ದೇವರು ಬಿತ್ತಿದ ಕಾಳು


Team Udayavani, Mar 12, 2020, 5:18 AM IST

farmer

ಮಲೆನಾಡಿನ ಒಂದು ಸುಂದರ ಹಳ್ಳಿ ಸೋಮನಾಥಪುರ. ಅಲ್ಲಿನ ಸೋಮನಾಥ ದೇವಾಲಯವು ಸುತ್ತಲೂ ಪ್ರಸಿದ್ಧಿ ಪಡೆದಿತ್ತು. ಸೋಮನಾಥಪುರ ನದಿಯ ದಂಡೆಯ ಮೇಲೆ ಇದ್ದುದರಿಂದ ಆ ಊರವರಿಗೆ ನೀರಿನ ಕೊರತೆ ಇರಲಿಲ್ಲ. ಸೋಮನಾಥ ಎಂಬ ರೈತ ಆ ಹಳ್ಳಿಯಲ್ಲಿ ವಾಸವಾಗಿದ್ದನು. ಅವನು ತನ್ನ ಹೊಲಗದ್ದೆಗಳನ್ನು ನದಿಯ ದಂಡೆಯ ಮೇಲೆ ಹೊಂದಿದ್ದರಿಂದ ಅವನ ವ್ಯವಸಾಯಕ್ಕೆ ನೀರಿನ ಕೊರತೆ ಇರಲಿಲ್ಲ. ವರ್ಷಪೂರ್ತಿ ವಿವಿಧ ಬೆಳೆಗಳನ್ನು ಬೆಳೆದು ಸಂತೋಷದಿಂದ ಜೀವನ ಸಾಗಿಸುತ್ತಿದ್ದನು.

ಸೋಮನಾಥನು ತುಂಬಾ ಲೋಭಿಯಾಗಿದ್ದನು. ತಾನು ಬೆಳೆದ ಕಾಳು ಕಡ್ಡಿಗಳನ್ನು ದಾನವಾಗಿ ಯಾರಿಗೂ ನೀಡುತ್ತಿರಲಿಲ್ಲ. ತಾನು ಬೆಳೆದುದನ್ನೆಲ್ಲ ಮನೆಯೊಳಗೆ ಬಚ್ಚಿಡುತ್ತಿದ್ದನು. ಒಮ್ಮೆ ಸೋಮನಾಥಪುರಕ್ಕೆ ಬರಗಾಲ ಆವರಿಸಿದಾಗ ಕೆಲ ಜನರು ಸೋಮನಾಥನ ಸಹಾಯ ಕೋರಿ ಬಂದರು. ಅವರಿಗೆ ಸೋಮನಾಥನು ಸಂಗ್ರಹಿಸಿದ್ದ ಆಹಾರದಲ್ಲಿ ಒಂದಷ್ಟು ಪಾಲು ಬೇಕಿತ್ತು. ಆದರೆ, ಸೋಮನಾಥನು ತಾನು ಶೇಖರಿಸಿದ್ದ ಎಲ್ಲಾ ಕಾಳುಗಳನ್ನು ಇಲಿ ಹೆಗ್ಗಣಗಳು ತಿಂದಿವೆ ಎಂದು ಸುಳ್ಳು ಹೇಳಿ ಅವರನ್ನು ಕಳುಹಿಸಿಬಿಟ್ಟನು. ಆದರೆ ಸೋಮನಾಥನ ಬಳಿ ಸಾಕಷ್ಟು ಪ್ರಮಾಣದಲ್ಲಿ ಕಾಳಿನ ರಾಶಿ ಮನೆಯಲ್ಲಿ ಇತ್ತು. ಇತ್ತ ಜನರೆಲ್ಲ ತಿನ್ನಲು ಆಹಾರವಿಲ್ಲದೆ ಬಳಲಿದರು.

ಕೆಲವು ದಿನಗಳ ನಂತರ ಸೋಮನಾಥಪುರದಲ್ಲಿ ಭಾರೀ ಮಳೆಯಾಗತೊಡಗಿತು. ನದಿ ತುಂಬಿ ಹರಿಯತೊಡಗಿತು. ಮಳೆಯ ಪ್ರಮಾಣ ಹೆಚ್ಚುತ್ತಲೇ ಇದ್ದುದರಿಂದ ನದಿಯ ನೀರಿನ ಮಟ್ಟ ಹೆಚ್ಚಾಗತೊಡಗಿತು. ಹಳ್ಳಿಯ ಮನೆಗಳಿಗೆ ನೀರು ನುಗ್ಗಿತು. ಜನರು ಮನೆಗಳನ್ನು ತೊರೆಯುವ ಪರಿಸ್ಥಿತಿ ಬಂದಿತು. ಸೋಮನಾಥನೂ ಸಹ ಅನಿವಾರ್ಯವಾಗಿ ಮನೆಯನ್ನೂ ತೊರೆಯಬೇಕಾಯಿತು.

ನದಿಯ ನೀರು ಎಲ್ಲರ ಮನೆಗಳಿಗೂ ನುಗ್ಗಿದಂತೆ ಸೋಮನಾಥನ ಮನೆಯಲ್ಲೂ ನುಗ್ಗಿತ್ತು. ಸೋಮನಾಥ ಬಚ್ಚಿಟ್ಟಿದ್ದ ಕಾಳುಗಳು ನೀರಿನ ಪ್ರವಾಹದ ಸೆಳೆತಕ್ಕೆ ಸಿಲುಕಿ ನೀರಿನೊಂದಿಗೆ ಹೊರ ಬಂದವು. ಎಲ್ಲಾ ಕಾಳುಗಳು ಹಳ್ಳಿಯ ಸುತ್ತಮುತ್ತಲಿನ ಹೊಲಗಳಲ್ಲಿ ಹರಡಿಕೊಂಡವು. ಪ್ರವಾಹ ನಿಂತು ಕೆಲವು ದಿನಗಳ ನಂತರ ಹೊಲಗಳಲ್ಲಿ ಕಾಳು ಬಿತ್ತನೆ ಮಾಡದೇ ಬೆಳೆಯು ಬರುತ್ತಿರುವುದನ್ನು ಕಂಡು ಜನರು ಆಶ್ಚರ್ಯಚಕಿತರಾದರು. ಬರಗಾಲದಿಂದ ಬಸವಳಿದಿದ್ದ ನಮಗೆ ದೇವರೇ ಕಷ್ಟ ಪರಿಹರಿಸಿದ್ದಾನೆ ಎಂದು ಸಂತಸಗೊಂಡರು.

– ವೆಂಕಟೇಶ ಚಾಗಿ

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

Udaya-Jadugar

ಹೌದಿನಿಯ ಎಸ್ಕೇಪ್‌ ಜಾದೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.