ದುಷ್ಟರನ್ನು ದೂರವಿಡಬೇಕು


Team Udayavani, Jan 16, 2020, 5:35 AM IST

Chinnari-2

ಅದೊಂದು ಪಟ್ಟಣ. ಹತ್ತಾರು ಪುಟ್ಟ ಪುಟ್ಟ ಮನೆಗಳಿದ್ದವು. ಅಲ್ಲಿ ವಾಸವಿದ್ದವರೆಲ್ಲ ಪಟ್ಟಣದ ಫ್ಯಾಕ್ಟರಿಯೊಂದರಲ್ಲಿ ಕಾರ್ಮಿಕರು. ಕಡಿಮೆ ಸಂಬಳದಲ್ಲಿ ಹೇಗೋ ಜೀವನ ಸಾಗಿಸುತ್ತಿದ್ದರು. ಪಟ್ಟಣದ ದುಬಾರಿ ವಸ್ತುಗಳು ಅವರ ಜೀವನವನ್ನು ದುಸ್ತರಗೊಳಿಸಿದ್ದವು. ಹೀಗಾಗಿ ಅವರು ದುಂದುವೆಚ್ಚ ಮಾಡದೇ ಸರಳವಾಗಿ ಬದುಕಿದ್ದರು.

ಅವರ ಮನೆಗಳಿಗೆ ನಿತ್ಯ ಹಾಲು ತರುತ್ತಿದ್ದ ಹಾಲಪ್ಪ ಲೀಟರ್‌ ಹಾಲಿಗೆ ಹೆಚ್ಚುವರಿಯಾಗಿ ಎರಡು ರೂಪಾಯಿ ಪಡೆಯುತ್ತಿದ್ದವ “ನಾಳೆಯಿಂದ ಐದು ರೂಪಾಯಿ ಹೆಚ್ಚಿಗೆ ಕೊಟ್ಟರೆ ಮಾತ್ರ ಹಾಲು ಕೊಡುತ್ತೇನೆ. ಇಲ್ಲದಿದ್ದರೆ ಆಗದು’ ಎಂದು ಕಡ್ಡಿ ಮುರಿದಂತೆ ಹೇಳಿಬಿಟ್ಟ. ಮೊದಲೇ ಲೆಕ್ಕ ಹಾಕಿ ಖರ್ಚು ಮಾಡುತ್ತಿದ್ದ ಆ ಬಡ ಕಾರ್ಮಿಕರಿಗೆ ಇದು ಭಾರವೆನಿಸಿತು. ಆ ಸಂಜೆ ಎಲ್ಲರೂ ಸಭೆ ಸೇರಿ ತಲಾ ಎರಡು ಸಾವಿರ ರೂಪಾಯಿ ಸೇರಿಸಿ ಒಂದು ಜರ್ಸಿ ಹಸು ಖರೀದಿಸಲು ತೀರ್ಮಾನಿಸಿದರು. ಸಹಕಾರ ತತ್ವದಂತೆ ಅದರ ಜವಾಬ್ದಾರಿ ಹಂಚಿಕೊಳ್ಳುವುದು ಎಂದು ನಿರ್ಧರಿಸಿದರು. ಆದರೆ ಇದು ಜಿಪುಣ ಶಂಕ್ರಪ್ಪನಿಗೆ ಇಷ್ಟವಿರಲಿಲ್ಲ. ಕೈಯಿಂದ ಹಣ ಖರ್ಚು ಮಾಡುವುದೆಂದರೆ ಅವನಿಗೆ ಆಗುತ್ತಿರಲಿಲ್ಲ. ಬಡವರ ಅವಶ್ಯಕತೆಯನ್ನೇ ಬಂಡವಾಳ ಮಾಡಿಕೊಂಡು ಬಡ್ಡಿ ಸಾಲ ನೀಡುತ್ತ ಅವನು ಶಿåàಮಂತನಾಗಿದ್ದ.

ಎಲ್ಲರೂ ಒಪ್ಪಂದದಂತೆ ಎರಡು ಸಾವಿರ ಕೊಟ್ಟರೆ ಶಂಕ್ರಪ್ಪ ನಂತರ ಕೊಡುತ್ತೇನೆಂದ. ಅವನ ಗುಣ ಗೊತ್ತಿದ್ದ ಎಲ್ಲರೂ ತಾವೇ ಹಣ ಹಾಕಿ ಹಸು ತಂದು ಪಾಳಿ ಮೇಲೆ ನಿರ್ವಹಣೆ ಹಂಚಿಕೊಂಡರು. ದಿನಕ್ಕೊಬ್ಬರು ಹಸು ಮೇಯಿಸುವುದು, ಹಾಲು ಕರೆದು ಎಲ್ಲರಿಗೂ ಸಮವಾಗಿ ಹಂಚುವುದು ಎಂದು ಒಪ್ಪಂದವಾಗಿತ್ತು. ಎಲ್ಲರೂ ತಮ್ಮ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದರೆ ಶಂಕ್ರಪ್ಪ ಹಸುವಿಗೆ ಸರಿಯಾಗಿ ಮೇಯಿಸದಿರುವುದು. ಅರ್ಧದಷ್ಟು ಹಾಲು ಕದ್ದು ಹೊರಗಡೆ ಮಾರುವುದು. ಉಳಿದ ಹಾಲಿಗೆ ನೀರು ಬೆರೆಸಿ ಪಾಲುದಾರರಿಗೆ ಹಂಚುವುದು ಮಾಡುತ್ತಿದ್ದ. ಸರಿಯಾದ ಸಮಯ ನೋಡಿ ಅವನಿಗೆ ಪಾಠ ಕಲಿಸಬೇಕೆಂದು ಹಿರಿಯರು ನಿರ್ಧರಿಸಿದರು.

ಶಂಕ್ರಪ್ಪ ಹಾಲು ಕರೆಯುವ ದಿನ ಹಿರಿಯರು ಹಸುವನ್ನು ಕೆರಳುವಂತೆ ಮಾಡಿ ಹೋದರು. ಶಂಕ್ರಪ್ಪ ಹಾಲನ್ನು ಕರೆದ ನಂತರ ಚೊಂಬನ್ನು ನೆಲದ ಮೇಲೆ ಇಡುವ ಸಂದರ್ಭದಲ್ಲಿ ಹಸು ಅವನನ್ನು ಜೋರಾಗಿ ಒದೆಯಿತು. ಆಗ ಚೊಂಬಿನಲ್ಲಿದ್ದ ಹಾಲು ಕೂಡಾ ಚೆಲ್ಲಿಹೋಯಿತು. ಪ್ರತೀ ಸಲ ಶಂಕ್ರಪ್ಪ ಹಾಲು ಕರೆದಾಗಲೂ ಇದು ಮುಂದುವರಿಯಿತು. ಅವನಿಗೆ ಹಾಲು ಸಿಗದಾಯಿತು. ಅವನು ಹಿರಿಯರ ಬಳಿ ತನ್ನ ಸಮಸ್ಯೆಯನ್ನು ತೋಡಿಕೊಂಡ. ಅವರು ಹಸುವಿಗೆ ಚೆನ್ನಾಗಿ ಮೇವು ಹಾಕಿದರೆ, ಅನಾಚಾರ ಮಾಡದೇ ಇದ್ದರೆ ಇಂಥ ಸಮಸ್ಯೆಗಳು ಬರುವುದಿಲ್ಲ ಎಂದರು. ಶಂಕ್ರಪ್ಪನಿಗೆ ಎಲ್ಲವೂ ಅರ್ಥವಾಯಿತು. ಅವನು ತನ್ನ ತಪ್ಪನ್ನು ಸರಿಪಡಿಸಿಕೊಂಡ.

-ಅಶೋಕ ವಿ. ಬಳ್ಳಾ

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.