ನಾನು ಶಾಲೆಗೆ ಹೋಗ್ತೀನಿ
Team Udayavani, Aug 22, 2019, 5:04 AM IST
ಹಿರಿಯೂರು ಪಟೇಲರಿಗೆ ಮೊಮ್ಮಕ್ಕಳಿರಲಿಲ್ಲ. ದೇವಸ್ಥಾನ, ವೈದ್ಯರು ಅಂತ ಸುತ್ತಾಟ ನಡೆಸಿ, ಬಹಳ ಸಮಯದ ನಂತರ ಒಬ್ಬ ಮೊಮ್ಮಗ ಹುಟ್ಟಿದ. ಮನೆ ಮಂದಿಗೆಲ್ಲ ಆತನೆಂದರೆ ಅತಿಯಾದ ಮುದ್ದು. ಅವನ ಹೆಸರು ಶೀಕಂಠ. ಅಜ್ಜ- ಅಜ್ಜಿಗೆ ಮೊಮ್ಮಗ ಏನು ಮಾಡಿದರೂ ಖುಷಿಯೋ ಖುಷಿ. ಅವನಿಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಅಜ್ಜ-ಅಜ್ಜಿ ಅವನ ತಾಳಕ್ಕೆ ಕುಣಿದರು. ಇಷ್ಟು ಜಮೀನಿರುವಾಗ ಮೊಮ್ಮಗ ಶಾಲೆಗೆ ಹೋಗಿ ನೌಕರಿ ಮಾಡೋದೇನಿದೆ ಅನ್ನೋ ಭಾವನೆ ಪಟೇಲರಿಗೆ. ಆದರೆ, ಪಟೇಲರ ಮಗ ಸುರೇಶ- ಸೊಸೆ ರೂಪಾಳಿಗೆ ತಮ್ಮ ಮಗ ಶಾಲೆಗೆ ಹೋಗದಿರುವುದು ದೊಡ್ಡ ತಲೆ ನೋವಾಯಿತು. ಈ ಸಮಸ್ಯೆಯನ್ನು ಜಾಣ್ಮೆಯಿಂದ ಬಗೆಹರಿಸಬೇಕು ಎಂದು ಅವರಿಬ್ಬರು ಸೇರಿ ಒಂದು ಉಪಾಯ ಮಾಡಿದರು.
ಒಮ್ಮೆ ಸುರೇಶ ಹೊಲದ ಕಡೆ ಹೊರಟಿದ್ದರು. ಅಪ್ಪನ ಜೊತೆ ತಾನು ಬರುತ್ತೇನೆ ಎಂದು ಶೀಕಂಠನೂ ಹಠ ಮಾಡಿದ. ಅಪ್ಪ ಮಗ ಇಬ್ಬರೂ ಹೊಲದ ಕಡೆ ಹೊರಟರು. ಹೊಲದಲ್ಲಿ ಬಹಳಷ್ಟು ಕೆಲಸಗಳು ಬಾಕಿ ಉಳಿದಿದ್ದವು. ಸುರೇಶ ಪಂಚೆಯನ್ನು ಎತ್ತಿಕಟ್ಟಿ ಹೊಲದಲ್ಲಿ ಬೆಳೆದಿದ್ದ ಕಳೆಯನ್ನು ಕೀಳಲು ಶುರುಮಾಡಿದ. ಶೀಕಂಠನಿಗೂ ಒಂದು ಕೆಲಸ ಹಚ್ಚಿದರು. ಇಬ್ಬರೂ ಬಿಸಿಲಿನಲ್ಲಿ ಕೆಲಸ ಮಾಡಿ ದಣಿದರು. ಅದೇ ಸಮಯಕ್ಕೆ ಮಕ್ಕಳು ಆಡಿ ನಲಿಯುವ ದನಿ ಕೇಳಿಸಿತು. ಶೀಕಂಠನಿಗೆ ಅಚ್ಚರಿಯಾಗಿ ದನಿ ಬಂದ ಕಡೆ ನಡೆದುಹೋದನು. ಹೊಲದಿಂದ ಸ್ವಲ್ಪ ದೂರದಲ್ಲಿ ಒಂದು ಶಾಲೆಯಿತ್ತು. ಅದರ ಮುಂದಿದ್ದ ಮೈದಾನದಲ್ಲಿ ಕೆಲ ಮಕ್ಕಳು ಆಟವಾಡುತ್ತಿದ್ದರು. ಕೆಲವರು ಚಿತ್ರ ಬಿಡಿಸುತ್ತಿದ್ದರು, ಇನ್ನು ಕೆಲವರು ಮೇಸ್ಟ್ರೆ ಹೇಳುವ ಕಥೆಗಳನ್ನು ಕೇಳುವುದರಲ್ಲಿ ಮಗ್ನರಾಗಿದ್ದರು. ಅದನ್ನು ನೋಡಿ ಶೀಕಂಠನಿಗೆ ಶಾಲೆ ಎಂದರೆ ಏನು ಅನ್ನೋದು ಅರ್ಥವಾಯಿತು. ಅವನಿಗೂ ಶಾಲೆಗೆ ಹೋಗುವ ಮನಸ್ಸಾಯಿತು. ಶೀಕಂಠ ಮನೆಗೆ ಬಂದವನೇ “ನಾನು ನಾಳೆಯಿಂದ ಶಾಲೆಗೆ ಹೋಗುತ್ತೇನೆ’ ಎಂದನು. ಈ ಮಾತನ್ನು ಕೇಳಿ ಅಪ್ಪ ಅಮ್ಮಂದಿರಿಬ್ಬರಿಗೂ ಖುಷಿಯಾಯಿತು. ಆದರೆ ಪಟೇಲರ ಮುಖ ಸಣ್ಣದಾಯಿತು. ಶೀಕಂಠ “ತಾತ, ನಾನು ಓದಿ ದೊಡ್ಡವನಾಗಿ ನಮ್ಮ ಜಮೀನಿನಲ್ಲಿ ಹೊಸ ಹೊಸ ಪ್ರಯೋಗಗಳನ್ನು ಮಾಡ್ತೀನಿ’ ಎಂದಾಗ ಪಟೇಲರಿಗೂ ಖುಷಿಯಾಯಿತು.
-ಪ್ರೇಮಾ ಲಿಂಗದಕೋಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!