ಆಟೋ ಚಾಲಕನ ಮಗನ: ವೇಟ್‌ಲಿಫ್ಟಿಂಗ್‌ ಸಾಧನೆ


Team Udayavani, Feb 11, 2017, 11:32 AM IST

7.jpg

ಅನೇಕ ಕಷ್ಟನಷ್ಟಗಳು ಒಬ್ಬ ವ್ಯಕ್ತಿಯ ಜೀವನವನ್ನು ಪರೀಕ್ಷಿಸಲಿಕ್ಕೆಂದೇ ಬರುತ್ತದೆ. ಇದರಿಂದ ಒಳ್ಳೆಯದೇ ಆಗುತ್ತದೆ ಎನ್ನುವ ಮಾತಿದೆ. ಕುಂದಾಪುರದ ವೇಟ್‌ಲಿಫ್ಟರ್‌ ಜೀವನದಲ್ಲಿ ಇದು ನಿಜವಾಗಿದೆ. ಕುಂದಾಪುರದ ಆಟೋ ಚಾಲಕನ ಪುತ್ರನಾಗಿರುವ ಗುರುರಾಜ್‌ ರಾಜ್ಯ ಒಲಿಂಪಿಕ್ಸ್‌ನ ಪುರುಷರ 56 ಕೆ.ಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 240 ಕೆ.ಜಿ ಭಾರ ಎತ್ತಿ ಸ್ವರ್ಣ ಗೆದ್ದ ಸಾಧನೆ ಮಾಡಿದ್ದಾರೆ. ಇವರು 2 ಅಂತಾರಾಷ್ಟ್ರೀಯ ಮತ್ತು 3 ರಾಷ್ಟ್ರೀಯ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ರಾಜ್ಯ ಒಲಿಂಪಿಕ್ಸ್‌ನಲ್ಲಿ ಭರ್ಜರಿ ಸಾಧನೆ ಬಳಿಕ ಇವರು ಉದಯವಾಣಿ ಜತೆಗೆ ಮಾತನಾಡಿ ತಮ್ಮ ಬದುಕಿನ ನೋವು-ನಲಿವುಗಳನ್ನು ಹಂಚಿಕೊಂಡಿದ್ದು ಹೀಗೆ. 

ಕೂಟದ ಮೊದಲ ಪದಕ ವಿಜೇತರಾಗಿದ್ದೀರಿ, ಹೇಗೆನಿಸುತ್ತಿದೆ? ಪದಕದ ನಿರೀಕ್ಷೆ ಇತ್ತಾ?
    – ನಾನು ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ 2 ಮತ್ತು ರಾಷ್ಟ್ರೀಯ ಮಟ್ಟದಲ್ಲಿ 3 ಪದಕ ಗೆದ್ದಿದ್ದೇನೆ. ಹೀಗಾಗಿ ಪದಕ ಗೆಲ್ಲುವ ಭರವಸೆ ಇತ್ತು. ಆದರೆ ಕೂಟದ ಮೊದಲ ಪದಕ ವಿಜೇತ ಪಟ್ಟ ಸಿಕ್ಕಿರುವುದು ನನ್ನ ಅದೃಷ್ಟ. ಇದೊಂದು ರೀತಿಯಲ್ಲಿ ಡಬಲ್‌ ಸಂತೋಷ.

ನಿಮ್ಮ ರಾಷ್ಟ್ರೀಯ, ಅಂತಾರಾಷ್ಟ್ರೀಯ ಪದಕದ ಬಗ್ಗೆ ಹೇಳಿ?

– 2016 ಸೌತ್‌ ಏಷ್ಯನ್‌ ಗೇಮ್‌ನಲ್ಲಿ ಚಿನ್ನ, 2016 ಕಾಮನ್‌ವೆಲ್ತ್‌ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ, 2014 ಮತ್ತು 2015 ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಮತ್ತು 2016 ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ.

ವೇಟ್‌ಲಿಫ್ಟಿಂಗ್‌ ಬಗ್ಗೆ ಆಸಕ್ತಿ ಹುಟ್ಟಿದ್ದು ಹೇಗೆ?
– ಮೊದಲು ನಾನು ಕುಸ್ತಿಪಟುವಾಗಿದ್ದೆ. ಆದರೆ ಎಸ್‌ಡಿಎಂ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವಾಗ ವೇಟ್‌ಲಿಫ್ಟಿಂಗ್‌ನತ್ತ ಆಸಕ್ತಿ ಬೆಳೆಸಿಕೊಂಡೆ.

ನಿಮ್ಮ ಮುಂದಿನ ಯೋಜನೆ ಏನು?
– ಸದ್ಯ 2018ರ ಕಾಮನ್‌ವೆಲ್ತ್‌ ಗೆಮ್ಸ್‌ನಲ್ಲಿ ಪದಕ ಗೆಲ್ಲುವುದು. ನಂತರ 2020 ಟೋಕಿಯೋ ಒಲಿಂಪಿಕ್ಸ್‌ ನಲ್ಲಿ ಪದಕ ಗೆಲ್ಲಬೇಕು ಅನ್ನುವ ಛಲಯಿದೆ. ಈ ನಿಟ್ಟಿನಲ್ಲಿ ಪ್ರತಿದಿನ ಅಭ್ಯಾಸ ನಡೆಸುತ್ತಿದ್ದೇನೆ.

ರಾಜ್ಯ ಒಲಿಂಪಿಕ್ಸ್‌ ಬಗ್ಗೆ ನಿಮ್ಮ ಅಭಿಪ್ರಾಯ?
– ರಾಜ್ಯದ ಅಥಿÉಟ್‌ಗಳಿಗೆ ಇದರಿಂದ ತುಂಬಾ ಅನುಕೂಲ. ತಮ್ಮ ಪ್ರತಿಭೆಯನ್ನು ತೊರಿಸಲು ಸಹಾಯವಾಗುತ್ತದೆ. ಕನಿಷ್ಠ ನಾಲ್ಕು ವರ್ಷಕ್ಕೊಮ್ಮೆ ಯಾದರೂ ಈ ಕೂಟ ನಡೆಯುತ್ತಿದ್ದರೆ ಉತ್ತಮ.

ತುಂಬಾ ಸಂತಷದ ಕ್ಷಣ?
– ಸೌತ್‌ ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿರುವ ಸುದ್ದಿ ಟೀವಿಯಲ್ಲಿ ಬಂದಿತ್ತು. ಅದನ್ನು ನೋಡಿದ ನನ್ನ ಮನೆಯವರು ಫೋನ್‌ ಮಾಡಿ ಮಾತಾಡಿಸಿದ್ದರು. ಮನೆಯಲ್ಲಿ ಅಪ್ಪ, ಅಮ್ಮ ಸಂತೋಷಗೊಂಡಿರುವುದೇ ನನಗೆ ಖುಷಿ ಸಿಕ್ಕ ಕ್ಷಣ.

ಸರ್ಕಾರದಿಂದ ಏನಾದರು ಸಹಾಯ ಸಿಕ್ಕಿದೆಯೆ?
– ತುಂಬಾ ಬಡತನವಿತ್ತು. ಆದರೆ ಕಳೆದ ವರ್ಷ ನ್ಪೋರ್ಟ್ಸ್ ಕೂಟಾದಲ್ಲಿ ಇಂಡಿಯನ್‌ ಏರ್‌ಫೋರ್ಸ್‌ ನಲ್ಲಿ ಉದ್ಯೋಗ ಸಿಕ್ಕಿದೆ. ಹೀಗಾಗಿ ಸ್ವಲ್ಪ ಚೇತರಿಕೆ. ಉಳಿದಂತೆ ತಂದೆ ಇವತ್ತಿಗೂ ಆಟೋ ಓಡಿಸುತ್ತಾರೆ. ರಾಜ್ಯ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ.ಕುಂದಾಪುರದ ಆಟೋ ಚಾಲಕನ ಪುತ್ರನಾಗಿರುವ ಗುರುರಾಜ್‌ ರಾಜ್ಯ ಒಲಿಂಪಿಕ್ಸ್‌ನ ಪುರುಷರ 56 ಕೆ.ಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಒಟ್ಟು 240 ಕೆ.ಜಿ ಭಾರ ಎತ್ತಿ ಸ್ವರ್ಣ ಗೆದ್ದ ಸಾಧನೆ ಮಾಡಿದ್ದಾರೆ. ಇವರು 2 ಅಂತಾರಾಷ್ಟ್ರೀಯ ಮತ್ತು 3 ರಾಷ್ಟ್ರೀಯ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ರಾಜ್ಯ ಒಲಿಂಪಿಕ್ಸ್‌ನಲ್ಲಿ ಭರ್ಜರಿ ಸಾಧನೆ ಬಳಿಕ ಇವರು ಉದಯವಾಣಿ ಜತೆಗೆ ಮಾತನಾಡಿ ತಮ್ಮ ಬದುಕಿನ ನೋವು-ನಲಿವುಗಳನ್ನು ಹಂಚಿಕೊಂಡಿದ್ದು ಹೀಗೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.