ಕಾಡಜ್ಜನ ಕಾಡು


Team Udayavani, Jan 9, 2020, 4:06 AM IST

6

ಕಾಡಿಗೆ ಅಂಟಿಕೊಂಡೇ ಇದ್ದ ಒಂದು ಪುಟ್ಟ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಕಾಡಜ್ಜ ಸೌದೆ ಮಾರಿ ಜೀವನ ಸಾಗಿಸುತ್ತಿದ್ದ. ಅದರಲ್ಲಿಯೇ ಸ್ವಲ್ಪ ಹಣ ಉಳಿಸಿ ಸಸಿಗಳನ್ನು ತಂದು ನೆಡುತ್ತಿದ್ದ. ತಂದು ನೆಟ್ಟ ಗಿಡಗಳು ಬೆಳೆದು ಕಾಡನ್ನು ಸಮೃದ್ಧಗೊಳಿಸಿತ್ತು. ಇದ್ದಕ್ಕಿದ್ದಂತೆ ಅರಣ್ಯ ಇಲಾಖೆ ಈ ಕಾಡನ್ನು ರಕ್ಷಿತಾರಣ್ಯವೆಂದು ಘೋಷಣೆ ಮಾಡಿತು. ಗಿಡಮರಗಳನ್ನು ಕಡಿಯದಂತೆ ಕಟ್ಟುನಿಟ್ಟಾದ ನಿಯಮದಿಂದ ಕಾಡಜ್ಜನ ಕೈಕಟ್ಟಿ ಹಾಕಿದಂತಾಯಿತು.

ಹೇಗೋ ಸಂಗ್ರಹದಲ್ಲಿ ಒಣಗಿಸಿಟ್ಟಿದ್ದ ಸೌದೆಯನ್ನು ಮಾರಿ ಕೆಲದಿನಗಳನ್ನು ದೂಡಿದ. ವಾರ ಕಳೆದಂತೆ ಕಾಡಜ್ಜನಿಗೆ ಅನ್ನ ನೀರಿಗಾಗಿ ಬವಣೆಯಾಯಿತು. ಗುಡಿಸಲಿನ ಬಿದಿರು ಗೊಡೆಗೆ ಒರಗಿ ಆಕಾಶಕ್ಕೆ ಉಸಿರು ಚೆಲ್ಲಿ ಕುಳಿತಿದ್ದ ಕಾಡಜ್ಜನಿಗೆ ತಾನೇ ಬೆಳೆಸಿದ ಮಾವಿನ ಮರ ಮತ್ತು ಬೇವಿನ ಮರಗಳ ಟೊಂಗೆಗಳು ಕಂಡವು. ಆ ಎರಡು ಮರಗಳು ಗುಡಿಸಲಿನ ಎಡಬಲಕ್ಕಿದ್ದವು. ಮರುದಿನ ಗುರುವಾರವೆಂಬುದು ಹಾಗೂ ಆ ದಿನ ಸಂತೆ ಎಂಬುದೂ ತಕ್ಷಣ ಹೊಳೆಯಿತು. ಸಂತೆಯ ದಿನ ಎಲ್ಲ ವಹಿವಾಟಿನಂತೆ ಸೌದೆ ವ್ಯಾಪಾರವೂ ಜೋರಾಗಿಯೇ ಇರುತ್ತಿತ್ತು.

ಎಲೆಗಳೆಲ್ಲ ಉದುರಿ ಬೋಳಾಗಿದ್ದ ಬೇವಿನ ಮರದ ಟೊಂಗೆಯನ್ನು ಕಡಿಯುವುದೋ ಮುಂಬರುವ ದಿನಗಳ ನಂತರ ಹಣ್ಣು ಕೊಡುವ ಮಾವಿನಮರದ ಟೊಂಗೆಯನ್ನು ಕಡಿಯುವುದೋ ಅಂದುಕೊಳ್ಳುತ್ತಾ ಕೊಡಲಿ ಮಸೆಯುತ್ತಿದ್ದ. ಇದನ್ನು ಗಮನಿಸಿದ ಬೇವಿನ ಮರ ಎಲ್ಲಿ ತನ್ನನ್ನೇ ಮೊದಲು ಕಡಿದುಬಿಡುತ್ತಾನೇನೊ ಎಂಬ ಭಯದಿಂದ “ಕಾಡಜ್ಜ ನನ್ನನ್ನು ಕಡಿಯಬೇಡ, ಚಳಿಗಾಲದಲ್ಲಿ ಎಲೆಗಳು ಉದುರುವುದು ಸಹಜ ಅಲ್ಲವೇ? ಇನ್ನು ಕೆಲವೇ ದಿನಗಳಲ್ಲಿ ಹಚ್ಚಹಸಿರು ತುಂಬಿಕೊಂಡು ಬಿಸಿಲು ಕಾಲಕ್ಕೆ ನಿನಗೆ ನೆರಳಾಗುತ್ತೇನೆ. ಆ ಮಾವಿನಮರವನ್ನೇ ಕಡಿದು ಬಿಡು’ ಎಂದಿತು. ತಕ್ಷಣವೇ ಮಾತನಾಡಿದ ಮಾವಿನಮರ “ಅಜ್ಜ ನಾನು ಹಣ್ಣನ್ನೂ ನೆರಳನ್ನೂ ಕೊಡುತ್ತೇನೆ ಆ ಬೇವಿನಮರವನ್ನೇ ಕಡಿ’ ಎಂದು ಚುಟುಕಾಗಿ ಹೇಳಿ ಸುಮ್ಮನಾಯಿತು.

ನನ್ನ ಹೊಟ್ಟೆಪಾಡಿಗೆ ಪ್ರಕೃತಿಯನ್ನು ಕಾಪಾಡುತ್ತಿರುವ ಈ ಮರಗಳನ್ನಾದರೂ ಯಾಕೆ ಕಡಿಯಲಿ ಎಂದು ಹೇಳಿ ತನ್ನ ಕೊಡಲಿಯನ್ನೇ ಸಂತೆಯಲ್ಲಿ ಮಾರಿದನು. ಹೊಟ್ಟೆಪಾಡಿಗೆ ಏನು ಮಾಡುವುದೆಂದು ಯೋಚಿಸುತ್ತಿದ್ದಾಗ ಕಾಡು ನೋಡಲೆಂದು ಪ್ರವಾಸ ಬಂದಿದ್ದ ಶಾಲಾಮಕ್ಕಳ ಗುಂಪು ಕಂಡಿತು. ಅವರು ಗೈಡನ್ನು ಹುಡುಕುತ್ತಿದ್ದರು. ಕಾಡಜ್ಜ ಅವರಿಗೆ ಗೈಡಾದ. ಅಂದಿನಿಂದ ಕಾಡಿನಲ್ಲಿ ಮರಗಳ ಪರಿಚಯ ಮಾಡಿಕೊಂಡು ತನ್ನ ಬದುಕನ್ನು ಕಂಡುಕೊಂಡ.

– ಸೋಮು ಕುದರಿಹಾಳ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.