ಗಿಡ ಬೆಳೆಸುವ ಸ್ಪರ್ಧೆ!


Team Udayavani, Sep 21, 2017, 11:22 AM IST

21STATE-36.jpg

ಚೀನಾದ ಸಾಮ್ರಾಜ್ಯವೊಂದನ್ನು ರಾಜನೊಬ್ಬ ಆಳುತ್ತಿದ್ದ. ರಾಜನಿಗೆ ವಯಸ್ಸಾಗಿತ್ತು. ಅವನಿಗೆ ಮಕ್ಕಳಿರಲಿಲ್ಲ. ಹೀಗಾಗಿ, ತನ್ನ ನಂತರ ಈ ರಾಜ್ಯದ ಆಡಳಿತವನ್ನು ಯಾರ ಕೈಗೆ ವಹಿಸುವುದು ಎಂದು ರಾಜ ಯೋಚಿಸತೊಡಗಿದ. ಕೊನೆಗೊಂದು ನಿರ್ಧಾರಕ್ಕೆ ಬಂದ. ಆತನಿಗೆ ತೋಟಗಾರಿಕೆ, ಗಿಡ-ಮರಗಳ ಬಗ್ಗೆ ಅತೀವ ಪ್ರೀತಿಯಿತ್ತು. ಆದ ಕಾರಣ, ತನ್ನ ಸಾಮ್ರಾಜ್ಯದಲ್ಲಿರುವ ಎಲ್ಲ ಯುವಕರಿಗೂ ಒಂದೊಂದು ಬಿತ್ತನೆ ಬೀಜ ವಿತರಿಸುವುದಾಗಿಯೂ, ಯಾರು ಆ ಬೀಜವನ್ನು ಬಿತ್ತಿ, ಹುಲುಸಾದ ಗಿಡವನ್ನು ಬೆಳೆಯುತ್ತಾರೋ ಅವರಿಗೇ ತನ್ನ ಉತ್ತರಾಧಿಕಾರಿ ಪಟ್ಟ ನೀಡುವುದಾಗಿಯೂ ಘೋಷಿಸಿಬಿಟ್ಟ.

ರಾಜನ ಘೋಷಣೆ ಹೊರಬೀಳುತ್ತಿದ್ದಂತೆ, ರಾಜ್ಯದ ಮೂಲೆ ಮೂಲೆಗಳಿಂದಲೂ ಯುವಕರು ಅರಮನೆಯತ್ತ ಧಾವಿಸತೊಡಗಿದರು. ಎಲ್ಲರಿಗೂ ಒಂದೊಂದು ಮಡಕೆಯಲ್ಲಿ ಒಂದರಂತೆ ಬಿತ್ತನೆ ಬೀಜವನ್ನು ಹಾಕಿ ವಿತರಿಸಲಾಯಿತು. ಆ ಯುವಕರ ಪೈಕಿ ಪಿಂಗ್‌ ಎಂಬ ಹುಡುಗನೂ ಇದ್ದ. ಅವನು ಗಿಡ ಬೆಳೆಯುವುದರಲ್ಲಿ ನಿಸ್ಸೀಮ. ಆತ ಬೆಳೆದ ಹಣ್ಣುಗಳು, ತರಕಾರಿಗಳು ಅತ್ಯಂತ ಸಿಹಿ ಹಾಗೂ ತಾಜಾವಾಗಿರುತ್ತವೆ ಎಂದು ಎಲ್ಲರೂ ಹೊಗಳುತ್ತಿದ್ದರು. ಇತರರಂತೆಯೇ ರಾಜನಾಗುವ ಆಸೆ ಪಿಂಗ್‌ನಲ್ಲೂ ಮೊಳಕೆಯೊಡೆದಿತ್ತು. ಹಾಗಾಗಿ, ಅವನೂ ಅರಮನೆಗೆ ಬಂದು ಬೀಜವಿರುವ ಮಡಕೆಯನ್ನು ಹೊತ್ತು ಒಯ್ದ.

ಮನೆ ತಲುಪುತ್ತಿದ್ದಂತೆ ಪಿಂಗ್‌ ತಾನು ತಂದಿದ್ದ ಮಡಕೆಗೆ ಸಮೃದ್ಧಭರಿತ ಮಣ್ಣನ್ನು ಹಾಕಿದ. ಪ್ರತಿದಿನವೂ ಮಡಕೆಯ ಬಳಿ ಬಂದು, ನೀರು ಹಾಕಿ ಆರೈಕೆ ಮಾಡತೊಡಗಿದೆ. ಆದರೆ, ಬೀಜ ಮೊಳಕೆಯೊಡೆಯಲೇ ಇಲ್ಲ. ಆದರೆ, ಅರಮನೆಯಿಂದ ಬೀಜ ಕೊಂಡೊಯ್ದಿದ್ದ ಇತರೆ ಎಲ್ಲ ಯುವಕರ ಮಡಕೆಗಳಲ್ಲೂ ಹುಲುಸಾಗಿ ಗಿಡ ಬೆಳೆಯಲಾರಂಭಿಸಿತು. ಜತೆಗೆ, ಅವರೆಲ್ಲ ಪಿಂಗ್‌ನನ್ನು ನೋಡಿ ಹಾಸ್ಯ ಮಾಡತೊಡಗಿದರು. ರಾಜನ ಪಟ್ಟದ ಕನಸನ್ನು ಬಿಟ್ಟು, ಸರಿಯಾಗಿ ಕೆಲಸ ಮಾಡುವುದನ್ನು ಕಲಿ ಎಂದೆಲ್ಲ ಲೇವಡಿ ಮಾಡಿದರು. ಇದೆಲ್ಲ ಕೇಳಿ ಪಿಂಗ್‌ ದುಃಖೀತನಾದ. ಆದರೂ ಛಲ ಬಿಡಲಿಲ್ಲ. ಹೊಸ ಮಡಿಕೆಯಲ್ಲಿ ಇನ್ನಷ್ಟು ಫ‌ಲವತ್ತಾದ ಮಣ್ಣನ್ನು ತುಂಬಿ ಬೀಜವನ್ನು ಬಿತ್ತಿದ. ತನಗೆ ಗೊತ್ತಿದ್ದ ಎಲ್ಲ ಉತ್ತಮ ಗೊಬ್ಬರಗಳನ್ನೂ ಹಾಕಿದ. ಆದರೂ, ಪ್ರಯೋಜನವಾಗಲಿಲ್ಲ.

ಕೊನೆಗೆ ರಾಜನು ಹೇಳಿದ ದಿನ ಬಂದೇಬಿಟ್ಟಿತು. ಎಲ್ಲರೂ ತಮ್ಮ ತಮ್ಮ ಮಡಕೆಗಳನ್ನು ಹೊತ್ತುಕೊಂಡು ಅರಮನೆಯತ್ತ ನಡೆದರು. ಅವರೆಲ್ಲರ ಮಡಕೆಗಳಲ್ಲೂ ಹಚ್ಚ ಹಸಿರಾದ ಗಿಡಗಳು ಬೆಳೆದು ನಿಂತಿದ್ದವು. ತೀವ್ರ ಹತಾಶೆಗೊಳಗಾಗಿದ್ದ ಪಿಂಗ್‌, ಬೇರೇನೂ ದಾರಿ ಕಾಣದೇ ತನ್ನ ಖಾಲಿ ಮಡಕೆಯನ್ನೇ ಹೊತ್ತುಕೊಂಡ ಅರಮನೆಗೆ ಹೋದ. ರಾಜನು ಪ್ರತಿಯೊಬ್ಬರ ಬಳಿ ಬಂದು ಅವರು ಬೆಳೆದ ಗಿಡಗಳನ್ನು ವೀಕ್ಷಿಸಿದ. ಕೊನೆಗೆ ಪಿಂಗ್‌ನ ಸರದಿ ಬಂತು. ಅವನು ತಂದಿದ್ದ ಖಾಲಿ ಮಡಕೆಯನ್ನು ನೋಡಿ ರಾಜ ಅಚ್ಚರಿಯಿಂದ ಕೇಳಿದ, “ಏನಿದು? ಖಾಲಿ ಮಡಕೆಯನ್ನು ತಂದಿದ್ದೀಯಾ?’. ಪಿಂಗ್‌ ನಾಚಿಕೆಯಿಂದ ತಲೆತಗ್ಗಿಸಿದ. ನಂತರ ಹೇಳಿದ- “ದೊರೆಯೇ, ನನ್ನನ್ನು ಕ್ಷಮಿಸು. ನೀವು ಕೊಟ್ಟ ಬೀಜವನ್ನು ಬಿತ್ತಿ, ಅದನ್ನು ಬೆಳೆಸಲು ಎಲ್ಲ ರೀತಿಯ ಪ್ರಯತ್ನಗಳನ್ನೂ ಮಾಡಿದೆ. ಆದರೆ, ಬೀಜ ಮೊಳಕೆಯೊಡೆಯಲೇ ಇಲ್ಲ’ ಎಂದು ಹೇಳಿದ.

ಅಷ್ಟರಲ್ಲಿ ಪಿಂಗ್‌ನ ಕೆನ್ನೆಗೆ ಪ್ರೀತಿಯಿಂದ ಚಿವುಟಿದ ರಾಜ ಮುಗುಳ್ನಕ್ಕ. ನಂತರ ಅಲ್ಲಿ ಸೇರಿದ್ದವರನ್ನು ಉದ್ದೇಶಿಸಿ, “ನಾನಿವತ್ತು ಈ ಸಾಮ್ರಾಜ್ಯದ ಹೊಸ ಸಾಮ್ರಾಟನನ್ನು ಘೋಷಿಸುತ್ತಿದ್ದೇನೆ. ಇವನೇ ನನ್ನ ಉತ್ತರಾಧಿಕಾರಿ’ ಎಂದು ಹೇಳುತ್ತಾ ಪಿಂಗ್‌ನತ್ತ ಕೈಚಾಚಿದ. ಎಲ್ಲರೂ ಆಶ್ಚರ್ಯಚಕಿತರಾಗಿ ಪರಸ್ಪರ ಮುಖ ನೋಡಿಕೊಳ್ಳಲು ಶುರುಮಾಡಿದರು. ಅದನ್ನು ಅರಿತ ರಾಜ, “ನೋಡಿ, ಯಾರು ಪ್ರಾಮಾಣಿಕರು ಎಂಬುದನ್ನು ನನಗೆ ಪತ್ತೆಹಚ್ಚಬೇಕಿತ್ತು. ಅದಕ್ಕಾಗಿ ನಾನು ಎಲ್ಲರಿಗೂ ಬೇಯಿಸಿದ್ದ ಬಿತ್ತನೆ ಬೀಜವನ್ನು ಕೊಟ್ಟಿದ್ದೆ. ಆ ಬೀಜ ಯಾವ ಕಾರಣಕ್ಕೂ ಮೊಳಕೆಯೊಡೆಯಲು ಸಾಧ್ಯವಿಲ್ಲ. ಆದರೆ, ಪಿಂಗ್‌ ಒಬ್ಬನನ್ನು ಹೊರತುಪಡಿಸಿ ಉಳಿದವರೆಲ್ಲರೂ ನನಗೆ ಮೋಸ ಮಾಡಿ, ಬೇರೆ ಬೀಜದಿಂದ ಗಿಡಗಳನ್ನು ಬೆಳೆದಿದ್ದಾರೆ. ಹೀಗಾಗಿ, ಪಿಂಗ್‌ನ ಪ್ರಾಮಾಣಿಕತೆಯನ್ನು ಮೆಚ್ಚಿ, ಅವನನ್ನೇ ರಾಜನ ಪಟ್ಟಕ್ಕೆ ಏರಿಸುತ್ತಿದ್ದೇನೆ’ ಎಂದು ಘೋಷಿಸಿದ. ಇದನ್ನು ಕೇಳಿ ಪಿಂಗ್‌ನ ಕಣ್ಣಂಚಲ್ಲಿ ಸಂತೋಷದ ಕಣ್ಣೀರು ಜಿನುಗಿತು. ಉಳಿದವರೆಲ್ಲ ಪೆಚ್ಚು ಮೋರೆ ಹಾಕಿ, “ಬಂದ ದಾರಿಗೆ ಸುಂಕವಿಲ್ಲ’ ಎಂದು ಹೊರನಡೆದರು.

ಅನು- ಹಲೀಮತ್‌ ಸ ಅದಿಯಾ

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.