ಮಿಲಿಯನ್‌ ಬಾಟಲ್‌ ಟೆಂಪಲ್‌ 


Team Udayavani, Oct 12, 2017, 11:15 AM IST

temple.jpg

ದೇವಸ್ಥಾನವೆಂದರೆ ಕಲ್ಲಿನ ಕಂಬಗಳು, ಪುರಾತನ ಶಿಲೆಗಳು, ಮೂರ್ತಿಗಳು, ಗೋಪುರಗಳು ಇವೆಲ್ಲವೂ ನೆನಪಾಗುತ್ತದೆ. ಆದರೆ ಅವ್ಯಾವುವೂ ಇಲ್ಲದೆ ಪ್ರವಾಸಿಗರನ್ನು ಸೆಳೆಯುತ್ತಿರುವ ದೇವಸ್ಥಾನ ಇಲ್ಲಿದೆ. ಬಾಟಲಿಗಳಿಂದಲೇ ಮುಚ್ಚಿಕೊಂಡಿದೆ ಈ ದೇವಸ್ಥಾನ. ಬೌದ್ಧರು ನಿರ್ಮಿಸಿರುವ ಈ ಬಾಟಲಿ ದೇವಸ್ಥಾನದ ನಿರ್ಮಾಣದ ಹಿಂದೆಯೂ ಒಂದು ಕತೆಯಿದೆ.

ಪ್ರಪಂಚದಾದ್ಯಂತ ಹಲವಾರು ಧರ್ಮಗಳಿವೆ. ಪ್ರತಿಯೊಂದು ಧರ್ಮದವರೂ ತಮ್ಮ ಧಾರ್ಮಿಕ ಸಂಪ್ರದಾಯಗಳನ್ನು ಪಾಲಿಸುತ್ತಾ, ತಮ್ಮ ಧರ್ಮದ ಹಿರಿಮೆಯನ್ನು ಮುಂದಿನ ಪೀಳಿಗೆಗೆ ದಾಟಿಸಿಕೊಂಡು ಬರುತ್ತಿರುತ್ತಾರೆ. ಸಾಮಾನ್ಯವಾಗಿ ಬಹುತೇಕ ಧರ್ಮಗಳಲ್ಲಿ ದೇವರ ಮೂರ್ತಿಯನ್ನು ಸ್ಥಾಪಿಸಿ ಅದಕ್ಕೆ ಪೂಜೆ ಪುನಸ್ಕಾರವನ್ನು ಮಾಡಿಕೊಂಡು ಬರಲಾಗುತ್ತಿದೆ. ಆದರೆ ಇಲ್ಲೊಂದು ದೇವಾಲಯವಿದೆ. ಇಡೀ ದೇವಾಲಯವನ್ನು ಸಂಪೂರ್ಣ ಬಾಟಲಿಗಳಿಂದ ಅಲಂಕರಿಸಲಾಗಿದೆ. ನಮ್ಮ ಕಲ್ಪನೆಗೂ ಮೀರಿದಂತಿರುವ ಈ ದೇವಾಲಯ ಇರೋದು ಥಾಯ್‌ಲೆಂಡಿನ ಸಿಸಾಕೆಟ್‌ ಪ್ರಾಂತ್ಯದಲ್ಲಿ.

ಈ ದೇಗುಲದಲ್ಲಿ ಎಲ್ಲಿ ನೋಡಿದರೂ ಬರೀ ಬಾಟಲುಗಳೇ ಕಾಣಸಿಗುತ್ತವೆ. ಸರಿಸುಮಾರು ಹತ್ತು ಲಕ್ಷ ಬಾಟಲುಗಳಿಂದ ಅಲಂಕೃತಗೊಂಡಿರುವ ಇದು ಬೌದ್ಧರ ಧಾರ್ಮಿಕ ಸ್ಥಳವಾದ “ವಾಟ್‌ ಪಾ ಮಹಾ ಚೆಡಿ ಕೇವ್‌’ ಹೆಸರಿನ ದೇಗುಲವಾಗಿದೆ. ಪ್ರತಿನಿತ್ಯ ಸಾವಿರಾರು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿರುವ ಈ ದೇವಾಲಯಕ್ಕೆ  “ಮಿಲಿಯನ್‌ ಬಾಟಲ್‌ ಟೆಂಪಲ್‌’ ಎಂಬ ಉಪನಾಮವೂ ಇದೆ.

ಹಿನ್ನೆಲೆ ಏನು?
ಈ ವಿಶಿಷ್ಟ ದೇವಾಲಯದ ನಿರ್ಮಾಣಕ್ಕೂ ಒಂದು ಹಿನ್ನೆಲೆಯಿದೆ. ಸುಮಾರು 80ರ ದಶಕದಲ್ಲಿ ಈ ಪ್ರದೇಶದಾದ್ಯಂತ ಕಸದ ಸಮಸ್ಯೆ ಬಿಡಿಸಲಾರದಷ್ಟು ಜಟಿಲವಾಗಿ ಕಾಡತೊಡಗಿತ್ತು. ಆಗ ಅಲ್ಲಿಯೇ ಇದ್ದ ಬೌದ್ಧ ಸನ್ಯಾಸಿಯೊಬ್ಬರು ಅಲ್ಲಿನ ನಿವಾಸಿಗಳಿಗೆ ಮುಕ್ತ ಹಾಗೂ ಆರೋಗ್ಯಕರ ವಾತಾವರಣ ನಿರ್ಮಿಸುವ ಉದ್ದೇಶದಿಂದ ಮರುಬಳಕೆ ಮಾಡಬಹುದಾದ ಬಾಟಲ್‌ಗ‌ಳನ್ನು ಲಕ್ಷೊàಪಲಕ್ಷ ಸಂಖ್ಯೆಯಲ್ಲಿ ಸಂಗ್ರಸಿ ಈ ದೇವಾಲಯವನ್ನು ನಿರ್ಮಿಸಿದರು. 

ಮುಚ್ಚಳಗಳಿಂದಲೂ ಅಲಂಕಾರ
ಬಾಟಲುಗಳ ಮುಚ್ಚಳಗಳಿಂದಲೂ ಸಹ ಈ ದೇವಾಲಯಕ್ಕೆ ಅಲಂಕಾರ ಮಾಡಲಾಗಿದೆ. ಮೊದಲಿಗೆ ಕೇವಲ ಸ್ಥಳೀಯರ ಆಕರ್ಷಣೆಯ ಕೇಂದ್ರವಾಗಿದ್ದ ಈ ದೇವಸ್ಥಾನವು ತದನಂತರದಲ್ಲಿ ಖ್ಯಾತಿಯನ್ನು ಪಡೆಯುತ್ತಾ ಸಾಗಿ, ಇಂದು ದಿನನಿತ್ಯ ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚಿದಂತೆಲ್ಲಾ ವಸತಿಗೃಹ ಹಾಗೂ ಮೂಲಸೌಕರ್ಯಗಳನ್ನು ಒದಗಿಸಿ ಅದನ್ನೊಂದು ಪವಿತ್ರ ಸ್ಥಳವನ್ನಾಗಿಸಲು ಪ್ರಯತ್ನಿಸಲಾಗುತ್ತಿದೆ.
ದೇವಸ್ಥಾನದ ವೀಕ್ಷಣೆಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಜೊತೆಗೆ, ಪ್ರವಾಸಿಗರಿಗೆ ಸ್ಥಳೀಯರು ತೋರುವ ಗೌರವಾದರಗಳು ಹಾಗೂ ´ೋಟೋಗ್ರಫಿ ಪ್ರಿಯರಿಗೆ ಯಾವುದೇ ನಿರ್ಭಂಧಗಳಿಲ್ಲದಿರುವುದೂ ಕೂಡ ಪ್ರವಾಸಿಗರ ಆಕರ್ಷಣೆಗೆ ಕಾರಣವಾಗಿದೆ.

– ಪ.ನಾ.ಹಳ್ಳಿ ಹರೀಶ್‌ ಕುಮಾರ್‌, ತುಮಕೂರು

ಟಾಪ್ ನ್ಯೂಸ್

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.