ನನ್ನ ಹೃದಯವೇನು ಸೇಫ್ಟಿ ಲಾಕರ್ರಾ?


Team Udayavani, Oct 30, 2018, 6:00 AM IST

v-1.jpg

ನನಗೆ ಗೊತ್ತಿರುವಂತೆ ನೀನು ಒಳ್ಳೆಯವಳೇ. ಆದರೆ, ನಿನಗೆ ಅತೀ ಅನ್ನಿಸುವಷ್ಟು ಸ್ವಾರ್ಥವಿದೆ. ಜೊತೆಗಿರುವವರನ್ನು ಗಿರಗಿಟ್ಲೆಯಂತೆ ತಿರುಗಿಸಬಲ್ಲ ಚಾಲಾಕಿತನವಿದೆ. ಇದೇ ಕಾರಣದಿಂದ ಹೀರೋಯಿನ್‌ ರೂಪಿನ ನೀನು ಲೇಡಿ ವಿಲನ್‌ ಆಗಿ ಕಾಣಿಸ್ತಿದೀಯ…

ಅದೆಷ್ಟು ವಿಷ ತುಂಬಿದೆಯೇ ನಿನ್ನೊಳಗೆ? ಮಹಾನ್‌ ಮೋಸಗಾತಿ ನೀನು. ವಿಶ್ವಾಸಘಾತುಕಿ.ಕೆನ್ನೆ ಮೇಲಿನ ಮಚ್ಚೆಯಷ್ಟೂ ಲಜ್ಜೆ ಇಲ್ಲವಲ್ಲೇ ನಿನಗೆ? ಕೈಬೆರಳುಗಳಂತೂ ಇಳಿಬಿದ್ದ ಮುಂಗುರುಳುಗಳ ಸುತ್ತುತ್ತಲೇ ನನ್ನ ಮನಸ್ಸನ್ನೂ ನಿನ್ನ ಸುತ್ತ ಸುತ್ತುವಂತೆ ಮಾಡಿದವು. ಸಮಯಸಾಧಕರಂತೆ ಹೊಂಚು ಹಾಕುತ್ತಿರುತ್ತವೆ ನಿನ್ನ ಕಣ್ಣುಗಳು. ಗುರುತ್ವಾಕರ್ಷಣೆಯ ಬಲದಿಂದಾಗಿ, ಭೂಮಿಯೆಡೆಗೆ ಬೀಳುವ ಆಕಾಶ ಕಾಯಗಳಿಗಿಂತಲೂ ವೇಗವಾಗಿ ಜಾರಿದೆ ನಾನು ನಿನ್ನ ಪ್ರೀತಿಯ ಆಕರ್ಷಣೆಗೆ.

ಆದರೆ ನೀನು ಮಾಡಿದ್ದೇನು? ಅದ್ಯಾವುದನ್ನೂ ಅರ್ಥಮಾಡಿಕೊಳ್ಳಲೇ ಇಲ್ಲ. ಬರೀ ನಿನ್ನ ಅನುಕೂಲಕ್ಕೆ ನನ್ನನ್ನು ಬಳಸಿಕೊಂಡೆಯಷ್ಟೇ. ನನ್ನ ಹೃದಯದೊಂದಿಗೆ ಚೆಲ್ಲಾಟವಾಡಿದೆ. ನನ್ನ ಹೃದಯವನ್ನೇನು ಸೇಫ್ಟಿ ಲಾಕರ್‌ ಅಂದುಕೊಂಡೆಯಾ, ನಿನ್ನ ಆಸೆ, ಪ್ರೀತಿ, ಕನಸುಗಳನ್ನೆಲ್ಲಾ ಭದ್ರವಾಗಿಡಲು? ಅವೋ ಒಂದೆರೆಡಲ್ಲಾ, ಟನ್ನುಗಳಷ್ಟು ಕನಸುಗಳು, ಹಿಡಿಸಲಾರದಷ್ಟು ಆಸೆಗಳು, ಜೊತೆಗೊಂದೆರೆಡು ಕಿಲೋಗಳಷ್ಟು ಸ್ವಾರ್ಥ, ಕೆಲವು ಲೀಟರಿನಷ್ಟು ದುಃಖ ಬೇರೆ.ಎಷ್ಟೆಂದು ಸಸಿಕೊಳ್ಳಲಿ ಇವನ್ನೆಲ್ಲಾ? ಇವುಗಳ ಸಂತೈಸುವ ಗೋಜಿನೊಳಗೆ ನನ್ನ ಸ್ವಂತದ ಕನಸುಗಳು ಕರಗಿವೆ, ಪ್ರೀತಿ ಮಾಯವಾಗಿದೆ, ದುಃಖವೂ ದೂರಾಗಿದೆ, ಸ್ವಾರ್ಥವೂ ಸಿಗದಾಗಿದೆ. ಥೇಟು ಬಾಡಿಗೆಗೆ ಬಿಟ್ಟ ಬಂಗಲೆಯಾಗಿದೆ ನನ್ನ ಹೃದಯವೆಂಬ ಪ್ರೇಮಮಂದಿರ.

ದೂರ್ವಾಸನ ಮಗಳು ನೀನು. ಪ್ರೀತಿ ಪ್ರೇಮದ ಅರ್ಥ ತಿಳಿಯದವಳು. ಅದನ್ನೊಂದು ಆಟದ ದಾಳವಾಗಿಸಿಕೊಂಡವಳು ನೀನು. ಪ್ರೀತಿಯ ಬೆಲೆ ತಿಳಿದ ದಿನ ನಿನಗೆ ಖಂಡಿತಾ ಪಾಪಪ್ರಜ್ಞೆ ಕಾಡಲಿದೆ. ರುಜುವಾತಾಗಲಿದೆ ಜಗತ್ತಿನೆದುರು ನಿನ್ನ ಸ್ವಾರ್ಥದ ಬದುಕು. ನಿಜವಾಗಿಯೂ ಹೃದಯವಂತೆ ನೀನು, ಆದರೆ ನಿನ್ನೊಳಗಿರುವ ಒಳಿತುಗಳ ಗುರುತಿಸಲಾರದೆ ಹೀಗಾಗಿದೆಯಷ್ಟೇ. ಈಗಲೂ ಒಂದು ಅವಕಾಶ ನೀಡುವೆ. ಪ್ರೀತಿಯ ಅಮೃತ ಪಾತ್ರೆಯಾಗಿಸುವೆ ನಿನ್ನನ್ನು. ಒಪ್ಪಿ ಬಂದುಬಿಡು, ಜೀವನ ಪೂರ್ತಿ ಜೊತೆಗಿರಲು ಕಾದಿಹೆ ನಾನು.

ಇಂತಿ ನಿನ್ನವ
ಪ.ನಾ.ಹಳ್ಳಿ.ಹರೀಶ್‌ ಕುಮಾರ್‌

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.