ಅಂಗವಿಕಲರ ಚೆಸ್‌: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಸ್ರೂರು ಪ್ರ‌ತಿಭೆ


Team Udayavani, Jun 10, 2017, 3:55 AM IST

600.jpg

ವಿಭಿನ್ನ ಸಾಮರ್ಥ್ಯದ ಚೆಸ್‌ ಪಟು, ಕುಂದಾಪುರದ ಬಸ್ರೂರು ಮೂಲದ ಸಮರ್ಥ್ ಜೆ.ರಾವ್‌ ಸ್ಲೊವೇಕಿಯಾದಲ್ಲಿ ನಡೆದ ವಿಶ್ವಮಟ್ಟದ ದೈಹಿಕ ಅಸಮರ್ಥರ ಟೂರ್ನಿಯ ಜೂನಿಯರ್‌ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಮುಕ್ತ ಚೆಸ್‌ನ ಸಾಮಾನ್ಯ ವಿಭಾಗದಲ್ಲಿ ಕಂಚಿನ ಪದಕವನ್ನು ಗೆದ್ದುಕೊಳ್ಳುವ ಮೂಲಕ ಅಂಗವೈಕಲ್ಯವನ್ನು ಮೆಟ್ಟಿನಿಂತಿದ್ದಾರೆ.

ಮೇ ಮತ್ತು ಜೂನ್‌ನಲ್ಲಿ ಸ್ಲೊವೇಕಿಯಾದಲ್ಲಿ ನಡೆದ ವಿಶ್ವಮಟ್ಟದ ಟೂರ್ನಿಯಲ್ಲಿ ಸ್ಪರ್ಧಿಸಿದ್ದ ಸಮರ್ಥ್ ಎರಡು ಪ್ರಶಸ್ತಿ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ವೈಯಕ್ತಿಕ 131 ಅಂಕಗಳನ್ನು ತನ್ನ ಬುಟ್ಟಿಗೆ ಹಾಕಿಕೊಂಡಿದ್ದಾರೆ. ಈ ಹಿಂದೆಯೂ 2015ರಲ್ಲಿ ಸ್ಲೊವೇಕಿಯಾದಲ್ಲಿ ನಡೆದ ವಿಶ್ವಮಟ್ಟದ ಅಂಗವಿಕಲರ ಟೂರ್ನಿಯಲ್ಲಿ ಕಂಚಿನ ಪದಕ, ಕಳೆದ ವರ್ಷ ಸರ್ಬಿಯಾದಲ್ಲಿ 
ನಡೆದ ಅಂತಾರಾಷ್ಟ್ರೀಯ ಅಂಗವಿಕಲರ ಚೆಸ್‌ ಪಂದ್ಯಾಟದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಈ ಬಾರಿ ಮತ್ತೆ ಪದಕ ಗೆಲ್ಲುವ ಮೂಲಕ ಹ್ಯಾಟ್ರಿಕ್‌ ಸಾಧನೆ ಮಾಡಿದ್ದಾರೆ.

ಇತೀಚೆಗೆ ಸ್ಲೊವೇಕಿಯಾದಲ್ಲಿ ನಡೆದ ಟೂರ್ನಿಯಲ್ಲಿ ಒಟ್ಟು 9 ಸುತ್ತುಗಳಿದ್ದು, ಸಮರ್ಥ್ 2 ಜಯ, 2 ಡ್ರಾ ಹಾಗೂ 3 ಸೋಲಿನೊಂದಿಗೆ ಒಟ್ಟು 4 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆಯುವಲ್ಲಿ ಸಫ‌ಲರಾಗಿದ್ದಾರೆ. ಕೊನೆಯ ದಿನದವರೆಗೂ ಅಗ್ರಸ್ಥಾನದಲ್ಲಿದ್ದ ಸಮರ್ಥ್ ಕೊನೆಯ 2 ಪಂದ್ಯ ಸೋಲುವುದರೊಂದಿಗೆ ಸ್ವಲ್ಪದರಲ್ಲೇ ಮತ್ತೂಂದು ಚಿನ್ನದ ಪದಕದಿಂದ ವಂಚಿತರಾದರು. ಅದನ್ನು ಲೆಕ್ಕಿಸದೆ ಎದುರಾಳಿ ಚದುರಂಗ ಪಟುಗಳ ಎದುರು ಕೆಚ್ಚೆದೆಯಿಂದ ಆಡಿ ಪ್ರಶಸ್ತಿ ಗೆದ್ದಿದ್ದಾರೆ.

ಅಂಗವೈಕಲ್ಯ ಮೆಟ್ಟಿನಿಂತ ಸಮರ್ಥ್
ಹುಟ್ಟಿನಿಂದಲೇ ಸೆರೆಬ್ರಲ್‌ ಪಾಲ್ಸಿ ಕಾಯಿಲೆಗೆ ತುತ್ತಾದ ಸಮರ್ಥ್ ಕೈಗಳಿಂದ ಚೆಸ್‌ ಕಾಯಿ ನಡೆಸಲು, ಕಾಲುಗಳಿಂದ ಸರಿಯಾಗಿ ಕುಳಿತುಕೊಳ್ಳಲು ಆಗದಿದ್ದರೂ, ಅದೊಂದು ಸಮಸ್ಯೆ ಅಲ್ಲ ಎನ್ನುವಂತೆ ಚದುರಂಗದಾಟದಲ್ಲಿ ಅಸಾಧಾರಣ ಸಾಧನೆ ಮಾಡಿದ್ದಾರೆ. ಈಗಲೂ ಒಂದು ಹೆಜ್ಜೆ ನಡೆಯಲೂ ಆಗದ ಸಮರ್ಥ್ನನ್ನು ತಂದೆ-ತಾಯಿಯೇ ಎತ್ತಿಕೊಂಡು ಓಡಾಡುವ ಮೂಲಕ ನೆರವಾಗುತ್ತಿದ್ದಾರೆ. ವಿಶ್ವ, ರಾಷ್ಟ್ರ, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಲವಾರು ಟೂರ್ನಿಗಳಲ್ಲಿ ಪ್ರಶಸ್ತಿಗಳನ್ನು ಗೆಲ್ಲುವುದರೊಂದಿಗೆ ಮನಸ್ಸಿ ದ್ದರೆ ಏನೂ ಬೇಕಾದರೂ ಸಾಧಿಸಬಹುದು ಎನ್ನುವುದನ್ನು ನಿರೂಪಿಸಿದ್ದಾರೆ. ಅಂತಾರಾಷ್ಟ್ರೀಯ ಟೂರ್ನಿಯಲ್ಲಿ  ಸ್ಪರ್ಧಿಸಿ ಚಿನ್ನ, ಬೆಳ್ಳಿ, ಕಂಚಿನ ಪದಕ ಗೆದ್ದ ಹೆಗ್ಗಳಿಕೆ ಸಮರ್ಥ್ ಅವರದು.

2013ರಿಂದ ಚೆಸ್‌ ಕ್ರೀಡೆ ಅಭ್ಯಸಿಸುತ್ತಿದ್ದು, 2015ರಿಂದ ಒಂದರ ಮೇಲೊಂದು ಸಾಧನೆಗಳನ್ನು ಮಾಡುತ್ತಿದ್ದಾರೆ. ಚೆನ್ನೈನ ಜ್ಯೋತಿ ಪ್ರಕಾಶ್‌ ಅವರಿಂದ ತರಬೇತಿ ಹಾಗೂ ಚೆನ್ನೈನವರೇ ಆದ ಶ್ರೀನಿಧಿ ಶ್ರೀಪತಿ ಅವರಿಂದ ಆನ್‌ಲೈನ್‌ ತರಬೇತಿ ಪಡೆಯುತ್ತಿದ್ದಾರೆ.

ಸಮರ್ಥ್ ಯಾರು?
ಜಗದೀಶ್‌ ರಾವ್‌ ಮತ್ತು ವಿನುತಾ ದಂಪತಿ ಪುತ್ರನಾಗಿರುವ ಸಮರ್ಥ್ ಹುಟ್ಟಿದ್ದು ಕುಂದಾಪುರ ತಾಲೂಕಿನ ಬಸೂÅರಿನಲ್ಲಿ. ಸದ್ಯ ತಂದೆ ಜಗದೀಶ್‌ ಹೊನ್ನಾವರದಲ್ಲಿ ಸಿಂಡಿಕೇಟ್‌ ಬ್ಯಾಂಕ್‌ ಉದ್ಯೋಗಿಯಾಗಿದ್ದಾರೆ. ಹೀಗಾಗಿ ಅಲ್ಲಿಯೇ ನೆಲೆಸಿರುವ ಸಮರ್ಥ್ ಹೊನ್ನಾವರದ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ತಾಯಿ ವಿನುತಾ ಕಾಲೇಜು ಉಪನ್ಯಾಸಕಿ. ತಂಗಿ ಸಾನ್ವಿ ರಾವ್‌ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ.
2017 ಸ್ಲೊವೇಕಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಟೂರ್ನಿಯ ಜ್ಯೂನಿಯರ್‌ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಸೀನಿಯರ್‌ ವಿಭಾಗದಲ್ಲಿ ಕಂಚಿನ ಪದಕ

2016 ಸೆರ್ಬಿಯಾದಲ್ಲಿ ನಡೆದ ಅಂತಾರಾಷ್ಟ್ರೀಯ ಚೆಸ್‌ ಪಂದ್ಯದಲ್ಲಿ ಕಂಚಿನ ಪದಕ

2015ಸ್ಲೊವೇಕಿಯಾದಲ್ಲಿ ನಡೆದ ಟೂರ್ನಿಯಲ್ಲಿ ಕಂಚಿನ ಪದಕ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.