ಲಿ 9,100 ರೂ. ಭತ್ಯೆ ನೀಡಲಾಗುತ್ತದೆ. 2 ವರ್ಷ ತರಬೇತಿ ಬಳಿಕ ವೇತನವನ್ನು 11,640 ರೂ. 15,700 ರೂ. ವೇತನ ಪಾವತಿ ಮಾಡಲಾಗುತ್ತದೆ. 

ಆಯ್ಕೆ ಹೇಗೆ?
ಹುದ್ದೆಗೆ ಅಭ್ಯರ್ಥಿಗಳನ್ನು ಸಾಮಾನ್ಯ ಸಾಮರ್ಥ್ಯ ಪರೀಕ್ಷೆ(ಸಿಎಟಿ) ಮೂಲಕ ಆಯ್ಕೆ ಮಾಡಲಾಗುತ್ತದೆ. 
ಸಂವಹನ ನೈಪುಣ್ಯತೆ, ವಿಶ್ಲೇಷಣೆ, ಗಣಿತ, ಸಾಮಾನ್ಯಜ್ಞಾನ, ಗಣಕ ಜ್ಞಾನ ಒಳಗೊಂಡಿರುತ್ತದೆ. 

ಪರೀಕ್ಷೆಯಲ್ಲಿ ಕನಿಷ್ಠ 30ಅಂಕಗಳು ಬರಬೇಕು ಅದಕ್ಕಿಂತ ಕಡಿಮೆ ಅಂಕಗಳು ಬಂದವರನ್ನು ಅನರ್ಹಗೊಳಿಸಲಾಗುತ್ತದೆ. 
ವಿದ್ಯಾರ್ಹತೆ ಅಂಕಗಳನ್ನು ಶೇ.25, ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಅಂಕಗಳನ್ನು ಶೇ.75 ಆಧಾರದ ಮೇಲೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ದಾಖಲಾತಿ ಪರಿಶೀಲನೆ, ದೈಹಿಕ ಪರೀಕ್ಷೆ ಕಡ್ಡಾಯ.

ಬೆಂಗಳೂರು,ದಾವಣಗೆರೆ, ಶಿವಮೊಗ್ಗ, ಮೈಸೂರು, ಮಂಗಳೂರು, ಹಾಸನ, ಕಲಬುರ್ಗಿ, ಹುಬ್ಬಳ್ಳಿ, ಬಿಜಾಪುರ, ಗುಲ್ಬರ್ಗಾ, ಬಳ್ಳಾರಿಯಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಅರ್ಜಿ ಸಲ್ಲಿಕೆ
ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಕೆಗೆ ಮೊದಲು ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಯನ್ನು ಹೊಂದಿಸಿಕೊಳ್ಳುವುದು ಒಳಿತು. ಏ.5ರಿಂದ 25ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. www.ksrtcjobs.com  ಮೂಲಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಬೇಕು. ಬಳಿಕ ಚಲನ್‌ ಪ್ರತಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳ ತಕ್ಕದ್ದು. ಬಳಿಕ ಯಾವುದೇ ಅಂಚೆ ಕಚೇರಿಯಲ್ಲಿ ಇ-ಪೇಮೆಂಟ್‌ ಮೂಲಕ ಶುಲ್ಕ ಪಾವತಿಸಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 800 ರೂ. ಮತ್ತು ಪರಿಶಿಷ್ಟರಿಗೆ 500 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ www.ksrtcjobs.com   ಸಂಪರ್ಕಿಸಿ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.