ದೀಪಾವಳಿ ದಿನವೇ ಬೆಂಕಿ ಹೊತ್ತಿಕೊಂಡಿತು


Team Udayavani, Dec 31, 2019, 4:22 AM IST

vc-1

ಇತ್ತೀಚೆಗಂತೂ ಕವಿಮಹಾಶಯರಿಗಾಗಿ ಹಲವಾರು ವಾಟ್ಸಾಪ್‌ ಗುಂಪುಗಳು ಹುಟ್ಟಿಕೊಂಡಿವೆ. ಎಲ್ಲಾ ಗುಂಪುಗಳಲ್ಲೂ ಅವರೇ ಇದ್ದರೂ, ಅಲ್ಲಲ್ಲಿ ಆಗತಾನೆ ಕತೆ, ಕವಿತೆಯನ್ನು ಓದಿಕೊಳ್ಳುತ್ತಿರುವವರೂ ಇದ್ದಾರೆ. ಸಾಹಿತಿ, ಬರಹಗಾರರನ್ನು ಗುಂಪಿಗೆ ಸೇರಿಸುವುದು ಬಲು ಸುಲಭವಾಗಿದೆ. ಪತ್ರಿಕೆಗಳಲ್ಲಿ ಹೆಸರು, ಫೋನ್‌ ನಂಬರ್‌ ಕಂಡರೆ ಮುಗೀತು. ಹೇಳದೇ ಕೇಳದೆ, ಅವರನ್ನೂ ಹೊಸ ಹೊಸ ಗುಂಪುಗಳಲ್ಲಿ ಸೇರಿಸಿಬಿಡುತ್ತಾರೆ. “ನಾನು ನಿಮ್ಮನ್ನು ವಾಟ್ಸಾಪ್‌ ಗುಂಪಿಗೆ ಸೇರಿಸಬಹುದೆ?’ ಅಂತ ಸೌಜನ್ಯಕ್ಕಾದರೂ ಯಾರೂ ಕೇಳುವುದಿಲ್ಲ. ಇಂತಿಪ್ಪ ಜನರೇ, ಪತ್ರಿಕೆಯಲ್ಲಿ ಪ್ರಕಟವಾದ, ನನ್ನ ಬರಹದ ಕೊನೆಗಿದ್ದ ಮೊಬೈಲ್‌ ನಂಬರ್‌ ಅನ್ನು ಹಲವು ಗುಂಪುಗಳಲ್ಲಿ ಹಾಕಿಬಿಡುತ್ತಿದ್ದರು. ಅದರಿಂದ ನಾನು ಬಿಡಿಸಿಕೊಂಡು ಬರುವುದು, ಮತ್ತೆ ಇನ್ನೊಬ್ಬರು ನನ್ನ ಸೇರಿಸುವುದೂ ಮಾಮೂಲಿಯಾಗಿತ್ತು. ಇಂಥದೇ ಮಾರ್ಗದಲ್ಲಿ ಸೇರಿಕೊಂಡ ಗ್ರೂಪ್‌, ಈ ಕಾವ್ಯ ಸಿಂಚನ ವೇದಿಕೆ.

ಈ ಗುಂಪಿನಲ್ಲಿ ಇದ್ದಕ್ಕಿದ್ದಂತೆ ಹುರುಪು ಶುರುವಾಯಿತು. ಕಾರಣ, ದೀಪಾವಳಿ. ಏನಾದರು ಮಾಡಲೇಬೇಕು ಅಂತ, ಹಬ್ಬವನ್ನು ನೆಪವಾಗಿಟ್ಟುಕೊಂಡು ಗುಂಪಿನಲ್ಲಿ ಕವನ ಸ್ಪರ್ಧೆಯನ್ನು ಆಯೋಜಿಸಲಾಯಿತು. ಗ್ರೂಪ್‌ನ ಅಡ್ಮಿನ್‌, ಈ ಸ್ಪರ್ಧೆಯ ರೂವಾರಿ. ಬೆಳಗ್ಗೆಯಿಂದ ಸಂಜೆಯವರೆಗೂ ಕವನವನ್ನು ಗುಂಪಿನಲ್ಲಿ ಹಾಕುವುದು. ಉಳಿದವರು ಆ ಕವನಗಳ ವಿಮರ್ಶೆ ಮಾಡುವುದು ಅಂತ ತೀರ್ಮಾನವಾಯಿತು. ಹಾಗೆಯೇ, ನಮ್ಮ ಗುಂಪಿನಲ್ಲೇ ಒಬ್ಬರನ್ನು ಕವನದ ಆಯ್ಕೆಗೆ ನಿರ್ಣಾಯಕನನ್ನಾಗಿ ನೇಮಿಸಲಾಗಿತ್ತು. ಸ್ಪರ್ಧೆ ಏನೋ ಚೆನ್ನಾಗಿ ನಡೆಯಿತು. ಎಲ್ಲ ಕವಿ ಮಹಾಶಯರೂ ತಮಗೆ ತೋಚಿದಂತೆ ಕವನಗಳನ್ನು ಗೀಚಿ ಗುಂಪಿನಲ್ಲಿ ಹಾಕಿದರು. ಆದರೆ, ಸಮಸ್ಯೆ ಎದುರಾಗಿದ್ದೇ ಇಲ್ಲಿಂದ. ಯಾರೂ ವಿಮರ್ಶೆಗೆ ಮುಂದಾಗಲಿಲ್ಲ. ಕೊನೆಗೆ, ನಿರ್ಣಾಯಕ ಮಾತ್ರ ವಿಮರ್ಶೆಯಲ್ಲಿ ತೊಡಗಿದ. ಕಾವ್ಯದ ಗಂಧಗಾಳಿಯೂ ಇಲ್ಲದ ನಿರ್ಣಾಯಕನ ವಿಮರ್ಶೆಯು ಗುಂಪಿನಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತು. ಹೀಯಾಳಿಸುವ , ಮೂದಲಿಸುವ ರೂಪದಲ್ಲಿದ್ದ ಅವನ ವಿಮರ್ಶೆಯಿಂದಾಗಿ ಗುಂಪಿನ ಸದಸ್ಯರೆಲ್ಲಾ ಅವರನ್ನು ಹಾಗೂ ಅಡ್ಮಿನ್‌ನನ್ನು ತರಾಟೆಗೆ ತೆಗೆದುಕೊಂಡರು. ಆದರೆ, ವಿಮರ್ಶಕ ತನ್ನ ವಿಮರ್ಶೆ ಸರಿಯಾಗಿದೆ ಎಂದು ಸಮರ್ಥಿಸಲು ಮುಂದಾದರು. ಆಗ, ವಾದ ಜೋರಾಗಿ ಜಗಳದ ರೂಪ ಪಡೆದು, ಕೊನೆಗೆ ವಿಕೋಪಕ್ಕೆ ತಲುಪಿತು. ಇದರಿಂದಾಗಿ ಬೇಸತ್ತ ಅಡ್ಮಿನ್‌ ಮಹಾಶಯರು, ಈ ಕವಿಗಳ ಸಹವಾಸವೇ ಬೇಡ ಎಂದುಕೊಂಡು ಗುಂಪಿನಿಂದ ಹೊರ ನಡೆದರು. ಒಬ್ಬ ಅವಿವೇಕಿಯಿಂದಾಗಿ ಸದುದ್ದೇಶದ ಗುಂಪು ಅಂದು ಅಂತ್ಯ ಕಂಡಿತು.

ಎಲ್ಲರ ಕವನಗಳು ಬಾಯಿ ಮುಚ್ಚಿದವು. ಹೀಗೆ, ದೀಪಾವಳಿಯಂದು ನಮ್ಮ ಗ್ರೂಪ್‌ನಲ್ಲಿ ಬೆಂಕಿ ಹೊತ್ತಿಕೊಂಡಿತು.

ವೆಂಕಟೇಶ ಚಾಗಿ

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.