ಮಹಾಯುದ್ಧ ಮುಗಿದದ್ದು ತಿಳಿಯದೆ, ಕಾಡಿನಲ್ಲಿಯೇ ಅವಿತಿದ್ದ


Team Udayavani, Apr 4, 2019, 6:00 AM IST

Chinnari-History

ಹಿರೂ ಒನೋಡ, ಜಪಾನ್‌ ಸೇನೆಯಲ್ಲಿ ಅಧಿಕಾರಿಯಾಗಿದ್ದಾತ. ದೇಶಕ್ಕಾಗಿ ಹೋರಾಡುವುದೆಂದರೆ ಅದರಷ್ಟು ಪರಮೋಚ್ಛ ಸೇವೆ ಬೇರೆ ಯಾವುದೂ ಇಲ್ಲವೆಂದು ನಂಬಿದ್ದವ. ಎರಡನೇ ವಿಶ್ವ ಮಹಾಯುದ್ಧದ ಸಂದರ್ಭದಲ್ಲಿ ಆತನನ್ನು ಫಿಲಿಪ್ಪೀನ್ಸ್‌ ಬಳಿ ನಿಯೋಜಿಸಲಾಗಿತ್ತು. ಜಪಾನಿ ಪಡೆಗಳ ಮೇಲೆ ಶತ್ರು ಪಾಳೆಯದವರು ತೀವ್ರತರವಾದ ದಾಳಿ ನಡೆಸಿದಾಗ ಜಪಾನಿ ಸೇನೆ ಅನಿವಾರ್ಯವಾಗಿ ಹಿಮ್ಮೆಟ್ಟಲೇಬೇಕಾಯಿತು. ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸೈನಿಕರು ಕಾಡಿಗೆ ನುಗ್ಗಿದರು. ಅವರಲ್ಲಿ ಹಿರೂ ಕೂಡಾ ಇದ್ದರು. ದುರಾದೃಷ್ಟವಶಾತ್‌ ಜಪಾನಿ ಸೈನಿಕರಲ್ಲಿ ಅವರನ್ನು ಹೊರತುಪಡಿಸಿ ಯಾರೊಬ್ಬರೂ ಉಳಿಯಲಿಲ್ಲ. ಗೆರಿಲ್ಲಾ ಯುದ್ಧಕಲೆಯಲ್ಲಿ ಪರಿಣತಿ ಪಡೆದಿದ್ದ ಹಿರೂ, ಕಾಡಿನಲ್ಲಿ ಯಾರ ಕಣ್ಣಿಗೂ ಬೀಳದಂತೆ ಎಚ್ಚರವಹಿಸಿದರು. ಕಾಡಿನಲ್ಲಿ ಸಿಕ್ಕ ಬಾಳೆಹಣ್ಣು, ತೆಂಗಿನಕಾಯಿ ಮುಂತಾದ ಆಹಾರವನ್ನೇ ಸೇವಿಸಿ ತಮ್ಮ ಜೀವ ಉಳಿಸಿಕೊಂಡರು. ಯುದ್ಧ ಕೊನೆಯಾಗಿದ್ದೂ ಅವರಿಗೆ ತಿಳಿಯಲಿಲ್ಲ. ಒಂದು ರೀತಿಯ ಮನೋಬ್ರಾಂತಿಗೆ ಅವರು ಒಳಗಾಗಿದ್ದರು. ಕಾಡಿಗೆ ಕಟ್ಟಿಗೆ ತರಲು ಬಂದ ನಾಗರಿಕರನ್ನೇ ಸೈನಿಕರೆಂದು ತಿಳಿದು ಹಲ್ಲೆ ನಡೆಸಿದ್ದರು. ಈ ರೀತಿಯಾಗಿ ಹಿರೂ ಸುಮಾರು 29 ವರ್ಷಗಳನ್ನು ಶತ್ರುಭಯದಿಂದ ಕಾಡಿನಲ್ಲಿಯೇ ಕಳೆದರು. ಆತನನ್ನು ಮರಳಿ ತಾಯ್ನಾಡಿಗೆ ಕರೆತರಲು ಸರ್ಕಾರ ವಿಶೇಷ ನಿಯೋಗವನ್ನೇ ಅವನಿದ್ದಲ್ಲಿಗೆ ಕಳಿಸಿತು.

ಹಿರೂ ಟೊಕಿಯೋಗೆ ಕಾಲಿಟ್ಟಾಗ ಅವನನ್ನು ಸ್ವಾಗತಿಸಲು ಅಪಾರ ಜನಸ್ತೋಮವೇ ನೆರೆದಿತ್ತು. ದಶಕಗಳ ಹಿಂದೆ ತಾನು ಫಿಲಿಪ್ಪೀನ್ಸ್‌ಗೆ ಹೊರಡುವಾಗ ಇದ್ದ ಜಪಾನ್‌ನ ಪರಿಸ್ಥಿತಿಯೇ ಬೇರೆ. ಎಲ್ಲೆಲ್ಲೂ ಬಾಂಬುಗಳ ಸುರಿಮಳೆ, ಗಲಭೆ, ದೊಂಬಿ, ಅರಾಜಕತೆ. ಅದೇ ಈಗ ಎತ್ತರದ ಗಗನಚುಂಬಿ ಕಟ್ಟಡಗಳು, ವಾಹನಗಳು, ರಸ್ತೆಗಳು ಎಲ್ಲವನ್ನೂ ನೋಡಿ ಹಿರೂಗೆ ಕನಸಿನ ನಗರಿಗೆ ಬಂದ ಅನುಭವವಾಗಿತ್ತು!

— ಹವನ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.