ನೆನಪುಗಳ ಜೊತೇನೇ ಬದುಕೋಕೆ ಆಗುತ್ತೇನೋ?


Team Udayavani, Oct 2, 2018, 6:00 AM IST

9.jpg

ಪ್ರತಿದಿನ ನಾವು ಕಾಲ್‌, ಮೆಸೇಜ್‌ ಮಾಡಿಕೊಳ್ಳುತ್ತಿರಬಹುದು. ಆದರೂ ಮನಸ್ಸಿಗೆಕೋ ತೃಪ್ತಿಯೇ ಸಿಗದು. ಫೋನ್‌ನಲ್ಲಿ ಎಷ್ಟೇ ಮಾತಾಡಿದರೂ, ಮೆಸೇಜ್‌ ಮಾಡಿದರೂ ನೀ ಎದುರಿಗೆ ಸಿಕ್ಕ ಹಾಗಲ್ಲ ನೋಡು. ನನ್ನ ಬದುಕು, ನನ್ನ ಉಸಿರು, ನನ್ನ ಭವಿಷ್ಯ, ನನ್ನ ಸಂತೋಷವೇ ನೀನಾಗಿರುವಾಗ ನಿನ್ನ ನೆನಪುಗಳಲ್ಲಿಯೇ ದಿನ ಕಳೆಯುವುದು ಹೇಗೆ?

 ಮನಸ್ಸೇಕೋ ನಿನ್ನನ್ನು ನೋಡಲೇಬೇಕೆಂದು ಹಠ ಹಿಡಿದಿದೆ. ಸಮಾಧಾನ ಹೇಳಿದಷ್ಟೂ ಮುನಿಸಿಕೊಳ್ಳುವ ಮನಸ್ಸು ನಿನ್ನಾಗಮನವನ್ನೇ ಎದುರು ನೋಡುತ್ತಿದೆ. ಮನದಂಗಳದಲ್ಲಿ ಹಚ್ಚಹಸಿರಾಗಿರುವ ನೆನಪುಗಳ ಮಧ್ಯೆ ಅದೆಷ್ಟು ದಿನ ಬದುಕಲಿಕ್ಕಾಗುತ್ತದೆ ಹೇಳು? ಆಗಾಗ ನಾನು ನಿನ್ನನ್ನು ನೋಡುತ್ತಿರಬೇಕು. ನಿನ್ನೊಡನೆ ಮುಗಿಯದಷ್ಟು ಮಾತಾಡುತ್ತಿರಬೇಕು. ಆ ಬಣ್ಣದ ಛತ್ರಿಯ ಅಡಿಯಲ್ಲಿ ನಿನ್ನೊಡನೆ ನಿಂತು ಮುಂಗಾರಿನ ಸ್ವಾದ ಸವಿಯಬೇಕು. ನಿನ್ನ ಪಕ್ಕಕ್ಕೆ ಬೆಚ್ಚನೆ ಕುಳಿತು ಬರುವ ಚಳಿಗಾಲವನ್ನು ಖುಷಿಯಿಂದ ಸ್ವಾಗತಿಸಬೇಕು. ತಂಪು ತಂಗಾಳಿಗೆ ನಾಚುವ ಮುಂಗುರುಳು ಮೆಲ್ಲನೇ ನಿನ್ನ ಹಣೆಗೆ ಮುತ್ತಿಡಬೇಕು. ನಿನ್ನ ತೋಳಿನಲಿ ನಾನು ಬಂಧಿಯಾಗಿರಬೇಕು. ನೀ ಎದುರಿಗೆ ಬಂದಾಗೆಲ್ಲಾ ಸಣ್ಣ ಕೋಪ, ಸಣ್ಣ ಹಠ ಮಾಡಿ ನಿನ್ನನ್ನು ಕಾಡುತ್ತಿರಬೇಕು. ಮನದಲ್ಲಿ ಮೂಡುತ್ತಿರುವ ಈ ಭಾವನೆಗಳಿಗೆಲ್ಲಾ 
ಸಾರಥಿಯಾಗಬೇಕಾದವನು ನೀನೇ!

  ಆದರೆ ನೀನು? ನಮ್ಮೂರು ಹಾಗಿರಲಿ, ನಮ್ಮ ರಾಜ್ಯದ ಗಡಿಯನ್ನೇ ದಾಟಿ ಆಚೆ ಹೋಗಿರುವೆಯಲ್ಲಾ. ನಿನ್ನನ್ನು ನೋಡಲು ಈ ಮನಸ್ಸು ಅದೆಷ್ಟು ದಿನದಿಂದ ಹಂಬಲಿಸುತ್ತಿದೆ ಗೊತ್ತಾ? ನಿನ್ನೊಂದಿಗೆ ಕಳೆಯಲೇಬೇಕಾದ ಮಧುರ ಕ್ಷಣಗಳು, ಹೇಳಲೇಬೇಕಾದ ಮಾತುಗಳು, ಮಾಡಲೇಬೇಕಾದ ತುಂಟಾಟಗಳು ಮನದಲ್ಲೀಗ ಸದ್ದು ಮಾಡಲು ಶುರು ಮಾಡಿವೆ. ನಿನ್ನನ್ನೊಮ್ಮೆ ಸ್ಪರ್ಶಿಸಬೇಕೆಂದು ಈ ಹೃದಯ ಕಾತರದಿಂದ ಕಾಯುತ್ತಿದೆ ಕಣೋ. 

ಪ್ರತಿದಿನ ನಾವು ಕಾಲ್‌, ಮೆಸೇಜ್‌ ಮಾಡಿಕೊಳ್ಳುತ್ತಿರಬಹುದು. ಆದರೂ ಮನಸ್ಸಿಗೆಕೋ ತೃಪ್ತಿಯೇ ಸಿಗದು. ಫೋನ್‌ನಲ್ಲಿ ಎಷ್ಟೇ ಮಾತಾಡಿದರೂ, ಮೆಸೇಜ್‌ ಮಾಡಿದರೂ ನೀ ಎದುರಿಗೆ ಸಿಕ್ಕ ಹಾಗಲ್ಲ ನೋಡು. ನನ್ನ ಬದುಕು, ನನ್ನ ಉಸಿರು, ನನ್ನ ಭವಿಷ್ಯ, ನನ್ನ ಸಂತೋಷವೇ ನೀನಾಗಿರುವಾಗ ನಿನ್ನ ನೆನಪುಗಳಲ್ಲಿಯೇ ದಿನ ಕಳೆಯುವುದು ಹೇಗೆ? ಕಣ್ಣಂಚಿಂದ ಕೆನ್ನೆಯ ಮೇಲೆ ಜಾರುವ ಕಣ್ಣೀರನ್ನು ಕೇಳು, ನನ್ನ ಕಷ್ಟವೇನೆಂದು. ಮುಸ್ಸಂಜೆಯಲಿ ಮೌನವಾಗಿ ಕುಳಿತರೆ, ಬೀಸುವ ತಂಗಾಳಿಯೂ ನಿನ್ನದೇ ಲೋಕಕ್ಕೆ ನನ್ನನ್ನು ಕರೆಯುತ್ತದೆ. ನಿನ್ನ ನೆನಪಿಂದಲೇ ದಿನ ಆರಂಭಿಸುತ್ತವೆ. ಸಿಹಿ ನಿದ್ದೆಯಲ್ಲೂ ಸೊಗಸಾದ ಒಂದು ಕನಸು ನನ್ನೊಳಗೆ ಪ್ರವೇಶಿಸುತ್ತದೆ. ನಿನ್ನೊಂದಿಗೆ ಕಳೆಯಬೇಕಾಗಿರುವ ಸುಂದರ ಕ್ಷಣಗಳನ್ನು ಕಣ್ಮುಂದೆ ತರುತ್ತದೆ.

 ಗಡಿದಾಟಿರುವ ಈ ಪ್ರೀತಿ, ನೆನಪುಗಳ ಕುರಿತು ಬರೆಯಲು ಹೋದರೆ ಸುಂದರ ಕಾವ್ಯ ಸೃಷ್ಟಿಯಾಗಿ ನನ್ನೊಳಗೊಬ್ಬ ಕವಿ ಉದಯಿಸಬಹುದೇನೋ! ಅದೇನೇ ಇರಲಿ, ಆದರೆ ನನಗೀಗ ನೀನು ಬೇಕೇಬೇಕು. ನಿನ್ನನ್ನು ನೋಡಲೇಬೇಕು ಅಷ್ಟೇ! ಈ ಶನಿವಾರದ ಸೂರ್ಯ ಮರೆಯಾಗುವ ಮುನ್ನ ನಿನ್ನ ಕೈ ನನ್ನ ಹೆಗಲಮೇಲಿರಲಿ.. 

ಇಂತಿ ,
ನಿನ್ನ ಮುದ್ದು ಗೊಂಬೆ.
ಜಯಶ್ರೀ ಎಸ್‌ ಕಾನಸೂರ್‌    

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.