ಅರಬೈಲು ಘಾಟಿಯ ಅಭಯ ಮಾರುತಿ


Team Udayavani, Apr 6, 2019, 6:00 AM IST

e-4

ಅರಬೈಲು ಘಾಟಿಯ ಶ್ರೀ ಮಾರುತಿ ದೇವಾಲಯಕ್ಕೆ ಪೌರಾಣಿಕ ಹಿನ್ನೆಲೆಯಿದೆ. ಮಾರುತಿಯು ವಾಯುವ್ಯ ದಿಕ್ಕಿಗೆ ಅಭಿಮುಖವಾಗಿ ನಿಂತಿರುವುದು ಇಲ್ಲಿನ ವಿಶೇಷ. ಹನುಮಜಯಂತಿ ಸಂದರ್ಭದಲ್ಲಿ ಇಲ್ಲಿ ಜಾತ್ರೋತ್ಸವವೂ ನಡೆಯುತ್ತದೆ.

ಶ್ರೀರಾಮನನ್ನು ಭಜಿಸುವ, ಆರಾಧಿಸುವ ಭಕ್ತರೆಲ್ಲರೂ ತನ್ನ ಆಪ್ತರೆಂದು ಪರಿಗಣಿಸುವ ಶ್ರೀಮಾರುತಿ ಸದಾ ಭಕ್ತ ವತ್ಸಲ. ಅಷ್ಟೇ ಅಲ್ಲ, ತನ್ನನ್ನು ನಂಬಿ ಬರುವ, ಸದಾ ಧ್ಯಾನಿಸುವ ಭಕ್ತರ ಸಕಲ ಇಷ್ಟಾರ್ಥಗಳನ್ನು ಆತ ನೆರವೇರಿಸುತ್ತಾನೆ ಎಂಬ ನಂಬಿಕೆ ಜನರಲ್ಲಿದೆ. ನಮ್ಮ ನಾಡಿನಲ್ಲಿ ಸಹಸ್ರಾರು ಮಾರುತಿ ದೇವಾಲಯಗಳಿದ್ದರು ಪ್ರತಿಯೊಂದು ದೇಗುಲದ ಸ್ಥಳ ಮಹಿಮೆ ಭಿನ್ನ, ವಿಶಿಷ್ಟ.

ಆಂಕೋಲ-ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಬೈಲು ಘಾಟಿಯಲ್ಲಿ ಅಂತ ಸಿಗುತ್ತದೆ. ಅಲ್ಲಿರುವ ಶ್ರೀಮಾರುತಿ, ಭಕ್ತರ ಪಾಲಿಗೆ ದಾರಿ ತೋರುವ ಅಭಯಪ್ರದನಾಗಿದ್ದಾನೆ.

ಪೌರಾಣಿಕ ಮಹತ್ವ
ಈ ದೇವಾಲಯಕ್ಕೆ ಪುರಾಣ ಮತ್ತು ಐತಿಹಾಸಿಕ ಮಹತ್ವವಿದೆ. ರಾಮಾಯಣದಲ್ಲಿ ಸೀತೆಯನ್ನು ಅರಸುತ್ತಾ ಶ್ರೀರಾಮ ಲಕ್ಷ್ಮಣರು ಈ ಮಾರ್ಗವಾಗಿ ಸಂಚರಿಸಿದ್ದರಂತೆ. ಈ ಸ್ಥಳ ಪಶ್ಚಿಮಘಟ್ಟ, ಕರಾವಳಿಯನ್ನು ಕೂಡಿಸುವ ಮಧ್ಯದ ಸ್ಥಳವಾಗಿದೆ. ಘಟ್ಟದ ಮೇಲೂ, ಘಟ್ಟದ ಕೆಳಗೂ ಆಂಜನೇಯನ ದೇಗುಲವಿದ್ದು, ಇವೆರಡರ ಮಧ್ಯದ ಸ್ಥಳವಾದ ಇಲ್ಲಿ ಸಹ ಆಂಜನೇಯನ ಶಕ್ತಿ ಸ್ಥಳವಿದೆ. ಸುಮಾರು 1,400 ವರ್ಷಗಳ ಹಿಂದೆ ಈ ಸ್ಥಳದಲ್ಲಿ ಮುನಿಯೋರ್ವರು ತಪಸ್ಸಿಗೆ ಕುಳಿತಿದ್ದರಂತೆ. ಮಣ್ಣಿನಡಿ ಹೂತಿದ್ದ ಆಂಜನೇಯ ಮೂರ್ತಿಯ ದಿವ್ಯದೃಷ್ಟಿಯಿಂದ ಗ್ರಹಿಸಿ, ವಿಗ್ರಹ ತೆಗೆಸಿ, ಚಿಕ್ಕ ಗುಡಿಸಿ ನಿರ್ಮಿಸಿ ಪೂಜಿಸಿದರಂತೆ. 800 ವರ್ಷಗಳ ಹಿಂದೆ, ಇಲ್ಲಿನ ಗುಡಿ ಜೀರ್ಣೋದ್ದಾರಗೊಂಡು ಪುನರ್‌ ಪ್ರತಿಷ್ಠಾಪನೆಯಾದ ಉಲ್ಲೇಖವಿದೆ. ವಾಯುಪುತ್ರನಾದ ಶ್ರೀಮಾರುತಿ ದೇಗುಲ, ವಾಯುವ್ಯ ದಿಕ್ಕಿಗೆ ಅಭಿಮುಖವಾಗಿರುವುದು ಈ ದೇವಾಲಯದ ವಿಶೇಷವಾಗಿದೆ.

ಆಂಕೋಲ ಶಾಸಕರಾಗಿರುವ ಶಿವರಾಮ ಹೆಬ್ಟಾರ ಈ ದೇವಾಲಯದ ಸಮಗ್ರ ಅಭಿವೃದ್ಧಿಯ ನೇತೃತ್ವ ವಹಿಸಿದ್ದಾರೆ. ಚಿಕ್ಕ ಗುಡಿಯ ರೀತಿಯಲ್ಲಿದ್ದ ದೇವಾಲಯವನ್ನು ಜೀರ್ಣೋದ್ಧಾರ ಗೊಳಿಸಿ ಈಗ ದೊಡ್ಡ ಆಲಯವನ್ನಾಗಿಸಲಾಗಿದೆ. ಹೀಗಾಗಿ, 2008 ರಲ್ಲಿ ದೇವಾಲಯ ಪುನರ್‌ ಪ್ರತಿಷ್ಠಾಪನಾ ಮಹೋತ್ಸವ ವೈಭವದಿಂದ ನಡೆದಿದೆ.
ದೇವಾಲಯದಲ್ಲಿ ನಿತ್ಯ ಮಧ್ಯಾಹ್ನ ಮತ್ತು ಸಂಜೆ ನೈವೇದ್ಯ ಸಹಿತ ಮಂಗಳಾರತಿ, ಪೂಜೆ ನಡೆಸಲಾಗುತ್ತದೆ. ಶನಿವಾರದಂದು ವಿಶೇಷ ಅಲಂಕಾರವಿರುತ್ತದೆ. ಯುಗಾದಿ ಸೇರಿ ಎಲ್ಲ ಹಬ್ಬ ಹರಿದಿನಗಳಂದು ಮಹಾಪೂಜೆ ನಡೆಸಲಾಗುತ್ತದೆ. ನವರಾತ್ರಿಯ ಸಂದರ್ಭದಲ್ಲಿ ಪಾಡ್ಯದಿಂದ ದಶಮಿಯವರೆಗೆ ನಿತ್ಯವೂ ಬಗೆ ಬಗೆಯ ನೈವೇದ್ಯ ಪೂಜೆ ನಡೆಯುತ್ತದೆ. ಪ್ರತಿ ವರ್ಷ ಪಾಲ್ಗುಣ ಶುದ್ಧ ಬಿದಿಗೆಯಂದು ದೇವಾಲಯ ಪ್ರತಿಷ್ಠಾಪನೆಯ ನೆನಪಿಗಾಗಿ ವರ್ಧಂತಿ ಉತ್ಸವ ನಡೆಯುತ್ತದೆ. ಚೈತ್ರ ಶುದ್ಧ ಹುಣ್ಣಿಮೆಯ ಹನುಮಜಯಂತಿಯಂದು ಜಾತ್ರೋತ್ಸವ ನಡೆಸಲಾಗುತ್ತದೆ. ಇಷ್ಟಾರ್ಥ ಸಿದ್ಧಿ ಬಗ್ಗೆ ಪ್ರಶ್ನಿಸಿದರೆ, ಇಲ್ಲಿನ ಪ್ರಸಾದ ನೀಡುವುದರ ಮೂಲಕ ದೈವವು ಉತ್ತರ ಹಾಗೂ ಪರಿಹಾರ ಸೂಚಸುತ್ತದೆ ಎಂಬುದು ಭಕ್ತರ ನಂಬಿಕೆ.

ವಿದ್ಯೆ,ಬುದ್ಧಿ ಮನಃಶಾಂತಿಗಾಗಿ ಮಾರುತಿಯನ್ನು ಪ್ರಾರ್ಥಿಸಿ, ಹರಕೆ ಹೊರುತ್ತಾರೆ. ಜಮೀನು ವ್ಯಾಜ್ಯ ಪರಿಹಾರ, ಶತ್ರು ಭಯ ನಿವಾರಣೆ, ದುಃಸ್ವಪ್ನ ನಿವಾರಣೆ, ಮನೋಭಿಷ್ಠ ಸಿದ್ಧಿಗಾಗಿ ಪ್ರಾರ್ಥಿಸಿ ನಿತ್ಯವೂ ನೂರಾರು ಜನ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸಿ ಹರಕೆ ಸಮರ್ಪಿಸುತ್ತಾರೆ.

ಎನ್‌.ಡಿ.ಹೆಗಡೆ ಆನಂದಪುರಂ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.