ಕೊಕ್ಕರೆಯ ಕತೆ


Team Udayavani, Nov 29, 2018, 6:00 AM IST

v-4.jpg

ಒಂದು ಕೊಕ್ಕರೆ ಕೊಳಗಳಲ್ಲಿ ಮೀನನ್ನು ಹಿಡಿದು ತಿನ್ನುತ್ತಿತ್ತು. ಆದರೆ ವಯಸ್ಸಾದ ಮೇಲೆ, ಅದರ ಮೈಯಲ್ಲಿ ಶಕ್ತಿ ಉಡುಗಿ, ಮೀನನ್ನು ಹಿಡಿಯಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಏನು ಮಾಡಬೇಕೆಂದು ತೋರದೆ ಚಿಂತಿಸುತ್ತಾ ಕೊಳದ ಬಳಿ ಕೂತಿದ್ದಾಗ, ಅದನ್ನು ಏಡಿಯೊಂದು ನೋಡಿತು. “ನೀನ್ಯಾಕೆ ಅಷ್ಟೊಂದು ಚಿಂತಿಸುತ್ತಿದ್ದೀಯಾ?’ ಎಂದು ಏಡಿ ಕೊಕ್ಕರೆಯನ್ನು ಕೇಳಿತು. “ಎಷ್ಟೋ ವರ್ಷಗಳಿಂದ ಈ ಕೊಳದಲ್ಲಿ ಮೀನನ್ನು ಹಿಡಿದು ಹಿಡಿದು ತಿನ್ನುತ್ತಿದ್ದೆ. ಇನ್ನು ಮುಂದೆ ನಾನು ಉಪವಾಸ ಸಾಯಬೇಕೋ ಏನೋ…’ ಎಂದು ದುಃಖಪಟ್ಟುಕೊಂಡು ನುಡಿಯಿತು ಕೊಕ್ಕರೆ. “ಅದೇಕೆ ಹಸಿವಿನಿಂದ ಸಾಯಬೇಕು?’ ಎಂದು ಏಡಿ ಕೇಳಿತು. “ಸ್ವಲ್ಪ ಹೊತ್ತಿನ ಹಿಂದೆ ಕೆಲವು ಬೆಸ್ತರು ಇದೇ ದಾರಿಯಲ್ಲಿ ನಡೆದುಹೋದರು. ಅವರು ಆಡಿದ ಮಾತುಗಳು ನನ್ನ ಕಿವಿಗೆ  ಬಿದ್ದವು. ಅವರು ನಾಳೆ ಬಂದು ಬಲೆ ಹಾಕಿ ಈ ಕೊಳದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಂಡು ಹೋಗುತ್ತಾರಂತೆ. ಆಗ ನನಗೇನು ಉಳಿಯುತ್ತದೆ? ಓ ದೇವರೆ, ನಾನೇನು ಮಾಡಲಿ?’ ಎಂದು ಕೊಕ್ಕರೆ ನಿಟ್ಟುಸಿರುಬಿಟ್ಟಿತು. 

ಈ ದುಃಖದ ಸುದ್ದಿಯನ್ನು ಏಡಿ ಮೀನುಗಳಿಗೆ ತಿಳಿಸಿತು. ಅವೆಲ್ಲವೂ ಭಯದಿಂದ ತತ್ತರಿಸಿದವು. ನಮ್ಮನ್ನು ಕಾಪಾಡು, ಎಂದು ಅವು ಕೊಕ್ಕರೆಯನ್ನು ಬೇಡಿಕೊಂಡವು. “ನಾನೊಂದು ಹಕ್ಕಿ, ಅಷ್ಟೆ. ಮನುಷ್ಯರ ಎದುರು ನನ್ನದೇನೂ ನಡೆಯುವುದಿಲ್ಲ. ಆದರೂ ನಿಮಗೆ ಸಹಾಯ ಮಾಡಲು ಪ್ರಯತ್ನಿಸುತ್ತೇನೆ. ಇಲ್ಲಿಂದ ಸ್ವಲ್ಪ ದೂರದಲ್ಲಿ ಇನ್ನೊಂದು ಕೊಳ ಇದೆ. ನಾನು ನಿಮ್ಮನ್ನು ಅಲ್ಲಿಗೆ ಒಯ್ಯುತ್ತೇನೆ’ ಎಂದಿತು ಹಕ್ಕಿ.

 ಪ್ರತಿಯೊಂದು ಮೀನಿಗೂ ಆ ಮತ್ತೂಂದು ಕೊಳಕ್ಕೆ ತಾನು ಮೊದಲು ಹೋಗಬೇಕು ಎಂಬ ಆತುರ. ಆದರೆ, ಕೊಕ್ಕರೆಗೆ ಅವೆಲ್ಲವನ್ನೂ ಒಂದೇ ಬಾರಿ ಕರೆದೊಯ್ಯುವುದು ಸಾಧ್ಯವಿರಲಿಲ್ಲ. ಅದು ಒಂದು ಬಾರಿಗೆ ಒಂದೇ ಮೀನನ್ನು ತನ್ನ ಕೊಕ್ಕಿನಲ್ಲಿ ಹಿಡಿದುಕೊಂಡು ದೂರದ ಕಲ್ಲು ಬಂಡೆಯ ಮರೆಗೆ ಹೋಗಿ ತಿಂದುಬಿಡುತ್ತಿತ್ತು. ಮತ್ತೆ ಮರಳಿ ಮತ್ತೂಂದು ಮೀನನ್ನು ಒಯ್ಯತ್ತಿತ್ತು. ಸತ್ತ ಮೀನುಗಳೇನೂ ಸಾಕ್ಷಿ ಹೇಳುವುದಕ್ಕಾಗುವುದಿಲ್ಲ ಅಲ್ಲವೇ? ಬದುಕಿರುವ ಮೀನುಗಳಿಗೆ ಪಾಪ ಏನು ಗೊತ್ತು? ಆ ಮೀನುಗಳಿಗೆ ಕೊಕ್ಕರೆ ತಮ್ಮನ್ನು ಕಾಪಾಡುತ್ತಿರುವಂತೆ ಕಾಣಿಸಿತು. 

ಪ್ರತಿಯೊಂದು ಮೀನು ಕೊಕ್ಕರೆಗಾಗಿ ಆತಂಕದಿಂದ ಕಾಯುತ್ತಿತ್ತು. ಹಲವಾರು ಮಿನುಗಳನ್ನು ತಿಂದ ಮೇಲೆ ಕೊಕ್ಕರೆಗೆ ಏಡಿಯನ್ನೇ ತಿನ್ನಬೇಕೆಂಬ ಆಸೆಯಾಯಿತು. ತನ್ನ ಜೊತೆ ಮಾತಾಡಿದ ಏಡಿಯನ್ನೇ ಕರೆದುಕೊಂಡು ದೂರದ ಬಂಡೆಗೆ ಅದನ್ನು ಕರೆದೊಯ್ದಿತು. ಏಡಿಗೆ ಅಲ್ಲಿ ಕಾಣಿಸಿದ್ದೇನು? ಬರೀ ಮೀನಿನ ಮೂಳೆಗಳು! ಕೊಕ್ಕರೆಯ ಮೋಸ ಅದಕ್ಕೆ ತಿಳಿದುಹೋಯಿತು. ಏಡಿ, ಕೊಕ್ಕರೆಯ ಕತ್ತನ್ನು ಕಚ್ಚಿ ಹಿಡಿದು ಎರಡು ತುಂಡು ಮಾಡಿ ಬಿಟ್ಟಿತು.

 (ಓರಿಯೆಂಟಲ್‌ ಲಾಂಗ್‌ಮನ್‌ ಪಂಚತಂತ್ರ ಪುಸ್ತಕದಿಂದ ಆರಿಸಿದ್ದು)

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.