ಬಿಳಿ ಸಾಹೇಬನ ಬೇಂದ್ರೆ

ಸಾಧನಕೇರಿಗೆ ಬಂದ ವಿದೇಶಿಗನ ಕಥೆ

Team Udayavani, Mar 14, 2020, 6:11 AM IST

bili-saheb

ಇತ್ತೀಚೆಗೆ ಯೂಟ್ಯೂಬ್‌ನ ಬುಟ್ಟಿಯಲ್ಲಿ ಬೇಂದ್ರೆಯ ಹಾಡೊಂದು, ಹೊಸ ಗತ್ತು ತಳೆದು, ಸದ್ದು ಮಾಡುತಿದೆ. “ಬಾರೋ ಸಾಧನ ಕೇರಿಗೆ…’ ಎನ್ನುತ್ತಾ ರಘು ದೀಕ್ಷಿತ್‌ ಹಾಡುತ್ತಿದ್ದರೆ, ಪಕ್ಕದಲ್ಲಿ ಕುಳಿತ ಅಮೆರಿಕದ ಡ್ರಿಸನ್‌, ಬೇಂದ್ರೆ ನನ್ನ ಪಕ್ಕದ ಮನೆಯವರು ಎನ್ನುವ ಆಪ್ತತೆಯಲ್ಲಿ ವಯೋಲಿನ್‌ ನುಡಿಸುತ್ತಿದ್ದಾರೆ…

ಬಾರೋ ಸಾಧನ ಕೇರಿಗೆ, ಮರಳಿ ನಿನ್ನೀ ಊರಿಗೇ… ಕೆಳಗಡೆ ರೂಮಿನಲ್ಲಿ ರಘು ದೀಕ್ಷಿತ್‌ ದ.ರಾ. ಬೇಂದ್ರೆಯವರ ಈ ಹಾಡನ್ನು ಹಾಡುತ್ತಿದ್ದರು. ತಾರಕಸ್ಥಾಯಿಯಿಂದ ಇಳಿದು ಮಂದ್ರ ಮುಟ್ಟೋ ಹೊತ್ತಿಗೆ, ಮೇಲಿನ ರೂಮಿನಲ್ಲಿದ್ದ ಅಮೆರಿಕದ ವಯೋಲಿನ್‌ ವಾದಕ ಕೆ.ಸಿ. ಡ್ರಿಸನ್‌ ಮೆಲ್ಲಗೆ ಇಳಿದುಬಂದರು. “ರಘು, ವಾಟ್‌ ಈಸ್‌ ದಿಸ್‌?’, ಕೇಳಿದರು ಬೆರಗಿನಿಂದ. ರಘು, “ಮತ್ತೆ ಬಾರೋ ಸಾಧನ ಕೇರಿಗೆ’ ಅಂತ ಹಾಡಿದರು.

ವಯೋಲಿನ್‌ ವಾದಕರಿಗೆ ಕನ್ನಡ ತಿಳಿಯದೇ ಇರುವುದರಿಂದ ದ.ರಾ. ಬೇಂದ್ರೆ ಸಾಹಿತ್ಯದ ಸತ್ವವನ್ನು ಇಂಗ್ಲಿಷಿನಲ್ಲಿ ವಿವರಿಸಿ, “ನೀನು ಎಲ್ಲೇ ಇದ್ದರೂ, ಏನೇ ಮಾಡುತ್ತಿದ್ದರೂ ಮರಳಿ ಊರಿಗೆ ಬಾ’ ಅಂತ ಅಂತೆಲ್ಲ ಹೇಳಿದರು. ಬೇಂದ್ರೆ ಅವರ ಗೀತೆಯ ಸಾರ ಆ ಪಿಟೀಲು ವಾದಕನ ಹೃದಯ ಮೀಟಿತು. ಅದಕ್ಕೆ ಕಾರಣ; ಆತ ವಿಶ್ವ ಪರ್ಯಟನೆ ಮಾಡುವ ಉದ್ದೇಶದಿಂದ ತನ್ನ ಊರಾದ ಅಮೆರಿಕ ಬಿಟ್ಟು ವರ್ಷವೇ ಕಳೆದಿತ್ತು.

ಭಾರತದಲ್ಲಿ ಬಂಗಾಳಿ ಸಂಗೀತದ ಬಗ್ಗೆ ಸಂಶೋಧನೆ ಮುಗಿಸಿ, ಮೈಸೂರು, ಬೆಂಗಳೂರ ಕಲಾವಿದರನ್ನು ಭೇಟಿಯಾಗಲು ರಘು ದೀಕ್ಷಿತರ ಮನೆಯಲ್ಲಿ ತಂಗಿದ್ದರು. ರಘು ಹಾಡುತ್ತಿದ್ದ ರೀತಿ ಕೇಳಿ, ಕೈಯಲ್ಲಿ ಪಿಟೀಲು ಹಿಡಿದು ಬಂದರು. ಇಡೀ ಹಾಡಿನ ಅರ್ಥ ಮತ್ತೆ ಕೇಳಿಸಿಕೊಂಡು. ಪಿಟೀಲು ನುಡಿಸಲು ಕೂತರು. ಅವರದು ಜಾಸ್‌ ಮ್ಯೂಸಿಕ್‌. ನಮ್ಮ ಸಂಗೀತ ಪ್ರಕಾರಕ್ಕೂ ಅದಕ್ಕೂ ಹೊಂದುವುದಿಲ್ಲ. ಜುಗಲ್‌ಬಂದಿಯಾದರೆ ಸರಿ. ಆದರೆ, ಇದು ಹಾಗಲ್ಲ.

ಡ್ರಿಸನ್‌ ಅವರು ಸಾಹಿತ್ಯವನ್ನು ಯಾವ ಮಟ್ಟಕ್ಕೆ ಗ್ರಹಿಸಿದ್ದರು ಅಂದರೆ, ಚರಣದಲ್ಲಿ, ಮೋಡಗಳಾಟವೂ ನೆರಳಾಟವೂ, ಅಡವಿ ಹೂಗಳ ಕೂಟವೂ ಅಂತೆಲ್ಲಾ ಬರುತ್ತದೆ. ಆಗ ಮೋಡದ ಸದ್ದನ್ನು, ಅಡವಿ ಹೂಗಳಿಗೆ ದುಂಬಿ ಸದ್ದನ್ನು ನೆನಪಿಸುವಂತೆ ಪಿಟೀಲಿನ ಕಮಾನನ್ನು ಬಳಸಿ (ಬೋಯಿಂಗ್‌) ನುಡಿಸಿದ್ದಾರೆ. “ರೆಕಾರ್ಡ್‌ ಮಾತ್ರ ನಾನು ಮಾಡಿದ್ದು. ಮಿಕ್ಕ ಸೆಟ್ಟಿಂಗ್ಸ್‌ ಎಲ್ಲವೂ ಅವರದೇ. ನಾನು ಗೀತೆಯ ವಿವರಣೆ ಕೊಟ್ಟೆ. ಒಂದೇ ಟೇಕ್‌ಗೆ, ಯಾವುದೇ ರಿಹರ್ಸಲ್‌ ಇಲ್ಲದೇ ಇಡೀ ಹಾಡಿಗೆ ಪಿಟೀಲು ನುಡಿಸಿಯೇ ಬಿಟ್ಟರು. ಸ್ಕೇಲ್‌ ಬಹಳ ಚೆನ್ನಾಗಿ ಫಾಲೋ ಮಾಡಿದ್ದಾರೆ’ ಎನ್ನುತ್ತಾರೆ ದೀಕ್ಷಿತ್‌.

ರಘು ದೀಕ್ಷಿತ್‌ ಜತೆ ಮಾತುಕತೆ
ನೀವು ಬೇಂದ್ರೆ ಅವರ ಹಿಂದೆ ಬಿದ್ದಿದ್ದು ಏಕೆ?
ನಾನು ಧಾರವಾಡಕ್ಕೆ ಯಾವುದೋ ಕಾರ್ಯಕ್ರಮಕ್ಕಾಗಿ ಹೋಗಿದ್ದೆ. ಪ್ರೊ. ಕೆ.ಎಸ್‌. ಶರ್ಮ, ಬೇಂದ್ರೆ ಸಂಗೀತ ಅಂತಲೇ ಮಾಡುತ್ತಿದ್ದರು. ಅದನ್ನು ತೋರಿಸಲು ನನ್ನನ್ನು ಕರೆದುಕೊಂಡು ಹೋಗಿ, ಒಂದಷ್ಟು ಪುಸ್ತಕ ಕೊಟ್ಟರು. ಒಂದು ಸಲ ಹೀಗೆ, ತೆಗೆದು ನೋಡುತ್ತಿದ್ದೆ. “ಬಾರೋ ಸಾಧನ ಕೇರಿಗೆ’ ಪದ್ಯ ಬಹಳ ಇಷ್ಟವಾಯಿತು. ಸುಮ್ಮನೆ ಹಾಗೇ ಟ್ಯೂನ್‌ ಹಾಕಿದೆ. ನಾನು ನಮ್ಮೂರು ಮೈಸೂರಿಗೆ ಹೋಗಬೇಕಾದರೆ ಈ ಹಾಡು ಬಹಳ ಕಾಡೋದು. ಎಲ್ಲರೂ ತಮ್ಮ ತಮ್ಮ ಊರಿಗೆ ಹೋಗಬೇಕಾದರೆ ಇದು ಕಾಡುವ ಹಾಗೆ ಮಾಡಬೇಕಲ್ಲ ಅಂತ ಪೂರ್ತಿ ಟ್ಯೂನ್‌ ಹಾಕಿದೆ.

ನಿಮಗೆ “ಶಿಶುನಾಳ ಶರೀಫ‌ರು’ ಸಿಕ್ಕಿದ್ದು ಹೇಗೆ?
ನಾನು ಗೆಳೆಯರ ಮನೆಗೆ ಊಟಕ್ಕೆ ಅಂತ ಹೋಗಿದ್ದೆ. ಗಡದ್ದಾಗಿ ತಿಂದಿದ್ದರಿಂದ ಕಣ್ಣು ಎಳೆಯಲು ಶುರುವಾಯಿತು. ಹಾಗಾಗಿ, ರೂಮ್‌ನಲ್ಲಿ ಮಲಗೋಣ ಅಂತ ಹೋದೆ. ಅಲ್ಲೊಂದು ಬುಕ್‌ ರ್ಯಾಕ್‌ ಇತ್ತು. ಅದರಲ್ಲಿ ಶಿಶುನಾಳ ಶರೀಫ‌ರ ಪದ್ಯಗಳು ಇದ್ದವು. ಹಾಗೇ ತೆಗೆದು, ಮಂಪರುಗಣ್ಣಿನಲ್ಲಿ “ಗುಡು ಗುಡಿಯಾ ಸೇದಿ ನೋಡು…’ ಪದ್ಯ ಓದುತ್ತಾ ಇದ್ದೆ. “ಮನಸೆಂಬ ಸಂಚಿಯ ಬಿಚ್ಚಿ, ದಿನ ದಿನವೂ ಮೋಹ ಅಂಬೋ ಭಂಗಿಯ ಕೊಚ್ಚಿ’ ಅಂತ ಲೈನ್‌ ಬಂತು. ನಮ್ಮನ್ನು ನಾವು ಶುದ್ಧೀಕರಿಸಿಕೊಳ್ಳೋದು, ನಮ್ಮನ್ನು ನಾವು ನೋಡಿಕೊಳ್ಳೋದು ಹೇಗೆ ಅನ್ನೋ ಅಧ್ಯಾತ್ಮವನ್ನು ಹೇಳುತ್ತಿದೆಯಲ್ಲಾ ಅಂತ ಇಷ್ಟವಾಯಿತು. ನಿದ್ದೆ ನಿಧಾನಕ್ಕೆ ಇಳಿಯಿತು. ಒಳಗಿಂದ ಟ್ಯೂನ್‌ ಎದ್ದು ಬಂತು.

ನೀವು ಸಿ. ಅಶ್ವತ್ಥ್ ಅವರ ಮನೆಗೆ ಹೋಗಿದ್ದರಂತಲ್ಲ?
ಹೌದು. ಅಶ್ವತ್ಥ್ ಅವರು ಶರೀಫ‌ರ ಪದ್ಯಕ್ಕೆ ಅದ್ಭುತವಾಗಿ ರಾಗ ಸಂಯೋಜನೆ ಮಾಡಿದ್ದಾರೆ. ಅದನ್ನು ಮೀರಿ ಸಂಗೀತ ಮಾಡೋದು ಬಹಳ ಕಷ್ಟ. ಹಾಗಾಗಿ, ಅವರು ರಾಗ ಸಂಯೋಜಿಸಿದ “ಕೋಡಗನ ಕೋಳಿ ನುಂಗಿತ್ತಾ…’, “ಸೋರುತಿಹುದು…’ ಹಾಡನ್ನು ಇಟ್ಟುಕೊಂಡೇ ನಮ್ಮ ಬ್ಯಾಂಡ್‌ನ‌ಲ್ಲಿ ಬಳಸಿಕೊಳ್ಳೋಣ ಅಂತ, ಅನುಮತಿ ಕೇಳ್ಳೋಕೆ ಅಶ್ವತ್ಥರ ಮನೆಗೆ ಹೋದೆ. ಅದಕ್ಕೆ ಅವರು, “ರೀ, ನಾವು ಬಹಳ ಕಷ್ಟಪಟ್ಟು ಸಂಗೀತ ಹಾಕಿ, ಅಷ್ಟೇ ಕಷ್ಟಪಟ್ಟು ಕಾಪಾಡಿಕೊಂಡು ಬಂದಿದ್ದೀವಿ. ನೀವು ಬ್ಯಾಂಡ್‌ನ‌ಲ್ಲಿ ಮನಸ್ಸಿಗೆ ಬಂದಂತೆ ಹಾಡಿದರೆ ಕಷ್ಟ ಆಗುತ್ತೆ. ನೀವೇ ಯಾವುದಾದರೂ ಬೇರೆ ಟ್ಯೂನ್‌ ಹಾಕ್ಕೊಳಿ’ ಅಂದಿದ್ದರು.

ವಿದೇಶಗಳಲ್ಲಿ ಕಾರ್ಯಕ್ರಮ ಕೊಟ್ಟಾಗ ಕನ್ನಡ ಹಾಡು ಹಾಡ್ತೀರಿ. ಅವರಿಗೆ ನಮ್ಮ ಶರೀಫ‌ರ, ಬೇಂದ್ರೆಯವರ ಪದ್ಯ ಹೇಗೆ ಅರ್ಥವಾಗುತ್ತೆ?
ನಮ್ಮದು ಒಂದು ನಿಯಮ ಇದೆ. ಹಾಡುವ ಮೊದಲು, ಆ ಗೀತೆಯ ಹುಟ್ಟು, ಅದರ ಉದ್ದೇಶ, ಯಾರು, ಏಕೆ ಬರೆದರು, ಇದರ ಅರ್ಥ ಏನು- ಇವಿಷ್ಟನ್ನು ಕೇಳುಗರಿಗೆ ಹೇಳಿ, ಆಮೇಲೆ ಹಾಡ್ತೀವಿ. ಇಂಗ್ಲೀಷ್‌ನಲ್ಲಿ ಇಷ್ಟು ವಿವರಣೆ ಕೊಟ್ಟರೆ ಸಾಕು, ಅವರು ಸಂಗೀತದ ಮೂಲಕ ಭಾವಗಳನ್ನು ಹಿಡಿದು, ಅನುಭವಿಸಿ ಕೇಳಿಸಿಕೊಳ್ತಾರೆ. ಹೀಗೆ ನಮ್ಮ ಅನೇಕ ಕವಿಗಳ ಹಾಡು ವಿದೇಶಿಗರ ನಾಲಿಗೆಯ ಮೇಲಿದೆ. ಇವತ್ತು ಕನ್ನಡ ಬರದೇ ಇರುವ ಎಷ್ಟೋ ಟೆಕ್ಕಿಗಳಿಗೆ “ಗುಡು ಗುಡಿಯಾ…’ ನಿತ್ಯದ ಹಾಡಾಗಿದೆ.

* ಕಟ್ಟೆ ಗುರುರಾಜ್‌

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.