![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮನಸಿದು ನೆನಪಿನ ಸಂಚಿಕೆ
Team Udayavani, Aug 21, 2018, 6:00 AM IST
![9.jpg](https://www.udayavani.com/wp-content/uploads/2018/08/21/9.jpg)
ಕಳೆದು ಹೋದ ನಿನ್ನನ್ನು ಮತ್ತೆ ಪಡೆಯುವಷ್ಟು ಪರಿಶುದ್ಧಳಾಗಿದ್ದೇನೆ. ಒಮ್ಮೆ ನಿನ್ನ ಹೃದಯದ ಮಾತು ಕೇಳು; ಅದು ನನ್ನ ವಿಳಾಸ ಹೇಳುತ್ತದೆ. ಅಲ್ಲೇ ಇದ್ದೇನೆ, ಅಲ್ಲೇ, ನೀ ಬಿಟ್ಟು ಹೋದಲ್ಲೇ!
ಹುಡುಗ,
ಹಗಲಿರುಳುಗಳ ನಡುವಿನಲ್ಲಿ ಯಂತ್ರದಂತೆ ಸಾಗುತ್ತಿದೆ ಬದುಕು, ಯಾವುದರಲ್ಲಿಯೂ ತಲ್ಲೀನಗೊಳ್ಳದೆ ಛಿಧ್ರಗೊಳ್ಳುತ್ತಿರುವ ಹೃದಯದ ಒಡಕು, ಏನೋ ಕಳೆದುಕೊಳ್ಳುತ್ತಿದ್ದೇನೆಂಬ ಅವ್ಯಕ್ತ ಭಯ, ಯಾವ ದಾರಿಯೆಡೆಗೂ ಹೆಜ್ಜೆಯಿಡಲು ಮುಗಿಯದ ಗೊಂದಲದ ಸಮಯ, ನಿರೀಕ್ಷೆ ಎಂಬುದು ಮುಳುಗತೊಡಗಿರುವ ತಳ ಒಡೆದ ದೋಣಿ. ಆದರೂ ಒಂದೇ ಒಂದು ಬಾರಿ ನಿನ್ನ ನೋಡಬೇಕೆಂಬ ಅಪೇಕ್ಷೆಗೆ ಮನಸು ಹಿಡಿಯುತ್ತಿದೆ ಸಾಣಿ. ಅದೆಷ್ಟು ಸಾವಿರ ಸಲ ನಿನ್ನ ಮೊಬೈಲ್ಗೆ ಕಾಲ್ ಮಾಡಿದ್ದೇನೋ? ಅದೇ ಸಾವಿನಂಥ ಸ್ವರದಲ್ಲಿ, ನನ್ನೆಡೆಗಿನ ನಿನ್ನ ಕೊನೆಯ ಮಾತೇನೋ ಅನ್ನುವ ಹಾಗಿನ ದನಿ.. ಸ್ವಿಚ್ಆಫ್.
ಒಂದೇ ಒಂದು ಕಾಲ್ ಮಾಡಿ ಮಾತಾಡೋ ಮಾರಾಯ. ಏನಾಯಿತೋ ನಿಂಗೆ. ಇಳಿಸಂಜೆ ಹೊತ್ತಲ್ಲಿ ಹೂ ಮುತ್ತನಿತ್ತು, ನನ್ನ ಮುಂಗುರುಳ ಸರಿಸಿ, “ಎಷ್ಟು ಚಂದವಿದ್ದೀಯೆ? ನಿನ್ನ ಗುಳಿಕೆನ್ನೆಯಲ್ಲಿ ಬಿದ್ದು ಸತ್ತೋಗ್ತಿನಿ ಕಣೆ’ ಎಂದು ಸಿಹಿಯಾಗಿ ನಕ್ಕವನೆ.. ಎಲ್ಲಿ ಹೋದೆಯೋ? ಅಲ್ಲೇಲ್ಲೋ ಮರೆಯಾಗಿ ಕೂತವನೆ, ನಿನ್ನ ಮೌನ ನನ್ನನ್ನು ಕೊಲ್ಲುವ ವಿಷ ಕಣೋ.
ಅನುಕ್ಷಣವೂ ಜೀವ ಹಿಂಡುವ ಒಂಟಿತನದ ಕ್ರೂರತೆ ನಿನಗೆ ಗೊತ್ತಿಲ್ಲ. ಲೋ ಹುಡುಗ, ನೀ ಇಲ್ಲವೆಂಬ ಈ ದುಗುಡದ ಕಡಲ ನಾ ಹೇಗೆ ದಾಟಲೋ? ಒಳಗಿನ ದುಃಖದ ಕುದಿಗೆ ನನ್ನ ಕಣ್ಣ ಹನಿಗಳೇ ಆವಿಯಾಗಿ ಹೋಗಿವೆ. ನೀ ಇಲ್ಲದ ಬದುಕನ್ನು ಅರೆಕ್ಷಣವೂ ಕಲ್ಪಿಸಿಕೊಳ್ಳದ ನಾನು, ನಿನ್ನ ಸುಳಿವೇ ಇಲ್ಲದ ಈ ವಾಸ್ತವವನ್ನು ಹೇಗೆ ಎದುರುಗೊಳ್ಳಲಿ ಹೇಳು? ಹಗಲಿರುಳುಗಳ ಪರಿವೇ ಇಲ್ಲದೇ ನಿನ್ನೊಂದಿಗೆ ಬದುಕನ್ನು ಕಳೆಯುತ್ತೇನೆಂಬ ಸುಂದರ, ಸಾವಿರ ಸ್ವಪ್ನಗಳ ಕಂಡವಳು ನಾನು. ಈಗ ರಂಗು ಕಳೆದುಕೊಂಡ ಬದುಕಿನ ಬಣ್ಣಗಳು ಸುಟ್ಟುಹೋಗಿ, ಬರೀ ಹೊಗೆಯಷ್ಟೇ ಉಳಿದಿದೆ. ಉಸಿರುಗಟ್ಟಿಸುವ ಈ ಅಂತರಾಳದ ತಳಮಳವನ್ನು ಹೇಗೆ ಭರಿಸಲಿ ಹೇಳ್ಳೋ ಹುಡುಗ?
ಇನ್ನೆಲ್ಲು ಕಾಣದ ತಲ್ಲೀನತೆ
ನಿನ್ನಲ್ಲಿ ಕಾಣುತಾ ಹೀಗಾಯಿತೆ
ಕೈಯಿಂದ ಜಾರಿತೇನೋ ನನ್ನಯ ಕತೆ
ನೀನು ನನ್ನ ಬದುಕಿನ ಕತೆಗಾರ. ಬರೆಯ ಬಾರೋ ಒಂದು ಸಾಲನ್ನಾದರೂ, ನಿನಗಾಗೇ ಸದಾ ಕಾಯುತ್ತಲೇ ಉಳಿಯುವ ಹೊರತು, ಮತ್ತೂಂದು ಆಸೆಯಿಲ್ಲ ಮನಸಿಗೆ. ಜಗತ್ತು ನನ್ನನ್ನು ಹುಚ್ಚಿ ಅನ್ನುತ್ತದೆ. ಅದು ಮನಸು ಮಾರಿಕೊಂಡ ಜಗತ್ತಿನ ಲೆಕ್ಕಾಚಾರ. ಅದು ಹೃದಯಹೀನರ ಮುಖವಾಡ ಧರಿಸಿದ ಬದುಕಿನ ವ್ಯಾಪಾರ. ಅದೆಲ್ಲಾ ಯಾವತ್ತೂ ನನ್ನನ್ನು ಸೋಕಲಾರದು ಗೆಳೆಯ.
ಕಳೆದುಹೋದ ನಿನ್ನನ್ನು ಮತ್ತೆ ಪಡೆಯುವಷ್ಟು ಪರಿಶುದ್ಧಳಾಗಿದ್ದೇನೆ. ಒಮ್ಮೆ ನಿನ್ನ ಹೃದಯದ ಮಾತು ಕೇಳು; ಅದು ನನ್ನ ವಿಳಾಸ ಹೇಳುತ್ತದೆ. ಅಲ್ಲೇ ಇದ್ದೇನೆ, ಅಲ್ಲೇ, ನೀ ಬಿಟ್ಟು ಹೋದಲ್ಲೇ!
ನಿನ್ನವಳು
ಅಮ್ಮು ಮಲ್ಲಿಗೆಹಳ್ಳಿ
ಜೀವ ಮುಳ್ಳೂರು
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.