ಟೀಚರ್‌ ಆಗಬಯಸುವವರಿಗೆ: ಟೀಚ್‌ ಫಾರ್‌ ಇಂಡಿಯಾ ಫೆಲೋಶಿಪ್‌ ಕಾರ್ಯಕ್ರಮ


Team Udayavani, May 2, 2017, 12:38 PM IST

02-JOSH-2.jpg

ದೇಶದ ಶಿಕ್ಷಣ ಕ್ರಾಂತಿಯಲ್ಲಿ ಪಾಲ್ಗೊಳ್ಳಲು “ಟೀಚ್‌ ಫಾರ್‌ ಇಂಡಿಯಾ ಫೆಲೋಶಿಪ್‌’ ಯುವಕರಿಗೆ ಒಂದು ಉತ್ತಮ ಅವಕಾಶ. ಈ ಕಾರ್ಯಕ್ರಮದ ಮೂಲಕ ವಿವಿಧ ಶೈಕ್ಷಣಿಕ ಹಿನ್ನೆಲೆ ಹೊಂದಿದ ಮತ್ತು ವಿವಿಧ ವೃತ್ತಿಗಳಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು, ಕೆಲವು ತಿಂಗಳುಗಳ ತರಬೇತಿಯ ನಂತರ ಹಿಂದುಳಿದ ಶಾಲೆಗಳಲ್ಲಿ ಎರಡು ವರ್ಷಗಳ ಕಾಲ ಬೋಧನೆ ಮಾಡಲು ಕಳಿಸಲಾಗುತ್ತದೆ.

ಪ್ರತಿವರ್ಷ ಸರ್ಕಾರ ಸಾವಿರಾರು ಕೋಟಿ ರೂಪಾಯಿಗಳನ್ನು ಶಿಕ್ಷಣ ಕ್ಷೇತ್ರದ ಬೆಳವಣಿಗೆಗೆಂದು ಮೀಸಲಿಡುತ್ತದೆ. ಆದರೂ ಸಹ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಇನ್ನೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಮುಖ್ಯ ಕಾರಣ, ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ಮಾನವ ಸಂಪನ್ಮೂಲದ ಕೊರತೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಸಂಖ್ಯೆ ಬಹಳ ಕಡಿಮೆಯಿದೆ. ಹಿಂದುಳಿದ ಪ್ರದೇಶಗಳಲ್ಲಿ ಮತ್ತು ಸೀಮಿತ  ಪನ್ಮೂಲಗಳನ್ನು ಹೊಂದಿದ ಶಾಲೆಗಳಲ್ಲಿ ಪರಿಸ್ಥಿತಿ ಇನ್ನೂ ಶೋಚನೀಯವಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು “ಟೀಚ್‌ ಫಾರ್‌ ಇಂಡಿಯಾ ಫೆಲೋಶಿಪ್‌’ ಎಂಬ ನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ ಉತ್ಸಾಹಿ ಯುವಕರಿಗೆ ಹಿಂದುಳಿದ ಶಾಲೆಗಳಲ್ಲಿ ಎರಡು ವರ್ಷಗಳ ಕಾಲ ಭೋಧನಾ ವೃತ್ತಿಯಲ್ಲಿ ತೊಡಗಿಸಿಕೊಳ್ಳುವ ಅವಕಾಶವನ್ನು ಒದಗಿಸಲಾಗುತ್ತದೆ.

ಏನಿದು “ಟೀಚ್‌ ಫಾರ್‌ ಇಂಡಿಯಾ ಫೆಲೋಶಿಪ್‌’?
ದೇಶದ ಶಿಕ್ಷಣ ಕ್ರಾಂತಿಯಲ್ಲಿ ಪಾಲ್ಗೊಳ್ಳಲು “ಟೀಚ್‌ ಫಾರ್‌ ಇಂಡಿಯಾ ಫೆಲೋಶಿಪ್‌’ ಯುವಕರಿಗೆ ಒಂದು ಉತ್ತಮ ಅವಕಾಶ. ಈ ಕಾರ್ಯಕ್ರಮದ ಮೂಲಕ ವಿವಿಧ ಶೈಕ್ಷಣಿಕ ಹಿನ್ನೆಲೆ ಹೊಂದಿದ ಮತ್ತು ವಿವಿಧ ವೃತ್ತಿಗಳಲ್ಲಿ ಅನುಭವ ಹೊಂದಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು, ಕೆಲವು ತಿಂಗಳುಗಳ ತರಬೇತಿಯ ನಂತರ ಹಿಂದುಳಿದ ಪ್ರದೇಶದ ಶಾಲೆಗಳಲ್ಲಿ ಎರಡು ವರ್ಷಗಳ ಕಾಲ ಬೋಧನೆ ಮಾಡಲು  ಕಳಿಸಲಾಗುತ್ತದೆ. ಇಂಥ ಶಾಲೆಗಳಲ್ಲಿ ಫೆಲೋಗಳು, ಭಿನ್ನ ಹಾಗು ಆಧುನಿಕ ಕಲಿಕಾ ವಿಧಾನಗಳ ಮೂಲಕ ಶಿಕ್ಷಣದ  ಗುಣಮಟ್ಟ ಹೆಚ್ಚಿಸುವ ಕಾರ್ಯವನ್ನು ಮಾಡುತ್ತಾರೆ. ಬೋಧನೆಯ ಜೊತೆ ಜೊತೆಗೆ ಅಭ್ಯರ್ಥಿಗಳ ನಾಯಕತ್ವ ಗುಣಗಳನ್ನು, ಕೌಶಲಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಕೂಡ ತರಬೇತಿ ನೀಡಲಾಗುತ್ತದೆ. 

ಆಯ್ಕೆ ಹೇಗೆ?
ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳನ್ನು ಒಳಗೊಂಡಿರುತ್ತದೆ. ಮೊದಲನೇ ಹಂತದಲ್ಲಿ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗುತ್ತದೆ. ಅರ್ಜಿಯಲ್ಲಿ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮತ್ತು ಈ ಹಿಂದೆ ಕೈಗೊಂಡ ಉದ್ಯೋಗದ ಮಾಹಿತಿಯನ್ನು ಒದಗಿಸಬೇಕು. ಜೊತೆಗೆ, ಏಕೆ ಈ ಕಾರ್ಯಕ್ರಮಕ್ಕೆ ಸೇರಿಕೊಳ್ಳಲು ಇಚ್ಛಿಸುತ್ತೇನೆ  ಎಂಬುದನ್ನು ವಿವರವಾಗಿ  ತಿಳಿಸಬೇಕು. ಮೊದಲನೇ ಹಂತದಲ್ಲಿ ಒಂದೂವರೆ ಗಂಟೆ ಅವಧಿಯ ಒಂದು ಆನ್‌ಲೈನ್‌ ಪರೀಕ್ಷೆಯನ್ನು ಕೂಡ ನಡೆಸಲಾಗುತ್ತದೆ. ಆನ್‌ಲೈನ್‌ ಪರೀಕ್ಷೆಯು ತಾರ್ಕಿಕ ಸಾಮರ್ಥ್ಯ ಮತ್ತು ಇಂಗ್ಲಿಷ್‌ ಭಾಷಾಜಾnನ ಕುರಿತ ಪ್ರಶ್ನೆಗಳನ್ನು ಹೊಂದಿರುತ್ತದೆ. ಎರಡನೇ ಹಂತದಲ್ಲಿ 30 ನಿಮಿಷಗಳ ಫೋನ್‌- ಸಂದರ್ಶನವನ್ನು ನಡೆಸಲಾಗುತ್ತದೆ. ಈ ಎರಡು ಹಂತದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಮೂರನೇ ಹಂತದ ಆಯ್ಕೆ ಪ್ರಕ್ರಿಯೆಗೆ ಕರೆಯಲಾಗುತ್ತದೆ. ಇದರಲ್ಲಿ ಅಭ್ಯರ್ಥಿಗಳು 5 ನಿಮಿಷಗಳ ಒಂದು ಪಾಠವನ್ನು ಬೋಧನೆ ಮಾಡಬೇಕು. ಜೊತೆಗೆ, ಸಮೂಹ ಚರ್ಚೆ ಮತ್ತು ಸಮಸ್ಯೆ ನಿವಾರಣೆ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ನಂತರ ಸುಮಾರು ಒಂದು ಗಂಟೆಯ ವ್ಯಕ್ತಿಗತ
ಸಂದರ್ಶನವನ್ನು ನಡೆಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಗಳು ಮುಗಿದ ನಂತರ ಕಡೆಯದಾಗಿ ಅಭ್ಯರ್ಥಿಗಳನ್ನು ಆಯ್ಕೆ 
ಮಾಡಿಕೊಳ್ಳಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಸೂಕ್ತ ತರಬೇತಿ ನೀಡಿ ಮುಂಬೈ, ಪೂನಾ, ದೆಹಲಿ, ಚೆನ್ನೈ, ಹೈದರಾಬಾದ್‌, ಅಹಮದಾಬಾದ್‌
ಮತ್ತು ಬೆಂಗಳೂರು ನಗರಗಳಲ್ಲಿನ ಹಿಂದುಳಿದ ಶಾಲೆಗಳಲ್ಲಿ (2- 10ನೇ ತರಗತಿ) ಬೋಧನೆಗಾಗಿ ಕಳಿಸಲಾಗುತ್ತದೆ.

ವೇತನ ಮತ್ತು ಭವಿಷ್ಯದಲ್ಲಿನ ಅವಕಾಶಗಳು ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ 17,500/- ವೇತನವನ್ನು ಪಡೆಯುತ್ತಾರೆ. ಜೊತೆಗೆ, ರೂ. 5500-10,000 ವರೆಗೆ ವಸತಿ ಭತ್ಯೆಯನ್ನು ಪಡೆಯುತ್ತಾರೆ. ಫೆಲೋಶಿಪ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳು ಪ್ರತಿಷ್ಟಿತ ಹಾರ್ವಡ್‌ (Harvard), ಕಾರ್ನೆಲ್‌ (Cornell), ಚಿಕಾಗೊ ಬೂತ್‌ (Chicago Booth), ಕೊಲಂಬಿಯಾ (Columbia)
ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಬಹುದು. ಇಲ್ಲವಾದರೆ, ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಅಥವಾ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸರ್ಕಾರೇತರ ಸಂಸ್ಥೆಗಳಲ್ಲಿ ಸಲಹಾಗಾರರಾಗಿ ಕೆಲಸ ಮಾಡಬಹುದು. ಅಥವಾ ಶಾಲೆಗಳಲ್ಲಿ ಬೋಧನಾ ವೃತ್ತಿಯನ್ನು ಮುಂದುವರಿಸಬಹುದು. ಒಮ್ಮೆ ಫೆಲೋಶಿಪ್‌ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರೆ ಉತ್ತಮ 
ಅವಕಾಶಗಳು ತಾವಾಗಿಯೇ ಹುಡುಕಿಕೊಂಡು ಬರುತ್ತವೆ.  

*ಪ್ರಶಾಂತ್ ಎಸ್.ಚಿನ್ನಪ್ಪನವರ್, ಚಿತ್ರದುರ್ಗ

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.