ಉಣಕಲ್‌ ಚಂದ್ರಮೌಳೇಶ್ವರ


Team Udayavani, Mar 30, 2019, 6:00 AM IST

z-3

ಹುಬ್ಬಳ್ಳಿಯಿಂದ ಉಣಕಲ್‌ ರಸ್ತೆಯಲ್ಲಿ ಸಾಗಿದರೆ ಚಂದ್ರಮೌಳೇಶ್ವರ ದೇಗುಲ ಎದುರಾಗುತ್ತದೆ. ಇದು 12ನೇ ಶತಮಾನದ ದೇಗುಲ. ನಾಲ್ಕು ದಿಕ್ಕಿನಲ್ಲಿ ನಾಲ್ಕು ದ್ವಾರಗಳನ್ನೂ, ಎರಡು ನಂದಿಯ ವಿಗ್ರಹಗಳನ್ನು ಹೊಂದಿರುವ ಈ ಅಪರೂಪ ದೇಗುಲ. ಚಾಲುಕ್ಯರ ಕಾಲದಲ್ಲಿ ನಿರ್ಮಾಣವಾಯಿತು ಎಂದು ಹೇಳಲಾಗುತ್ತದೆ.

ಉತ್ತರ ಕರ್ನಾಟಕದ ಪ್ರಖ್ಯಾತ ದೇಗುಲಗಳಲ್ಲಿ ಚಂದ್ರಮೌಳೇಶ್ವರ ದೇವಾಲಯವೂ ಒಂದು. ಇದು ಗಂಡುಮೆಟ್ಟದ ನಾಡು ಎಂದೇ ಪ್ರಸಿದ್ಧಿ ಪಡೆದಿರುವ ಹುಬ್ಬಳ್ಳಿ-ಧಾರವಾಡದ ಉಣಕಲ್‌ ಬಳಿ ಇದೆ. ಇದು ಸುಮಾರು 900 ವರ್ಷಗಷ್ಟು ಹಳೆಯದ್ದಾಗಿದ್ದು, ಅಮರಶಿಲ್ಪಿ ಜಕಣಾಚಾರಿಯು ಈ ದೇವಾಲಯವನ್ನು ನಿರ್ಮಿಸಿದರು ಎಂದು ಇತಿಹಾಸ ಹೇಳುತ್ತದೆ. ಈ ದೇವಾಲಯ ನೋಡಲು ಬಲು ಆಕರ್ಷಣಿಯವಾಗಿದೆ. ಹಳೆಯ ಚಾಲುಕ್ಯರ ಶೈಲಿಯಲ್ಲಿ ನಿರ್ಮಾಣಗೊಂಡ ಕೆಂಪು ಕಲ್ಲಿನ ಸುಂದರ ದೇವಾಲಯ ಇದಾಗಿದೆ. ಕಲ್ಲಿನ ಕೆತ್ತನೆಯೇ ಇಡೀ ದೇಗುಲದ ವಿಶೇಷ ಆಕರ್ಷಣೆ.

ಗುಡಿಯ ಸುತ್ತಮುತ್ತಲೂ ಮಂಟಪಗಳಿವೆ. ಅವುಗಳನ್ನೂ ಕಲ್ಲಿನಿಂದಲೇ ನಿರ್ಮಿಸಿದ್ದಾರೆ. ಎಲ್ಲವೂ 12ನೇ ಶತಮಾನಕ್ಕೆ ಸೇರಿದವು ಎನ್ನುವ ದಾಖಲೆಗಳೂ ಸಿಕ್ಕಿವೆಯಂತೆ . ಭಾರತೀಯ ಪುರಾತತ್ವ ಇಲಾಖೆಯು, ಈ ದೇಗುಲವನ್ನು “ಸಂರಕ್ಷಿತ ಸ್ಮಾರಕ ಎಂದು ಘೋಷಿಸಿದೆ. ಚಾಲುಕ್ಯರು ಈ ದೇವಾಲಯವನ್ನು ಬಾದಾಮಿ, ಐಹೊಳೆ,ಪಟ್ಟದಕಲ್ಲು ದೇವಾಲಯಗಳ ಮಾದರಿಯಲ್ಲೇ ನಿರ್ಮಿಸಿದ್ದಾರೆ. ಈ ದೇವಾಲಯವು ಪೂರ್ವಾಭಿಮುಖವಾಗಿದ್ದು ಇಲ್ಲಿ ಎರಡು ಲಿಂಗಗಳು ಇವೆ. ಒಟ್ಟು ಐದು ಗರ್ಭಗುಡಿಗಳಿವೆ. ಮಧ್ಯದ ಗುಡಿಯಲ್ಲಿ ಚತುರ್ಮುಖ ಲಿಂಗವಿದೆ. ಹೀಗಾಗಿ, ಮಧ್ಯದ ಗರ್ಭಗೃಹಕ್ಕೆ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಬಾಗಿಲುಗಳನ್ನು ಇಟ್ಟಿದ್ದಾರೆ.

ಮುಖಮಂಟಪದ ಪ್ರವೇಶದ್ವಾರದಲ್ಲಿ ಸಂಗೀತಗಾರರು, ಬಳ್ಳಿಯಾಕಾರಾದ ಕೆತ್ತನೆಗಳನ್ನೊಳಗೊಂಡ
ಜಾಲಂಧರಗಳು ಕಾಣಬಹುದು. ಹೊರಭಾಗದಲ್ಲಿರುವ ಕುಸುರಿ ಕೆತ್ತನೆಗಳು ಇಡೀ ದೇವಾಲಯದ ರೂಪವನ್ನು ಬದಲಿಸಿವೆ. ಇಲ್ಲಿ ಒಟ್ಟು ಹನ್ನೆರಡು ಬಾಗಿಲುಗಳಿವೆ. ಎಲ್ಲದರ ಮೇಲೂ ಸುಂದರವಾದ ಕೆತ್ತನೆಗಳಿವೆ. ವಿಶೇಷ ಎಂದರೆ ದೇವಾಲಯದಲ್ಲಿ ಎರಡು ನಂದಿ ವಿಗ್ರಹಗಳಿರುವುದು. ಸಾಮಾನ್ಯವಾಗಿ ದೇಗುಲದ ಪ್ರವೇಶದ್ವಾರದ ಮುಂದೆ ಮಾತ್ರ ನಂದಿ ಇರುವುದು ರೂಢಿ. ಇಲ್ಲಿ ಪ್ರವೇಶದ್ವಾರ ಮತ್ತು ಮುಖಮಂಟಪದಲ್ಲಿ- ಎರಡು ಕಡೆಯೂ ನಂದಿಯ ವಿಗ್ರಹಗಳಿವೆ. ಗರ್ಭಗುಡಿಯಲ್ಲಿ ಚಂದ್ರಮೌಳೇಶ್ವರ ಲಿಂಗವಿದೆ. ವಿಶೇಷ ಎಂದರೆ ಈ ಶಿವ ಲಿಂಗವು ನಾಲ್ಕು ಮುಖಗಳಿಂದ ಕೂಡಿದ್ದು,ಹೀಗಾಗಿ, ಭಕ್ತರನ್ನು ಸೆಳೆಯುತ್ತಿದೆ.

ದೇಗುಲದ ಎತ್ತರ 20 ಅಡಿ, ಉದ್ದ 55 ಅಡಿ ಹಾಗೂ ಅಗಲ 40 ಅಡಿ ಇದೆ. ಇಡೀ ದೇವಾಲಯ ವಿಶೇಷವಾಗಿ ಕೆಂಪು ಹಾಗೂ ಕಪ್ಪು ಕಲ್ಲುಗಳಿಂದ ನಿರ್ಮಾಣವಾಗಿದೆ. ಯುಗಾದಿಯಿಂದ ಈ ದೇವಸ್ಥಾನದಲ್ಲಿ ವೈಭವದ ಪೂಜೆ ನಡೆಯುತ್ತದೆ. ಶಿವರಾತ್ರಿಯಂದು ಮುಂಜಾನೆ ಸೂರ್ಯನ ರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುವುದನ್ನು ನೋಡಲು ಅಸಂಖ್ಯಾತ ಭಕ್ತರ ದಂಡೇ ನೆರೆದಿರುತ್ತದೆ. ಆ ಸಮಯದಲ್ಲಿ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಪೂರೈಸುತ್ತವೆ ಎಂಬ ನಂಬಿಕೆ ಚಾಲ್ತಿಯಲ್ಲಿರುವುದರಿಂದ ಸುತ್ತಮುತ್ತಲ ಗ್ರಾಮಗಳಿಂದ ಭಕ್ತರು ಆಗಮಿಸುತ್ತಾರೆ.

ದೇಗುಲ ಬೆಳಗ್ಗೆ 6 ರಿಂದ ರಾತ್ರಿ 8 ವರೆಗೆ ತೆರೆದಿರುತ್ತದೆ. ಹಾದಿ- ಹುಬ್ಬಳ್ಳಿಯಿಂದ 4 ಕಿ.ಮೀ. ದೂರದಲ್ಲಿರುವ ಪ್ರಸಿದ್ಧ ಉಣಕಲ್ ಕೆರೆಯ ಸಮೀಪದಲ್ಲಿಯೇ ಈ ದೇವಾಲಯವಿದೆ.

ಪ್ರಮೋದ ಎಚ್‌. ಕುಂದಗೋಳ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.