ಬಾಳೆ ಗಿಡದ ಲಕ್ಷ್ಮಿ


Team Udayavani, Apr 13, 2017, 3:50 AM IST

12-CHINNARI-5.jpg

ಆ ತೋಟದಲ್ಲೊಂದು ಬಾಳೆಯ ಗಿಡ. ನಿತ್ಯ ಒಬ್ಬಳು ಪುಟಾಣಿ ಹುಡುಗಿ ಬಂದು ಆ ಗಿಡದ ಬುಡಕ್ಕೆ ನೀರು ಹಾಕುತ್ತಿದ್ದಳು. ಒಮ್ಮೆ ಹೀಗೆ ನೀರು ಹಾಕಿ ವಾಪಸಾಗುವಾಗ, “ನನ್ನೊಂದಿಗೆ ನೀನು ಆಡಲು ಬರುತ್ತೀಯಾ?’ ಎಂಬ ಧ್ವನಿ ಆ ಬಾಳೆಗಿಡದಿಂದ ಬಂತು. ಪುಟಾಣಿ ಹುಡುಗಿ ದಿಗಿಲುಗೊಂಡು, ಅಲ್ಲಿಂದ ಓಡಿ ಅಮ್ಮನ ಮಡಿಲು ಸೇರಿದ್ದಳು.

“ಅಮ್ಮಾ, ಅಮ್ಮಾ… ಆ ಬಾಳೆ ಗಿಡ ಮಾತಾಡುತ್ತೆ. ನನ್ನನ್ನು ಆಡಲು ಕರೆಯಿತು’ ಎಂದು ಹೇಳಿದಳು. ನೀನು ಹೆದರಬೇಡ. “ಬಾಳೆ ಗಿಡದಲ್ಲಿ ದೇವತೆ ಲಕ್ಷ್ಮಿ ನೆಲೆಸಿರುತ್ತಾಳೆ. ಅವಳೇ ಮಾತಾಡಿರಬಹುದು’ ಎಂದು ಅಮ್ಮ ತಮಾಷೆ ಮಾಡುತ್ತಾ, ಮಗಳನ್ನು ಸಂತೈಸಿದಳು. ಮರುದಿನ ಮತ್ತೆ ಬಾಳೆ ಗಿಡಕ್ಕೆ ನೀರು ಹಾಕಲು ಹೋದಾಗ, “ನಾನು ಲಕ್ಷ್ಮಿ. ಈ ಬಾಳೆ ಗಿಡದಲ್ಲಿ ನೆಲೆಸುತ್ತೇನೆ. ನನಗೆ ನಿತ್ಯ ನೀರುಣಿಸುವ ನಿನಗೆ ಋಣ ಸಂದಾಯ ಮಾಡಲೇಬೇಕು. ನನ್ನ ಮನೆಗೆ ನೀನು ಊಟಕ್ಕೆ ಬರುತ್ತೀಯಾ?’ ಎಂದು ಕೇಳಿದಳು ಲಕ್ಷ್ಮಿ. ಪುಟಾಣಿ ಹುಡುಗಿ “ಹೂ’ ಎಂದು ತಲೆ ಅಲುಗಾಡಿಸಿ, ಲಕ್ಷ್ಮಿಯನ್ನು ಹಿಂಬಾಲಿಸಿ ಹೊರಟಳು.

ಸುಂದರ ಉದ್ಯಾನದಂಥ ಪ್ರದೇಶ. ಅಲ್ಲೊಂದು ಭವ್ಯ ಮನೆ. ಲಕ್ಷ್ಮಿ ಆ ಮನೆಯಲ್ಲಿ ಹುಡುಗಿಗೆ ಊಟ ಬಡಿಸಿದಳು. ಆಕೆ ಭಕ್ಷ್ಯ ಭೋಜನಗಳನ್ನು ಚಿನ್ನ, ಬೆಳ್ಳಿ ಪಾತ್ರೆಯಿಂದ ತಯಾರಿಸಿದ್ದಳು. ಹೊಟ್ಟೆ ಭರ್ತಿ ತಿಂದು ಹುಡುಗಿ ಮನೆಗೆ ಪಾಪಸು ಹೋಗಿ, ಅಮ್ಮನಿಗೆ ಎಲ್ಲ ಸಂಗತಿಯನ್ನು ಹೇಳಿದಳು.

ಅಮ್ಮನ ಸಂತೋಷಕ್ಕೆ ಪಾರವೇ ಇರಲಿಲ್ಲ. ಹುಡುಗಿ ಹೇಳಿದಳು, “ಅಮ್ಮಾ… ನಮ್ಮ ಮನೆಗೂ ಲಕ್ಷ್ಮಿ ದೇವರನ್ನು ಊಟಕ್ಕೆ ಕರೆಯೋಣ ಅಮ್ಮಾ’ ಎನ್ನುತ್ತಾ ಹಠ ಮಾಡಿದಳು. “ಬೇಡಮ್ಮಾ, ನಾವು ತುಂಬಾ ಬಡವರು. ನಾವು ವಾಸವಿರುವುದು ಗುಡಿಸಲಿನಲ್ಲಿ. ಪಾತ್ರೆಗಳೆಲ್ಲ ಜಖಂ ಆಗಿವೆ. ನಮ್ಮ ಬಟ್ಟೆಗಳೆಲ್ಲ ಬಹಳ ಹಳೆಯವು ಮತ್ತು ಕೊಳಕಾಗಿವೆ. ಹೀಗೆಲ್ಲ ಇರೋವಾಗ ನಾವು ಹೇಗೆ ಆಕೆಯನ್ನು ಮನೆಗೆ ಆಹ್ವಾನಿಸುವುದು?’ ಎಂಬುದು ಅಮ್ಮನ ಪ್ರಶ್ನೆ. “ಅಮ್ಮ, ಚಿಂತೆ ಬೇಡ. ನಮ್ಮ ಪ್ರೀತಿ, ಆತಿಥ್ಯ ಕಂಡು ಆಕೆ ಸಂತೋಷ ಪಡುತ್ತಾಳೆ. ಅವಳಿಗೆ ನಮ್ಮ ಬಡತನ ಮುಖ್ಯ ವಿಚಾರ ಆಗುವುದೇ ಇಲ್ಲ’ ಎನ್ನುತ್ತಾ ಪುಟಾಣಿ ಅಮ್ಮನನ್ನು ಒಪ್ಪಿಸಿದಳು.

ಲಕ್ಷ್ಮಿ ಮರುದಿನ ಆ ಗುಡಿಸಲಿಗೆ ಬಂದಾಗ ಅದು ಭವ್ಯ ಬಂಗಲೆ ಆಗಿ ಪರಿವರ್ತನೆ ಆಗಿತ್ತು. ಜಖಂ ಆದ ಕಂಚು- ಹಿತ್ತಾಳೆಯ ಪಾತ್ರೆಗಳೆಲ್ಲ, ಬೆಳ್ಳಿ- ಚಿನ್ನದ ಪಾತ್ರೆಗಳಾಗಿ ಪಳಪಳನೆ ನಗುತ್ತಿದ್ದವು. ತಾಯಿ- ಮಗಳು ಧರಿಸಿದ್ದ ಬಟ್ಟೆ ಹೊಸದಾಗಿತ್ತು! ಲಕ್ಷ್ಮಿ ಹೊಟ್ಟೆ ಭರ್ತಿ ಊಟ ಸೇವಿಸಿ, ಸಂತೃಪೆಯಾದಳು. ದೇವತೆ ಲಕ್ಷ್ಮಿಗೆ ಪುಟಾಣಿಯ ತಾಯಿ, “ನೀವು ಸದಾ ನಮ್ಮ ಮನೆಯಲ್ಲಿಯೇ ನೆಲೆಸಿರಿ’ ಎಂದು ವಿನಮ್ರವಾಗಿ ಕೇಳಿಕೊಂಡಳು.

“ನೀವು ಇದೇ ರೀತಿ ಶ್ರಮ ಹಾಕಿ ದುಡಿಯಿರಿ. ನಿತ್ಯ ಬಾಳೆ ಗಿಡಕ್ಕೆ ನೀರು ಹುಯ್ಯಿರಿ. ನಾನು ಖಂಡಿತಾ ನಿಮ್ಮೊಂದಿಗೆ ನೆಲೆಸುವೆ’ ಎಂದು ಹೇಳಿ ಮಾಯವಾಗಿ, ಬಾಳೆಗಿಡವನ್ನು ಸೇರಿದಳು. ಆ ಪುಟಾಣಿ ನಿತ್ಯವೂ ಬಾಳೆ ಗಿಡಕ್ಕೆ ನೀರೆರೆಯ ತೊಡಗಿದಳು. ಅದು ಫ‌ಲವಾಗಿ, ಹಣವಾಗಿ ಬಂದು ಅವರ ಮನೆ ಸೇರುತ್ತಿತ್ತು. ಲಕ್ಷ್ಮಿ ಕೊಟ್ಟ ಮಾತಿನಂತೆ ಅವರ ಮನೆಯಲ್ಲಿಯೇ ನೆಲೆಸಿದಳು!

ಸೌರಭ

ಟಾಪ್ ನ್ಯೂಸ್

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.