ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಪದ್ಧತಿ
Team Udayavani, Jun 15, 2019, 10:06 AM IST
ತ್ರಿದಲಂ ತ್ರಿಗುಣಾಕಾರಂ ತ್ರಿನೇತ್ರಂ ಚ
ತ್ರಯಾಯುಧಂ|
ತ್ರಿಜನ್ಮಪಾಪಸಂಹಾರಂ ಏಕಬಿಲ್ವಂ
ಶಿವಾರ್ಪಣಂ|| ಬಿಲ್ವಾಷ್ಟಕ, ಶ್ಲೋಕ 1
ಅರ್ಥ: ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಈ ಬಿಲ್ವಪತ್ರೆಯನ್ನು ನಾನು ಶಿವನಿಗೆ ಅರ್ಪಿಸುತ್ತೇನೆ.
ಓಂ ನಮಃ ಶಿವಾಯ ಮಂತ್ರವನ್ನು ಜಪಿಸುತ್ತಾ ಅಥವಾ ಭಗವಾನ್ ಶಂಕರನ ಒಂದು ಹೆಸರನ್ನು ಉಚ್ಚರಿಸುತ್ತಾ ಒಂದೊಂದೇ ಬಿಲ್ವಪತ್ರೆಯನ್ನು ಶಿವಲಿಂಗಕ್ಕೆ ಅರ್ಪಿಸುವುದನ್ನು ಬಿಲ್ವಾರ್ಚನೆ ಎನ್ನುತ್ತಾರೆ. ಬಿಲ್ವಪತ್ರೆಗಳನ್ನು ಇಡೀ ಶಿವಲಿಂಗವು ಪೂರ್ತಿಯಾಗಿ ಮುಚ್ಚುವಂತೆ ಅರ್ಪಿಸಬೇಕು. ಬಿಲ್ವಪತ್ರೆಗಳನ್ನು ಮೂರ್ತಿಯ ಚರಣಗಳಿಂದ (ಲಿಂಗದ ಕೆಳಭಾಗದಿಂದ) ಅರ್ಪಿಸಲು ಪ್ರಾರಂಭಿಸಿ ಮೇಲ್ಬದಿಗೆ ಹೋಗಬೇಕು. ಇದರಿಂದ ಬಿಲ್ವಾರ್ಚನೆಯನ್ನು ಚರಣಗಳಿಂದ ಪ್ರಾರಂಭಿಸಿದ ಲಾಭವಾಗುತ್ತದೆ. ಅಲ್ಲದೇ ಬಿಲ್ವಪತ್ರೆಗಳನ್ನು ಸರಿಯಾಗಿ ಅರ್ಪಿಸಿ ಇಡೀ ಮೂರ್ತಿಯನ್ನು ಮುಚ್ಚಲು ಸಾಧ್ಯವಾಗುತ್ತದೆ. ಶಿವನಿಗೆ ತ್ರಿದಳ ಬಿಲ್ವವನ್ನು ಅರ್ಪಿಸುವುದರ ಹಿಂದಿನ ಮನಃಶಾಸ್ತ್ರದ ಕಾರಣಗಳು ಇಂತಿವೆ.
1. ಸತ್ವ, ರಜ ಮತ್ತು ತಮಗಳಿಂದ ಉತ್ಪತ್ತಿ, ಸ್ಥಿತಿ ಮತ್ತು ಲಯಗಳು ಉತ್ಪನ್ನವಾಗುತ್ತವೆ. ಕುಮಾರಾವಸ್ಥೆ, ಯೌವನಾವಸ್ಥೆ ಮತ್ತು ವೃದ್ಧಾಪ್ಯ ಅವಸ್ಥೆ ಇವುಗಳ ಪ್ರತೀಕವೆಂದು ಶಂಕರನಿಗೆ ಬಿಲ್ವಪತ್ರೆಯನ್ನು ಅರ್ಪಿಸಬೇಕು. ಅಂದರೆ, ಈ ಮೂರೂ ಅವಸ್ಥೆಗಳ ಆಚೆಗೆ ಹೋಗುವ ಇಚ್ಛೆಯನ್ನು ಪ್ರಕಟಿಸಬೇಕು. ಬಿಲ್ವದ ಎಲೆಗಳು ಶಿವತಣ್ತೀದಲ್ಲಿನ ತಾರಕಶಕ್ತಿಯ ವಾಹಕ ಮತ್ತು ಬಿಲ್ವದ ಎಲೆಗಳ ತೊಟ್ಟು ಶಿವತಣ್ತೀದಲ್ಲಿನ ಮಾರಕ ಶಕ್ತಿಯ ವಾಹಕವಾಗಿದೆ. ಸಾಮಾನ್ಯ ಉಪಾಸಕರ ಪ್ರಕೃತಿಯು ತಾರಕವಾಗಿರುವುದರಿಂದ ಶಿವನ ತಾರಕ ಉಪಾಸನೆಯು, ಅವರ ಪ್ರಕೃತಿಗೆ ಹೊಂದುವಂತಹ ಮತ್ತು ಅವರ ಅಧ್ಯಾತ್ಮಿಕ ಉನ್ನತಿಗೆ ಪೂರಕವಾಗಿರುತ್ತದೆ. ಇಂತಹವರು ಶಿವನ ತಾರಕ ತಣ್ತೀದ ಲಾಭವನ್ನು ಪಡೆದುಕೊಳ್ಳಲು ತೊಟ್ಟನ್ನು ಲಿಂಗದ ಕಡೆಗೆ ಮತ್ತು ಎಲೆಗಳ ತುದಿಗಳನ್ನು ನಮ್ಮೆಡೆಗೆ ಮಾಡಿ ಬಿಲ್ವಪತ್ರೆಯನ್ನು ಅರ್ಪಿಸಬೇಕು. (ಬಿಲ್ವಂ ತುನ್ಯುಬ್ಜಂ ಸ್ವಾಭಿಮುಖಾಗ್ರಂ ಚ|)•
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ