“ಗುರು ಭಕ್ತಿ’ಗೀತೆಗಳು

ಶಿಕ್ಷಕರ ದಿನದ ವಿಶೇಷ

Team Udayavani, Sep 5, 2019, 5:00 AM IST

t-3

ಗುರುವನ್ನು ದೇವರಂತೆ ಕಾಣು ಎಂದರು ಹಿರಿಯರು. ಹಾಗಾಗಿಯೇ ಹಳೆ ತಲೆಮಾರಿನ ಗೀತೆಗಳು, ಪದ್ಯಗಳು ಭಕ್ತಿಗೀತೆಗಳಂತೆ ತೋರುತ್ತಿದ್ದವು. ಗುರುವಿನ ಕುರಿತಾದ ಕೆಲ ಸಿನಿಮಾಗೀತೆಗಳಂತೂ ಪ್ರತಿದಿನ ಬೆಳಿಗ್ಗೆ ಶಾಲೆಗಳಲ್ಲಿ ಹಾಡಿಸುವಷ್ಟರ ಮಟ್ಟಿಗೆ ಜನಪ್ರಿಯತೆ ಗಳಿಸಿದ್ದವು. ಹೊಸ ತಲೆಮಾರಿಗೆ ಸೇರಿದ, ಚಾಕಲೇಟ್‌ ಕೊಡಿಸುವ, ಆಟ ಆಡಿಸುವ, ಕಡಿಮೆ ಅಂಕ ಬಂದರೆ ಗದರದ ಮಿಸ್‌ ಕೂಡಾ ಗುರುಗಳ ಪ್ರತಿರೂಪವೇ. ಅವರೆಲ್ಲರ ಕುರಿತಾದ ಈ ಪದ್ಯ ಗೀತೆಗಳಿಗೆ ಶಿಕ್ಷಕರೇ ಚಿತ್ರ ಬರೆದಿರುವುದು ಮತ್ತೂಂದು ವಿಶೇಷ!

1. ಭಾಳ ಒಳ್ಳೇವ್ರು ನಮ್‌ ಮಿಸ್ಸು

ಭಾಳ ಒಳ್ಳೇವ್ರು ನಮ್‌ ಮಿಸ್ಸು
ಏನ್‌ ಹೇಳಿದ್ರೂ ಎಸ್ಸೆಸ್ಸು,
ನಗ್ತಾ ನಗ್ತಾ ಮಾತಾಡ್ತಾರೆ
ಸ್ಕೂಲಿಗೆಲ್ಲಾ ಫೇಮಸ್ಸು

ಜಾಣಮರಿ ಅಂತಾರೆ
ಚಾಕ್ಲೇಟಿದ್ರೆ ಕೊಡ್ತಾರೆ,
ಬೆನ್ನು ತಟ್ಟಿ ಕೆನ್ನೆ ಸವರಿ
ಬೆಣ್ಣೆ ಕಂದ ಅಂತಾರೆ !
ಆಟಕ್‌ ಬಾ ಅಂತಾರೆ
ಆಟದ್‌ ಸಾಮಾನ್‌ ಕೊಡ್ತಾರೆ,
ಗೊತ್ತಿಲ್ದಂಗೆ ಆಟದ್‌ ಜೊತೆ
ಪಾಠಾನೂ ಕಲಿಸ್ತಾರೆ!
ನಮೊjತೇನೇ ಆಡ್ತಾರೆ
ಕೈ ಕೈ ಹಿಡಿದು ಹಾಡ್ತಾರೆ,
ಕೋತಿ ಕರಡಿ ಕಥೆ ಹೇಳಿ
ಸಿಕ್ಕಾ ಪಟ್ಟೆ ನಗಿಸ್ತಾರೆ.

ನಮ್‌ ಸ್ಕೂಲಂಥ ಸ್ಕೂಲಿಲ್ಲ
ನಮ್‌ ಮಿಸ್ಸಂಥ ಮಿಸ್ಸಿಲ್ಲ.
ಅಮ್ಮನ್‌ ಹಾಗೇ ಅ ಅವ್ರುನೂ
ಬಿಟ್‌ ಬರಕ್ಕೇ ಮನಸ್ಸಿಲ್ಲ
– ಎನ್‌.ಎಸ್‌. ಲಕ್ಷ್ಮೀನಾರಾಯಣ ಭಟ್ಟ

2. ಸ್ವಾಮಿ ದೇವನೆ

ಸ್ವಾಮಿ ದೇವನೆ ಲೋಕಪಾಲನೆ ತೇ ನಮೋಸ್ತು ನಮೋಸ್ತುತೇ !
ಪ್ರಮೇದಿಂದಲೇ ನೋಡು ನಮ್ಮನು ತೇ ನಮೋಸ್ತು ನಮೋಸ್ತುತೇ!!
ಸ್ವಾಮಿ ದೇವನೆ
ದೇವ ದೇವನೆ ಹಸ್ತ ಪಾದಗಳಿಂದಲೂ ಮನದಿಂದಲೂ
ನಾವು ಮಾಡಿದ ಪಾಪವೆಲ್ಲವ ಹೋಗಲಾಡಿಸು ಬೇಗನೆ!!
ಸ್ವಾಮಿ ದೇವನೆ
ವಿಜಯ ವಿದ್ಯಾರಣ್ಯ ಕಟ್ಟಿದ ಚಾಮುಂಡಾಂಬೆಯ ನಾಡಿನ
ಮನೆಯ ಮಕ್ಕಳ ಐಕ್ಯಗಾನವ ಲಾಲಿಸಿ ಪರಿಪಾಲಿಸೈ
ಸ್ವಾಮಿ ದೇವನೆ
– ಸೋಸಲೆ ಅಯ್ನಾ ಶಾಸ್ತ್ರಿಗಳು

3. ತಾಯೆ ಶಾರದೆ
ತಾಯೆ ಶಾರದೆ ಲೋಕ ಪೂಜಿತೆ ಜ್ಞಾನ ದಾತೆ ನಮೋಸ್ತುತೇ.
ಪ್ರೇಮದಿಂದಲಿ ಸಲುಹು ಮಾತೇ ನೀಡು ಸನ್ಮತಿ ಸೌಖ್ಯ ದಾತೆ
ತಾಯೆ ಶಾರದೆ
ಅಂಧಕಾರವ ಓಡಿಸೂ, ಜ್ಞಾನ ಜ್ಯೋತಿಯ ಬೆಳಗಿಸು
ಹೃದಯ ಮಂದಿರದಲ್ಲಿ ನೆಲೆಸು ಚಿಂತೆಯಾ ಅಳಿಸು, ಶಾಂತಿಯ ಉಳಿಸು
ತಾಯೆ ಶಾರದೆ
ನಿನ್ನ ಮಡಿಲಿನ ಮಕ್ಕಳಮ್ಮ, ನಿನ್ನ ನಂಬಿದ ಕಂದರಮ್ಮ
ನಿನ್ನ ಕರುಣೆಯ ಬೆಳಗಲಮ್ಮ ಬಾಳನೂ ಬೆಳಗಮ್ಮಾ ನಮ್ಮ ಕೋರಿಕೆ ಆಲಿಸಮ್ಮಾ,
ತಾಯ ಶಾರದೆ
ಒಳ್ಳೆ ಮಾತುಗಳಾಡಿಸು, ಒಳ್ಳೆ ಕೆಲಸವ ಮಾಡಸು
ಒಳ್ಳೆಯ ದಾರಿಯ ನಮ್ಮ ನಡೆಸು, ವಿದ್ಯೆಯಾ ಕಲಿಸು ಆಸೆ ಪೂರೈಸು
ತಾಯಿ ಶಾರದೆ
-ಚಿ. ಉದಯಶಂಕರ್‌

4. ನಿನ್ನೊಲುಮೆ ನನಗಿರಲಿ ತಂದೆ..

ನಿನ್ನೊಲುಮೆ ನಮಗಿರಲಿ ತಂದೆ
ಕೈ ಹಿಡಿದು ನೀ ನಡೆಸು ಮುಂದೆ

ತಾನುರಿದು ಜಗಕೆಲ್ಲ ಜೂತಿಯನು ನೀಡುವ
ದೀಪದೊಳು ನೀ ಎನ್ನ ಅನಗೊಳಿಸು ತಂದೆ
ಕಾನನದ ಸುಮವೊಂದು ಸೌರಭ ತಾ ಸೂಸಿ
ಸಫ‌ಲತೆಯ ಪಡೆವಂತೆ ಮಾಡೆನ್ನ ತಂದೆ.
ಸರಿಯು ಸಂಪದ ಬೇಡ, ಯಾವ ವೈಭವ ಬೇಡ
ನಿನ್ನ ಕರುಣೆಯು ಒಂದೆ ಸಾಕೆನಗೆ ತಂದೆ

ನಿನ್ನ ಈ ಮಕ್ಕಳನು ಪ್ರೇಮದಲಿ ನೀ ನೋಡು
ಈ ಮನೆಯು ಎಂದೆಂದೂ ನಗುವಂತೆ ನೀ ಮಾಡು
ನಂಬಿದರೆ ಭಯವಿಲ್ಲ, ನಂಬದಿರೆ ಬಾಳಿಲ್ಲ ಅಂಬಿನೆ ನೀ ನಡೆಸು ಈ ಬಾಳ ನೌಕೆ
ಯಾವ ನೋವೇ ಬರಲಿ ಎದೆ ಗುಂದದಿರಲಿ, ಸತ್ಯ ಮಾರ್ಗವೆ ನಡೆವ ಶಕ್ತಿ ಕೊಡು ತಂದೆ
– ಆರ್‌.ಎನ್‌. ಜಯಗೋಪಾಲ್‌

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.