ಬಂಗಾರದ ಜಿಂಕೆಗೆ ಏನಾಯಿತು?


Team Udayavani, May 25, 2017, 11:03 AM IST

Deer.jpg

ಕಾಡಿನಲ್ಲಿ ಜಿಂಕೆಯೊಂದಿತ್ತು. ಅದರ ಅಂದ- ಚೆಂದ ಸುತ್ತಮುತ್ತಲ ಎರಡು ಮೂರು ಕಾಡಿನಲ್ಲೆಲ್ಲಾ ಪ್ರಖ್ಯಾತಿ ಪಡೆದಿತ್ತು. ಪ್ರಾಣಿ ಪಕ್ಷಿಗಲೆಲ್ಲಾ ಅದನ್ನು ಬಾಯಿ ತುಂಬಾ ಹೊಗಳುತ್ತಿದ್ದವು. 

ಈ ವಿಷಯವಾಗಿ ಜಿಂಕೆಗೆ ಗರ್ವವೂ ಇತ್ತು. ಬರಬರುತ್ತಾ ಯಾಕೋ ಇತರೆ ಪ್ರಾಣಿಗಳು ತನ್ನನ್ನು ಹೊಗಳುವುದನ್ನು ಕಡಿಮೆ ಮಾಡಿವೆಯಲ್ಲ ಎಂದೆನಿಸತೊಡಗಿತು ಜಿಂಕೆಗೆ. ಅದಕ್ಕೆ ಇನ್ನೂ ಚೆಂದ ಕಾಣುವ ವರವನ್ನು ಪಡೆಯುವ ಉದ್ದೇಶದಿಂದ ವನದೇವತೆಯನ್ನು ಕುರಿತು ತಪಸ್ಸು ಮಾಡತೊಡಗಿತು. ತಿಂಗಳುಗಳು ಕಳೆದವು. ಜಿಂಕೆಯ ತಪಸ್ಸಿಗೆ ಮೆಚ್ಚಿದ ವನದೇವತೆ ಪ್ರತ್ಯಕ್ಷಳಾದಳು. ಏನು ಬೇಕೋ ಕೇಳಿಕೋ ಎಂದಾಗ ಜಿಂಕೆಗೆ ಅತೀವ ಸಂತೋಷ ಉಂಟಾಯಿತು. ಅದು ತನಗೆ ಬಂಗಾರದ ಮೈ ಬೇಕೆಂದು ಕೋರಿಕೊಂಡಿತು. ಆ ಕೂಡಲೆ ಜಿಂಕೆಯ ಮೈ ಪೂರ್ತಿ ಬಂಗಾರದಿಂದ ಕಂಗೊಳಿಸತೊಡಗಿತು. ಈಗಂತೂ ಕಾಡಿನ ಜನರು ಜಿಂಕೆಯ ಸೌಂದರ್ಯ ಕಂಡು ಹುಚ್ಚೆದ್ದು ಹೋದರು. ಎಲ್ಲಿ ಹೋದರೂ ಜಿಂಕೆಯದ್ದೇ ಮಾತು. ಇದರಿಂದ ಜಿಂಕೆ ಉಬ್ಬಿಹೋಯಿತು. ತಾನು ತಪಸ್ಸು ಮಾಡಿದಕ್ಕೂ ಸಾರ್ಥಕವಾಯಿತು ಎಂದುಕೊಂಡಿತು. 

ಮೊದಲೇ ಗರ್ವದಿಂದ ಬೀಗುತ್ತಿದ್ದ ಜಿಂಕೆ ಈಗಂತೂ ಇತರೆ ಪ್ರಾಣಿಗಳನ್ನು ತನ್ನ ಸೌಂದರ್ಯಕ್ಕೆ ಹೋಲಿಸಿಕೊಂಡು ಅವಮಾನಿಸತೊಡಗಿತು. ಒಂದು ದಿನ ರಾಜನೊಬ್ಬ ವಾಯುವಿಹಾರಕ್ಕೆಂದು ಕಾಡಿಗೆ ಬಂದಿದ್ದ. ಆಗ ಬಂಗಾರದ ಜಿಂಕೆ ಕಣ್ಣಿಗೆ ಬಿದ್ದಿತು. ಒಂದು ಕ್ಷಣದಲ್ಲಿ ಕಣ್ಣಿಗೆ ಬಿದ್ದು ಮಿಂಚೆ ಮರೆಯಾದ ಆ ಅಪರೂಪದ ಜಿಂಕೆ ತನಗೆ ಬೇಕೆಂದು ಅಪ್ಪಣೆ ಹೊರಡಿಸಿದ. ಬಂಗಾರದ ಜಿಂಕೆಯನ್ನು ಹಿಡಿದುಕೊಟ್ಟವರಿಗೆ ಲಕ್ಷ ಲಕ್ಷ ಇನಾಮನ್ನು ಘೋಷಿಸಿದ. ಕಡೆಗೂ ಬಂಗಾರದ ಜಿಂಕೆ ಬೇಟೆಗಾರನೊಬ್ಬನ ಕುಣಿಕೆಗೆ ಸಿಕ್ಕಿಬಿದ್ದಿತು. ರಾಜ ಬಂಗಾರದ ಜಿಂಕೆಯನ್ನು ಆಸ್ಥಾನದಲ್ಲಿ ಬಂಗಾರದ ಪಂಜರದಲ್ಲಿಟ್ಟ. ಹಾಯಾಗಿ ಸ್ವತಂತ್ರವಾಗಿ ಜೀವಿಸುತ್ತಿದ್ದ ಜಿಂಕೆ ಅತಿಯಾದ ಆತ್ಮವಿಶ್ವಾಸಕ್ಕೆ ಬಲಿಯಾಯಿತು.

– ಅಮರಯ್ನಾ ಪತ್ರಿಮಠ, ಯಾದಗಿರಿ

ಟಾಪ್ ನ್ಯೂಸ್

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.