ಪದ್ಯ ಮೇಳ


Team Udayavani, Nov 1, 2018, 6:00 AM IST

b-7.jpg

ಅಳುವ ಮಕ್ಕಳನ್ನು ಸುಮ್ಮನಾಗಿಸಿದ ಪದ್ಯಗಳಿವು. ಹಠ ಹಿಡಿದ ಮಕ್ಕಳಿಗೆ ತುತ್ತು ಉಣ್ಣಿಸಿದ ಪದ್ಯಗಳಿವು. ತಾನಾಗೆ ಹಾಡಿಸಿಕೊಂಡು ಹೋಗುವ ಸಾಮರ್ಥ್ಯ ಇವುಗಳಿಗೆ ಸಿದ್ದಿಸಿದೆ. ಹೀಗಾಗಿಯೇ ಬಾಲ್ಯದಲ್ಲಿ ಒಮ್ಮೆ ಮಾತ್ರ ಓದಿದ್ದರೂ ಇಂದಿಗೂ ಎಂದಿಗೂ ನೆನಪಲ್ಲಿರುವುದು. ಇಲ್ಲಿನ ಪದ್ಯಗಳನ್ನು ಓದುತ್ತಾ ಹೋದಂತೆ ಕಚಗುಳಿಯಿಟ್ಟಂಥಾ ಅನುಭವವಾದರೆ ಕ್ಷಮಿಸಿ.

ನಮ್ಮ ಮನೆಯ ಸಣ್ಣ ಪಾಪ

ನಮ್ಮ ಮನೆಯಲೊಂದು ಸಣ್ಣ ಪಾಪವಿರುವುದು
ಎತ್ತಿಕೊಳಲು ಹೋದರದಕೆ ಕೋಪ ಬರುವುದು

ಕೋಪ ಬರಲು ಗಟ್ಟಿಯಾಗಿ ಕಿರಿಚಿಕೊಳುವುದು
ಕಿರಿಚಿಕೊಂಡು ತನ್ನ ಮೈಯ ಪರಚಿಕೊಳುವುದು

ಮೈಯ ಪರಚಿಕೊಂಡು ಪಾಪ ಅತ್ತು ಕರೆವುದು
ಅಳಲು ಕಣ್ಣಿನಿಂದ ಸಣ್ಣ ಮುತ್ತು ಸುರಿವುದು

ಪಾಪ ಅತ್ತರಮ್ಮ ತಾನೂ ಅತ್ತುಬಿಡುವಳು
ಅಯ್ಯೋ ಪಾಪ ಎಂದುಕೊಂಡು ಮುತ್ತು ಕೊಡುವಳು

ಪಾಪ ಪಟ್ಟು ಹಿಡಿದ ಹಟವು ಸಾರ್ಥಕವಾಯಿತು
ಕಿರಿಚಿ ಪರಚಿ ಅಳುವುದೆಲ್ಲ ಅರ್ಥವಾಯಿತು

ರಚನೆ: ಜಿ. ಪಿ. ರಾಜರತ್ನಂ (ರತ್ನ)

ತುತ್ತೂರಿ

ಬಣ್ಣದ ತಗಡಿನ ತುತ್ತೂರಿ
ಕಾಸಿಗೆ ಕೊಂಡನು ಕಸ್ತೂರಿ

ಸ-ರಿ-ಗ-ಮ-ಪ-ದ-ನಿ-ಸ ಊದಿದನು
ಸ-ನಿ-ದ-ಪ-ಮ-ಗ-ರಿ-ಸ ಊದಿದನು

ತನಗೇ ತುತ್ತೂರಿ ಇದೆಯೆಂದ;
ಬೇರಾರಿಗು ಅದು ಇಲ್ಲೆಂದ

ತುತ್ತೂರಿ ಊದುತ ಕೊಳದ ಬಳಿ;
ಕಸ್ತೂರಿ ನಡೆದನು ಸಂಜೆಯಲಿ;
ಜಂಭದ ಕೋಳಿಯ ರೀತಿಯಲಿ

ಜಾರಿತು ನೀರಿಗೆ ತುತ್ತೂರಿ;
ಗಂಟಲು ಕಟ್ಟಿತು ನೀರೂರಿ

ಸ-ರಿ-ಗ-ಮ ಊದಲು ನೋಡಿದನು;
ಗ-ಗ-ಗ-ಗ ಸದ್ದನು ಮಾಡಿದನು

ಬಣ್ಣವು ನೀರಿನ ಪಾಲಾಯ್ತು;
ಜಂಭದ ಕೋಳಿಗೆ ಗೋಳಾಯ್ತು

– ಜಿ. ಪಿ. ರಾಜರತ್ನಂ 

ನಂ ಚಿಕ್ಕ

ಎಲ್ಲರಿಗಣ್ಣ ನಂ ಚಿಕ್ಕ
ಲೆಕ್ಕ ಅಂದರೆ ಬಲು ದುಃಖ!

ಕೂಡುವುದೆಲ್ಲ ಕವಡೆ ಕಲ್ಲು
ಕಳೆಯುವುದೆಲ್ಲ ಪುಸ್ತಕ ಬಳಪ
ಗುಣಿಸುವುದೆಲ್ಲ ಗೋಡೆಯ ಚಿತ್ರ
ಭಾಗ್ಸೋದೆಲ್ಲ ಬಾಯಿಯ ಒಳಗೆ!

ಜೇಬಿನ ತುಂಬ ರೂ. ಆ ಪೈ.!
ಎಲ್ಲಿತ್ತೆನೆ ಬಾಯ್ಬಿಟ್ಟರೆ ಸೈ!

ಬೀದಿಯ ಕುಣಿತ
ಚಿಕ್ಕನ ಗಣಿತ
ಮನೆಯಲಿ ಜೋರು ಕೈಯಿ- ಬಾಯಿ;
ಪರೀಕ್ಷೆಯಲ್ಲಿ ಕುಂಬಳ ಕಾಯಿ!

ಎಲ್ಲರಿಗಣ್ಣ ನಂ ಚಿಕ್ಕ
ಲೆಕ್ಕ ಅಂದರೆ ಬಲು ದುಃಖ!

– ಎಂ.ವಿ. ಸೀತಾರಾಮಯ್ಯ

ಅರ್ಧಚಂದ್ರ

ದೇವರ ಪೆಪ್ಪರಮೆಂಟೇನಮ್ಮಾ
ಗಗನದೊಳಲೆಯುವ ಚಂದಿರನು?
ಎಷ್ಟೇ ತಿಂದರು ಖರ್ಚೇ ಆಗದ
ಬೆಳೆಯುವ ಪೆಪ್ಪರಮೆಂಟಮ್ಮಾ!

ದಿನದಿನ ನೋಡುವೆ, ದಿನವೂ ಕರಗುತ
ಎರಡೇ ವಾರದೊಳಳಿಯುವುದು!
ಮತ್ತದು ದಿನದಿನ ಹೆಚ್ಚುತ ಬಂದು 
ಎರಡೇ ವಾರದಿ ಬೆಳೆಯುವುದು!

ಅಕ್ಷಯವಾಗಿಹ ಪೆಪ್ಪರಮೆಂಟದು ನನಗೂ ದೊರಕುವುದೇನಮ್ಮಾ ?
ನೀನೂ ದೇವರ ಬಾಲಕನಾಗಲು
ನಿನಗೂ ಕೊಡುವನು, ಕಂದಯ್ಯ!

ದೇವರ ಬಾಲಕನಾಗಲು ಒಲ್ಲೆ:
ಆತನ ಮೀರಿಹೆ ನೀನಮ್ಮಾ!
ತಾಯಿಯನಗಲಿಸಿ ದೇವರ ಹಿಡಿಸುವ 
ಪೆಪ್ಪರಮೆಂಟು ಬೇಡಮ್ಮಾ!

– ಕುವೆಂಪು

ಅಜ್ಜನ ಕೋಲಿದು ನನ್ನಯ ಕುದುರೆ

ಅಜ್ಜನ ಕೋಲಿದು ನನ್ನಯ ಕುದುರೆ
ಹೆಜ್ಜೆ ಹೆಜ್ಜೆಗೆ ಕುಣಿಯುವ ಕುದುರೆ

ಕಾಲಿಲ್ಲದೆಯೇ ನಡೆಯುವ ಕುದುರೆ
ನಾಲನು ಬಡಿಸದ ಜೂಲವ ಹೊದಿಸದ
ಲಾಲನೆ ಪಾಲನೆ ಬಯಸದ ಕುದುರೆ
ಅಜ್ಜನ ಕೋಲಿದು ನನ್ನಯ ಕುದುರೆ

ಚಂದಪ್ಪನಿಗೆ ಚಿಗರೆಯೆ ಕುದುರೆ
ಮಾದೇವನಿಗೆ ನಂದಿಯೆ ಕುದುರೆ
ರಾಮಚಂದ್ರನಿಗೆ ಹನುಮನೆ ಕುದುರೆ
ಹೊಟ್ಟೆಯ ಗಣಪಗೆ ಇಲಿಯೆ ಕುದುರೆ
ಅಜ್ಜನ ಕೋಲಿದು ನನ್ನಯ ಕುದುರೆ

ನಿಂತರೆ ನಿಲ್ಲುವ ಒಳ್ಳೆಯ ಕುದುರೆ
ಓಡಿದರೋಡುವ ನನ್ನಿಯ ಕುದುರೆ
ಕಾಡದ ಬೇಡದ ಕರುಳಿನ ಕುದುರೆ
ನೋಡಲು ಬಿಡದಿಹ ಬೆತ್ತದ ಕುದುರೆ
ಅಜ್ಜನ ಕೋಲಿದು ನನ್ನಯ ಕುದುರೆ

ಅರಬರ ದೇಶದಿ ದೊರೆಯದ ಕುದುರೆ
ಕಾರೇವಾಡದಿ ಕಾಣದ ಕುದುರೆ
ಅರಸು ಮಕ್ಕಳಿಗು ಸಿಕ್ಕದ ಕುದುರೆ
ನನಗೇ ಸಿಕ್ಕಿದ ನನ್ನೀ ಕುದುರೆ
ಅಜ್ಜನ ಕೋಲಿದು ನನ್ನಯ ಕುದುರೆ

– ಸಿದ್ದಯ್ಯ ಪುರಾಣಿಕ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.