ನೀರ ಮೇಲೊಂದು ಶಾಲೆಯ ಮಾಡಿ


Team Udayavani, Sep 21, 2017, 11:03 AM IST

21STATE-33.jpg

ಚಿಕ್ಕವರಾಗಿದ್ದಾಗ ಜೋರು ಮಳೆ ಬಂದು ರೇಡಿಯೋಗಳಲ್ಲಿ “ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ’ ಎಂಬ ಸುದ್ದಿಗಾಗಿ ನಾವೆಲ್ಲರೂ ಚಾತಕಪಕ್ಷಿಗಳಂತೆ ಕಾದು ಕುಳಿತುಕೊಳ್ಳುತ್ತಿದ್ದೆವು. ಅದರಲ್ಲೂ ಹಳ್ಳಿಗಾಡಿನ ಪ್ರದೇಶವಾಗಿದ್ದರೆ ಒಂದಷ್ಟು ಪ್ರದೇಶಗಳು ನೀರಿನಿಂದ ಆವೃತವಾಗುವುದು, ಸೇತುವೆಗಳು ಮುಳುಗುವುದು ಇತ್ಯಾದಿ ಘಟನೆಗಳು ಸರ್ವೇ ಸಾಮಾನ್ಯವಾಗಿದ್ದವು. ಇವೆಲ್ಲವೂ ಮಕ್ಕಳಿಗೆ ರಜೆಯ ನೆಪಗಳು. ಈ ಕುಂಟು ನೆಪಗಳನ್ನು ಹೋಗಲಾಡಿಸಲೆಂದೇ ಬಾಂಗ್ಲಾದೇಶದಲ್ಲಿ ಬೋಟ್‌ ಶಾಲೆಗಳ ಪರಿಕಲ್ಪನೆಯನ್ನು ಹುಟ್ಟು ಹಾಕಿದ್ದಾರೆ. ಇದರಿಂದಾಗಿ ಮಕ್ಕಳು ಹತ್ತಾರು ಕಿ.ಮೀಗಳನ್ನು ನಡೆದು, ಸೇತುವೆಗಳನ್ನು ದಾಟಿ, ಬಸ್ಸು ಹತ್ತಿ ತ್ರಾಸಪಟ್ಟುಕೊಂಡು ಶಾಲೆಗೆ ತಲುಪಬೇಕಿಲ್ಲ. ಶಾಲೆಯೇ ತೇಲುತ್ತಾ ಮಕ್ಕಳ ಮನೆ ಬಳಿಗೆ ಬರುವವು!

ಬಾಂಗ್ಲಾದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುವುದು ಸಾಮಾನ್ಯವಾದ ಸಂಗತಿ. ಆ ಸಂದರ್ಭದಲ್ಲಿ ಜನಜೀವನ ಅಸ್ತವ್ಯಸ್ತಗೊಳ್ಳುವುದಲ್ಲದೆ ಬದುಕುವುದು ದುಸ್ತರವಾಗಿಬಿಡುತ್ತದೆ. ಶಾಲೆಗಳಂತೂ ನೀರಿನಲ್ಲಿ ಮುಳುಗಿ ಹೋಗಿ ತಿಂಗಳುಗಳ ಕಾಲ ಬಂದ್‌ ಆಗಿರುತ್ತವೆ. ಆಹಾರ ನೀರಿಗೆ ಕಷ್ಟಪಡಬೇಕಾದ ಸಂದರ್ಭದಲ್ಲಿ ಯಾರು ತಾನೇ ಮಕ್ಕಳ ವಿದ್ಯಾಭ್ಯಾಸದ ಕುರಿತು ಚಿಂತಿಸುತ್ತಾರೆ ಹೇಳಿ. ಅದಕ್ಕೇ ತೇಲುವ ಶಾಲೆಗಳ ಐಡಿಯಾ ಅಲ್ಲಿ ಚಾಲ್ತಿಯಲ್ಲಿದೆ.

ಮಳೆ ಮತ್ತು ಪ್ರವಾಹದಿಂದ ಮಕ್ಕಳ ವ್ಯಾಸಂಗಕ್ಕೆ ತೊಂದರೆಯಾಗುವುದನ್ನು ಅರಿತ “ಶಿಧುಲಾಯ… ಸ್ವಾನಿರ್ವಾರ್‌’ ಎಂಬ ಸಂಸ್ಥೆಯು ಮಕ್ಕಳಿಗೆ ಅನುಕೂಲ ಕಲ್ಪಿಸಲು 2002 ರಲ್ಲಿ ಬೋಟ… ಶಾಲೆಯೊಂದನ್ನು ಮೊತ್ತ ಮೊದಲ ಬಾರಿಗೆ ಪ್ರಾರಂಭಿಸಿತ್ತು. ಈ ಉಪಾಯ ಇಂದು ಯಶಸ್ವಿಯಾಗಿದ್ದು ಒಟ್ಟು 22 ಬೋಟ… ಶಾಲೆಗಳು ಅಲ್ಲಿ ಕಾರ್ಯಾಚರಿಸುತ್ತಿವೆ.ಅಲ್ಲಿ ಓದುತ್ತಿರುವ ಒಟ್ಟು ಮಕ್ಕಳ ಸಂಖ್ಯೆ ಕೇಳಿದರೆ ನೀವು ಬೆಚ್ಚಿಬೀಳುವುದು ಖಂಡಿತ. ಸುಮಾರು 2,000 ವಿದ್ಯಾರ್ಥಿಗಳು ಬೋಟ್‌ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಸಾಮಾನ್ಯ ಶಾಲೆಗೇ ಅಷ್ಟು ಮಂದಿ ಸೇರಿಸುವುದು ಕಷ್ಟ. ಅಂಥದ್ದರಲ್ಲಿ ಈ ಬೋಟ್‌ ಶಾಲೆ ಮಕ್ಕಳಿಗೆ ಆಕರ್ಷಣೆಯೂ ಆಗಿರುವುದರಿಂದ ಮಕ್ಕಳು ಗೈರುಹಾಜರಾಗುವುದಿಲ್ಲ ಎನ್ನುವುದು ಅಲ್ಲಿನ ಶಿಕ್ಷಕರ ಅಭಿಪ್ರಾಯ.

ಈ ಬೋಟ್‌ಗಳಲ್ಲಿ ಮಕ್ಕಳು ಕಲಿಯಲು ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಅಳವಡಿಸಲಾಗಿದೆ. ಒಂದು ಬೋಟ… ದಿನಕ್ಕೆ ಮೂರು ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತದೆ. ಇಲ್ಲಿ ಕಲಿಯುವ ಮಕ್ಕಳಿಗೆ ಉಚಿತವಾಗಿ ಕಲಿಕಾ ಸಾಮಗ್ರಿಗಳನ್ನು ಒದಗಿಸಲಾಗುತ್ತದೆ. ಮತ್ತೂಂದು ಸಂಗತಿಯೆಂದರೆ ಹಳ್ಳಿಗಳ ದಡಕ್ಕೆ ತೆರಳುವ ಈ ತೇಲುವ ಶಾಲೆಗಳು ಮಕ್ಕಳನ್ನು ಹತ್ತಿಸಿಕೊಂಡು, ತರಗತಿ ಮುಗಿದ ಬಳಿಕ ಮತ್ತೆ ಅವರವರ ಹಳ್ಳಿಗಳಿಗೆ ಬಿಟ್ಟು ಬರುತ್ತವೆ. ಒಂದು ರೀತಿ ಇವುಗಳು ಶಾಲಾ ವಾಹನಗಳಂತೆಯೂ ಕಾರ್ಯ ನಿರ್ವಹಿಸುತ್ತಿವೆ.

ಸೋಲಾರ್‌ ಮತ್ತು ಕಂಪ್ಯೂಟರ್!
ಈ ಬೋಟ್ಗಳಲ್ಲಿ ನಡೆಯುವ ಶಾಲೆಗಳಲ್ಲಿ ಸೋಲಾರ್‌ ಶಕ್ತಿಯನ್ನು ಅಳವಡಿಸಲಾಗಿದೆ. ಒಳಗಡೆ ಇರುವ ದೀಪದ ಬಲುºಗಳು, ಕಂಪ್ಯೂಟರ್‌ ಮತ್ತಿತರ ಉಪಕರಣಗಳು ಸೋಲಾರ್‌ ಶಕ್ತಿಯಿಂದಲೇ ಕೆಲಸ ಮಾಡುತ್ತವೆ. ಬಿಡುವಿನ ವೇಳೆಯಲ್ಲಿ ಓದಿಕೊಳ್ಳಲು ಮಕ್ಕಳಿಗೊಂದು ಪುಟ್ಟ ಗ್ರಂಥಾಲಯವೂ ಇದೆ.

ದಂಡಿನಶಿವರ ಮಂಜುನಾಥ್‌

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.