ಹಳೇ ಬೇರು ಹೊಸ ಉಗುರು


Team Udayavani, Jul 25, 2019, 5:00 AM IST

q-4

ಉಗುರು ಅಲಂಕಾರಕ್ಕಷ್ಟೇ ಅಲ್ಲ. ಪ್ರಕೃತಿ ಮನುಷ್ಯನಿಗೆ ಉಗುರುಗಳನ್ನು ದಯಪಾಲಿಸಿರುವುದರ ಹಿಂದೆ ಒಂದು ಉದ್ದೇಶವಿದೆ. ಅದರದ್ದೇ ಆದ ಮಿಲಿಯ ವರ್ಷಗಳ ವಿಕಾಸ ಪಥದಲ್ಲಿ ನಾವೆಲ್ಲರೂ ಬಲು ದೂರ ಸಾಗಿ ಬಂದಿದ್ದೇವೆ. ಅದರತ್ತ ಒಂದು ನೋಟ…

ಬೆರಳುಗಳ ಸೌಂದರ್ಯ ಹೆಚ್ಚಿಸುವಲ್ಲಿ ಉಗುರು ಪ್ರಮುಖ ಪಾತ್ರವಹಿಸುತ್ತವೆ. ಅದರಲ್ಲೂ ಹೆಣ್ಣು ಮಕ್ಕಳು ತಮ್ಮ ಉಗುರುಗಳಿಗೆ ಆಕರ್ಷಕ ಬಣ್ಣಗಳನ್ನು ಹಚ್ಚಿಕೊಂಡು ತಮ್ಮ ಸೌಂದರ್ಯವನ್ನು ಉಗುರುಗಳಿಂದ ಮತ್ತಷ್ಟು ಮೆರುಗುಗೊಳಿಸಿಕೊಳ್ಳುತ್ತಾರೆ. ಆದರೆ ಉಗುರುಗಳ ಮಹತ್ವ ಕೇವಲ ಅಲಂಕಾರಕ್ಕೆ ಸೀಮಿತವಾಗುವುದಿಲ್ಲ. ಪ್ರಾಚೀನ ಕಾಲದ ಮಾನವ ಉಗುರುಗಳನ್ನು ಆಯುಧವಾಗಿ ಬಳಸಿಕೊಳ್ಳುತ್ತಿದ್ದ. ಅಷ್ಟು ಮಾತ್ರವಲ್ಲ, ಮರ ಏರಲು, ವಸ್ತುಗಳನ್ನು ಹಿಡಿದುಕೊಳ್ಳಲು ಉಗುರುಗಳು ಸಹಕರಿಸುತ್ತಿದ್ದವು. ಆ ಕಾಲಘಟ್ಟದಿಂದ ಮಾವನ ಬಹಳ ದೂರ ಸಾಗಿ ಬಂದಿದ್ದಾನೆ.

ಗರ್ಭದಲ್ಲಿ ಮಗುವಿನ ಬೆಳವಣಿಗೆ ಕಾಣಿಸಿಕೊಂಡ 20 ವಾರದಲ್ಲೇ ಸಣ್ಣ ಸಣ್ಣ ಉಗುರಿನ ಅಂಕೆಗಳು ಚಿಗುರುತ್ತವಂತೆ. ಮಗು ಹುಟ್ಟುವ ಹೊತ್ತಿಗೆ ಕೈ ಬೆರಳುಗಳು ಹಾಗೂ ಕಾಲ್ಬೆರಳುಗಳು ಸಂಪೂರ್ಣವಾಗಿ ರೂಪುಗೊಂಡು, ಉಗುರುಗಳ ಕಿರೀವನ್ನೇ ಹೊಂದಿರುತ್ತವೆ. ಒಮ್ಮೆ ಮೂಡಿದ ಉಗುರುಗಳು ಜೀವನ ಪರ್ಯಂತ ನಮ್ಮ ಜೊತೆ ಶಾಶ್ವತವಾಗಿ ಉಳಿಯುವುದು ಅಚ್ಚರಿಯೇ ಸರಿ. ಏಕೆಂದರೆ, ದೇಹದ ಅನೇಕ ಭಾಗಗಳು ವಯಸ್ಸಿಗೆ ತಕ್ಕಂತೆ ಬೆಳವಣಿಗೆಯನ್ನು ಸ್ಥಗಿತಗೊಳಿಸಿದರೆ, ಉಗುರು ಮಾತ್ರ ಕಡೆಯವರೆಗೂ ಬೆಳೆಯುತ್ತಲೇ ಇರುತ್ತದೆ. ಚಿವುಟಿದಷ್ಟೂ ಮತ್ತೆ ಮತ್ತೆ ಚಿಗುರುತ್ತಲಿರುತ್ತವೆ.

ಅವು ಏಕೆ ಬೆಳೆಯುತ್ತವೆ!?
ಉಗುರುಗಳು ಕೆರಾಟಿನ್‌ ಎಂಬ ವಸ್ತುವಿನಿಂದ ರೂಪಿಸಲ್ಪಟ್ಟಿದೆ. ಅದೇ ಕೆರಾಟಿನ್‌ನಿಂದ ನಮ್ಮ ಕೂದಲು ಕೂಡಾ ರೂಪಿಸಲ್ಪಟ್ಟಿದೆ. ಕೆರಾಟಿನ್‌ ಎನ್ನುವುದು ಜೀವರಹಿತವಾದ ವಸ್ತು ಎಂದು ಪರಿಗಣಿಸಲ್ಪಟ್ಟಿದೆ. ಆದರೆ, ಇವು ಶುರುವಿನಲ್ಲಿ ಜೀವವುಳ್ಳ ಕೋಶಗಳೇ ಆಗಿರುತ್ತವೆ. ಈ ಕೋಶಗಳೇ ಅಗತ್ಯ ಪೋಷಕಾಂಶಗಳನ್ನು ಪಡೆದುಕೊಂಡು ಮುಂದೆ ಉಗುರುಗಳಾಗಿ ಮಾರ್ಪಾಡಾಗುತ್ತವೆ. ಇವುಗಳು ನರಮಂಡಲದೊಂದಿಗೆ ಸಂಪರ್ಕ ಹೊಂದಿರುತ್ತವೆ. ಅದರಿಂದಲೇ ಉಗುರು ತನ್ನ ಬೆಳವಣಿಗೆಗೆ ಬೇಕಾದ ಪೋಷಕಾಂಶಗಳನ್ನು ಪಡೆದುಕೊಳ್ಳುವುದು. ಅಂದ ಹಾಗೆ ಉಗುರು ಬೆಳೆಯಲು ಬೇಕಾದ ಅಗತ್ಯ ಪೋಷಕಾಂಶ ಎಂದರೆ ಗ್ಲುಕೋಸ್‌. ದಿನಕ್ಕೆ 0.1 ಮಿಲಿಮೀಟರ್‌ನಷ್ಟು ಬೆಳೆವುದಂತೆ.

ಸತ್ತ ನಂತರವೂ ಉಗುರು ಬೆಳೆಯುತ್ತಾ?
ನಮ್ಮಲ್ಲಿ ಅದೊಂದು ನಂಬಿಕೆ ಇದೆ. ಸತ್ತ ನಂತರವೂ ಉಗುರು ಬೆಳೆಯುತ್ತದೆ ಎಂದು. ಆದರೆ, ಅದು ಸುಳ್ಳು ಎಂದು ಸಂಶೋಧಕರು ದೃಢಪಡಿಸಿದ್ದಾರೆ. ಭೂಮಿಯಲ್ಲಿ ಹೂತು ಹಾಕಿದ್ದ ದೇಹದ ಉಗುರುಗಳು ನೀಳವಾಗಿರುವಂತೆ ಕಂಡದ್ದರಿಂದಲೇ ಉಗುರು ಬೆಳೆಯುತ್ತೆ ಎಂಬ ಪುಕಾರು ಹರಡಿತ್ತು. ಆದರೆ ವಸ್ತುಸ್ಥಿತಿಯೇ ಬೇರೆ. ಮೃತ ದೇಹ ದಿನ ಕಳೆದಂತೆ ಕೃಶವಾಗುತ್ತಾ, ಚಪ್ಪಟೆಯಾಗುತ್ತಾ ಹೋಗುತ್ತದೆ. ಆಗ ಚರ್ಮದ ಅಡಿ ಸೇರಿ ಹೋಗಿದ್ದ ಉಗುರಿನ ಭಾಗ ಹೊರಗೆ ಕಾಣಲು ಶುರುವಾಗುತ್ತದೆ. ಇದರಿಂದಾಗಿ ಉಗುರು ಬೆಳೆಯುತ್ತಿರುವಂತೆ ತೋರುತ್ತದೆ. ಅಲ್ಲದೆ ಅದರ ಬೆಳವಣಿಗೆಗೆ ಬೇಕಾದ ಪೋಷಕಾಂಶ ಸತ್ತ ನಂತರ ಸಿಗದಿರುವುದರಿಂದ ಉಗುರು ಬೆಳೆಯಲು ಸಾಧ್ಯವೇ ಇಲ್ಲ ಎಂದು ತಜ್ಞರು ಖಡಾಖಂಡಿತವಾಗಿ ಹೇಳುತ್ತಾರೆ.

– ಯೋಗೇಶ್‌ ಎಂ. ಜಿ.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.