ಚಂದಗುಳಿಯ ಘಂಟೆ ಗಣಪತಿ 


Team Udayavani, Sep 1, 2018, 11:43 AM IST

8.jpg

ಸಣ್ಣ ಗಾತ್ರದ ಗಂಟೆಯಿಂದ ಆರಂಭಿಸಿ ಭಾರೀ ತೂಕದ ಗಂಟೆಯವರೆಗೆ, ಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ಗಂಟೆಗಳನ್ನು ಹೊಂದಿರುವುದು ಚಂದಗುಳಿಯ ಗಣೇಶ ದೇವಾಲಯದ ವೈಶಿಷ್ಟé. ಈ ದೇವರಿಗೆ ರಾಜ್ಯದಲ್ಲಿ ಮಾತ್ರವಲ್ಲ, ಗೋವಾ-ಮಹಾರಾಷ್ಟ್ರಗಳಲ್ಲಿ ಕೂಡ ಸಾವಿರಾರು ಮಂದಿ ಭಕ್ತರಿದ್ದಾರೆ.  

ಏಕದಂತ, ಗಣೇಶ, ಗಣಪತಿ, ವಕ್ರತುಂಡ ಎಂದೆಲ್ಲಾ ಕರೆಯುವ ವಿನಾಯಕನಿರುವ ಪವಿತ್ರ ಪಾವನ ಶ್ರೀಕ್ಷೇತ್ರವೇ ಈ ಚಂದಗುಳಿ.  ಇಲ್ಲಿರುವ ಶ್ರೀ ಘಂಟೆ ಗಣಪತಿಯ ದೇವಾಲಯವು ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ದ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿದೆ. ಭಕ್ತಿಯಿಂದ ಬೇಡಿ ಬರುವವರ ಇಷ್ಟಾರ್ಥಗಳನ್ನು ಪೂರೈಸುವ ವರಪ್ರದಾಯಕನಾಗಿ ತನ್ನ ಭಕ್ತರಿಗೆ ಸದಾ ಆಭಯ ಹಸ್ತ ನೀಡುವ ಈ ಗಣಪ, ಬರೀ ಘಂಟೆಗಳಿಗೆ ಒಲಿಯುವವನು ಎಂದರೆ ನೀವು ನಂಬಲೇ ಬೇಕು. 

ನೌಕರಿ ಸಿಗಲಿಲ್ಲವೇ? ಮದುವೆಯ ಸಮಸ್ಯೆಯೇ, ಮಕ್ಕಳಾಗಲಿಲ್ಲವೆಂಬ ಚಿಂತೆಯೆ? ಬಿಜಿನೆಸ್‌ ಕೈಹಿಡಿಯಲಿಲ್ಲವೆ? ಹೀಗೆ ತನ್ನ ಭಕ್ತರ ಸಮಸ್ಯೆಯೇನೇ ಇರಲಿ ಅದನ್ನು ಪರಿಹರಿಸಲು ಈ ಗಣಪ ಕೇಳುವುದು ಬರೀ ಘಂಟೆ ಅಷ್ಟೆ.  ನಿಮ್ಮ ಶಕಾöನುಸಾರ ಯಾವುದೇ ಗಾತ್ರದ ಘಂಟೆಯನ್ನು ಈ ದೇವರಿಗೆ  ಹರಕೆ ಮೂಲಕ ತೀರಿಸಿದರೆ ಸಾಕು: ನಿಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಭಕ್ತಾದಿಗಳು ನಂಬಿದ್ದಾರೆ.  

ಅಪಾರ ಭಕ್ತರನ್ನು ಹೊಂದಿರುವ ಈ ಗಣಪ, ಹಚ್ಚ ಹಸಿರಿನಿಂದ ಕೂಡಿರುವ ಸುಂದರ ಪ್ರಕೃತಿಯ ಮಧ್ಯೆ ನೆಲೆನಿಂತಿ¨ªಾನೆ. ಈ ದೇವಾಲಯದ ಸುತ್ತಲೂ ಎಲ್ಲಿ ನೋಡಿದರಲ್ಲಿ ಭಕ್ತಾದಿಗಳು ಸಲ್ಲಿಸಿ ಹೋದ ಘಂಟೆಗಳ ದೊಡ್ಡ ಸಾಲೇ ಕಾಣುತ್ತದೆ. ಅತಿ ಚಿಕ್ಕ ಗಾತ್ರದ ಘಂಟೆಗಳಿಂದ ಹಿಡಿದು ದೊಡ್ಡ ದೊಡ್ಡ ಘಂಟೆಗಳು ಇಲ್ಲುಂಟು.  ಪ್ರವೇಶ ದ್ವಾರದಲ್ಲೂ ಘಂಟೆ, ಕಿಟಕಿಗಳ ಮೇಲ್ಭಾಗಗಳಿಗೂ ಘಂಟೆ, ಅಷ್ಟೇ ಅಲ್ಲ, ದೇವಾಲಯದ ಛಾವಣಿಗಳಲ್ಲೂ ಸಾಲುಸಾಲು ಘಂಟೆಗಳು, ಗೋಪುರದ ಸುತ್ತಲೂ ಘಂಟೆಗಳು.  ಹೀಗೆ, ಕಣ್ಣು ಹಾಯಿಸಿದ ಕಡೆಯಲ್ಲೆಲ್ಲ ವಿವಿಧ ಗಾತ್ರದ  ಘಂಟೆಗಳ ಸಾಲನ್ನು ನೋಡುವುದೇ ಒಂದು ವಿಶೇಷ ಅನುಭವ. ಬಹಳಷ್ಟು ಜನ ಅವರ ಹರಕೆ ಪೂರೈಸಿದ ನಂತರ ಅರ್ಪಿಸಿದ ಘಂಟೆಗಳಿವು. 

ಈ ಘಂಟೆ ಗಣಪ ಕರ್ನಾಟಕದಲ್ಲಿ ಮಾತ್ರವಲ್ಲ, ದೂರ ದೂರದ ರಾಜ್ಯಗಳಲ್ಲೂ ಅಪಾರ  ಭಕ್ತರನ್ನು ಹೊಂದಿ¨ªಾನೆ. ಪ್ರತಿ ದಿನವೂ ವಿಶೇಷ ಪೂಜೆ ನಡೆಯುಲ ಈ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ, ವಿನಾಯಕ ಚತುರ್ಥಿಗಳಂದು ವಿಶೇಷ ಪೂಜೆಗಳು ನಡೆಯುತ್ತವೆ.  ಅಷ್ಟೇ ಅಲ್ಲದೇ,  ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು, ಮದುವೆ, ಸಮಾರಂಭಗಳು ಕೂಡ ನಡೆಯುತ್ತವೆ. ಈ ಗಣಪನ ಮಹಿಮೆ ಅರಿತ ನೆರೆಯ ಗೋವಾ, ಮಹಾರಾಷ್ಟ್ರಗಳಿಂದ ಕೂಡ ಪ್ರತಿನಿತ್ಯವೂ ಸಾಕಷ್ಟು ಭಕ್ತಾದಿಗಳು ಈ ಕ್ಷೇತ್ರಕ್ಕೆ ಬರುತ್ತಿರುತ್ತಾರೆ. 

ತಲುಪುವ ಮಾರ್ಗ : ಯಲ್ಲಾಪುರದಿಂದ ಕೇವಲ 17 ಕಿ.ಮೀ ದೂರದಲ್ಲಿ ಚಂದಗುಳಿ ದೇವಸ್ಥಾನವಿದೆ. ಇಲ್ಲಿಗೆ ತಲುಪಲು ಮಾಗೋಡು ಜಲಪಾತದ ಮಾರ್ಗದಲ್ಲಿ ಬರಬಹುದು. ಅಲ್ಲಿಗೂ ಕೂಡ ಸಾಕಷ್ಟು ಬಸ್ಸುಗಳು ಇವೆ. 

ಆಶಾ ಎಸ್‌.ಕುಲಕರ್ಣಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.