ಆತ ಕೊಟ್ಟ ಪುಸ್ತಕದಿಂದ ಅಂಕಗಳು ಬಂದವು…


Team Udayavani, Jan 7, 2020, 5:00 AM IST

3-mint

ನಮ್ಮದು ಮಧ್ಯಮ ವರ್ಗದ ಕುಟುಂಬ. ಮನೆಯ ಪರಿಸ್ಥಿತಿ ಅಷ್ಟಕಷ್ಟೇ ಇದ್ದುದರಿಂದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದೆ. 10ನೇ ತರಗತಿಲ್ಲಿದ್ದ ಸಂದರ್ಭವದು. ಜಾಣೆ ಎಂದು ನನ್ನನ್ನು ಕ್ಲಾಸ್‌ ಲೀಡರ್‌ ಮಾಡಿದ್ದರು. ಊರೂರು ಅಲೆಯುತ್ತಾ 10ನೇ ತರಗತಿಯ ಗೈಡ್‌ ಮಾರುತ್ತಿದ್ದ ಒಬ್ಬ ವ್ಯಕ್ತಿ ನಮ್ಮ ಶಾಲೆಗೂ ಬಂದ. “ಗೈಡ್‌ ಬೇಕಾದವರು 10ರುಪಾಯಿ ತಂದು ಪುಸ್ತಕಕೊಳ್ಳಿ, ನಾಳೆ ಮತ್ತೆ ಬರುತ್ತೇನೆ’ ಎಂದು ಹೇಳಿ ಹೋಗಿದ್ದ. ನನಗೆ ಪುಸ್ತಕ ಕೊಳ್ಳುವ ಖುಷಿ. ಅಪ್ಪನ ಬಳಿ ಹೋಗಿ, ಗೈಡ್‌ ಕೊಳ್ಳಲು 10 ರೂ.ಬೇಕು ಅಂತ ಕೇಳಿದೆ.

“ಅಷ್ಟೊಂದು ಹಣ ಇಲ್ಲ ಮಗಳೇ, ಇರುವ ಪುಸ್ತಕವನ್ನೇ ಓದಿಕೋ’ ಅಂದರು. ಮರುದಿನ ಟೀಚರ್‌ ಬರದೇ ಇದ್ದುದರಿಂದ ಮೊದಲನೇ ಪಿರೀಯಡ್‌ನ‌ಲ್ಲಿ ಕ್ಲಾಸ್‌ ಲೀಡರ್‌ ಆಗಿದ್ದ ನಾನು, ಎಲ್ಲರನ್ನೂ ಸುಮ್ಮನೆ ಕೂರಿಸುವ ಕಾರ್ಯ ಮಾಡುತ್ತಿದ್ದೆ. ಹಿಂದಿನ ದಿನ ಗೈಡ್‌ ತಂದಿದ್ದ ವ್ಯಕ್ತಿ ಹೇಳಿದಂತೆ ಮತ್ತೆ ಬಂದ. ಎಲ್ಲ ವಿದ್ಯಾರ್ಥಿಗಳೂ ಒಬ್ಬೊಬ್ಬರಾಗಿ ಬಂದು 10 ರೂ. ಕೊಟ್ಟು ಅವನ ಬಳಿ ಗೈಡ್‌ ಕೊಂಡರು. ನಾನು ಪೆಚ್ಚುಮೋರೆ ಹಾಕಿಕೊಂಡು ದೂರದಲ್ಲಿ ನೋಡುತ್ತಾ ನಿಂತಿದ್ದೆ. ಎಲ್ಲಾ ಮಾರಾಟವಾದ ನಂತರ ಅವನು ನನ್ನತ್ತ ನೋಡಿ “ನಿನಗೆ ಬೇಡವಾ ಪುಟ್ಟಿ?’ ಅಂದ. ಸೋತ ಮುಖದಿಂದ ಬೇಡವೆಂಬಂತೆ ತಲೆಯಾಡಿಸಿ ನನ್ನಲ್ಲಿ 10 ರೂ. ಇಲ್ಲ ಎಂಬ ಸತ್ಯ ಅವನಿಗೆ ಗೊತ್ತಾಯಿತೋ ಏನೋ… ಹೆಗಲಿಗೆ ಬ್ಯಾಗ್‌ ಹಾಕಿಕೊಂಡು ಹೊರಗೆ ಹೋದವನು, ದೂರದಲ್ಲಿ ನಿಂತು ನನ್ನನ್ನು “ಬಾ’ ಎಂದು ಸಂಜ್ಞೆ ಮಾಡಿ ಕರೆದ. ಹತ್ತಿರ ಹೋದೆ. “ದುಡ್ಡೇನೂ ಕೊಡಬೇಡ ತಗೋ ಪುಟ್ಟಿ. ನೀನು ಇನ್ನೂ ಚೆನ್ನಾಗಿ ಓದು’ ಎಂದು ಗೈಡ್‌ ನನ್ನ ಕೈಗಿತ್ತು, ತಲೆಸವರಿ ನಗುಮೊಗದಿಂದ ಹೊರಟುಹೋದ.

ನಾನು ಇಷ್ಟಪಟ್ಟ ಗೈಡ್‌ ಸಿಕ್ಕಾಗ ತುಂಬಾ ಖುಷಿಯಾಗಿತ್ತು. 10ನೇ ತರಗತಿಯಲ್ಲಿ ಚೆನ್ನಾಗಿ ಓದಿ ಶೇ.91ರಷ್ಟು ಅಂಕ ಪಡೆದೆ. ಈಗ ಸದ್ಯಕ್ಕೆ ಸರ್ಕಾರಿ ನೌಕರಿಯಲ್ಲಿದ್ದೇನೆ. ಅಂದು ಅವನಿಗೆ ಕೊಡಲು 10 ರೂ. ಕೂಡ ಇರಲಿಲ್ಲ. ಇಂದು ಸಾವಿರಾರು ರೂ. ಸಂಪಾದಿಸುತ್ತಿದ್ದೇನೆ. ಆದರೆ ಸರಸ್ವತಿಯನ್ನು ಕೊಟ್ಟು ಆಶೀರ್ವಾದ ಮಾಡಿ ಹೋದ ಆ ದೇವರಂಥ ವ್ಯಕ್ತಿಯನ್ನು ಎಲ್ಲಿ ಹುಡುಕಲಿ? ಅವರ ನೆನಪಿಗಾಗಿ ಆ ಪುಸ್ತಕವನ್ನು ಇನ್ನು ಹಾಗೇ ಇಟ್ಟಿಕೊಂಡಿರುವೆ. ಅವರು ಎಲ್ಲೇ ಇರಲಿ, ಚೆನ್ನಾಗಿರಲಿ.

-ಸೌಮ್ಯಶ್ರೀ ಸುದರ್ಶನ್‌ ಹಿರೇಮಠ್

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.