ಗೋಪಿಚಂದ್‌ಗೆ ಸ್ವಹಿತಾಸಕ್ತಿ ಅನ್ವಯಿಸಲ್ಲವೇ?


Team Udayavani, Dec 21, 2019, 6:02 AM IST

gopichand

ಭಾರತದಲ್ಲಿ ಈಗ ಸ್ವಹಿತಾಸಕ್ತಿ ಸಂಘರ್ಷ ಎಂಬ ಪದ ಆಗಾಗ ಕೇಳಿಬರುತ್ತಲೇ ಇದೆ. 2013ರ ಐಪಿಎಲ್‌ನಲ್ಲಿ ಸ್ಪಾಟ್‌ಫಿಕ್ಸಿಂಗ್‌ ಪ್ರಕರಣ ಬೆಳಕಿಗೆ ಬಂದಿದ್ದೇ ತಡ, ಸ್ವಹಿತಾಸಕ್ತಿ ಕಾರಣದಿಂದ ಬಿಸಿಸಿಐನಲ್ಲಿ ಹಲವರು ಹುದ್ದೆ ಕಳೆದುಕೊಂಡರು. ಈಗಂತೂ ಬಿಸಿಸಿಐಗೆ ಯಾವುದೇ ವ್ಯಕ್ತಿಗಳನ್ನು, ಆಯ್ಕೆ ಮಾಡುವುದೇ ದೊಡ್ಡ ತಲೆನೋವಾಗಿದೆ. ನಿರ್ದಿಷ್ಟ ವ್ಯಕ್ತಿ, ಪ್ರಭಾವ ಬೀರಬಲ್ಲ ಇನ್ನೊಂದು ಹುದ್ದೆಯನ್ನು ಬಿಸಿಸಿಐನೊಳಗೆ ಅಥವಾ ಹೊರಗೆ ಹೊಂದಿದ್ದರೆ ಅದು ಸ್ವಹಿತಾಸಕ್ತಿ ಸಂಘರ್ಷದ ವ್ಯಾಪ್ತಿಯಲ್ಲಿ ಬರುತ್ತದೆ.

ಈ ರೀತಿಯ ಸಮಸ್ಯೆಯಿಲ್ಲದ ಒಬ್ಬನೇ ಒಬ್ಬ ಖ್ಯಾತನಾಮ ಕ್ರಿಕೆಟಿಗ ಭಾರತದಲ್ಲಿಲ್ಲ! ಕ್ರಿಕೆಟ್‌ ವ್ಯವಸ್ಥೆ ಹೀಗೆ ತಳಮಳ ಎದುರಿಸುತ್ತಿರುವ ಹೊತ್ತಿನಲ್ಲೇ ಭಾರತ ಬ್ಯಾಡ್ಮಿಂಟನ್‌ ವಲಯದಿಂದ ಇಂತಹದ್ದೇ ಒಂದು ಮಾತು ಕೇಳಿಬಂದಿದೆ. ಗಮನಿಸಬೇಕಾದ ಸಂಗತಿಯೆಂದರೆ, ಈ ಮಾತಿಗೆ ಬಹಳ ತೂಕವಿದೆ. ಇದನ್ನು ಯಾರೂ ಗಮನಿಸಿಲ್ಲ! ಸ್ವಹಿತಾಸಕ್ತಿ ಸಂಘರ್ಷದ ಧ್ವನಿಯೆತ್ತಿದ್ದು ಭಾರತದ ಖ್ಯಾತ ಮಹಿಳಾ ಡಬಲ್ಸ್‌ ಬ್ಯಾಡ್ಮಿಂಟನ್‌ ಆಟಗಾರ್ತಿ ಜ್ವಾಲಾ ಗುಟ್ಟಾ.

ಅವರು ಇಲ್ಲಿ ಗುರಿ ಮಾಡಿದ್ದು ಭಾರತದ ಬ್ಯಾಡ್ಮಿಂಟನ್‌ ತರಬೇತುದಾರ ಗೋಪಿಚಂದ್‌ ಅವರನ್ನು. ಬರೀ ತೆಲುಗು ಆಟಗಾರರೇ ಭಾರತ ಬ್ಯಾಡ್ಮಿಂಟನ್‌ ತಂಡದಲ್ಲಿರುತ್ತಾರೆ. ಇದಕ್ಕೆ ಕಾರಣ ಗೋಪಿಚಂದ್‌ ಎನ್ನುವುದು ಅವರ ಮುಖ್ಯ ಆರೋಪ. ಸ್ವತಃ ರಾಜ್ಯದ ಆಟಗಾರ್ತಿಯರಿಗೂ ದ.ಏಷ್ಯಾ ಗೇಮ್ಸ್‌ ನಲ್ಲಿ ಎಲ್ಲ ಅರ್ಹತೆಗಳ ಹೊರತಾಗಿಯೂ ಸ್ಥಾನ ಸಿಕ್ಕಿಲ್ಲ. ಇದು ಜ್ವಾಲಾ ಮಾತಿನ ಮಹತ್ವ ಹೆಚ್ಚಿಸಿದೆ.

ಹಾಗೆಯೇ ಗಮನಿಸಿ. ಗೋಪಿಚಂದ್‌ ಭಾರತ ಬ್ಯಾಡ್ಮಿಂಟನ್‌ ತಂಡದ ತರಬೇತುದಾರ, ಹಾಗೆಯೇ ಮುಖ್ಯ ಆಯ್ಕೆಗಾರ. ಅವರದ್ದೊಂದು ಅಕಾಡೆಮಿ ಹೈದರಾ­ಬಾದ್‌ನಲ್ಲಿದೆ. ಹಾಗೆಯೇ ಭಾರತ ಬ್ಯಾಡ್ಮಿಂಟನ್‌ ಅಕಾಡೆಮಿ ಇರುವುದೂ ಹೈದರಾಬಾದ್‌ನಲ್ಲೇ! ಅಷ್ಟು ಮಾತ್ರವಲ್ಲ, ಪಿಬಿಎಲ್‌, ಖೇಲೋ ಇಂಡಿಯಾ ಇಲ್ಲೂ ಗೋಪಿಚಂದ್‌ಗೆ ಜವಾಬ್ದಾರಿ. ಒಬ್ಬನೇ ವ್ಯಕ್ತಿ ಇಷ್ಟೆಲ್ಲ ಹೊಣೆ­ಗಾರಿಕೆ ಹೊಂದಿರುವುದು ಸ್ವಹಿತಾಸಕ್ತಿಯಲ್ಲವೇ!

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.