ಹಣ್ಣಿನ ಚೀಲ


Team Udayavani, Apr 4, 2019, 6:00 AM IST

Chinnari-Hannina-Bag

ಒಂದು ಊರಿನಲ್ಲಿ ಒಬ್ಬ ರಾಜನಿದ್ದನು. ಅವನಿಗೆ ಮೂರು ಜನ ಮಂತ್ರಿಗಳು. ಅವರೆಲ್ಲರಿಗೂ ಬೇರೆ ಬೇರೆ ಜವಾಬ್ದಾರಿಗಳಿದ್ದವು. ಮೊದಲ ಮಂತ್ರಿಯು ರಾಜನು ನೋಡಲಿ ಬಿಡಲಿ ತನ್ನ ಕೆಲಸವನ್ನು ನಿಯತ್ತಿನಿಂದ ಮಾಡುತ್ತಿದ್ದನು. ಎರಡನೆಯ ಮಂತ್ರಿ, ರಾಜನು ನೋಡುತ್ತಾನೆ ಎಂದು ತಿಳಿದಾಗ ಮಾತ್ರ ಚೆನ್ನಾಗಿ ಕೆಲಸ ಮಾಡುತ್ತಿದ್ದ. ಮೂರನೆಯ ಮಂತ್ರಿ ಚೆನ್ನಾಗಿ ಕೆಲಸ ಮಾಡುತ್ತಿರಲಿಲ್ಲ.

ಒಂದು ಸಲ ರಾಜನು ಮೂರು ಜನ ಮಂತ್ರಿಗಳನ್ನೂ ಕರೆದು ನೀವೆಲ್ಲಾ ಕಾಡಿಗೆ ಹೋಗಿ ಒಂದು ಚೀಲದ ತುಂಬ ಹಣ್ಣುಗಳನ್ನು ಕಿತ್ತುಕೊಂಡು ಬರಬೇಕು ಎಂದು ಆಜ್ಞೆ ಮಾಡಿದನು. ಅದರಂತೆ ಮೂರು ಜನರೂ ಕಾಡಿಗೆ ತೆರಳಿ ಹಣ್ಣುಗಳನ್ನು ಕೀಳತೊಡಗಿದರು. ಮೊದಲ ಮಂತ್ರಿಯು ಚೀಲದ ತುಂಬಾ ಹಣ್ಣು ಕಿತ್ತುಕೊಂಡು ಚೀಲದಲ್ಲಿ ತುಂಬಿಕೊಂಡು ಹೊರಟನು. ಎರಡನೆಯ ಮಂತ್ರಿ ಸ್ವಲ್ಪ ಮೈಗಳ್ಳನಾಗಿ­ದ್ದರಿಂದ ರಾಜನು ಚೀಲವನ್ನು ಪೂರ್ತಿಯಾಗಿ ಪರೀಕ್ಷಿಸುವು­ದಿಲ್ಲವೆಂದು ಚೀಲದ ತಳಭಾಗದಲ್ಲಿ ಗಿಡದ ಎಲೆ, ಕಸ ಮುಂತಾದ ತ್ಯಾಜ್ಯಗಳನ್ನು ತುಂಬಿ ಮೇಲ್ಭಾಗದಲ್ಲಿ ಮಾತ್ರ ಹಣ್ಣು­ಗಳನ್ನು ಕಿತ್ತು ತುಂಬಿದನು. ಮೂರನೆಯ ಮಂತ್ರಿ ತುಂಬಾ ಸೋಮಾರಿಯಾ ಗಿದ್ದರಿಂದ ಅವನು ಚೀಲ ಪೂರ್ತಿ ಗಿಡದ ಎಲೆ, ಕಸ ಮುಂತಾದವನ್ನು ತುಂಬಿಕೊಂಡು ಅರಮನೆಗೆ ಬಂದನು.

ಮೂರು ಮಂತ್ರಿಗಳನ್ನೂ ನೋಡಿದ ರಾಜನು, ಅವರು ತಂದ ಚೀಲದ ಸಮೇತ ಬಂಧಿಸಿ ಸೆರೆಮನೆಗೆ ಕಳುಹಿಸಿ ಎಂದು ಆಜ್ಞೆ ಮಾಡಿದನು. ಅದರಂತೆ ಮೂರು ಮಂತ್ರಿಗಳನ್ನು ಒಂದು ತಿಂಗಳ ಕಾಲ ಪ್ರತ್ಯೇಕ ಬಂದೀಖಾನೆಗಳಲ್ಲಿ ಇಡಲಾಯಿತು. ಒಂದು ತಿಂಗಳ ನಂತರ ರಾಜನು ಮಂತ್ರಿಗಳನ್ನು ಕರೆದುಕೊಂಡು ಬರಲು ಸೈನಿಕರಿಗೆ ತಿಳಿಸಿದನು. ಮೊದಲ ಮಂತ್ರಿಯು ತಾನು ತಂದ ಚೀಲದಲ್ಲಿನ ಹಣ್ಣುಗಳನ್ನು ದಿನಾಲೂ ಸೇವಿಸುತ್ತಾ ಚೆನ್ನಾಗಿಯೇ ಆರೋಗ್ಯ ಕಾಪಾಡಿಕೊಂಡಿದ್ದನು. ಎರಡನೆಯ ಮಂತ್ರಿಯ ಬಳಿ ಅರ್ಧ ಚೀಲ ಮಾತ್ರ ಹಣ್ಣಿದ್ದರಿಂದ ಬಹಳ ಬೇಗ ಅವೆಲ್ಲಾ ಖಾಲಿಯಾಗಿ ಕೃಶ ಶರೀರದವನಾಗಿದ್ದನು. ಮೂರನೆಯ ಮಂತ್ರಿಯ ಚೀಲದಲ್ಲಿ ಹಣ್ಣೇ ಇರಲಿಲ್ಲವಾದ್ದರಿಂದ ಆತ ಬಂದೀಖಾನೆಯಲ್ಲಿ ಹಸಿವಿನಿಂದ ಇನ್ನೇನು ಸತ್ತುಹೋಗುವಂತಿದ್ದನು. ಮಂತ್ರಿಗಳಿಗೆ ರಾಜನ ಸಂದೇಶ ಅರ್ಥವಾಗಿತ್ತು.

– ವೀರೇಶ್‌ ಎಸ್‌. ಭದ್ರಶೆಟ್ಟಿ, 9ನೇ ತರಗತಿ, ಸಂಯುಕ್ತ ಕ್ರೀಡಾ ವಸತಿ ಶಾಲೆ, ಚಂದರಗಿ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.