ಕಾಣೆಯಾದ ಬಾವಿ


Team Udayavani, May 16, 2019, 6:00 AM IST

5

ಜಯನಗರ ಎಂಬುದೊಂದು ರಾಜ್ಯ. ಅಲ್ಲಿ ಉತ್ತಮ ಸೇನನೆಂಬ ರಾಜನಿದ್ದ. ಹೆಸರಿಗೆ ತಕ್ಕಂತೆ ಆತ ಉತ್ತಮ ರೀತಿಯಲ್ಲಿ ಆಡಳಿತ ನಡೆಸುತಿದ್ದ. ಪ್ರಜೆಗಳನ್ನು ಕ್ಷೇಮವಾಗಿ ನೋಡಿಕೊಳ್ಳುವುದು ತನ್ನ ಕರ್ತವ್ಯವೆಂದು ಅವನು ನಂಬಿದ್ದ. ಹೀಗಾಗಿ ಅವನ ಆಡಳಿತದಲ್ಲಿ ಜನರು ನೆಮ್ಮದಿಯಿಂದಿದ್ದರು. ಆದರೆ, ಅದೊಂದು ವರ್ಷ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿಕೊಂಡು ಬಿಟ್ಟಿತು. ವರ್ಷಪೂರ್ತಿ ಮಳೆಯೇ ಆಗಲಿಲ್ಲ. ಇರುವ ಹಳ್ಳ, ಕೆರೆಗಳು ಬತ್ತಿದವು. ಕೃಷಿ ಚಟುವಟಿಕೆಗಳು ನಿಂತು ಹೋದವು. ಜಾನುವಾರುಗಳಿಗೆ ಕುಡಿಯಲು ನೀಡಲು ಇಲ್ಲದಂಥ ಪರಿಸ್ಥಿತಿ ಬಂದಿತು.

ಬರ‌ಕ್ಕೆ ಪರಿಹಾರ ಕಂಡು ಹಿಡಿಯಲು ರಾಜ ಮಂತ್ರಿಗಳ ಸಭೆ ಕರೆದ. ಅವರೊಂದಿಗೆ ಸಮಾಲೋಚಿಸಿ ಪ್ರತಿಯೊಂದು ಗ್ರಾಮದಲ್ಲೂ ಬಾವಿ ತೋಡಿಸಬೇಕೆಂದು ಆಜ್ಞೆ ಹೊರಡಿಸಿದ. ಅದರ ಜವಾಬ್ದಾರಿಯನ್ನು ಮಂತ್ರಿಗಳಿಗೆ ನೀಡಿದ. ಮಂತ್ರಿಗಳೂ ಆಯಾ ವ್ಯಾಪ್ತಿಯಲ್ಲಿದ್ದ ಗುತ್ತಿಗೆದಾರರಿಗೆ ಜವಾಬ್ದಾರಿ ನೀಡಿದರು. ಹೀಗೆ ತಿಂಗಳಲ್ಲೇ ಬಾವಿಗಳು ನಿರ್ಮಾಣಗೊಂಡವು. ಎಲ್ಲಾ ಬಾವಿಗಳಲ್ಲೂ ಯಥೇತ್ಛ ನೀರು ಬಂದಿತು. ಜನರ ಬವಣೆಯೂ ತಪ್ಪಿತು. ಪ್ರಜೆಗಳೆಲ್ಲರೂ ಸಂತೋಷದಿಂದ ರಾಜನನ್ನು ಕೊಂಡಾಡಿದರು.

ಅದೊಂದು ಬಾರಿ ರಾಜ ಮಾರುವೇಷದಲ್ಲಿ ನಗರ ಸಂಚಾರಕ್ಕೆ ಹೊರಟಿದ್ದ. ಆಗ ಒಂದಷ್ಟು ಮಂದಿ ಮಹಿಳೆಯರು ಬಿಂದಿಗೆ ಹೊತ್ತುಕೊಂಡು ಕಾಡಿನ ಹಾದಿಯಲ್ಲಿ ನಡೆಯುವುದನ್ನು ನೋಡಿದ. ಅವರನ್ನು ಎಲ್ಲಿಗೆ ಹೋಗುತ್ತಿರುವಿರಿ? ಎಂದು ಕೇಳಿದ. ಅವರಲ್ಲೊಬ್ಬ ಮಹಿಳೆ “ನೀರು ತರಲು ಕಾಡಿನಲ್ಲಿರುವ ಹಳ್ಳಕ್ಕೆ ಹೋಗುತ್ತಿದ್ದೇವೆ. ಅದೂ ಒಣಗಿ ಹೋಗುವ ಸ್ಥಿತಿಯಲ್ಲಿದೆ. ಸಿಕ್ಕಷ್ಟು ನೀರು ತರಬೇಕಿದೆ’ ಎಂದಳು. ಅದನ್ನು ಕೇಳಿದ ರಾಜ “ನಿಮ್ಮೂರಲ್ಲಿ ಬಾವಿ ಇಲ್ಲವೇ?’ ಎಂದು ಕೇಳಿದ.

“ಇಲ್ಲ’ ಎಂದಾಕೆ ಉತ್ತರಿಸಿದಳು. ರಾಜನಿಗೆ ಆಶ್ಚರ್ಯವಾಯಿತು. “ಆದರೆ ರಾಜ ಪ್ರತಿ ಊರಿಗೂ ಬಾವಿ ತೋಡಿಸಿದ್ದಾನಂತಲ್ಲ?’ ಎಂದು ಮರುಪ್ರಶ್ನೆ ಮಾಡಿದ. “ತೋಡಿಸಿದ್ದಾರಂತೆ. ಆದರೆ ನಮ್ಮ ಊರು ಅವರ ಗಮನಕ್ಕೆ ಬಂದಿರಬೇಕಲ್ಲ’ ಎಂದರು. ಆ ಮಹಿಳೆಯರನ್ನು ಬೀಳ್ಕೊಟ್ಟ ರಾಜ ನೇರವಾಗಿ ತನ್ನ ಅರಮನೆಯತ್ತ ನಡೆದ. ಕೂಡಲೆ ಮಂತ್ರಿಗಳ ಸಭೆ ಕರೆದ “ನರಸಾಪುರ ಎಂಬ ಊರಿನಲ್ಲಿ ಬಾವಿಯನ್ನು ತೋಡಿಸಲಾಗಿಲ್ಲ. ಅದರ ಉಸ್ತುವಾರಿ ಯಾರ ಸುಪರ್ದಿಗೆ ಬರುತ್ತದೆ?’ ಎಂದು ಕೇಳಿದ. ಖಾತೆ ತೆರೆದು ನೋಡಿದ ಮಹಾಮಂತ್ರಿ, “ನರಸಾಪುರದಲ್ಲಿ ಬಾವಿಯನ್ನು ತೋಡಿಸಲು ಬೊಕ್ಕಸದಿಂದ ಹಣ ಸಂದಾಯವಾಗಿದೆ. ಅದರ ಉಸ್ತುವಾರಿ ಹೊತ್ತಿದ್ದು ಮುನಿಸ್ವಾಮಿ ಎಂಬಾತ’ ಎಂದು ತಿಳಿಸಿದರು. ಕೂಡಲೇ ಮುನಿಸ್ವಾಮಿಯನ್ನು ಕರೆಸಲಾಯಿತು. ಅವನಿಗೆ ತನ್ನ ಮೋಸ ರಾಜನ ಗಮನಕ್ಕೆ ಬಂದಿರುವುದು ತಿಳಿಯಿತು. ಸಿಕ್ಕಿಬೀಳುವುದು ಖಾತರಿ ಎಂದು ಅರಿತ ಮುನಿಸ್ವಾಮಿ “ಕ್ಷಮಿಸಿ ಮಹಾಪ್ರಭು, ನನ್ನಿಂದ ತಪ್ಪಾಗಿದೆ. ಹಣದಾಸೆಗಾಗಿ ಒಂದೆರಡು ಊರುಗಳಲ್ಲಿ ಬಾವಿಗಳನ್ನು ತೋಡಿಸದೆ, ಖರ್ಚು ತೋರಿಸಿದ್ದೆ. ನನ್ನಿಂದ ಮಹಾ ಅಪರಾಧವಾಗಿದೆ. ದಯಟ್ಟು ಮನ್ನಿಸಬೇಕು’ ಎಂದು ಬೇಡಿಕೊಂಡ.

ರಾಜ “ನನ್ನ ಗಮನಕ್ಕೆ ಬಂದಿದ್ದರಿಂದಾಗಿ ನೀನು ನಿನ್ನ ತಪ್ಪನ್ನು ಒಪ್ಪಿಕೊಳ್ಳುತ್ತಿದ್ದೀಯಾ. ಇಲ್ಲದಿದ್ದರೆ ಸುಮ್ಮನೇ ಇದ್ದು ಬಿಡುತಿದ್ದಿ. ನಿನ್ನಿಂದಾಗಿ ಮಹಿಳೆಯರು ಪರದಾಡುತ್ತಿದ್ದಾರೆ. ಇದಕ್ಕೆ ಶಿಕ್ಷೆ ಆಗಲೇ ಬೇಕು’ ಎಂದು ಆತನಿಗೆ 6 ತಿಂಗಳ ಕಾಲ ಸೆರೆಮನೆ ಶಿಕ್ಷೆ ವಿಧಿಸಿದ ರಾಜ. ನರಸಾಪುರದಲ್ಲಿ ಬಾವಿ ತೋಡುವ ಜವಾಬ್ದಾರಿಯನ್ನು ಖುದ್ದು ತಾನೇ ವಹಿಸಿಕೊಂಡ. ಬಾವಿಯ ಉದ್ಘಾಟನೆಯನ್ನು ತಾನೇ ಮಾಡಿದ. ಗ್ರಾಮಸ್ಥರೆಲ್ಲರೂ ರಾಜನಿಗೆ ಜೈಕಾರ ಹಾಕಿದರು.

-ಭೋಜರಾಜ ಸೊಪ್ಪಿಮಠ

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.