ಎಲ್ಲರಿಗೂ ಇಷ್ಟ ಆನೆ ಸವಾರಿ!


Team Udayavani, Oct 25, 2018, 6:45 AM IST

shutterstock13766548.jpg

ಒಂದು ಕಾಡಿನಲ್ಲಿ ಆನೆಯೊಂದಿತ್ತು. ದಿನಾಲೂ ನೀರನ್ನು ಕುಡಿಯಲು ಸಮೀಪದ ಕೊಳಕ್ಕೆ ಹೋಗುತ್ತಿತ್ತು. ನೀರು ಕುಡಿದ ಮೇಲೆ ಸಂಗಡಿಗರೊಂದಿಗೆ ಕೊಳದಲ್ಲಿ ಈಜುತ್ತಿತ್ತು. ಅಲ್ಲೊಂದು ಕಪ್ಪೆ ವಾಸವಾಗಿತ್ತು. ಆನೆ ನೀರು ಕುಡಿದು ಈಜಾಡುವುದನ್ನು ಅದು ದಿನವೂ ನೋಡುತ್ತಿತ್ತು. ಅದಕ್ಕೆ ಒಂದು ಆಸೆಯಾಯಿತು. ಒಮ್ಮೆಯಾದರೂ ಆನೆಯ ಬೆನ್ನನ್ನೇರಿ ಸವಾರಿ ಮಾಡಬೇಕೆಂಬ ಆಸೆ. ಆದರೆ ಅದಕ್ಕೆ ಆನೆಯನ್ನು ಕೇಳಲು ಭಯ. ಒಂದು ದಿನ ಧೈರ್ಯ ಮಾಡಿ ಕೇಳಿಯೇಬಿಟ್ಟಿತು: “ಆಯ್ನಾ ಆನೆ ನನ್ನದೊಂದು ಕೋರಿಕೆ ಇದೆ. ಸಾಯುವ ಮೊದಲು ನಿನ್ನ ಬೆನ್ನನ್ನು ಏರಿ ಕಾಡಿನಲ್ಲಿ ಸವಾರಿ ಮಾಡಬೇಕು’. ಆನೆಗೆ ಕಪ್ಪೆಯ ಮೇಲೆ ಕನಿಕರ ಪಟ್ಟು ಅಷ್ಟೇ ತಾನೇ ಎಂದು ಅನುಮತಿ ನೀಡಿತು.

ಒಂದೊಳ್ಳೆಯ ದಿನ ನೋಡಿ ಆನೆ, ಕಪ್ಪೆ ಬಳಿಗೆ ಬಂದಿತು. ಕಪ್ಪೆಯ ಮುಂದೆ ಮಂಡಿಯೂರಿ ನೆಲದತ್ತ ಬಾಗಿತು. ಕಪ್ಪೆ ಆನೆಯ ಬೆನ್ನ ಮೇಲೆ ಹಾರಿತು. ಆನೆ ಕಪ್ಪೆಯನ್ನು ಸವಾರಿ ಕರೆದೊಯ್ಯಿತು. ಕಡೆಗೂ ಕಪ್ಪೆಯ ಬಹುದಿನಗಳ ಕನಸು ನೆರವೇರಿತ್ತು. ಆನೆ ಮತ್ತೆ ಕೊಳದ ಬಳಿ ತಂದುಬಿಟ್ಟಿತು. ಆದರೆ ಕಪ್ಪೆಗೆ ಆನೆಯ ಬೆನ್ನ ಮೇಲಿನ ಸವಾರಿ ತುಂಬಾ ಹಿಡಿಸಿತ್ತು. ಅದು ಕೆಳಕ್ಕಿಳಿಯಲು ಒಪ್ಪಲಿಲ್ಲ. ಆನೆ ಕಪ್ಪೆಯನ್ನು ಎಷ್ಟು ಕೇಳಿಕೊಂಡರೂ ಕಪ್ಪೆ ಹಿಡಿದ ಹಠವನ್ನು ಬಿಡಲಿಲ್ಲ. ಆನೆಗೆ ಸಿಟ್ಟು ಬಂದು ಸೊಂಡಿಲಿನಲ್ಲಿ ಕಪ್ಪೆಯನ್ನು ಬೀಳಿಸಲು ಯತ್ನಿಸಿತು. ಆದರೆ ಆಗಲಿಲ್ಲ. ಕಡೆಗೆ ಒಂದುಪಾಯ ಮಾಡಿತು. ದಾರಿಯಲ್ಲಿ ಸಿಕ್ಕ ಹಾವನ್ನು ತನಗೆ ಸಹಾಯ ಮಾಡುವಂತೆ ಕೇಳಿಕೊಂಡಿತು. ಹಾವು ಆನೆಯ ಬೆನ್ನನ್ನೇರಿತು. ಹಾವನ್ನು ನೋಡುತ್ತಲೇ ದಿಗಿಲು ಬಿದ್ದ ಕಪ್ಪೆ ಜಾಗ ಖಾಲಿ ಮಾಡಿತು. 

ಅದು ಆನೆಯನ್ನು ಸವಾರಿ ಮಾಡಿಸುವಂತೆ ಕೇಳಿಕೊಂಡಿತು. ಕಪ್ಪೆಯನ್ನು ಓಡಿಸಿ ಸಹಾಯ ಮಾಡಿದ್ದರಿಂದ ಆನೆ ಅದರ ಕೋರಿಕೆಯನ್ನು ಮನ್ನಿಸಿತು. ಸವಾರಿ ಮುಗಿಯುವಷ್ಟರಲ್ಲಿ ಹಾವಿಗೆ ಆನೆಯ ಬೆನ್ನು ತುಂಬಾ ಹಿಡಿಸಿತ್ತು. ಅದು ಮೆತ್ತನೆಯ ಹಾಸಿಗೆಯಂತೆ ತೋರಿತ್ತು. ಹೀಗಾಗಿ ಹಾವು ಕೂಡಾ ಬೆನ್ನ ಮೇಲಿಂದ ಕೆಳಕ್ಕಿಳಿಯಲು ಒಪ್ಪಲಿಲ್ಲ. ಇದ್ಯಾವ ಗ್ರಹಚಾರವೆಂದು ಆನೆ ಹಣೆ ಚಚ್ಚಿಕೊಂಡಿತು. ಅದೇ ಸಮಯಕ್ಕೆ ಮುಂಗುಸಿಯೊಂದು ಬಂದಿತು. ಹಾವು ಮುಂಗುಸಿಯ ಶತ್ರುವಾಗಿದ್ದರಿಂದ ಆನೆ ಅದರ ಸಹಾಯ ಕೋರಿತು. ಮುಂಗುಸಿ ಒಂದೇ ಏಟಿಗೆ ಆನೆಯ ಬೆನ್ನನ್ನೇರಿದ ಮರುಕ್ಷಣವೇ ಹಾವು ಕೆಟ್ಟೆನೋ ಬಿಟ್ಟೆನೋ ಎಂದು ಸರಸರನೆ ಪಲಾಯನಗೈದಿತು. 

ಆನೆಗೆ ನೆಮ್ಮದಿಯಾಯಿತು. ಆದರೆ ಅದರ ನೆಮ್ಮದಿ ಬಹಳ ಕಾಲ ಉಳಿಯಲಿಲ್ಲ. ಆನೆಯ ಗ್ರಹಾಚಾರಕ್ಕೆ ಮುಂಗುಸಿ ಕೂಡಾ ಕೆಳಕ್ಕಿಳಿಯಲಿಲ್ಲ. ಆನೆಯ ಬೆನ್ನ ಮೇಲೆಯೇ ಅದೂ ಲಂಗರು ಹಾಕಿತು. ಮುಂಗುಸಿಯನ್ನು ಕೆಳಗಿಳಿಸಲು ಆನೆ ತನ್ನ ಕೈಲಾದ ಪ್ರಯತ್ನವನ್ನೆಲ್ಲಾ ಮಾಡಿ ನೋಡಿತು. ಅದೆಲ್ಲವೂ ನಿರರ್ಥಕ ಎಂದು ಆನೆಗೆ ಅನಿಸಿದಾಗ ಅದು ಕೆಂಡಾಮಂಡಲವಾಯಿತು. ನಾಯಿಯೊಂದು ಅಲೆಯುತ್ತಾ ಆ ದಾರಿಯಾಗಿ ಬಂದಿತು. ಆನೆ, ನಾಯಿಯನ್ನು ಸಹಾಯ ಮಾಡುವಂತೆ ಕೇಳಿಕೊಂಡಿತು. ನಾಯಿ ಬೊಗಳಿ ಬೊಗಳಿ ದಂತಕೋರೆಗಳನ್ನು ಪ್ರದರ್ಶಿಸಿ ಮುಂಗುಸಿಯನ್ನು ಹೆದರಿಸಿತು. ಮುಂಗುಸಿಯೂ ಅಲ್ಲಿಂದ ಓಡಿ ಹೋಯಿತು. ಈಗ ಮುಂಗುಸಿಯ ಸ್ಥಾನವನ್ನು ನಾಯಿ ಅಲಂಕರಿಸಿತು. ರಾಜಾರೋಷವಾಗಿ ಆನೆಯ ಬೆನ್ನ ಮೇಲೆ ಸವಾರಿ ಮಾಡಿತು. 

ಆನೆಯ ಬೆನ್ನ ಮೇಲೆ ಕೂತಾಗ ಇತರೆ ಪ್ರಾಣಿಗಳು ತನ್ನನ್ನು ಗೌರವಯುತವಾಗಿ ಕಾಣುವುದನ್ನು ನಾಯಿ ಗಮನಿಸಿತು. ಹೀಗಾಗಿ ಅದು ಕೂಡಾ ಅಲ್ಲಿಂದ ಕಾಲೆ¤ಗೆಯಲು ಒಪ್ಪಲಿಲ್ಲ. ಆನೆಗೆ ಯಾಕೋ ಇದು ಅತಿಯಾಯಿತು ಎಂದೆನಿಸಿತು. ಯಾರ ಸಹಾಯವನ್ನು ಕೇಳಲೂ ಹಿಂದೆಗೆಯಿತು. ನಾಯಿಯನ್ನು ಬೆನ್ನ ಮೇಲಿಂದ ಓಡಿಸಲು ಉಪಾಯ ಹೊಳೆಯಿತು. ಆನೆ ಕೊಳದ ಬಳಿ ಬಂದಿತು. ಅದಕ್ಕೆ ನಾಯಿಯ ದೌರ್ಬಲ್ಯ ಗೊತ್ತಿತ್ತು. ನಾಯಿಗೆ ನೀರನ್ನು ಕಂಡರೆ ಆಗುತ್ತಿರಲಿಲ್ಲ. ಆನೆ ಕೊಳದಲ್ಲಿ ಎರಡು ಮೂರು ಡುಬಿ ಹೊಡೆಯಿತು. ಜನ್ಮದಲ್ಲಿ ಮೈಗೆ ನೀರು ಸೋಕಿಸಿಕೊಳ್ಳದ ನಾಯಿ ಬೊಬ್ಬೆ ಹೊಡೆಯುತ್ತಾ ಕೊಳದಿಂದ ಎದ್ದು ಓಡಿ ಹೋಯಿತು. ಆನೆ ಕಡೆಗೂ ನಿಟ್ಟುಸಿರು ಬಿಟ್ಟಿತು. ಸಂಗಡಿಗರೆಲ್ಲ ಅದರ ಬುದ್ಧಿವಂತಿಕೆಗೆ ಬೆನ್ನುತಟ್ಟಿದವು. 

-ಮೇಘನಾ, ಮಂಗಳೂರು

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.