ತ್ರಿಗುಣಗಳಿಗೆ ಅನುಗುಣವಾದ ದಿನಚರಿ

ಮಠದ ಬೆಳಕು

Team Udayavani, Aug 17, 2019, 5:00 AM IST

p-8

ನಮ್ಮ ಮನಸ್ಸು ಸತ್ವರಜಸ್ತಮೋ ಗುಣಗಳಲ್ಲಿ ಓಡಾಡುತ್ತಿರುತ್ತದೆ. ಆಯಾ ವೇಳೆಯಲ್ಲಿ ಸತ್ವ ಗುಣದಲ್ಲಿಯೂ, ರಜೋ ಗುಣದಲ್ಲಿಯೂ, ತಮೋ ಗುಣದಲ್ಲಿಯೂ ಇರುತ್ತದೆ. ದಿನದ ಇಪ್ಪತ್ತ ನಾಲ್ಕು ಗಂಟೆಗಳನ್ನು ಎಂಟು ಗಂಟೆಗಳ ಮೂರು ಭಾಗಗಳನ್ನಾಗಿ ಮಾಡಿದರೆ, ಆ 8 ಗಂಟೆಗಳಲ್ಲಿ ಬೆಳಗ್ಗೆ 4 ಗಂಟೆಯಿಂದ 8 ಗಂಟೆಯವರೆಗಿನ 4 ತಾಸು ಹಾಗೂ ಸಾಯಂಕಾಲದ 4 ಗಂಟೆಯಿಂದ ರಾತ್ರಿ 8ರ ವರೆಗಿನ 4 ತಾಸು ಮನಸ್ಸು ಸತ್ವಗುಣದಲ್ಲಿರುತ್ತದೆ. ಆದ್ದರಿಂದ ಆ ವೇಳೆಯಲ್ಲಿ ಮನಸ್ಸು ಬೇಗ ಏಕಾಗ್ರಗೊಳ್ಳುತ್ತದೆ. ಏಕಾಗ್ರತೆ ಎಂಬುದು ಸತ್ವಗುಣದ ಒಂದು ಅಭಿವ್ಯಕ್ತಿ. ಚಂಚಲತೆ ರಜೋಗುಣದ ಅಭಿವ್ಯಕ್ತಿ. ನಿದ್ರೆ ತಮೋಗುಣದ ಅಭಿವ್ಯಕ್ತಿ. ತಮೋಗುಣ ಉದ್ದೀಪನವಾದಾಗ, ನಿದ್ರೆ ಆವರಿಸಿಕೊಳ್ಳುತ್ತದೆ. ರಜೋಗುಣ ಉದ್ದೀಪನವಾದಾಗ ಚಟುವಟಿಕೆ, ಚಂಚಲತೆಗಳುಂಟಾಗುತ್ತವೆ. ಸತ್ವಗುಣ ಉದ್ದೀಪನವಾದಾಗ ಜ್ಞಾನ, ಏಕಾಗ್ರತೆಗಳುಂಟಾಗುತ್ತವೆ. ನಮ್ಮ ಮನಸ್ಸು ಬೆಳಗಿನ ಮತ್ತು ಸಾಯಂಕಾಲದಲ್ಲಿ ಸತ್ವಗುಣದಲ್ಲಿ ಇರುವುದರಿಂದ, ಈ ಸಂಧ್ಯಾಕಾಲಗಳಲ್ಲಿ ಮನಸ್ಸು ಬೇಗ ಏಕಾಗ್ರಗೊಳ್ಳುತ್ತದೆ. ಅದಕ್ಕೋಸ್ಕರವೇ ಸಂಧ್ಯಾಕಾಲದಲ್ಲಿ ದೇವರ ಚಿಂತನೆ ಮಾಡಬೇಕು ಎನ್ನುವುದು.

ಉಳಿದ 16 ಗಂಟೆಗಳಲ್ಲಿ ಬೆಳಗಿನ 8 ಗಂಟೆಯಿಂದ ಸಾಯಂಕಾಲದ 4 ಗಂಟೆಯ ತನಕ ರಜೋಗುಣದ ಕಾಲ. ಆ ಕಾಲವು ಚಟುವಟಿಕೆಗಳಿಂದ ಕೂಡಿರಬೇಕು. ರಾತ್ರಿ 8 ಗಂಟೆಯಿಂದ ಬೆಳಗಿನ ಜಾವದ 4 ಗಂಟೆಯವರೆಗಿನ 8 ತಾಸು ತಮೋಗುಣದ ವೇಳೆ. ರಾತ್ರಿ ಸರಿಯಾಗಿ ನಿದ್ರೆಯನ್ನು ಮಾಡಬೇಕು. ಏಕೆಂದರೆ, ಸಾಮಾನ್ಯ ಮನುಷ್ಯನಿಗೆ ತಮೋಗುಣವೇ ವಿಶ್ರಾಂತಿ. ಜ್ಞಾನಿಗಳು ಮತ್ತು ತುಂಬಾ ಉನ್ನತ ಸಾಧಕರು ಸತ್ವಗುಣದಲ್ಲಿಯೇ ವಿಶ್ರಾಂತಿಯನ್ನು ಪಡೆಯುತ್ತಾರೆ. ಜಾಗೃತಾವಸ್ಥೆಯಲ್ಲಿಯೂ ವಿಶ್ರಾಂತಿಯನ್ನು ಪಡೆಯಬಹುದೆಂಬುದಾಗಿ ತಿಳಿದವರು ಹೇಳುತ್ತಾರೆ. ಅದು ತುಂಬಾ ಮೇಲ್ಮಟ್ಟದ ಸಾಧಕರ ವಿಷಯ. ಉಳಿದವರಿಗೆಲ್ಲ ತಮೋಗುಣದಲ್ಲಿಯೇ ವಿಶ್ರಾಂತಿ. ಹಾಗಾಗಿ, ಸರಿಯಾದ ವೇಳೆಯಲ್ಲಿ ವಿಶ್ರಾಂತಿಯನ್ನು ಮಾಡಬೇಕು. ಉಳಿದ ವೇಳೆಯಲ್ಲಿ ಆಯಾ ಗುಣಕ್ಕೆ ತಕ್ಕಂತೆ ಚಟುವಟಿಕೆಗಳನ್ನು ಜೋಡಿಸಿಕೊಂಡರೆ, ಆಗ ಮಾನಸಿಕವಾಗಿಯೂ, ದೈಹಿಕವಾಗಿಯೂ ಆರೋಗ್ಯವು ಲಭಿಸುತ್ತದೆ. ಮತ್ತು ಆ ಚಟುವಟಿಕೆಯಲ್ಲಿಯೂ ವಿಶೇಷವಾದ ಪ್ರಗತಿಯನ್ನು ಕಾಣಲು ಸಾಧ್ಯವಿದೆ.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.