ನೇಚರ್‌ ನಗರಿ; ಇಲ್ಲಿ ವಾಹನ ಓಡಾಟವೇ ಇಲ್ಲ


Team Udayavani, Feb 13, 2020, 5:05 AM IST

lead-town-(1)-E

ರಸ್ತೆ ಮೇಲೆ ವಾಹನಗಳ ಓಡಾಟ ಕೆಲ ನಿಮಿಷಗಳ ಮಟ್ಟಿಗೆ ನಿಂತರೂ ಮನಸ್ಸಿಗೆ ಅದೇನೋ ನೆಮ್ಮದಿ. ವಾಹನಗಳೇ ಓಡಾಡದ ರಸ್ತೆಗಳಿರುವ ನಗರ ಭೂಮಿ ಮೇಲೆ ಇದೆ ಎಂದರೆ ಮೊದಲ ಏಟಿಗೆ ನಂಬುವುದು ಕಷ್ಟ. ಆದು ಅಮೆರಿಕದ ಮೆಕಿನ್ಯಾಕ್‌ ದ್ವೀಪದಲ್ಲಿದೆ.

ಮೆಕಿನ್ಯಾಕ್‌ ದ್ವೀಪ ಒಂದು ಪ್ರವಾಸಿ ತಾಣ. ಅಲ್ಲಿ ಪ್ರಾಚೀನ ಕಾಲದ ಕೋಟೆಗಳನ್ನು ಸಂರಕ್ಷಿಸಿ ಇಡಲಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ನಗರ ಗಮನ ಸೆಳೆಯುವುದು ತನ್ನ ವಾಹನ ನಿರ್ಬಂಧಿತ ರಸ್ತೆಗಳಿಂದ. 1898ರಿಂದಲೇ ಇಲ್ಲಿ ವಾಹನಗಳಿಗೆ ನಿಷೇಧ ಹೇರಲಾಗಿದೆ. ಹಾಗಾದರೆ ಇಲ್ಲಿನ ನಿವಾಸಿಗಳು ಹೇಗೆ ಪ್ರಯಾಣಿಸುತ್ತಾರೆ ಎಂಬ ಪ್ರಶ್ನೆ ಮೂಡುವುದು ಸಹಜ. ಅವರೆಲ್ಲರೂ ಸೈಕಲ್‌ಗ‌ಳನ್ನು ನೆಚ್ಚಿಕೊಂಡಿದ್ದಾರೆ. ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರೂ ಅಷ್ಟೇ, ಸೈಕಲ್‌ಗ‌ಳನ್ನೇ ಬಾಡಿಗೆಗೆ ಪಡೆದು ಚಲಾಯಿಸುತ್ತಾರೆ. ಅನೇಕ ವೇಳೆ ಕಾಲ್ನಡಿಗೆಯಲ್ಲೇ ಕ್ರಮಿಸುವುದೂ ಉಂಟು. ಮಜವೆಂದರೆ ಅಲ್ಲಿನ ಪೊಲೀಸರು ಕೂಡಾ ಸೈಕಲ್‌ನಲ್ಲಿ ಪ್ರಯಾಣಿಸುತ್ತಾರೆ.

ಕುದುರೆ ಗಾಡಿ
ಮೈಸೂರಿಗೆ ಭೇಟಿ ಕೊಟ್ಟವರು ಅಲ್ಲಿನ ರಸ್ತೆಗಳಲ್ಲಿ ಕುದುರೆ ಗಾಡಿಗಳಲ್ಲಿ ಪ್ರಯಾಣಿಕರು, ಪ್ರವಾಸಿಗರು ಸಂಚರಿಸುವುದನ್ನು ನೋಡಿರುತ್ತೀರಾ. ಅಲ್ಲಿ ಟ್ರಾಫಿಕ್‌ನಲ್ಲಿ ಹೊಗೆಯುಗುಳುವ ವಾಹನಗಳ ಮಧ್ಯೆ ಕುದುರೆ ಗಾಡಿ ಠಾಕು ಠೀಕಾಗಿ ಹೋಗುತ್ತದೆ. ಆದರೆ ಮೆಕಿನ್ಯಾಕ್‌ನಲ್ಲಿ ರಸ್ತೆಗಳ ಮೇಲೆ ಕುದುರೆ ಗಾಡಿಗಳು ಯಾವುದೇ ಹಾರ್ನ್ಗಳ ಕಿರಿಕಿರಿಯಿಲ್ಲದೆ ರಾಜಾರೋಷವಾಗಿ ಪ್ರಯಾಣಿಸುವುದನ್ನು ಕಾಣಬಹುದು. ಸೈಕಲ್‌ ಬಿಟ್ಟರೆ ಅಲ್ಲಿನ ಪ್ರಮುಖ ಸಾರಿಗೆ ವ್ಯವಸ್ಥೆ ಎಂದರೆ ಕುದುರೆ ಗಾಡಿಗಳೇ.

ಚಳಿಗಾಲದಲ್ಲಿ ಹೊಸ ವಾಹನ
ಅಮೆರಿಕದಲ್ಲಿ ಚಳಿ ಎಂದರೆ ನಮ್ಮ ಊರುಗಳಂತಲ್ಲ. ಮನೆಗಳೇ ಮುಚ್ಚಿಹೋಗುವಷ್ಟು ಹಿಮಸುರಿಯುತ್ತದೆ. ಆ ವಾತಾವರಣದಲ್ಲಿ ಕುದುರೆಗಾಡಿ, ಸೈಕಲ್‌ ಯಾವುವೂ ಉಪಯೋಗಕ್ಕೆ ಬಾರದು. ಹೀಗಾಗಿ ಚಳಿಗಾಲದಲ್ಲಿ ಮಾತ್ರ ಅಲ್ಲಿನ ಆಡಳಿತ ಹೊಸದೊಂದು ವಾಹನಕ್ಕೆ ಅನುಮತಿ ನೀಡುತ್ತದೆ. ಅದರ ಹೆಸರು “ಸ್ನೋ ಮೊಬಿಲ್‌’. ಅದು ಹಿಮದ ಮೇಲೆ ಜಾರುವ ಇಂಧನ ಆಧಾರಿತ ಪುಟ್ಟ ವಾಹನ. ಅದರಲ್ಲಿ ಒಬ್ಬರು ಆರಾಮಾಗಿ ಕುಳಿತುಕೊಳ್ಳಬಹುದು. ಅದನ್ನು ಬೈಕಿನಂತೆ ಚಲಾಯಿಸಲಾಗುತ್ತದೆ.

ಉಪಾಧ್ಯಕ್ಷರ ದ್ವಂದ್ವ
ಕೆಲ ವರ್ಷಗಳ ಹಿಂದೆ ಅಮೆರಿಕದ ಉಪಾಧ್ಯಕ್ಷರು ನಗರಕ್ಕೆ ಭೇಟಿ ನೀಡಿದ್ದರು. ಅಮೆರಿಕದ ರಾಜಕಾರಣಿಗಳಿಗೆ, ಮಂತ್ರಿಗಳಿಗೆ ನೀಡುವ ಭದ್ರತಾ ವ್ಯವಸ್ಥೆ ತುಂಬಾ ಕಟ್ಟುನಿಟ್ಟಾಗಿರುತ್ತದೆ. ಹೀಗಾಗಿ ಉಪಾಧ್ಯಕ್ಷರು ಸ್ಥಳೀಯ ನಿಯಮವನ್ನು ಪಾಲಿಸುವರೇ ಇಲ್ಲವೇ ಎಂಬುದರ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಭದ್ರತಾ ಕಾರಣಗಳಿಂದಾಗಿ ಅವರು ಸೈಕಲ್‌ ಅಥವಾ ಕುದುರೆಗಾಡಿಗಳನ್ನು ಬಳಸಲಿಲ್ಲ. ಅವರು ಎಂದಿನಂತೆ ಬುಲೆಟ್‌ಪ್ರೂಫ್ ಕಾರಿನಲ್ಲಿಯೇ ಪ್ರಯಾಣಿಸಿದರು. ಆ ಸಮಯದಲ್ಲಿ ಎಲ್ಲೆಡೆ ವಾದ ಪ್ರತಿವಾದಗಳು ಕೇಳಿ ಬಂದಿದ್ದವು. ಅದೇನೇ ಇರಲಿ. ಈ ರಸ್ತೆಗಳಲ್ಲಿ ಇನ್ನೊಂದು ಬಾರಿ ವಾಹನ ಚಲಾಯಿಸಲು ಅನುಮತಿ ನೀಡಲಾಗಿತ್ತು. ಸೂಪರ್‌ ಮ್ಯಾನ್‌ ಸಿನಿಮಾ ಖ್ಯಾತಿಯ ಕ್ರಿಸ್ಟೋಫ‌ರ್‌ ರೀವ್‌ ಅಬಿನಯದ ಸಿನಿಮಾ ಶೂಟಿಂಗಿಗೆಂದು ಅನುಮತಿ ನೀಡಲಾಗಿತ್ತು. ಅದು ಬಿಟ್ಟರೆ ಯಾರಿಗೂ ವಾಹನ ಚಲಾಯಿಸಲು ಅನುಮತಿ ನೀಡಿಲ್ಲ.

ಹರ್ಷವರ್ಧನ್‌ ಸುಳ್ಯ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.