ಅನುದಿನದ ಸಂಜೆಯಲಿ ನಿನದೇ ಧ್ಯಾನ


Team Udayavani, Dec 12, 2017, 12:17 PM IST

12-22.jpg

ಡಿಯರ್‌ ಗೀತಾ,
ಅದಾಗಲೇ ಶುರುವಾಗಿದೆ ಕಣೇ, ಎದೆಯಲ್ಲೊಂದು ಎಂದಿಗೂ ಮುಗಿಯದ ಯುಗಳಗೀತೆ. ಸಂಜೆಯ ಶ್ಯಾಮಲೆಯ ಮುಡಿಯಲ್ಲಿ ನಿನ್ನ ನೆನಪ ಸುಮಗಳ ಘಮ ಘಮ. ಮೆಲ್ಲನೆ ತೀಡುವ ತಣ್ಣನೆಯ ಗಾಳಿಯಲಿ ನೀನಾಡಿದ ಪಿಸು ಮಾತುಗಳಿವೆ ಜೊತೆಯಲಿ. ಅನುದಿನದ ಸಂಜೆಯಲಿ ನಿನ್ನ ಧ್ಯಾನದಿಂದ ಹೊರಬರುವುದು ತುಸು ಕಷ್ಟವೇ ಗೆಳತಿ. ಮತ್ತೆ ಮತ್ತೆ ಭೇಟಿ ಮಾಡುವ ಪ್ರತೀ ಮಧುರ ಕ್ಷಣಗಳಲ್ಲಿ ನಿನ್ನನ್ನು ಇದಿರುಗೊಳ್ಳುವ ನನ್ನ ಕಣ್ಣಂಚಿನ ಕನಸಿನ ಕುಣಿತವ ಅವಲೋಕಿಸುವ ಸೂಕ್ಷ್ಮ ಸಂವೇದನೆ ಹುಡುಗಿ ನೀನಲ್ಲವೇ. ಮತ್ತೇಕೆ ತಡ ಹುಡುಗಿ? ಸಮ್ಮತಿಸು. ನಮ್ಮಿರ್ವರ ದಾಂಪತ್ಯದ ಹೊತ್ತಿಗೆಗೆ ಮುನ್ನುಡಿ ಬರೆಯಲು ಉತ್ಸುಕನಾಗಿರುವೆ.

ಬದುಕಿದರೆ ನಿನ್ನೊಂದಿಗೆ ಎನ್ನುವ ಸಿದ್ದಾಂತ ನನ್ನಲ್ಲಿ ಈಚೀಚಿಗೆ ಬಲವಾಗಿ ಬೇರೂರಿದೆ. ಇಲ್ಲ ಎನ್ನದಿರು ಚಿನ್ನ. ಅಷ್ಟೂ ಬದುಕನ್ನು ನಿನಗಾಗಿ ಮೀಸಲಿಡುವೆ. ಒಂದಿಷ್ಟು ಒಲವನು ನನಗೂ ಹಂಚಲಾರೆಯಾ? ನನ್ನೆದೆಯ ಗೂಡಲ್ಲಿ ಸದಾಶಯಗಳ ಬೆಚ್ಚನೆಯ ಹೊದಿಕೆಯಲಿ ನಿನ್ನನ್ನು ಕಾಪಿಡುವೆ. ಉದ್ಯೋಗಕ್ಕೆ ಅರ್ಜಿ ಹಾಕಿ ಹಾಕಿ ಬೇಸತ್ತ ನಿರುದ್ಯೋಗಿಯ ಪಾಡನ್ನು ನನಗೆ ನೀಡದಿರು. ಇದೊಂದೇ ಅರ್ಜಿಯನ್ನು ನಾನು ಹಾಕುತ್ತಿರುವುದು. ಪರಿಶೀಲಿಸಿ ನೇಮಕಾತಿಯ ಆದೇಶ ನೀಡಿದರೆ, ಕೊನೆಯವರೆಗೂ ನಿಷ್ಠಾವಂತ ಪ್ರೇಮೋದ್ಯೋಗಿಯಾಗಿ ನಿನಗಾಗಿ ದುಡಿದು ಬಿಡುವೆ. ಆದರೆ ನೆನಪಿರಲಿ, ಅರ್ಜಿ ವಜಾ ಮಾಡಿದರೆ ನಾನು ಜೀವನ ಪೂರ್ತಿ ದುಃಖ ವಿಹ್ವಲ! 

ಸದಾ ನೋಡಬೇಕೆನ್ನಿಸುವ ಆ ಮುಖಕಮಲ, ಸದಾ ಕೇಳುತಿರಬೇಕೆನ್ನಿಸುವ ಸಕ್ಕರೆ ಸವಿಯ ಮೆಲು ಮಾತು, ಸೋತ ಬದುಕ ಸಾಂತ್ವನಿಸುತ್ತಾ “ಬಿ ಪಾಸಿಟಿವ್‌ ಕಣೋ’ ಎನ್ನುವ ಭರವಸೆಯ ಅಪ್ಪುಗೆ, ಆ ಮುಂಗುರುಳು… ಈ ಸದರಿ ಸಂಪತ್ತುಗಳ ಒಡೆಯ ನಾನಾಗಬೇಕೆಂದು ಮನಸ್ಸು ಮಗುವಿನಂತೆ ಹಠ ಹಿಡಿದಿದೆ. ನಿರಾಸೆಗೊಳಿಸದಿರು ಗೆಳತಿ. ನನ್ನನ್ನು ನಿಶ್ಶಕ್ತನನ್ನಾಗಿ ಮಾಡದಿರು.

ನಿನ್ನ ಕೈ ಹಿಡಿದು ಸಪ್ತಪದಿ ತುಳಿದು, ಸಪ್ತ ಸ್ವರಗಳೂ ಹೊಮ್ಮಿ ಬರುವ ಹೃದಯ ಗೀತೆಯನ್ನು ನಿನ್ನ ಸಾಂಗತ್ಯದಲಿ  ಕೊನೆಯವರೆಗೂ ಹಾಡಬೇಕಿದೆ. ಭಾವಗಳ ಸ್ವರ ಸಂಯೋಜಿಸುವ ನನ್ನ ಬದುಕಿನ ಗೀತೆ ನೀನಾಗಬೇಕಷ್ಟೆ.ಆಗ ಈ ಬಾಳಿಗೊಂದು ಸಾರ್ಥಕ್ಯದ ಸಮಾಧಾನ! ಎದೆಯಲ್ಲಿ ಹುದುಗಿ ಏಕಾಂತದಲ್ಲಿ ಹೃದಯವನ್ನು ಕೊರೆಯುತ್ತಿದ್ದ ತಳಮಳದ ಸವಿಸ್ತಾರವನ್ನು ನಿನ್ನ ಮುಂದೆ ಅರುಹಿರುವೆ.

ಅಂತಿಮ ನಿರ್ಧಾರ ನಿನ್ನ ಕೈಯಲ್ಲಿದೆ.
ಜೀವಗಳ ಕೂಡಿಸು ಹುಡುಗಿ, ನಿನಗೆ ಪುಣ್ಯ ಬಂದೀತು!
ಫಲಿತಾಂಶದ ನಿರೀಕ್ಷೆಯಲ್ಲಿರುವ ನಿನ್ನೊಲುಮೆಯ ಅರ್ಜಿದಾರ

ನಾಗರಾಜ ಮಗ್ಗದ
ಕೊಟ್ಟೂರು

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.