ರಾಜನಿಗೆ ಸಿಕ್ಕ ಉತ್ತರ


Team Udayavani, Mar 5, 2020, 5:26 AM IST

ರಾಜನಿಗೆ ಸಿಕ್ಕ ಉತ್ತರ

ಕಮಲಾಪುರ ಎಂಬ ರಾಜ್ಯದಲ್ಲಿ ಮದಗಜ ಎಂಬ ರಾಜನಿದ್ದ. ಅವನಿಗೆ ತಾನೇ ದೊಡ್ಡವನು ಎಂಬ ಅಹಂಕಾರವಿತ್ತು. ರಾಜ್ಯ ತನ್ನಿಂದಲೇ ನಡೆಯುತ್ತಿದೆ, ಜನರು ತನ್ನಿಂದಲೇ ಸುಖವಾಗಿ ಜೀವನ ಸಾಗಿಸುತ್ತಿದ್ದಾರೆ ಎಂಬ ಭಾವನೆ ಅವನಲ್ಲಿತ್ತು. ತಾನೇ ದೊಡ್ಡವನೆಂಬುದನ್ನು ಡಂಗುರ ಸಾರಿಸಿ ಪ್ರಜೆಗಳಿಗೆ ತಿಳಿಸಿದ. ಪ್ರಜೆಗಳು ರಾಜನನ್ನು ಪೂಜಿಸತೊಡಗಿದರು. ರಾಜನ ಮಾತೆ ಸರ್ವಸ್ವವಾಯಿತು.

ಕೆಲವು ದಿನಗಳ ನಂತರ ರಾಜ ಮದಗಜ ಮಾರುವೇಷದಲ್ಲಿ ಸಂಚಾರಕ್ಕೆ ಹೊರಟ. ಮಾರುವೇಷದಲ್ಲಿದ್ದ ರಾಜನನ್ನು ಯಾರೂ ಗುರುತಿಸಲಿಲ್ಲ. ಒಬ್ಬ ರೈತ ಒಂದು ಮರದ ಕೆಳಗೆ ಸುಖವಾಗಿ ಮಲಗಿದ್ದ. ರಾಜ ಅವನನ್ನು ಎಚ್ಚರಿಸಿ “ನಿನ್ನ ಸುಖನಿದ್ದೆಗೆ ಕಾರಣ ಯಾರು?’ ಎಂದು ಕೇಳಿದ. ರೈತ “ಹೊಲದಲ್ಲಿ ಕಷ್ಟಪಟ್ಟು ದುಡಿದು ಹೊಟ್ಟೆ ತುಂಬಾ ಊಟ ಮಾಡಿ ಮರದ ನೆರಳಲ್ಲಿ ಕುಳಿತಿದ್ದೆ. ಅದರಿಂದಾಗಿ ನಿದ್ದೆ ಚೆನ್ನಾಗಿ ಬಂತು. ಭೂಮಿತಾಯಿ ತುಂಬಾ ದೊಡ್ಡವಳು. ನನ್ನ ನೆಮ್ಮದಿಗೆ ಅವಳೇ ಕಾರಣ’ ಎಂದನು.

ರಾಜನು ಹಾಗೆಯೇ ಮುಂದೆ ಹೊರಟ. ಅಲ್ಲೊಂದು ವೈದ್ಯಶಾಲೆ ಇತ್ತು. ಅಲ್ಲಿ ಸರದಿಯಲ್ಲಿ ನಿಂತ ಜನರನ್ನು ರಾಜನು ಮಾತನಾಡಿಸಿದ. ಅವರಲ್ಲಿ ಒಬ್ಬ “ಈ ವೈದ್ಯ ತುಂಬಾ ಜಾಣ. ಅನೇಕ ರೋಗಗಳನ್ನು ವಾಸಿ ಮಾಡಿದ್ದಾನೆ. ಇವನಿಂದಾಗಿ ನಾವು ಇಂದು ಬದುಕಿದ್ದೇವೆ. ಇವನಿಗಿಂತ ಯಾರು ದೊಡ್ಡವರಿಲ್ಲ’ ಎಂದು ವೈದ್ಯನನ್ನು ಕೊಂಡಾಡಿದರು. ರಾಜನು ಮುಂದೆ ಹೋದಾಗ ಒಂದು ಧರ್ಮಛತ್ರ ಕಂಡಿತು. ಅಲ್ಲಿ ನಿಂತ ಜನರನ್ನು ಮಾತನಾಡಿಸಿದ. ಅವರು “ಧರ್ಮಛತ್ರವನ್ನು ನಡೆಸುತ್ತಿರುವ ದಾನಿ ತುಂಬಾ ದೊಡ್ಡವರು. ಅವರು ಹಸಿದವರಿಗೆ ಅನ್ನ ನೀಡುತ್ತಾ ಬಂದಿದ್ದಾರೆ. ಅವರು ತುಂಬಾ ದೊಡ್ಡವರು’ ಎಂದು ಹೇಳಿದರು.

ಕೊನೆಗೆ ರಾಜನಿಗೆ ಒಂದು ಸತ್ಯ ಗೊತ್ತಾಯಿತು. ಈ ಜಗತ್ತಿನಲ್ಲಿ ಯಾರೇ ಒಬ್ಬ ವ್ಯಕ್ತಿ ದೊಡ್ಡವನಾಗಲು ಸಾಧ್ಯವಿಲ್ಲ. ತನಗಿಂತ ದೊಡ್ಡವರು ಹಲವಾರು ಜನರಿ¨ªಾರೆ ಎಂಬುದು ಅವನಿಗೆ ಅರ್ಥವಾಯಿತು.

 - ವೆಂಕಟೇಶ ಚಾಗಿ

ಟಾಪ್ ನ್ಯೂಸ್

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.