ಆನೆಯ ಪ್ರತ್ಯುಪಕಾರ


Team Udayavani, Jun 22, 2019, 5:00 AM IST

1

ಏಳರ ಹರೆಯದ ಪುಟ್ಟ ಬಾಲಕ ಇಶಾನ್‌. ಅದೊಂದು ದಿನ ಆಟ ಆಡುತ್ತಾ ದಟ್ಟ ಕಾಡೊಳಗೆ ಬಂಧಿಯಾದ. ಹುಲಿಯೊಂದು ಅವನನ್ನು ತಿನ್ನಲು ಹೊಂಚು ಹಾಕಿತು. ಅವನು ಹೇಗೆ ಅದರಿಂದ ತಪ್ಪಿಸಿಕೊಂಡ ಗೊತ್ತೇ?

ಅದು ಸುಂದರ ಊರು. ಪಕ್ಕದಲ್ಲಿ ದಟ್ಟ ಕಾಡಿತ್ತು. ಕಾಡಿನಲ್ಲಿ ಸಮೃದ್ಧ ನೀರು, ಆಹಾರ ದೊರೆಯುವ ಕಾರಣ ಪ್ರಾಣಿ- ಪಕ್ಷಿಗಳು ಊರಿಗೆ ಬಂದು ತೊಂದರೆ ಕೊಡುತ್ತಿರಲಿಲ್ಲ. ಜನರೂ ಅಷ್ಟೇ ಕಾಡಿನ ತಂಟೆಗೆ ಹೋಗದೆ, ಮರ ಕಡಿಯದೆ ತಮ್ಮಷ್ಟಕ್ಕೆ ತಾವು ಬದುಕುತ್ತಿದ್ದರು. ಆ ಊರಿನ ಕೊನೆಯಲ್ಲಿ ಕಾಡಂಚಿಗೆ ತಾಗಿಕೊಂಡಿರುವ ಮನೆ ರಾಮುವಿನದ್ದು. ಕೂಲಿ ಕೆಲಸ ಮಾಡುವ ಆತನದ್ದು ಪತ್ನಿ ಗಿರಿಜಾ ಮತ್ತು ಏಳು ವರ್ಷದ ಪುತ್ರ ಇಶಾನ್‌ ಒಳಗೊಂಡ ಪುಟ್ಟ ಕುಟುಂಬ. ಇದ್ದುದರಲ್ಲಿ ತೃಪ್ತಿ ಕಾಣುವ ಮನಸ್ಥಿತಿ ಅವರದ್ದು. ಹೀಗಾಗಿ ಆನಂದದಿಂದ ಬದುಕುತ್ತಿದ್ದರು.

ಮಳೆಗಾಲದ ಒಂದು ದಿನ. ರಾತ್ರಿ ಇಡೀ ಜೋರು ಮಳೆ ಬಂದು ಬೆಳಗಿನ ಜಾವ ಬಿಟ್ಟಿತ್ತು. ಅಂಗಳದ ಅಂಚಿನಲ್ಲಿ ಮಳೆ ನೀರು ಇಂಗಲು ಮಾಡಿದ್ದ ಹೊಂಡದಿಂದ ಶಬ್ದ ಕೇಳಿಸಲಾರಂಭಿಸಿತು. ರಾಮು ಕುತೂಹಲದಿಂದ ಅತ್ತ ಹೋಗಿ ನೋಡಿದ. ಹೊಂಡದ ಕೆಸರಿನಲ್ಲಿ ಆನೆ ಮರಿಯೊಂದು ಸಿಲುಕಿ ಹೊರಬರಲಾರದೆ ಒದ್ದಾಡುತ್ತಿತ್ತು. ತಾಯಿ ಆನೆ ದಡದಲ್ಲಿ ನಿಂತು ಸೊಂಡಿಲು ಚಾಚುತ್ತಿದ್ದರೂ ಕಾಲು ಕೆಸರಿನಲ್ಲಿ ಹುದುಗಿ ಹೋಗಿದ್ದರಿಂದ ಮರಿಗೆ ಮೇಲೆ ಏಳಲು ಸಾಧ್ಯವಾಗುತ್ತಿರಲಿಲ್ಲ. ತಾಯಿ-ಮರಿಯ ಒದ್ದಾಟ ಕಂಡು ರಾಮುಗೆ ಕನಿಕರ ಮೂಡಿತು.

ಪತ್ನಿ, ಮಗನನ್ನು ಕರೆದು ಹಾರೆಯ ಸಹಾಯದಿಂದ ಕೆಸರು ಹೊರಗೆ ಹಾಕಿ ಸಾಹಸ ಮಾಡಿ ಆನೆ ಮರಿಯನ್ನು ಹೊಂಡದಿಂದ ಮೇಲೆತ್ತಿದರು. ಮರಿಯ ಕಾಲಿಗೆ ಗಾಯವಾಗಿತ್ತು. ಗಿರಿಜಾ ಒಂದೆರಡು ಮೂಲಿಕೆ ಅರೆದು ಹಚ್ಚಿದಳು. ತಾಯಿ ಆನೆ ಕೃತಜ್ಞತೆಯಿಂದ ಸೊಂಡಿಲು ಎತ್ತಿ ಮೂವರ ತಲೆ ಸವರಿತು. ಅನಂತರ ಮರಿಯನ್ನು ಕರೆದುಕೊಂಡು ಕಾಡಿನೊಳಗೆ ಹೊರಟು ಹೋಯಿತು.

ಸುಮಾರು ಆರು ತಿಂಗಳು ಕಳೆದಿರಬಹುದು. ಆ ದಿನ ಶಾಲೆಗೆ ರಜೆ ಇತ್ತು. ರಾಮು ಕೆಲಸಕ್ಕೆ ಹೋಗಿದ್ದ. ಗಿರಿಜಾ ಅಡುಗೆ ಕೆಲಸದಲ್ಲಿ ನಿರತಳಾಗಿದ್ದಳು. ಇಶಾನ್‌ ಆಡುತ್ತಾ ಕಾಡಿನೊಳಗೆ ಬಂದು ಬಿಟ್ಟ. ಹೊರ ಬರಲು ದಾರಿ ಸಿಗದೆ ಮತ್ತೂ ಮುಂದೆ ಹೋದ. ಹೀಗೆ ದಾರಿ ಹುಡುಕಿಕೊಂಡೇ ಕಾಡಿನ ಮಧ್ಯ ಭಾಗಕ್ಕೆ ತಲುಪಿದ್ದ. ದಟ್ಟ ಕಾಡದು. ಇನ್ನು ಎತ್ತ ಸಾಗಬೇಕೆಂದೇ ಇಶಾನ್‌ಗೆ ತಿಳಿಯದಾಯಿತು. ಪ್ರಾಣಿ- ಪಕ್ಷಿಗಳ ಕೂಗು, ಕತ್ತಲು, ದೈತ್ಯಾಕಾರದ ಮರ- ಇವೆಲ್ಲವೂ ಪುಟ್ಟ ಇಶಾನ್‌ನಲ್ಲಿ ಭಯ ಹುಟ್ಟಿಸುತ್ತಿದ್ದವು. ಮನೆ ಬಿಟ್ಟು ಅದಾಗಲೆ ನಾಲ್ಕು- ಐದು ಗಂಟೆ ಮೇಲಾಗಿತ್ತು. ಹಸಿವು ಬೇರೆ ಕಾಡುತ್ತಿತ್ತು. ಒಟ್ಟಿನಲ್ಲಿ ಇಶಾನ್‌ ಕಂಗಾಲಾಗಿದ್ದ. ಪುಟ್ಟ ತೊರೆಯೊಂದರ ಬಳಿ ದಾರಿ ತೋಚದೆ ಸುಸ್ತಾಗಿ ನಿಂತಿದ್ದ.

ಆಗಲೇ ಅಲ್ಲಿಗೆ ನೀರು ಕುಡಿಯಲು ಅಂದು ಇಶಾನ್‌ ಮನೆಯವರು ಕಾಪಾಡಿದ್ದ ಆನೆ ಮರಿ ಬಂತು. ಇಶಾನ್‌ನನ್ನೂ ಗುರುತು ಹಿಡಿದ ಅದು ಸಂಭ್ರಮದಿಂದ ದುಡು ದುಡು ಓಡಿಬಂದು ಸೊಂಡಿಲಿನಿಂದ ಇಶಾನ್‌ನನ್ನು ತಬ್ಬಿಕೊಂಡಿತು. ಅನೇಕ ದಿನಗಳ ಅನಂತರ ಸ್ನೇಹಿತನೊಬ್ಬ ಸಿಕ್ಕಷ್ಟೇ ಖುಷಿಯಾಗಿತ್ತು ಆ ಪುಟ್ಟ ಜೀವಕ್ಕೆ. ಇಶಾನ್‌ಗೂ ನೆಮ್ಮದಿ ಎನಿಸಿತು. ಅಪರಿಚಿತ ಸ್ಥಳದಲ್ಲಿ ನಮ್ಮವನೊಬ್ಬ ಸಿಕ್ಕಿದರೆ ಆಗುವ ನೆಮ್ಮದಿ ಭಾವವೇ ಅವನ ಮನದಲ್ಲೂ ಮೂಡಿತು.

ಮನುಷ್ಯರ ವಾಸನೆ ಗ್ರಹಿಸಿ ಅತ್ತ ಬಂದ ಹುಲಿಗೆ ಇಶಾನ್‌ ಕಣ್ಣಿಗೆ ಬಿದ್ದ. ಅವನ ಮೇಲೆರಗಲು ಪೊದೆಯ ಹಿಂದೆ ಅಡಗಿ ಕುಳಿತು ಸ್ವಲ್ಪ ಹೊತ್ತಿನಿಂದ ಹೊಂಚು ಹಾಕುತ್ತಿತ್ತು. ಇಶಾನ್‌ ಒಬ್ಬನೇ ಇದ್ದಿದ್ದು ಹುಲಿಗೆ ಸಮಾಧಾನ ತಂದಿತ್ತು. ಆದರೆ ಇದ್ದಕ್ಕಿದ್ದಂತೆ ಆನೆ ಮರಿ ಇಶಾನ್‌ಗೆ ಅಂಟಿಕೊಂಡಿದ್ದು ನೋಡಿ ಅದಕ್ಕೆ ಕೋಪ ಬಂತು. ಅಸಹನೆಯಿಂದ ಪೊದೆಯಿಂದ ಆಚೆ ಬಂತು. ದೈತ್ಯ ವ್ಯಾಘ್ರನನ್ನು ನೋಡಿ ಇಶಾನ್‌ ಬೆಚ್ಚಿಬಿದ್ದ. ಅದು ಒಂದೊಂದೇ ಹೆಜ್ಜೆ ಇಟ್ಟು ಮುಂದೆ ಬರತೊಡಗಿತು. ಆನೆ ಮರಿಗೂ ಬೃಹತ್‌ ಹುಲಿಯೊಂದಿಗೆ ಹೋರಾಡಲು ಸಾಧ್ಯವಿಲ್ಲ ಎನಿಸಿ ಸೊಂಡಿಲು ಮೇಲೆತ್ತಿ ಳಿಟ್ಟಿತ್ತು.

ಅಲ್ಲೇ ಹತ್ತಿರದಲ್ಲಿ ಸೊಪ್ಪು ತಿನ್ನುತ್ತಿದ್ದ ತಾಯಿ ಆನೆಗೆ ಮರಿಯ ಅಪಾಯದ ಕೂಗು ಕೇಳಿಸಿ ಓಡಿ ಬಂತು. ತನ್ನ ಮರಿಯೊಂದಿಗಿದ್ದ ಇಶಾನ್‌ನನ್ನು ನೋಡಿ ಅದಕ್ಕೆ ಸಂತಸವಾಯಿತು. ತತ್‌ಕ್ಷಣ ಅದಕ್ಕೆ ಮುಂದೆ ಇದ್ದ ಹುಲಿ ಕಾಣಿಸಿತು. ಮುಂದಕ್ಕೆ ಧಾವಿಸಿದ ಆನೆ ತನ್ನ ಸೊಂಡಿಲು ಚಾಚಿ ಹುಲಿಯನ್ನು ಬಿಗಿದು ದೂರಕ್ಕೆ ಎಸೆಯಿತು. ತರಚಿದ ಗಾಯವಾದ ಹುಲಿ ನೋವಿನಿಂದ ನರಳಿ ಕಾಡಿನ ಮಧ್ಯೆ ಓಡಿ ಹೋಯಿತು.
ಆನೆಗೆ ಇಶಾನ್‌ನ ಮುಖ ನೋಡಿ ಅವನ ಪರಿಸ್ಥಿತಿ ಅರ್ಥವಾಯಿತು. ಅವನು ಹಸಿದಿದ್ದಾನೆಂದು ಗ್ರಹಿಸಿ ಒಂದಷ್ಟು ಹಣ್ಣುಗಳನ್ನು ತಂದು ಗುಡ್ಡೆ ಹಾಕಿತು. ಅದನ್ನು ತಿಂದು ನೀರು ಕುಡಿದ ಇಶಾನ್‌ಗೆ ಹೋದ ಜೀವ ಬಂದಂತಾಯಿತು. ಅನಂತರ ಅವನನ್ನು ಬೆನ್ನ ಮೇಲೆ ಕುಳ್ಳಿರಿಸಿ ಆನೆ ತನ್ನ ಮರಿಯೊಂದಿಗೆ ಊರಿನ ಕಡೆ ಹೆಜ್ಜೆ ಹಾಕಿತು.

ಇತ್ತ ಇಶಾನ್‌ ಕಾಣದೆ ರಾಮು ಮತ್ತು ಗಿರಿಜಾ ಕಂಗಾಲಾಗಿ ಕುಳಿತಿದ್ದರು. ಆನೆಯೊಂದಿಗೆ ಮಗ ಬಂದಿದ್ದು ನೋಡಿ ಅವರಿಗೆ ಸಮಾಧಾನವಾಯಿತು. ಆನೆಯನ್ನು ತಬ್ಬಿ ಕೃತಜ್ಞತೆ ಸಲ್ಲಿಸಿದರು.

-   ರಮೇಶ್‌ ಬಳ್ಳಮೂಲೆ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.